Homeಸಿನಿಮಾಕ್ರೀಡೆಸೋಲಿನ ನಡುವೆಯೂ ದಾಖಲೆಯ ಶಿಖರವೇರಿದ ಮಿಥಾಲಿ ರಾಜ್

ಸೋಲಿನ ನಡುವೆಯೂ ದಾಖಲೆಯ ಶಿಖರವೇರಿದ ಮಿಥಾಲಿ ರಾಜ್

- Advertisement -
- Advertisement -

ಭಾರತದ ಮಟ್ಟಿಗೆ ಪುರುಷರ ಕ್ರಿಕೆಟ್ ಧರ್ಮವಾದರೆ, ಸಚಿನ್ ತೆಂಡೂಲ್ಕರ್ ಅವರನ್ನು ಕ್ರಿಕೆಟ್ ದೇವರು ಎಂದೇ ಕರೆಯಲಾಗುತ್ತದೆ. ಅದರಲ್ಲಿ ಎಷ್ಟೇ ಉತ್ಪ್ರೇಕ್ಷೆಯಿದ್ದರೂ, ಜನಪ್ರಿಯ ಮಾಧ್ಯಮಗಳಲ್ಲಿ ಹಲವು ದಶಕಗಳಿಂದ ಹಾಗೆ ಬಿಂಬಿಸಿಕೊಂಡು ಬರಲಾಗುತ್ತಿದೆ. ಶತಕಗಳ ಶತಕ ಸಿಡಿಸಿದ ಸಚಿನ್ ಅವರಿಗೆ ನಿವೃತ್ತಿಯ ನಂತರದ ದಿನಗಳಲ್ಲಿ ರಾಜ್ಯಸಭಾ ಸ್ಥಾನದ ಜೊತೆಗೆ ಭಾರತ ರತ್ನ ಪ್ರಶಸ್ತಿಯನ್ನೂ ನೀಡಿ ಗೌರವಿಸಿದ್ದು ಇಂದು ಇತಿಹಾಸ. ಆದರೆ, ಪುರುಷರ ಕ್ರಿಕೆಟ್‌ಅನ್ನು ಮಾತ್ರ ಆರಾಧಿಸುವ, ಅದಕ್ಕೆ ಮಾತ್ರ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುವ ಭಾರತದಲ್ಲಿ ಮಹಿಳಾ ಕ್ರಿಕೆಟರ್ ಮಿಥಾಲಿ ರಾಜ್ ಒಂದು ಹೊಸ ದಾಖಲೆಯನ್ನು ನಿರ್ಮಿಸಿದ್ದಾರೆ. ಸಚಿನ್ ಸಾಧನೆಗೆ ಸಮನಾದ ಮೈಲುಗಲ್ಲನ್ನು ದಾಟಿದ್ದಾರೆ. ಆದರೆ, ಮಹಿಳಾ ಕ್ರಿಕೆಟ್ ಲೆಜೆಂಡ್ ಎಂದೇ ಕ್ರೀಡಾಕ್ಷೇತ್ರದಲ್ಲಿ ಪರಿಚಿತರಾದ ಮಿಥಾಲಿ ರಾಜ್ ಅವರಿಗೆ ಸಚಿನ್ ತೆಂಡೂಲ್ಕರ್ ಅವರಿಗೆ ಸಿಕ್ಕ ಯಾವ ಮನ್ನಣೆಯೂ ಸಿಗದೆ ಹೋಗುತ್ತಿರುವುದು ದುರಂತ!

ಇಷ್ಟಕ್ಕೂ ಕಳೆದ ವಾರ ಪುರುಷರ ತಂಡ ಇಂಗ್ಲೆಂಡ್‌ನಲ್ಲಿ ನಡೆದ ಟೆಸ್ಟ್ ಕ್ರಿಕೆಟ್ ಚಾಂಪಿಯನ್ ಶಿಪ್‌ನಲ್ಲಿ ಹೀನಾಯ ಸೋಲನುಭವಿಸಿತ್ತು. ಅದೇ ಹೊತ್ತಿಗೆ ಮಹಿಳಾ ಕ್ರಿಕೆಟ್ ತಂಡ ಸಹ ಇಂಗ್ಲೆಂಡ್ ತಂಡದ ವಿರುದ್ಧ ಮೂರು ಏಕದಿನ ಮತ್ತು ಟಿ-20 ಸರಣಿಗಾಗಿ ಇಂಗ್ಲೆಂಡ್‌ಗೆ ಬಂದಿಳಿದಿತ್ತು. ಮೂರು ಏಕದಿನ ಪಂದ್ಯಗಳ ಪೈಕಿ ಮೊದಲ ಎರಡು ಪಂದ್ಯದಲ್ಲಿ ಭಾರತ ತಂಡ ಹೀನಾಯ ಸೋಲನುಭವಿಸುವ ಮೂಲಕ ಸರಣಿಯನ್ನು ಕೈಚೆಲ್ಲಿತ್ತು.

ಆದರೆ, ಕೊನೆಯ ಪಂದ್ಯದಲ್ಲಿ ರನ್ ಬೆನ್ನಟ್ಟುವ ವೇಳೆ ಅರ್ಧಶತಕ ಸಿಡಿಸಿ ಒಬ್ಬಂಟಿಯಾಗಿ ಸೋಲಿನ ಅಂಚಿನಲ್ಲಿದ್ದ ತಂಡವನ್ನು ನಾಯಕಿ ಮಿಥಾಲಿ ರಾಜ್ ಗೆಲುವಿನತ್ತ ಕೊಂಡೊಯ್ದಿದ್ದರು. ಅಪರೂಪದ ಗೆಲುವೊಂದನ್ನು ತಂಡಕ್ಕೆ ದಕ್ಕಿಸಿದ್ದರು. ಅವರ ಆಟವನ್ನು ಇಡೀ ವಿಶ್ವದ ಮಾಧ್ಯಮಗಳು ಕೊಂಡಾಡಿದ್ದವು. ಇದರ ಜೊತೆಗೆ ಈ ಪಂದ್ಯದ ಮೂಲಕ ಮಹಿಳಾ ಕ್ರಿಕೆಟ್‌ನಲ್ಲಿ ಅತಿಹೆಚ್ಚು ರನ್ ಗಳಿಸಿದ ಶ್ರೇಯಕ್ಕೂ ಮಿಥಾಲಿ ಪಾತ್ರರಾಗಿದ್ದರು.

PC : Times of India

ಈ ಪಂದ್ಯದಲ್ಲಿ ಭಾರತವೇನೋ ಗೆಲುವು ಸಾಧಿಸಿತ್ತು ನಿಜ. ಆದರೆ, ಮಿಥಾಲಿ ರಾಜ್ ನಾಯಕತ್ವದಲ್ಲಿ ತಂಡದ ಇತರೆ ಅಟಗಾರರ ಕಳಪೆ ಆಟ, ತಂಡದ ಸತತ ಸೋಲು ಇದೀಗ ಚರ್ಚೆಗೆ ಗ್ರಾಸವಾಗಿದೆ. ನಾಯಕತ್ವಕ್ಕಾಗಿ ತಂಡದ ಒಳಗೆ ಶೀತಲ ಸಮರ ನಡೆಯುತ್ತಿದೆಯೇ ಎಂಬ ಸಂಶಯವನ್ನು ಮೂಡಿಸಿದೆ. ಅಲ್ಲದೆ, ಮಹಿಳಾ ಕ್ರಿಕೆಟ್ ಬಗೆಗೆ ಇದು ಚಿಂತೆಗೀಡು ಮಾಡಿದೆ.

ಮಿಥಾಲಿ ರಾಜ್ ಸಾಧನೆ ಮತ್ತು ಭಾರತದ ಕಳಪೆ ಆಟ

ಜೂನ್ 26, 1999ರಲ್ಲಿ ಐರ್ಲೆಂಡ್ ವಿರುದ್ಧ ಮೊದಲ ಏಕದಿನ ಪಂದ್ಯವನ್ನು ಆಡುವ ಮೂಲಕ ಕ್ರಿಕೆಟ್ ಅಂಗಳಕ್ಕೆ ಪಾದಾರ್ಪಣೆ ಮಾಡಿದ 38 ವರ್ಷದ ಕ್ರಿಕೆಟರ್ ಮಿಥಾಲಿ ರಾಜ್ ಇಷ್ಟು ದೊಡ್ಡ ಸಾಧನೆ ಮಾಡುತ್ತಾರೆ ಎಂದು ಭಾಗಶಃ ಯಾರೂ ಊಹಿಸಿರಲಿಲ್ಲ.

ಕಳೆದ 22 ವರ್ಷದಲ್ಲಿ ಮಿಥಾಲಿ ರಾಜ್ ಹತ್ತಾರು ಮೈಲುಗಲ್ಲುಗಳನ್ನು ನೆಟ್ಟಿದ್ದಾರೆ. ಸಚಿನ್ ತೆಂಡೂಲ್ಕರ್ ಪುರುಷರ ಕ್ರಿಕೆಟ್‌ನಲ್ಲಿ ರನ್‌ಗಳ ಶಿಖರವನ್ನು ನಿರ್ಮಿಸಿದ್ದರೆ, ಮಹಿಳಾ ಕ್ರಿಕೆಟ್‌ನಲ್ಲಿ ತಮ್ಮ ಕೌಶಲ್ಯ ಮತ್ತು ಸಾಮರ್ಥ್ಯದಿಂದಾಗಿ ಮಿಥಾಲಿ ರಾಜ್ ದಾಖಲೆಗಳ ಮೇಲೆ ದಾಖಲೆಗಳನ್ನು ನಿರ್ಮಿಸುತ್ತಿದ್ದಾರೆ.
ಕಳೆದ 22 ವರ್ಷಗಳ ಸುದೀರ್ಘ ಕ್ರಿಕೆಟ್ ಪಯಣದಲ್ಲಿ ಮಿಥಾಲಿ ರಾಜ್ ಮೂರೂ ಮಾದರಿಯ ಕ್ರಿಕೆಟ್‌ನಲ್ಲಿ ಒಟ್ಟು 10,337 ರನ್‌ಗಳನ್ನು ಗಳಿಸಿದ್ದಾರೆ. ಈ ಮೂಲಕ 10273 ರನ್‌ಗಳನ್ನು ಗಳಿಸಿ ಈವರೆಗೆ ಮೊದಲ ಸ್ಥಾನದಲ್ಲಿದ್ದ ಇಂಗ್ಲೆಂಡ್‌ನ ಶಾರ್ಲೆಟ್ ಎಡ್ವರ್ಡ್ ಅವರ ದಾಖಲೆಯನ್ನು ಮುರಿದಿದ್ದಾರೆ. ಅಲ್ಲದೆ, ಏಕದಿನ ಕ್ರಿಕೆಟ್ 6000 ರನ್ ಪೂರೈಸಿದ ಮೊದಲ ಆಟಗಾರ್ತಿ ಎಂಬ ದಾಖಲೆಯೂ ಮಿಥಾಲಿ ರಾಜ್ ಅವರ ಹೆಸರಿನಲ್ಲಿದೆ. ಇದರ ಹೊರತಾಗಿಯೂ ಏಕದಿನ ಕ್ರಿಕೆಟ್‌ನಲ್ಲಿ ಸತತ 7 ಅರ್ಧ ಶತಕ ಬಾರಿಸಿ ಅಪರೂಪದ ದಾಖಲೆಯೂ ಮಿಥಾಲಿ ರಾಜ್ ಹೆಸರಲ್ಲಿದೆ.

ಪುರುಷರ ಕ್ರಿಕೆಟ್‌ನಲ್ಲೇ ಈವರೆಗೆ ಸತತ 7 ಅರ್ಥ ಶತಕ ಬಾರಿಸಿದ ಆಟಗಾರರು ಇಲ್ಲ. ಇಂತಹ ಅಪರೂಪದ ಸಾಧನೆ ಮೂಲಕ ಮಿಥಾಲಿ ಮಹಿಳಾ ಕ್ರಿಕೆಟ್‌ನ ಗೋಡೆ ಎಂಬ ಖ್ಯಾತಿಗೂ ಪಾತ್ರರಾಗಿದ್ದರು. ಅವರ ಈ ಅಮೋಘ ಸಾಧನೆಯ ನಡುವೆಯೂ ಭಾರತ ಮಾತ್ರ ಸತತ ಸೋಲುಗಳನ್ನು ಕಾಣುತ್ತಿರುವುದು ವಿಪರ್ಯಾಸ.

ನಿರಂತರ ಸೋಲಿನಿಂದ ಸೊರಗಿದ ಭಾರತ ತಂಡ

ಭಾರತದ ಮಹಿಳಾ ತಂಡ ಇತರೆ ಯಾವುದೇ ತಂಡಗಳಿಗೆ ಕಡಿಮೆ ಏನಲ್ಲ. ಅತ್ಯುತ್ತಮ ಆಟಗಾರರನ್ನು ಹೊಂದಿದೆ ಮತ್ತು ಈ ಹಿಂದೆ ಅನೇಕ ಟೂರ್ನಿಗಳಲ್ಲಿ ಗೆಲುವು ಸಾಧಿಸಿದೆ.

ಏಕದಿನ ವಿಶ್ವಕಪ್ ಟೂರ್ನಿಯಲ್ಲಿ 2005 ಮತ್ತು 2013ರಲ್ಲಿ ಫೈನಲ್‌ಗೆ ಏರಿದ್ದ ಭಾರತ ತಂಡ ಕ್ರಮವಾಗಿ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ವಿರುದ್ಧ ಸೋಲನ್ನಪ್ಪಿತ್ತು. ಇನ್ನೂ 2020ರಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ಮೊದಲ ಬಾರಿಗೆ ಫೈನಲ್‌ಗೆ ಏರಿದ್ದ ಭಾರತ ಆಸ್ಟ್ರೇಲಿಯಾ ವಿರುದ್ಧ ಸೋಲನ್ನನುಭವಿಸಿತ್ತು. ಇದು ಭಾರತದ ಮಹಿಳಾ ತಂಡದ ಈ ಸಾಧನೆ ಮತ್ತು ಅವರ ಆಟಕ್ಕೊಂದು ನಿದರ್ಶನವಷ್ಟೆ.

ತಂಡದಲ್ಲಿ ಆರಂಭಿಕ ಆಟಗಾರ್ತಿಯರಾಗಿ ಸ್ಮೃತಿ ಮಂದಾನ ಮತ್ತು ಶಫಾಲಿ ವರ್ಮ ತಮ್ಮ ಹೊಡಿಬಡಿ ಆಟದಿಂದಲೇ ಹೆಸರಾದರೆ, ಮಧ್ಯಮ ಕ್ರಮಾಂಕದಲ್ಲಿ ಜಮಿಯ್ಯಾ ರೋಡಿಗ್ರಸ್, ಮಿಥಾಲಿ ರಾಜ್ ಮತ್ತು ಹರ್ಮನ್ ಪ್ರೀತ್ ಕೌರ್ ತಂಡದ ಆಧಾರಸ್ತಂಭ. ಅದರಲ್ಲೂ ಬಿರುಬೀಸಿನ ಆಟಗಾರ್ತಿ ಹರ್ಮನ್ ಪ್ರೀತ್ ಕೌರ್ ಮಹಿಳಾ ಟಿ20 ತಂಡದ ನಾಯಕಿಯೂ ಹೌದು.

ಬೌಲಿಂಗ್ ವಿಭಾಗದಲ್ಲಿ ಅನುಭವಿ ವೇಗದ ಬೌಲರ್ ಜುಲಾನ್ ಗೋಸ್ವಾಮಿ ತಂಡದ ಬೌಲಿಂಗ್ ಸಾರಥ್ಯ ವಹಿಸಿದರೆ, ಪೂನಂ ಯಾದವ್, ಶಿಖಾ ಪಾಂಡೆ ತಂಡದ ಉಳಿದ ಸ್ಟಾರ್ ಬೌಲರ್‌ಗಳು. ಹೀಗಾಗಿ ಭಾರತದ ಮಹಿಳಾ ತಂಡ ಕಾಗದದ ಮೇಲೆ ಅತ್ಯಂತ ಬಲಿಷ್ಟ ತಂಡ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ,
ಕಳೆದ ಒಂದು ವರ್ಷದಲ್ಲಿ ಟಿ20 ವಿಶ್ವಕಪ್ ನಂತರ ಭಾರತ ತಂಡ ಸತತ ಸೋಲುಗಳನ್ನು ಅನುಭವಿಸುತ್ತಿರುವುದು ಇದೀಗ ಆತಂಕಕ್ಕೆ ಕಾರಣವಾಗಿದೆ.

ಕಳೆದ ಮಾರ್ಚ್ ತಿಂಗಳಲ್ಲಿ, ಮೂರು ಟಿ20 ಮತ್ತು ಐದು ಏಕದಿನ ಪಂದ್ಯಗಳ ಸರಣಿಗಾಗಿ ದಕ್ಷಿಣ ಆಫ್ರಿಕಾ ಮಹಿಳಾ ತಂಡ ಭಾರತಕ್ಕೆ ಆಗಮಿಸಿತ್ತು. ತವರು ನೆಲದಲ್ಲಿ ಭಾರತ ತಂಡವನ್ನು ಮಣಿಸುವುದು ಅಷ್ಟು ಸುಲಭದ ಕೆಲಸವಲ್ಲ. ದಕ್ಷಿಣ ಆಫ್ರಿಕಾ ತಂಡವೂ ಈವರೆಗೆ ಭಾರತದಲ್ಲಿ ಸೀಮಿತ ಓವರ್‌ಗಳ ಸರಣಿ ಜಯಿಸಿದ ಉದಾಹರಣೆಗಳು ಇಲ್ಲ.

ಆದರೆ, ಮಾರ್ಚ್‌ನಲ್ಲಿ ಭಾರತ ಹೀನಾಯವಾಗಿ ಸೋಲನುಭವಿಸಿತ್ತು. 2-1 ಅಂತರದಲ್ಲಿ ಟಿ20 ಮತ್ತು 4-1 ಅಂತರದಲ್ಲಿ ಏಕದಿನ ಸರಣಿಯನ್ನು ದಕ್ಷಿಣ ಆಫ್ರಿಕಾ ತಂಡ ಜಯಿಸಿತ್ತು. ಆಗಲೇ ಭಾರತದ ಮಹಿಳಾ ತಂಡದ ಮೇಲೆ ವ್ಯಾಪಕ ಟೀಕೆಗಳು ಎದುರಾದವು. ಇದೀಗ ಇಂಗ್ಲೆಂಡ್‌ನಲ್ಲೂ ಸಹ ಏಕದಿನ ಸರಣಿಯನ್ನು ಭಾರತ ತಂಡ ಕೈಚೆಲ್ಲಿದೆ. ಆದರೆ, ಈ ಎರಡೂ ಸರಣಿಯಲ್ಲಿ ಮಿಥಾಲಿ ರಾಜ್ ಉತ್ತಮ ಪ್ರದರ್ಶನ ನೀಡಿದ್ದಾರೆ. ತಂಡದ ಇತರೆ ಪ್ರಮುಖ ಆಟಗಾರರ ವೈಫಲ್ಯವೇ ತಂಡದ ಸೋಲಿಗೆ ಕಾರಣ ಎಂಬುದು ಉಲ್ಲೇಖಾರ್ಹ.

ಸೋಲಿಗೆ ಕಾರಣವಾಯ್ತೆ ನಾಯಕತ್ವಕ್ಕಾಗಿನ ಜಗಳ?

ಭಾರತದ ಸೀಮಿತ ಓವರ್‌ಗಳ ತಂಡಕ್ಕೆ ಮಿಥಾಲಿ ರಾಜ್ ಅವರೇ ನಾಯಕಿ. ಕಳೆದ ಒಂದು ದಶಕದಿಂದ ಅವರು ತಂಡವನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ. ಆದರೆ, ಯುವಕರಿಗೆ ಅವಕಾಶ ನೀಡಬೇಕು ಎಂಬ ಕಾರಣಕ್ಕೆ ಟಿ20ರ ವಿಶ್ವಕಪ್ ತಂಡದಲ್ಲಿ ಮಿಥಾಲಿ ರಾಜ್ ಇದ್ದರೂ ಸಹ ಅವರನ್ನು ಆಡುವ 11ರ ಬಳಗದಲ್ಲಿ ಆಡಿಸಿರಲಾಗಿಲ್ಲ. ಅಲ್ಲದೆ, ನಾಯಕತ್ವವನ್ನು ಹರ್ಮನ್ ಪ್ರೀತ್ ಕೌರ್‌ಗೆ ನೀಡಲಾಗಿತ್ತು.

ಕೊನೆಗೆ ಟಿ20 ಮಾದರಿಗೆ ಮಿಥಾಲಿ ರಾಜ್ ಒತ್ತಾಯಪೂರ್ವಕವಾಗಿ ನಿವೃತ್ತಿ ಘೋಷಿಸುವಂತೆ ಮಾಡಲಾಗಿತ್ತು. ಇದು ಹಿರಿಯ ಆಟಗಾರ್ತಿಗೆ ಆದ ಅವಮಾನ ಎಂದೇ ಮಾಧ್ಯಮಗಳು ಕಿಡಿಕಾರಿದ್ದವು. ಇದೀಗ ಏಕದಿನ ತಂಡದ ನಾಯಕತ್ವದಿಂದಲೂ ಮಿಥಾಲಿ ರಾಜ್ ಅವರನ್ನು ಹೊರಹಾಕುವ ಹುನ್ನಾರ ನಡೆಯುತ್ತಿದೆ ಎಂಬ ಚರ್ಚೆ ನಡೆಯುತ್ತಿದೆ. ಈ ಚರ್ಚೆ ಮತ್ತು ತಂಡದ ಒಳ ಜಗಳ ಉಳಿದ ಆಟಗಾರ್ತಿಯರ ಪ್ರದರ್ಶನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆಯೇ ಎಂಬ ಸಂಶಯ ಇದೀಗ ಕ್ರೀಡಾಸಕ್ತರಲ್ಲಿ ಮನೆಮಾಡಿದೆ.

ಜುಲೈ 9ರಿಂದ ಆರಂಭವಾಗುವ ಟಿ20 ಸರಣಿಯ ಮೇಲೆ ಇದೀಗ ಎಲ್ಲರ ಕಣ್ಣು ನೆಟ್ಟಿದೆ. ಏಕದಿನ ಸೋಲಿನ ಸೇಡನ್ನು ಭಾರತ ಮಹಿಳಾ ತಂಡ ಟಿ20ನಲ್ಲಿ ತೀರಿಸಿಕೊಳ್ಳಲಿದೆಯೇ ಎಂಬ ಮಾತುಗಳೂ ಕೇಳಿಬರುತ್ತಿವೆ. ಒಟ್ಟಾರೆ ಭಾರತ ಈ ಸರಣಿಯಲ್ಲಾದರೂ ಗೆಲುವು ಸಾಧಿಸಲಿ ಎಂಬುದೇ ಎಲ್ಲರ ಆಶಯ.


ಇದನ್ನೂ ಓದಿ: ವಿಂಬಲ್ಡನ್ ಟೆನಿಸ್ ಟೂರ್ನಿ ಆರಂಭ; ಇಲ್ಲ ಭಾರತದ ಪ್ರಾತಿನಿಧ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...