Homeಮುಖಪುಟಮಿತ್ರೋ ಸ್ವಲ್ಪ ಇಲ್ಲಿ ಕೇಳಿ. - ಭರತ್ ಹೆಬ್ಬಾಳ್ ರವರ ಮಿತ್ರೋ ಬರಹಗಳು

ಮಿತ್ರೋ ಸ್ವಲ್ಪ ಇಲ್ಲಿ ಕೇಳಿ. – ಭರತ್ ಹೆಬ್ಬಾಳ್ ರವರ ಮಿತ್ರೋ ಬರಹಗಳು

- Advertisement -
| ಭರತ್ ಹೆಬ್ಬಾಳ್ |
ಮೊನಚು ಹಾಸ್ಯದ ಮೂಲಕ ಆಳುವವರನ್ನು ಪ್ರಶ್ನಿಸುವುದು ಬಹಳಷ್ಟು ಜನರಿಗೆ ಬೇಗ ಮುಟ್ಟುತ್ತದೆ. ಈ ರೀತಿಯಾಗಿ ನರೇಂದ್ರ ಮೋದಿ ಸರ್ಕಾರ ಜನರಿಗೆ ಮಾಡುತ್ತಿರುವ ಮೋಸಗಳನ್ನು ಮಿತ್ರೋ ಸೀರೀಸ್ ನಲ್ಲಿ ಭರತ್ ಹೆಬ್ಬಾಳ್ ಬರೆಯುತ್ತಾರೆ. ಆಯ್ದ ಮಿತ್ರೋನ್ ಬರಹಗಳು ನಿಮ್ಮ ಓದಿ, ನಕ್ಕು ನಲಿಯಿರಿ.
Mithron, ಚುನಾವಣಾ ಪ್ರಚಾರದ ಪ್ರಯುಕ್ತ  ನಾನು ಹುಟ್ಟಿದ ನಾಡಾದ ಕರ್ನಾಟಕಕ್ಕೆ ಮತ್ತೆ ಬರ್ತಿದ್ದೀನಿ, ನಾನು ಕನ್ನಡಿಗ ಅಂದ್ರೆ  ನಿಮಗೆ ಆಶ್ಚರ್ಯವಾಗಬೊಹುದು.. ಆದರೆ ನಾನು ಹುಟ್ಟಿದ್ದು ಕರ್ನಾಟಕದಲ್ಲೇ.. ಇಲ್ದೆಇರೋ ಅಚ್ಛೇದಿನ್  ಜಿಲ್ಲೆಯ ಸಾಬ್ಕವಿಕಾಸ್ ತಾಲೂಕಿನ “ಸತ್ಯಸುಳ್ ಮಾಡೋಹಳ್ಳಿ” ನಾನು ಹುಟ್ಟಿದ್ದು ಎಂಬುವ ಸತ್ಯ  ಇಲ್ಲಿಯ ತನಕ ಯಾರಿಗೂ ಗೊತ್ತಿಲ್ಲ. ಚಿಕೊವ್ನಿದ್ದಾಗ ಮೈಸೂರ್ ದಸರಾ ಜಾತ್ರೆಲಿ ಕಳೆದು ಹೋಗಿ ಗುಜರಾತ್ ಸೇರ್ಕೊಂಡೆ.. ಆದ್ದರಿಂದ ನನ್ನನ್ನು ಅಂದರೆ ನಾನು ಸ್ಪರ್ದಿಸುತ್ತಿರುವ 27 ಕ್ಷೇತ್ರಗಳಲ್ಲಿ ನನ್ನನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸಬೇಕೆಂದು ಕೋರುತ್ತೇನೆ.. ಜೈ ಚೊಂಭೇಶ್ವರ..
——
Mithron,  ಅತಿ ಭ್ರಷ್ಟ ಲೋಫರ್ ಲಫ್ಹಂಗಾಗಳು ಸರ್ಕಾರಿ ಕೆಲಸದಲ್ಲಿದ್ದುಕೊಂಡು ಸೈಟು, ಮನೆ, ಜಮೀನು, ಚಿನ್ನ ಇತ್ಯಾದಿ ಅಪಾರ ಪ್ರಮಾಣದ ಆಸ್ತಿ ಪಾಸ್ತಿ ಮಾಡ್ಕೊಂಡು “ನಾನು ಮಾತ್ರ ಭ್ರಷ್ಟನಲ್ಲ” ಅಂಥ ನನ್ನ ಬೆನ್ನ ಹಿಂದೆ ನಿಂತ್ಕೊಂಡ್ ನಾನು ಎನ್ ಹೇಳುದ್ರು ಮೋದಿ ಮೋದಿ ಎಂದು ಅರಚುತ್ತಾ, ಸ್ವಚ್ಛ ಭಾರತ, ಭ್ರಷ್ಟ ಕಾಂಗ್ರೆಸ್ ಅಂತೆಲ್ಲ ಮಾತಾಡ್ತಾರಲ್ಲ.. ಇವರುಗಳ ಬಗ್ಗೆ ಯೋಚನೆ ಮಾಡುದ್ರೆ ಒಂದೊಂದ್ ಸಾರ್ತಿ ಭಯ ಬಂದು ರಾತ್ರಿಯೆಲ್ಲ ನಿದ್ದೆ ಬರೋಲ್ಲ.. ಎಂಥ ಮನಗೆಟ್ಟ ಜನ್ಮ ಈ ಲೋಫರ್ಗಳದ್ದೂ.
——
Mithron, ಹಿಂದೂ ಸಂಸ್ಕೃತಿ ಸಂಪ್ರದಾಯದ ಪ್ರಕಾರ 15 ಲಕ್ಷ ಕೊಡುವುದು ಒಳ್ಳೆಯದಲ್ಲ. ಆದ್ದರಿಂದ ಈ ಭಾರಿ ನನ್ನನ್ನು ಗೆಲ್ಲಿಸಿದರೆ ಹಿಂದೂ ಸಂಸ್ಕೃತಿಯ ಪ್ರಕಾರ 15 ಲಕ್ಷದ ಒಂದು ರೂಪಾಯಿ ನಿಮ್ಮ ಅಕೌಂಟಿಗೆ  ಬಂದು ಬೀಳುವುದು ಗ್ಯಾರೆಂಟಿ..
——
Mithron, ಬೆಂಗಳೂರಿನ ಬೀದಿಗಳಲ್ಲಿ ಕಲ್ಲು ಬೀಸಿದರೆ ಒಂದೋ ಬೀದಿ ನಾಯಿಗೆ ತಗಲುತ್ತದೆ ಅಥವಾ ಸಾಫ್ಟ್ ವೆರ್ ಟೆಕಿಗಳಿಗೆ ಬೀಳುತ್ತದೆ ಎಂಬ ಮಾತಿತ್ತು.. ಭಾಹಿಯೋ ಔರ್ ಬೆಹೆನೋ ಇದರಲ್ಲಿ ವ್ಯತ್ಯಾಸ ಇಷ್ಟೇ, ನಾಯಿಗಳು ಕುಯ್ ಅಂಥವೇ, ಇಲ್ಲ ಎದುರು ಬಂದು ಬೊಗಳಿ ಕಚ್ಚುವ ಪ್ರಯತ್ನ ಮಾಡುತ್ತವೆ.. ಆದರೆ ಬಹುತೇಕ ಸಾಫ್ಟ್ ವೆರ್ ಟೆಕಿಗಳು ಮಾತ್ರ ಏನೇ ಆಗಲಿ ಮೋದಿ ಮೋದಿ ಎಂದು ಕೂಗುತ್ತಾರೆ ಅಷ್ಟೇ.. #ಮತ್ತೊಮ್ಮೆಮೋದಿ #ಕುಯ್ #ಜೈಚೊಂಭೇಶ್ವರ
——
Mithron, ಮೊನ್ನೆ ಚೆನ್ನಾಗಿ ಓದಿಕೊಂಡು ದೊಡ್ಡ ಹುದ್ದೆಯಲ್ಲಿರುವ  ನನ್ನ ಪರಮ ಭಕ್ತನೊಬ್ಬನನ್ನು ಪ್ರಶ್ನೆ ಮಾಡಿದೆ. ನಾಜಿ ಜರ್ಮನಿಯಲ್ಲಿ ಹಿಟ್ಲರ್ನನ ಪರವಾಗಿರ್ತೀಯ? ಅಥವಾ ಲಕ್ಷಗಟ್ಟಲೆ ಕೊಲ್ಲಲ್ಪಟ್ಟ ಯಹೂದಿಗಳ ಪರವಾಗಿರ್ತಿಯ ಅಂಥ.. ಅವನು ಹಿಟ್ಲರ್ ಪರವಾಗಿರ್ತೀನಿ ಅಂದ.
ಸರಿ, ಸದ್ಯದ ಪರಿಸ್ಥಿತಿಯಲ್ಲಿ ಪ್ರಜಾತಾಂತ್ರಿಕ ಜರ್ಮನಿಯನ್ನು ಸಪ್ಪೋರ್ಟ್ ಮಾಡ್ತಿಯ ಅಥವಾ ಪ್ಯಾಲೆಸ್ತೀನಿಯನ್ನರ ಮಾರಣಹೋಮ ಮಾಡುತ್ತಿರುವ ಇಸ್ರೇಲಿ ಯಹೂದಿಗಳ ಸಪ್ಪೋರ್ಟ್ ಮಾಡ್ತಿಯ ಅಂಥ.. ಅವನು ಇಸ್ರೇಲಿ ಯಹೂದಿಗಳ ಪರ ಎಂದ..
ಆ ಉತ್ತರಗಳನ್ನು ಕೇಳಿ ಕರುಳು ಕಿತ್ ಬಂತು ನಂಗೆ.. ಸೊ ನಾನು ಏನೇ ಮಾಡಿದರೂ, ನನ್ನ ಹಿಂದೆ ಸಾಮಾಜಿಕ ಪ್ರಜ್ಞೆಯಿಲ್ಲದ, ಸರ್ವಾಧಿಕಾರವನ್ನು ಬಯಸುವ ಇಂತ ಸುಶಿಕ್ಷಿತ ನಾಯಿಗಳಿರುವವರೆಗೂ ನನ್ನ ಸ್ಥಾನ  ಭದ್ರ ಎಂದು ಖಾತರಿಯಾಯಿತು..
——
Mithron, ನನ್ನ ಸಲಹೆಗಾರರು ನಂಗೆ ನಾಲ್ಕು ಆಯ್ಕೆ ಕೊಟ್ಟಿದ್ರು.
1. ನನ್ನ ಕಣ್ಣೋಟದಿಂದಲೇ ಕೆಳಮಟ್ಟದ ಉಪಗ್ರಹಗಳ ನಾಶ ಮಾಡುವ ಶಕ್ತಿ.
2. ಮಂತ್ರ ಜಪಿಸುತ್ತ ನನ್ನ ಮನಶಕ್ತಿಯಿಂದ ಕೆಳಮಟ್ಟದ ಉಪಗ್ರಹಗಳ ನಾಶ ಮಾಡುವ ಶಕ್ತಿ.
3. ನಾನು ಶಾ ಹೊಟ್ಟೆಮೇಲ್ ನಿತ್ಕೊಂಡ್ ಜಂಪ್ ಮಾಡಿ ಸೊಳ್ಳೆ ಬ್ಯಾಟ್ನಿಂದ ಉಪಗ್ರಹಗಳ ನಾಶ ಮಾಡುವ ಶಕ್ತಿ.
4. ಹತ್ತು ವರ್ಷದ ಹಿಂದೆಯೇ ಸಿದ್ಧಪಡಿಸಿದ್ದ ವಿಶೇಷ  ಅಗ್ನಿ 5 ಕ್ಷಿಪಣಿಯಿಂದ ಕೆಳಮಟ್ಟದ ಉಪಗ್ರಹಗಳನ್ನು ನಾಶ ಮಾಡುವ ಶಕ್ತಿ.
ನಾನು ನಾಲ್ಕನೇಯದನ್ನು ಆರಿಸಿಕೊಂಡೆ ಚೋಂಬೇಶ್ವರ
——
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....