Homeಮುಖಪುಟಮಿತ್ರೋ ಸ್ವಲ್ಪ ಇಲ್ಲಿ ಕೇಳಿ. - ಭರತ್ ಹೆಬ್ಬಾಳ್ ರವರ ಮಿತ್ರೋ ಬರಹಗಳು

ಮಿತ್ರೋ ಸ್ವಲ್ಪ ಇಲ್ಲಿ ಕೇಳಿ. – ಭರತ್ ಹೆಬ್ಬಾಳ್ ರವರ ಮಿತ್ರೋ ಬರಹಗಳು

- Advertisement -
| ಭರತ್ ಹೆಬ್ಬಾಳ್ |
ಮೊನಚು ಹಾಸ್ಯದ ಮೂಲಕ ಆಳುವವರನ್ನು ಪ್ರಶ್ನಿಸುವುದು ಬಹಳಷ್ಟು ಜನರಿಗೆ ಬೇಗ ಮುಟ್ಟುತ್ತದೆ. ಈ ರೀತಿಯಾಗಿ ನರೇಂದ್ರ ಮೋದಿ ಸರ್ಕಾರ ಜನರಿಗೆ ಮಾಡುತ್ತಿರುವ ಮೋಸಗಳನ್ನು ಮಿತ್ರೋ ಸೀರೀಸ್ ನಲ್ಲಿ ಭರತ್ ಹೆಬ್ಬಾಳ್ ಬರೆಯುತ್ತಾರೆ. ಆಯ್ದ ಮಿತ್ರೋನ್ ಬರಹಗಳು ನಿಮ್ಮ ಓದಿ, ನಕ್ಕು ನಲಿಯಿರಿ.
Mithron, ಚುನಾವಣಾ ಪ್ರಚಾರದ ಪ್ರಯುಕ್ತ  ನಾನು ಹುಟ್ಟಿದ ನಾಡಾದ ಕರ್ನಾಟಕಕ್ಕೆ ಮತ್ತೆ ಬರ್ತಿದ್ದೀನಿ, ನಾನು ಕನ್ನಡಿಗ ಅಂದ್ರೆ  ನಿಮಗೆ ಆಶ್ಚರ್ಯವಾಗಬೊಹುದು.. ಆದರೆ ನಾನು ಹುಟ್ಟಿದ್ದು ಕರ್ನಾಟಕದಲ್ಲೇ.. ಇಲ್ದೆಇರೋ ಅಚ್ಛೇದಿನ್  ಜಿಲ್ಲೆಯ ಸಾಬ್ಕವಿಕಾಸ್ ತಾಲೂಕಿನ “ಸತ್ಯಸುಳ್ ಮಾಡೋಹಳ್ಳಿ” ನಾನು ಹುಟ್ಟಿದ್ದು ಎಂಬುವ ಸತ್ಯ  ಇಲ್ಲಿಯ ತನಕ ಯಾರಿಗೂ ಗೊತ್ತಿಲ್ಲ. ಚಿಕೊವ್ನಿದ್ದಾಗ ಮೈಸೂರ್ ದಸರಾ ಜಾತ್ರೆಲಿ ಕಳೆದು ಹೋಗಿ ಗುಜರಾತ್ ಸೇರ್ಕೊಂಡೆ.. ಆದ್ದರಿಂದ ನನ್ನನ್ನು ಅಂದರೆ ನಾನು ಸ್ಪರ್ದಿಸುತ್ತಿರುವ 27 ಕ್ಷೇತ್ರಗಳಲ್ಲಿ ನನ್ನನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸಬೇಕೆಂದು ಕೋರುತ್ತೇನೆ.. ಜೈ ಚೊಂಭೇಶ್ವರ..
——
Mithron,  ಅತಿ ಭ್ರಷ್ಟ ಲೋಫರ್ ಲಫ್ಹಂಗಾಗಳು ಸರ್ಕಾರಿ ಕೆಲಸದಲ್ಲಿದ್ದುಕೊಂಡು ಸೈಟು, ಮನೆ, ಜಮೀನು, ಚಿನ್ನ ಇತ್ಯಾದಿ ಅಪಾರ ಪ್ರಮಾಣದ ಆಸ್ತಿ ಪಾಸ್ತಿ ಮಾಡ್ಕೊಂಡು “ನಾನು ಮಾತ್ರ ಭ್ರಷ್ಟನಲ್ಲ” ಅಂಥ ನನ್ನ ಬೆನ್ನ ಹಿಂದೆ ನಿಂತ್ಕೊಂಡ್ ನಾನು ಎನ್ ಹೇಳುದ್ರು ಮೋದಿ ಮೋದಿ ಎಂದು ಅರಚುತ್ತಾ, ಸ್ವಚ್ಛ ಭಾರತ, ಭ್ರಷ್ಟ ಕಾಂಗ್ರೆಸ್ ಅಂತೆಲ್ಲ ಮಾತಾಡ್ತಾರಲ್ಲ.. ಇವರುಗಳ ಬಗ್ಗೆ ಯೋಚನೆ ಮಾಡುದ್ರೆ ಒಂದೊಂದ್ ಸಾರ್ತಿ ಭಯ ಬಂದು ರಾತ್ರಿಯೆಲ್ಲ ನಿದ್ದೆ ಬರೋಲ್ಲ.. ಎಂಥ ಮನಗೆಟ್ಟ ಜನ್ಮ ಈ ಲೋಫರ್ಗಳದ್ದೂ.
——
Mithron, ಹಿಂದೂ ಸಂಸ್ಕೃತಿ ಸಂಪ್ರದಾಯದ ಪ್ರಕಾರ 15 ಲಕ್ಷ ಕೊಡುವುದು ಒಳ್ಳೆಯದಲ್ಲ. ಆದ್ದರಿಂದ ಈ ಭಾರಿ ನನ್ನನ್ನು ಗೆಲ್ಲಿಸಿದರೆ ಹಿಂದೂ ಸಂಸ್ಕೃತಿಯ ಪ್ರಕಾರ 15 ಲಕ್ಷದ ಒಂದು ರೂಪಾಯಿ ನಿಮ್ಮ ಅಕೌಂಟಿಗೆ  ಬಂದು ಬೀಳುವುದು ಗ್ಯಾರೆಂಟಿ..
——
Mithron, ಬೆಂಗಳೂರಿನ ಬೀದಿಗಳಲ್ಲಿ ಕಲ್ಲು ಬೀಸಿದರೆ ಒಂದೋ ಬೀದಿ ನಾಯಿಗೆ ತಗಲುತ್ತದೆ ಅಥವಾ ಸಾಫ್ಟ್ ವೆರ್ ಟೆಕಿಗಳಿಗೆ ಬೀಳುತ್ತದೆ ಎಂಬ ಮಾತಿತ್ತು.. ಭಾಹಿಯೋ ಔರ್ ಬೆಹೆನೋ ಇದರಲ್ಲಿ ವ್ಯತ್ಯಾಸ ಇಷ್ಟೇ, ನಾಯಿಗಳು ಕುಯ್ ಅಂಥವೇ, ಇಲ್ಲ ಎದುರು ಬಂದು ಬೊಗಳಿ ಕಚ್ಚುವ ಪ್ರಯತ್ನ ಮಾಡುತ್ತವೆ.. ಆದರೆ ಬಹುತೇಕ ಸಾಫ್ಟ್ ವೆರ್ ಟೆಕಿಗಳು ಮಾತ್ರ ಏನೇ ಆಗಲಿ ಮೋದಿ ಮೋದಿ ಎಂದು ಕೂಗುತ್ತಾರೆ ಅಷ್ಟೇ.. #ಮತ್ತೊಮ್ಮೆಮೋದಿ #ಕುಯ್ #ಜೈಚೊಂಭೇಶ್ವರ
——
Mithron, ಮೊನ್ನೆ ಚೆನ್ನಾಗಿ ಓದಿಕೊಂಡು ದೊಡ್ಡ ಹುದ್ದೆಯಲ್ಲಿರುವ  ನನ್ನ ಪರಮ ಭಕ್ತನೊಬ್ಬನನ್ನು ಪ್ರಶ್ನೆ ಮಾಡಿದೆ. ನಾಜಿ ಜರ್ಮನಿಯಲ್ಲಿ ಹಿಟ್ಲರ್ನನ ಪರವಾಗಿರ್ತೀಯ? ಅಥವಾ ಲಕ್ಷಗಟ್ಟಲೆ ಕೊಲ್ಲಲ್ಪಟ್ಟ ಯಹೂದಿಗಳ ಪರವಾಗಿರ್ತಿಯ ಅಂಥ.. ಅವನು ಹಿಟ್ಲರ್ ಪರವಾಗಿರ್ತೀನಿ ಅಂದ.
ಸರಿ, ಸದ್ಯದ ಪರಿಸ್ಥಿತಿಯಲ್ಲಿ ಪ್ರಜಾತಾಂತ್ರಿಕ ಜರ್ಮನಿಯನ್ನು ಸಪ್ಪೋರ್ಟ್ ಮಾಡ್ತಿಯ ಅಥವಾ ಪ್ಯಾಲೆಸ್ತೀನಿಯನ್ನರ ಮಾರಣಹೋಮ ಮಾಡುತ್ತಿರುವ ಇಸ್ರೇಲಿ ಯಹೂದಿಗಳ ಸಪ್ಪೋರ್ಟ್ ಮಾಡ್ತಿಯ ಅಂಥ.. ಅವನು ಇಸ್ರೇಲಿ ಯಹೂದಿಗಳ ಪರ ಎಂದ..
ಆ ಉತ್ತರಗಳನ್ನು ಕೇಳಿ ಕರುಳು ಕಿತ್ ಬಂತು ನಂಗೆ.. ಸೊ ನಾನು ಏನೇ ಮಾಡಿದರೂ, ನನ್ನ ಹಿಂದೆ ಸಾಮಾಜಿಕ ಪ್ರಜ್ಞೆಯಿಲ್ಲದ, ಸರ್ವಾಧಿಕಾರವನ್ನು ಬಯಸುವ ಇಂತ ಸುಶಿಕ್ಷಿತ ನಾಯಿಗಳಿರುವವರೆಗೂ ನನ್ನ ಸ್ಥಾನ  ಭದ್ರ ಎಂದು ಖಾತರಿಯಾಯಿತು..
——
Mithron, ನನ್ನ ಸಲಹೆಗಾರರು ನಂಗೆ ನಾಲ್ಕು ಆಯ್ಕೆ ಕೊಟ್ಟಿದ್ರು.
1. ನನ್ನ ಕಣ್ಣೋಟದಿಂದಲೇ ಕೆಳಮಟ್ಟದ ಉಪಗ್ರಹಗಳ ನಾಶ ಮಾಡುವ ಶಕ್ತಿ.
2. ಮಂತ್ರ ಜಪಿಸುತ್ತ ನನ್ನ ಮನಶಕ್ತಿಯಿಂದ ಕೆಳಮಟ್ಟದ ಉಪಗ್ರಹಗಳ ನಾಶ ಮಾಡುವ ಶಕ್ತಿ.
3. ನಾನು ಶಾ ಹೊಟ್ಟೆಮೇಲ್ ನಿತ್ಕೊಂಡ್ ಜಂಪ್ ಮಾಡಿ ಸೊಳ್ಳೆ ಬ್ಯಾಟ್ನಿಂದ ಉಪಗ್ರಹಗಳ ನಾಶ ಮಾಡುವ ಶಕ್ತಿ.
4. ಹತ್ತು ವರ್ಷದ ಹಿಂದೆಯೇ ಸಿದ್ಧಪಡಿಸಿದ್ದ ವಿಶೇಷ  ಅಗ್ನಿ 5 ಕ್ಷಿಪಣಿಯಿಂದ ಕೆಳಮಟ್ಟದ ಉಪಗ್ರಹಗಳನ್ನು ನಾಶ ಮಾಡುವ ಶಕ್ತಿ.
ನಾನು ನಾಲ್ಕನೇಯದನ್ನು ಆರಿಸಿಕೊಂಡೆ ಚೋಂಬೇಶ್ವರ
——
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...