Homeಮುಖಪುಟಸಚಿವರಿಗೆ ಹಿಂದಿ ಗೊತ್ತಿಲ್ಲ: ಸಿಎಸ್‌ ಬದಲಾವಣೆಗೆ ಕೋರಿ ಅಮಿತ್‌ ಶಾಗೆ ಮಿಜೋರಾಂ ಸಿಎಂ ಪತ್ರ

ಸಚಿವರಿಗೆ ಹಿಂದಿ ಗೊತ್ತಿಲ್ಲ: ಸಿಎಸ್‌ ಬದಲಾವಣೆಗೆ ಕೋರಿ ಅಮಿತ್‌ ಶಾಗೆ ಮಿಜೋರಾಂ ಸಿಎಂ ಪತ್ರ

"ನಾನು ಎನ್‌ಡಿಎಯ ನಿಷ್ಠಾವಂತ ಪಾಲುದಾರನಾಗಿದ್ದೇನೆ. ಮಿಜೋ ಭಾಷೆ ತಿಳಿಯದ ಮುಖ್ಯ ಕಾರ್ಯದರ್ಶಿಯನ್ನು ಬದಲಿಸದಿದ್ದರೆ ನನ್ನನ್ನು ವಿರೋಧ ಪಕ್ಷಗಳು ಅಪಹಾಸ್ಯ ಮಾಡುತ್ತವೆ"

- Advertisement -
- Advertisement -

“ರಾಜ್ಯದ ಸಚಿವರಿಗೆ ಹಿಂದಿ ಗೊತ್ತಿಲ್ಲ; ಅನೇಕರಿಗೆ ಇಂಗ್ಲಿಷ್‌ ಕೂಡ ಗೊತ್ತಿಲ್ಲ” ಎಂದು ಕೇಂದ್ರದ ಗೃಹಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿರುವ ಮಿಜೋರಾಂ ಮುಖ್ಯಮಂತ್ರಿ ಪು ಜೋರಮ್ತಂಗ ಅವರು, ರಾಜ್ಯ ಮುಖ್ಯ ಕಾರ್ಯದರ್ಶಿ (ಸಿಎಸ್‌) ರೇಣು ಶರ್ಮಾ ಅವರನ್ನು ಬದಲಾಯಿಸಲು ಒತ್ತಾಯಿಸಿದ್ದಾರೆ.

ರೇಣು ಶರ್ಮಾ ಅವರ ಬದಲಿಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜೆ.ಸಿ.ರಾಮತಂಗ ಅವರನ್ನು ನೂತನ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸುವಂತೆ ಮುಖ್ಯಮಂತ್ರಿಯವರು ಕೇಂದ್ರದ ಗೃಹ ಸಚಿವರಲ್ಲಿ ಮನವಿ ಮಾಡಿದ್ದಾರೆ.

“ಗುಜರಾತ್ ಕೇಡರ್‌ನ ನನ್ನ ಮುಖ್ಯ ಕಾರ್ಯದರ್ಶಿ ಲಾಲ್ನುನ್ಮಾವಿಯಾ ಚುವಾಗೊ ಅವರು ನಿವೃತ್ತರಾದ ನಂತರ ನನ್ನ ಈಗಿನ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜೆಸಿ ರಾಮತಂಗ (ಮಣಿಪುರ ಕೇಡರ್) ಅವರನ್ನು ಮುಂದಿನ ಮುಖ್ಯ ಕಾರ್ಯದರ್ಶಿಯನ್ನಾಗಿ ಮಾಡಲು ನಾನು ವಿನಂತಿಸಿದೆ. ಆದರೆ ಗೃಹ ಸಚಿವಾಲಯವು ರೇಣು ಶರ್ಮಾ ಅವರನ್ನು ಹೊಸ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಿದೆ” ಎಂದು ಅಕ್ಟೋಬರ್‌ 29ರಂದು ಬರೆದ ಪತ್ರದಲ್ಲಿ ಮಿಜೋರಾಂ ಸಿಎಂ ಹೇಳಿದ್ದು, ಈ ಪತ್ರವು ತಮಗೆ ಲಭ್ಯವಾಗಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

1988ರ ಬ್ಯಾಚ್‌ನ AGMUT ಕೇಡರ್ ಐಎಎಸ್ ಅಧಿಕಾರಿಯಾಗಿರುವ ರೇಣು ಶರ್ಮಾ ಅವರನ್ನು ನವೆಂಬರ್ 1ರಿಂದ ಮಿಜೋರಾಂನ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲು ಅಕ್ಟೋಬರ್ 28 ರಂದು ಕೇಂದ್ರವು ನೇಮಿಸಿತು.

ಇದನ್ನೂ ಓದಿರಿ: ಒರಿಸ್ಸಾ: ದಲಿತರ ಗುಡಿಸಲುಗಳಿಗೆ ಬೆಂಕಿ; ಹತ್ತು ಮಂದಿಗೆ ಗಾಯ

ಅದೇ ದಿನ, ಮಿಜೋರಾಂ ಸರ್ಕಾರವು ಜೆಸಿ ರಾಮತಂಗ ಅವರಿಗೆ ನವೆಂಬರ್ 1ರಿಂದ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲು ಆದೇಶಿಸಿತು. ಹೀಗಾಗಿ ಮಿಜೋರಾಂ ಈಗ ಇಬ್ಬರು ಮುಖ್ಯ ಕಾರ್ಯದರ್ಶಿಗಳನ್ನು ಹೊಂದಿದೆ.

“ಮಿಜೋ ಭಾಷಿಗರಿಗೆ ಹಿಂದಿ ಅರ್ಥವಾಗುವುದಿಲ್ಲ. ನನ್ನ ಕ್ಯಾಬಿನೆಟ್ ಮಂತ್ರಿಗಳಲ್ಲಿ ಯಾರಿಗೂ ಹಿಂದಿ ಬರುವುದಿಲ್ಲ. ಅವರಲ್ಲಿ ಕೆಲವರಿಗೆ ಇಂಗ್ಲಿಷ್ ಭಾಷೆಯ ಸಮಸ್ಯೆಯೂ ಇದೆ. ಅಂತಹ ಪರಿಸ್ಥಿತಿಯಲ್ಲಿ ಮಿಜೋ ಭಾಷೆಯ ಜ್ಞಾನವಿಲ್ಲದ ಮುಖ್ಯ ಕಾರ್ಯದರ್ಶಿಯವರು ಎಂದಿಗೂ ಪರಿಣಾಮಕಾರಿಯಾಗಿ ಹಾಗೂ ದಕ್ಷತೆಯಿಂದ ಕಾರ್ಯನಿರ್ವಹಿಸಲು ಸಾಧ್ಯವಾಗದು” ಎಂದು ಮುಖ್ಯಮಂತ್ರಿ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

“ಈ ಕಾರಣದಿಂದಾಗಿ ಮಿಜೋರಾಂ ರಾಜ್ಯ ರಚನೆಯಾದಾಗಿನಿಂದಲೂ ಮಿಜೋ ಭಾಷೆಯನ್ನು ತಿಳಿದಿಲ್ಲದ ಮುಖ್ಯ ಕಾರ್ಯದರ್ಶಿಯನ್ನು ಭಾರತ ಸರ್ಕಾರವು ಎಂದಿಗೂ ನೇಮಿಸಲಿಲ್ಲ. ಅದು ಯುಪಿಎ ಸರ್ಕಾರವಾಗಲಿ ಅಥವಾ ಎನ್‌ಡಿಎ ಸರ್ಕಾರವಾಗಲಿ ಮಿಜೋರಾಂ ರಾಜ್ಯ ರಚನೆಯಾದಾಗಿನಿಂದ ಈ ಪದ್ಧತಿ ನಡೆದುಬಂದಿದೆ. ಭಾರತದ ಇತರ ರಾಜ್ಯಗಳಲ್ಲಿ ಆಯಾ ರಾಜ್ಯದ ಭಾಷೆಯನ್ನು ತಿಳಿಯದವರನ್ನು ಮುಖ್ಯ ಕಾರ್ಯದರ್ಶಿಯಾಗಿ ನೇಮಿಸುವುದಿಲ್ಲ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ” ಎಂದು ಮುಖ್ಯಮಂತ್ರಿ ಪ್ರಸ್ತಾಪಿಸಿದ್ದಾರೆ.

“ನಾನು ಮೊದಲಿನಿಂದಲೂ ಈ ಸಮಯದವರೆಗೆ ಈಶಾನ್ಯ ರಾಜ್ಯಗಳಲ್ಲಿ ಎನ್‌ಡಿಎಯ ನಿಷ್ಠಾವಂತ ಪಾಲುದಾರನಾಗಿದ್ದೇನೆ. ಎನ್‌ಡಿಎ ಜೊತೆಗಿನ ಈ ನಿಷ್ಠಾವಂತ ಸ್ನೇಹದಿಂದಾಗಿ ವಿಶೇಷವಾದ ಒಲವು ಮತ್ತು ಪರಿಗಣನೆಗೆ ಅರ್ಹನಾಗಿದ್ದೇನೆ ಎಂದು ನಾನು ನಂಬುತ್ತೇನೆ” ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

“ಹಿಂದಿನ ಕಾಂಗ್ರೆಸ್ ಮುಖ್ಯಮಂತ್ರಿಯವರು ಕೇಳಿದಾಗ ನಿರಾಕರಿಸಲಿಲ್ಲ. ಮುಖ್ಯ ಕಾರ್ಯದರ್ಶಿಯ ಪ್ರಸ್ತಾಪವನ್ನು ನನಗೆ ನಿರಾಕರಿಸಿದರೆ, ಕಾಂಗ್ರೆಸ್ ಪಕ್ಷ ಮತ್ತು ಇತರ ಎಲ್ಲಾ ವಿರೋಧ ಪಕ್ಷಗಳು ಎನ್‌ಡಿಎ ಪಾಲುದಾರಿಕೆಯಲ್ಲಿ ನಿಷ್ಠೆಯಿಂದ ಸೇವೆ ಸಲ್ಲಿಸಿದ ನನ್ನನ್ನು ಅಪಹಾಸ್ಯ ಮಾಡುತ್ತವೆ. ಆದ್ದರಿಂದ ಆದೇಶವನ್ನು ಬದಲಾಯಿಸಬೇಕು, ನನ್ನ ಪ್ರಸ್ತಾವನೆಯನ್ನು ದಯವಿಟ್ಟು ಸ್ವೀಕರಿಸಬೇಕು ಎಂದು ನಿಮ್ಮಲ್ಲಿ ಮನಃಪೂರ್ವಕವಾಗಿ ವಿನಂತಿಸುತ್ತೇನೆ” ಎಂದು ಜೊರಾಮ್‌ತಂಗಾ ಕೋರಿದ್ದಾರೆ.

ಇದನ್ನೂ ಓದಿರಿ: ಹಿಂದಿ ಹೇರಿಕೆಗೆ ಕಪಾಳ ಮೋಕ್ಷ: ’ಜೈ ಭೀಮ್’ ದೃಶ್ಯಕ್ಕೆ ದ್ರಾವಿಡ ಭಾಷಿಗರ ಮೆಚ್ಚುಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....