Homeಸಿನಿಮಾಕ್ರೀಡೆಸೋಲಿನ ನಡುವೆಯೂ ದಾಖಲೆಯ ಶಿಖರವೇರಿದ ಮಿಥಾಲಿ ರಾಜ್

ಸೋಲಿನ ನಡುವೆಯೂ ದಾಖಲೆಯ ಶಿಖರವೇರಿದ ಮಿಥಾಲಿ ರಾಜ್

- Advertisement -
- Advertisement -

ಭಾರತದ ಮಟ್ಟಿಗೆ ಪುರುಷರ ಕ್ರಿಕೆಟ್ ಧರ್ಮವಾದರೆ, ಸಚಿನ್ ತೆಂಡೂಲ್ಕರ್ ಅವರನ್ನು ಕ್ರಿಕೆಟ್ ದೇವರು ಎಂದೇ ಕರೆಯಲಾಗುತ್ತದೆ. ಅದರಲ್ಲಿ ಎಷ್ಟೇ ಉತ್ಪ್ರೇಕ್ಷೆಯಿದ್ದರೂ, ಜನಪ್ರಿಯ ಮಾಧ್ಯಮಗಳಲ್ಲಿ ಹಲವು ದಶಕಗಳಿಂದ ಹಾಗೆ ಬಿಂಬಿಸಿಕೊಂಡು ಬರಲಾಗುತ್ತಿದೆ. ಶತಕಗಳ ಶತಕ ಸಿಡಿಸಿದ ಸಚಿನ್ ಅವರಿಗೆ ನಿವೃತ್ತಿಯ ನಂತರದ ದಿನಗಳಲ್ಲಿ ರಾಜ್ಯಸಭಾ ಸ್ಥಾನದ ಜೊತೆಗೆ ಭಾರತ ರತ್ನ ಪ್ರಶಸ್ತಿಯನ್ನೂ ನೀಡಿ ಗೌರವಿಸಿದ್ದು ಇಂದು ಇತಿಹಾಸ. ಆದರೆ, ಪುರುಷರ ಕ್ರಿಕೆಟ್‌ಅನ್ನು ಮಾತ್ರ ಆರಾಧಿಸುವ, ಅದಕ್ಕೆ ಮಾತ್ರ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುವ ಭಾರತದಲ್ಲಿ ಮಹಿಳಾ ಕ್ರಿಕೆಟರ್ ಮಿಥಾಲಿ ರಾಜ್ ಒಂದು ಹೊಸ ದಾಖಲೆಯನ್ನು ನಿರ್ಮಿಸಿದ್ದಾರೆ. ಸಚಿನ್ ಸಾಧನೆಗೆ ಸಮನಾದ ಮೈಲುಗಲ್ಲನ್ನು ದಾಟಿದ್ದಾರೆ. ಆದರೆ, ಮಹಿಳಾ ಕ್ರಿಕೆಟ್ ಲೆಜೆಂಡ್ ಎಂದೇ ಕ್ರೀಡಾಕ್ಷೇತ್ರದಲ್ಲಿ ಪರಿಚಿತರಾದ ಮಿಥಾಲಿ ರಾಜ್ ಅವರಿಗೆ ಸಚಿನ್ ತೆಂಡೂಲ್ಕರ್ ಅವರಿಗೆ ಸಿಕ್ಕ ಯಾವ ಮನ್ನಣೆಯೂ ಸಿಗದೆ ಹೋಗುತ್ತಿರುವುದು ದುರಂತ!

ಇಷ್ಟಕ್ಕೂ ಕಳೆದ ವಾರ ಪುರುಷರ ತಂಡ ಇಂಗ್ಲೆಂಡ್‌ನಲ್ಲಿ ನಡೆದ ಟೆಸ್ಟ್ ಕ್ರಿಕೆಟ್ ಚಾಂಪಿಯನ್ ಶಿಪ್‌ನಲ್ಲಿ ಹೀನಾಯ ಸೋಲನುಭವಿಸಿತ್ತು. ಅದೇ ಹೊತ್ತಿಗೆ ಮಹಿಳಾ ಕ್ರಿಕೆಟ್ ತಂಡ ಸಹ ಇಂಗ್ಲೆಂಡ್ ತಂಡದ ವಿರುದ್ಧ ಮೂರು ಏಕದಿನ ಮತ್ತು ಟಿ-20 ಸರಣಿಗಾಗಿ ಇಂಗ್ಲೆಂಡ್‌ಗೆ ಬಂದಿಳಿದಿತ್ತು. ಮೂರು ಏಕದಿನ ಪಂದ್ಯಗಳ ಪೈಕಿ ಮೊದಲ ಎರಡು ಪಂದ್ಯದಲ್ಲಿ ಭಾರತ ತಂಡ ಹೀನಾಯ ಸೋಲನುಭವಿಸುವ ಮೂಲಕ ಸರಣಿಯನ್ನು ಕೈಚೆಲ್ಲಿತ್ತು.

ಆದರೆ, ಕೊನೆಯ ಪಂದ್ಯದಲ್ಲಿ ರನ್ ಬೆನ್ನಟ್ಟುವ ವೇಳೆ ಅರ್ಧಶತಕ ಸಿಡಿಸಿ ಒಬ್ಬಂಟಿಯಾಗಿ ಸೋಲಿನ ಅಂಚಿನಲ್ಲಿದ್ದ ತಂಡವನ್ನು ನಾಯಕಿ ಮಿಥಾಲಿ ರಾಜ್ ಗೆಲುವಿನತ್ತ ಕೊಂಡೊಯ್ದಿದ್ದರು. ಅಪರೂಪದ ಗೆಲುವೊಂದನ್ನು ತಂಡಕ್ಕೆ ದಕ್ಕಿಸಿದ್ದರು. ಅವರ ಆಟವನ್ನು ಇಡೀ ವಿಶ್ವದ ಮಾಧ್ಯಮಗಳು ಕೊಂಡಾಡಿದ್ದವು. ಇದರ ಜೊತೆಗೆ ಈ ಪಂದ್ಯದ ಮೂಲಕ ಮಹಿಳಾ ಕ್ರಿಕೆಟ್‌ನಲ್ಲಿ ಅತಿಹೆಚ್ಚು ರನ್ ಗಳಿಸಿದ ಶ್ರೇಯಕ್ಕೂ ಮಿಥಾಲಿ ಪಾತ್ರರಾಗಿದ್ದರು.

PC : Times of India

ಈ ಪಂದ್ಯದಲ್ಲಿ ಭಾರತವೇನೋ ಗೆಲುವು ಸಾಧಿಸಿತ್ತು ನಿಜ. ಆದರೆ, ಮಿಥಾಲಿ ರಾಜ್ ನಾಯಕತ್ವದಲ್ಲಿ ತಂಡದ ಇತರೆ ಅಟಗಾರರ ಕಳಪೆ ಆಟ, ತಂಡದ ಸತತ ಸೋಲು ಇದೀಗ ಚರ್ಚೆಗೆ ಗ್ರಾಸವಾಗಿದೆ. ನಾಯಕತ್ವಕ್ಕಾಗಿ ತಂಡದ ಒಳಗೆ ಶೀತಲ ಸಮರ ನಡೆಯುತ್ತಿದೆಯೇ ಎಂಬ ಸಂಶಯವನ್ನು ಮೂಡಿಸಿದೆ. ಅಲ್ಲದೆ, ಮಹಿಳಾ ಕ್ರಿಕೆಟ್ ಬಗೆಗೆ ಇದು ಚಿಂತೆಗೀಡು ಮಾಡಿದೆ.

ಮಿಥಾಲಿ ರಾಜ್ ಸಾಧನೆ ಮತ್ತು ಭಾರತದ ಕಳಪೆ ಆಟ

ಜೂನ್ 26, 1999ರಲ್ಲಿ ಐರ್ಲೆಂಡ್ ವಿರುದ್ಧ ಮೊದಲ ಏಕದಿನ ಪಂದ್ಯವನ್ನು ಆಡುವ ಮೂಲಕ ಕ್ರಿಕೆಟ್ ಅಂಗಳಕ್ಕೆ ಪಾದಾರ್ಪಣೆ ಮಾಡಿದ 38 ವರ್ಷದ ಕ್ರಿಕೆಟರ್ ಮಿಥಾಲಿ ರಾಜ್ ಇಷ್ಟು ದೊಡ್ಡ ಸಾಧನೆ ಮಾಡುತ್ತಾರೆ ಎಂದು ಭಾಗಶಃ ಯಾರೂ ಊಹಿಸಿರಲಿಲ್ಲ.

ಕಳೆದ 22 ವರ್ಷದಲ್ಲಿ ಮಿಥಾಲಿ ರಾಜ್ ಹತ್ತಾರು ಮೈಲುಗಲ್ಲುಗಳನ್ನು ನೆಟ್ಟಿದ್ದಾರೆ. ಸಚಿನ್ ತೆಂಡೂಲ್ಕರ್ ಪುರುಷರ ಕ್ರಿಕೆಟ್‌ನಲ್ಲಿ ರನ್‌ಗಳ ಶಿಖರವನ್ನು ನಿರ್ಮಿಸಿದ್ದರೆ, ಮಹಿಳಾ ಕ್ರಿಕೆಟ್‌ನಲ್ಲಿ ತಮ್ಮ ಕೌಶಲ್ಯ ಮತ್ತು ಸಾಮರ್ಥ್ಯದಿಂದಾಗಿ ಮಿಥಾಲಿ ರಾಜ್ ದಾಖಲೆಗಳ ಮೇಲೆ ದಾಖಲೆಗಳನ್ನು ನಿರ್ಮಿಸುತ್ತಿದ್ದಾರೆ.
ಕಳೆದ 22 ವರ್ಷಗಳ ಸುದೀರ್ಘ ಕ್ರಿಕೆಟ್ ಪಯಣದಲ್ಲಿ ಮಿಥಾಲಿ ರಾಜ್ ಮೂರೂ ಮಾದರಿಯ ಕ್ರಿಕೆಟ್‌ನಲ್ಲಿ ಒಟ್ಟು 10,337 ರನ್‌ಗಳನ್ನು ಗಳಿಸಿದ್ದಾರೆ. ಈ ಮೂಲಕ 10273 ರನ್‌ಗಳನ್ನು ಗಳಿಸಿ ಈವರೆಗೆ ಮೊದಲ ಸ್ಥಾನದಲ್ಲಿದ್ದ ಇಂಗ್ಲೆಂಡ್‌ನ ಶಾರ್ಲೆಟ್ ಎಡ್ವರ್ಡ್ ಅವರ ದಾಖಲೆಯನ್ನು ಮುರಿದಿದ್ದಾರೆ. ಅಲ್ಲದೆ, ಏಕದಿನ ಕ್ರಿಕೆಟ್ 6000 ರನ್ ಪೂರೈಸಿದ ಮೊದಲ ಆಟಗಾರ್ತಿ ಎಂಬ ದಾಖಲೆಯೂ ಮಿಥಾಲಿ ರಾಜ್ ಅವರ ಹೆಸರಿನಲ್ಲಿದೆ. ಇದರ ಹೊರತಾಗಿಯೂ ಏಕದಿನ ಕ್ರಿಕೆಟ್‌ನಲ್ಲಿ ಸತತ 7 ಅರ್ಧ ಶತಕ ಬಾರಿಸಿ ಅಪರೂಪದ ದಾಖಲೆಯೂ ಮಿಥಾಲಿ ರಾಜ್ ಹೆಸರಲ್ಲಿದೆ.

ಪುರುಷರ ಕ್ರಿಕೆಟ್‌ನಲ್ಲೇ ಈವರೆಗೆ ಸತತ 7 ಅರ್ಥ ಶತಕ ಬಾರಿಸಿದ ಆಟಗಾರರು ಇಲ್ಲ. ಇಂತಹ ಅಪರೂಪದ ಸಾಧನೆ ಮೂಲಕ ಮಿಥಾಲಿ ಮಹಿಳಾ ಕ್ರಿಕೆಟ್‌ನ ಗೋಡೆ ಎಂಬ ಖ್ಯಾತಿಗೂ ಪಾತ್ರರಾಗಿದ್ದರು. ಅವರ ಈ ಅಮೋಘ ಸಾಧನೆಯ ನಡುವೆಯೂ ಭಾರತ ಮಾತ್ರ ಸತತ ಸೋಲುಗಳನ್ನು ಕಾಣುತ್ತಿರುವುದು ವಿಪರ್ಯಾಸ.

ನಿರಂತರ ಸೋಲಿನಿಂದ ಸೊರಗಿದ ಭಾರತ ತಂಡ

ಭಾರತದ ಮಹಿಳಾ ತಂಡ ಇತರೆ ಯಾವುದೇ ತಂಡಗಳಿಗೆ ಕಡಿಮೆ ಏನಲ್ಲ. ಅತ್ಯುತ್ತಮ ಆಟಗಾರರನ್ನು ಹೊಂದಿದೆ ಮತ್ತು ಈ ಹಿಂದೆ ಅನೇಕ ಟೂರ್ನಿಗಳಲ್ಲಿ ಗೆಲುವು ಸಾಧಿಸಿದೆ.

ಏಕದಿನ ವಿಶ್ವಕಪ್ ಟೂರ್ನಿಯಲ್ಲಿ 2005 ಮತ್ತು 2013ರಲ್ಲಿ ಫೈನಲ್‌ಗೆ ಏರಿದ್ದ ಭಾರತ ತಂಡ ಕ್ರಮವಾಗಿ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ವಿರುದ್ಧ ಸೋಲನ್ನಪ್ಪಿತ್ತು. ಇನ್ನೂ 2020ರಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ಮೊದಲ ಬಾರಿಗೆ ಫೈನಲ್‌ಗೆ ಏರಿದ್ದ ಭಾರತ ಆಸ್ಟ್ರೇಲಿಯಾ ವಿರುದ್ಧ ಸೋಲನ್ನನುಭವಿಸಿತ್ತು. ಇದು ಭಾರತದ ಮಹಿಳಾ ತಂಡದ ಈ ಸಾಧನೆ ಮತ್ತು ಅವರ ಆಟಕ್ಕೊಂದು ನಿದರ್ಶನವಷ್ಟೆ.

ತಂಡದಲ್ಲಿ ಆರಂಭಿಕ ಆಟಗಾರ್ತಿಯರಾಗಿ ಸ್ಮೃತಿ ಮಂದಾನ ಮತ್ತು ಶಫಾಲಿ ವರ್ಮ ತಮ್ಮ ಹೊಡಿಬಡಿ ಆಟದಿಂದಲೇ ಹೆಸರಾದರೆ, ಮಧ್ಯಮ ಕ್ರಮಾಂಕದಲ್ಲಿ ಜಮಿಯ್ಯಾ ರೋಡಿಗ್ರಸ್, ಮಿಥಾಲಿ ರಾಜ್ ಮತ್ತು ಹರ್ಮನ್ ಪ್ರೀತ್ ಕೌರ್ ತಂಡದ ಆಧಾರಸ್ತಂಭ. ಅದರಲ್ಲೂ ಬಿರುಬೀಸಿನ ಆಟಗಾರ್ತಿ ಹರ್ಮನ್ ಪ್ರೀತ್ ಕೌರ್ ಮಹಿಳಾ ಟಿ20 ತಂಡದ ನಾಯಕಿಯೂ ಹೌದು.

ಬೌಲಿಂಗ್ ವಿಭಾಗದಲ್ಲಿ ಅನುಭವಿ ವೇಗದ ಬೌಲರ್ ಜುಲಾನ್ ಗೋಸ್ವಾಮಿ ತಂಡದ ಬೌಲಿಂಗ್ ಸಾರಥ್ಯ ವಹಿಸಿದರೆ, ಪೂನಂ ಯಾದವ್, ಶಿಖಾ ಪಾಂಡೆ ತಂಡದ ಉಳಿದ ಸ್ಟಾರ್ ಬೌಲರ್‌ಗಳು. ಹೀಗಾಗಿ ಭಾರತದ ಮಹಿಳಾ ತಂಡ ಕಾಗದದ ಮೇಲೆ ಅತ್ಯಂತ ಬಲಿಷ್ಟ ತಂಡ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ,
ಕಳೆದ ಒಂದು ವರ್ಷದಲ್ಲಿ ಟಿ20 ವಿಶ್ವಕಪ್ ನಂತರ ಭಾರತ ತಂಡ ಸತತ ಸೋಲುಗಳನ್ನು ಅನುಭವಿಸುತ್ತಿರುವುದು ಇದೀಗ ಆತಂಕಕ್ಕೆ ಕಾರಣವಾಗಿದೆ.

ಕಳೆದ ಮಾರ್ಚ್ ತಿಂಗಳಲ್ಲಿ, ಮೂರು ಟಿ20 ಮತ್ತು ಐದು ಏಕದಿನ ಪಂದ್ಯಗಳ ಸರಣಿಗಾಗಿ ದಕ್ಷಿಣ ಆಫ್ರಿಕಾ ಮಹಿಳಾ ತಂಡ ಭಾರತಕ್ಕೆ ಆಗಮಿಸಿತ್ತು. ತವರು ನೆಲದಲ್ಲಿ ಭಾರತ ತಂಡವನ್ನು ಮಣಿಸುವುದು ಅಷ್ಟು ಸುಲಭದ ಕೆಲಸವಲ್ಲ. ದಕ್ಷಿಣ ಆಫ್ರಿಕಾ ತಂಡವೂ ಈವರೆಗೆ ಭಾರತದಲ್ಲಿ ಸೀಮಿತ ಓವರ್‌ಗಳ ಸರಣಿ ಜಯಿಸಿದ ಉದಾಹರಣೆಗಳು ಇಲ್ಲ.

ಆದರೆ, ಮಾರ್ಚ್‌ನಲ್ಲಿ ಭಾರತ ಹೀನಾಯವಾಗಿ ಸೋಲನುಭವಿಸಿತ್ತು. 2-1 ಅಂತರದಲ್ಲಿ ಟಿ20 ಮತ್ತು 4-1 ಅಂತರದಲ್ಲಿ ಏಕದಿನ ಸರಣಿಯನ್ನು ದಕ್ಷಿಣ ಆಫ್ರಿಕಾ ತಂಡ ಜಯಿಸಿತ್ತು. ಆಗಲೇ ಭಾರತದ ಮಹಿಳಾ ತಂಡದ ಮೇಲೆ ವ್ಯಾಪಕ ಟೀಕೆಗಳು ಎದುರಾದವು. ಇದೀಗ ಇಂಗ್ಲೆಂಡ್‌ನಲ್ಲೂ ಸಹ ಏಕದಿನ ಸರಣಿಯನ್ನು ಭಾರತ ತಂಡ ಕೈಚೆಲ್ಲಿದೆ. ಆದರೆ, ಈ ಎರಡೂ ಸರಣಿಯಲ್ಲಿ ಮಿಥಾಲಿ ರಾಜ್ ಉತ್ತಮ ಪ್ರದರ್ಶನ ನೀಡಿದ್ದಾರೆ. ತಂಡದ ಇತರೆ ಪ್ರಮುಖ ಆಟಗಾರರ ವೈಫಲ್ಯವೇ ತಂಡದ ಸೋಲಿಗೆ ಕಾರಣ ಎಂಬುದು ಉಲ್ಲೇಖಾರ್ಹ.

ಸೋಲಿಗೆ ಕಾರಣವಾಯ್ತೆ ನಾಯಕತ್ವಕ್ಕಾಗಿನ ಜಗಳ?

ಭಾರತದ ಸೀಮಿತ ಓವರ್‌ಗಳ ತಂಡಕ್ಕೆ ಮಿಥಾಲಿ ರಾಜ್ ಅವರೇ ನಾಯಕಿ. ಕಳೆದ ಒಂದು ದಶಕದಿಂದ ಅವರು ತಂಡವನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ. ಆದರೆ, ಯುವಕರಿಗೆ ಅವಕಾಶ ನೀಡಬೇಕು ಎಂಬ ಕಾರಣಕ್ಕೆ ಟಿ20ರ ವಿಶ್ವಕಪ್ ತಂಡದಲ್ಲಿ ಮಿಥಾಲಿ ರಾಜ್ ಇದ್ದರೂ ಸಹ ಅವರನ್ನು ಆಡುವ 11ರ ಬಳಗದಲ್ಲಿ ಆಡಿಸಿರಲಾಗಿಲ್ಲ. ಅಲ್ಲದೆ, ನಾಯಕತ್ವವನ್ನು ಹರ್ಮನ್ ಪ್ರೀತ್ ಕೌರ್‌ಗೆ ನೀಡಲಾಗಿತ್ತು.

ಕೊನೆಗೆ ಟಿ20 ಮಾದರಿಗೆ ಮಿಥಾಲಿ ರಾಜ್ ಒತ್ತಾಯಪೂರ್ವಕವಾಗಿ ನಿವೃತ್ತಿ ಘೋಷಿಸುವಂತೆ ಮಾಡಲಾಗಿತ್ತು. ಇದು ಹಿರಿಯ ಆಟಗಾರ್ತಿಗೆ ಆದ ಅವಮಾನ ಎಂದೇ ಮಾಧ್ಯಮಗಳು ಕಿಡಿಕಾರಿದ್ದವು. ಇದೀಗ ಏಕದಿನ ತಂಡದ ನಾಯಕತ್ವದಿಂದಲೂ ಮಿಥಾಲಿ ರಾಜ್ ಅವರನ್ನು ಹೊರಹಾಕುವ ಹುನ್ನಾರ ನಡೆಯುತ್ತಿದೆ ಎಂಬ ಚರ್ಚೆ ನಡೆಯುತ್ತಿದೆ. ಈ ಚರ್ಚೆ ಮತ್ತು ತಂಡದ ಒಳ ಜಗಳ ಉಳಿದ ಆಟಗಾರ್ತಿಯರ ಪ್ರದರ್ಶನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆಯೇ ಎಂಬ ಸಂಶಯ ಇದೀಗ ಕ್ರೀಡಾಸಕ್ತರಲ್ಲಿ ಮನೆಮಾಡಿದೆ.

ಜುಲೈ 9ರಿಂದ ಆರಂಭವಾಗುವ ಟಿ20 ಸರಣಿಯ ಮೇಲೆ ಇದೀಗ ಎಲ್ಲರ ಕಣ್ಣು ನೆಟ್ಟಿದೆ. ಏಕದಿನ ಸೋಲಿನ ಸೇಡನ್ನು ಭಾರತ ಮಹಿಳಾ ತಂಡ ಟಿ20ನಲ್ಲಿ ತೀರಿಸಿಕೊಳ್ಳಲಿದೆಯೇ ಎಂಬ ಮಾತುಗಳೂ ಕೇಳಿಬರುತ್ತಿವೆ. ಒಟ್ಟಾರೆ ಭಾರತ ಈ ಸರಣಿಯಲ್ಲಾದರೂ ಗೆಲುವು ಸಾಧಿಸಲಿ ಎಂಬುದೇ ಎಲ್ಲರ ಆಶಯ.


ಇದನ್ನೂ ಓದಿ: ವಿಂಬಲ್ಡನ್ ಟೆನಿಸ್ ಟೂರ್ನಿ ಆರಂಭ; ಇಲ್ಲ ಭಾರತದ ಪ್ರಾತಿನಿಧ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...