Homeಮುಖಪುಟಸಚಿವರಿಗೆ ಹಿಂದಿ ಗೊತ್ತಿಲ್ಲ: ಸಿಎಸ್‌ ಬದಲಾವಣೆಗೆ ಕೋರಿ ಅಮಿತ್‌ ಶಾಗೆ ಮಿಜೋರಾಂ ಸಿಎಂ ಪತ್ರ

ಸಚಿವರಿಗೆ ಹಿಂದಿ ಗೊತ್ತಿಲ್ಲ: ಸಿಎಸ್‌ ಬದಲಾವಣೆಗೆ ಕೋರಿ ಅಮಿತ್‌ ಶಾಗೆ ಮಿಜೋರಾಂ ಸಿಎಂ ಪತ್ರ

"ನಾನು ಎನ್‌ಡಿಎಯ ನಿಷ್ಠಾವಂತ ಪಾಲುದಾರನಾಗಿದ್ದೇನೆ. ಮಿಜೋ ಭಾಷೆ ತಿಳಿಯದ ಮುಖ್ಯ ಕಾರ್ಯದರ್ಶಿಯನ್ನು ಬದಲಿಸದಿದ್ದರೆ ನನ್ನನ್ನು ವಿರೋಧ ಪಕ್ಷಗಳು ಅಪಹಾಸ್ಯ ಮಾಡುತ್ತವೆ"

- Advertisement -
- Advertisement -

“ರಾಜ್ಯದ ಸಚಿವರಿಗೆ ಹಿಂದಿ ಗೊತ್ತಿಲ್ಲ; ಅನೇಕರಿಗೆ ಇಂಗ್ಲಿಷ್‌ ಕೂಡ ಗೊತ್ತಿಲ್ಲ” ಎಂದು ಕೇಂದ್ರದ ಗೃಹಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿರುವ ಮಿಜೋರಾಂ ಮುಖ್ಯಮಂತ್ರಿ ಪು ಜೋರಮ್ತಂಗ ಅವರು, ರಾಜ್ಯ ಮುಖ್ಯ ಕಾರ್ಯದರ್ಶಿ (ಸಿಎಸ್‌) ರೇಣು ಶರ್ಮಾ ಅವರನ್ನು ಬದಲಾಯಿಸಲು ಒತ್ತಾಯಿಸಿದ್ದಾರೆ.

ರೇಣು ಶರ್ಮಾ ಅವರ ಬದಲಿಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜೆ.ಸಿ.ರಾಮತಂಗ ಅವರನ್ನು ನೂತನ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸುವಂತೆ ಮುಖ್ಯಮಂತ್ರಿಯವರು ಕೇಂದ್ರದ ಗೃಹ ಸಚಿವರಲ್ಲಿ ಮನವಿ ಮಾಡಿದ್ದಾರೆ.

“ಗುಜರಾತ್ ಕೇಡರ್‌ನ ನನ್ನ ಮುಖ್ಯ ಕಾರ್ಯದರ್ಶಿ ಲಾಲ್ನುನ್ಮಾವಿಯಾ ಚುವಾಗೊ ಅವರು ನಿವೃತ್ತರಾದ ನಂತರ ನನ್ನ ಈಗಿನ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜೆಸಿ ರಾಮತಂಗ (ಮಣಿಪುರ ಕೇಡರ್) ಅವರನ್ನು ಮುಂದಿನ ಮುಖ್ಯ ಕಾರ್ಯದರ್ಶಿಯನ್ನಾಗಿ ಮಾಡಲು ನಾನು ವಿನಂತಿಸಿದೆ. ಆದರೆ ಗೃಹ ಸಚಿವಾಲಯವು ರೇಣು ಶರ್ಮಾ ಅವರನ್ನು ಹೊಸ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಿದೆ” ಎಂದು ಅಕ್ಟೋಬರ್‌ 29ರಂದು ಬರೆದ ಪತ್ರದಲ್ಲಿ ಮಿಜೋರಾಂ ಸಿಎಂ ಹೇಳಿದ್ದು, ಈ ಪತ್ರವು ತಮಗೆ ಲಭ್ಯವಾಗಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

1988ರ ಬ್ಯಾಚ್‌ನ AGMUT ಕೇಡರ್ ಐಎಎಸ್ ಅಧಿಕಾರಿಯಾಗಿರುವ ರೇಣು ಶರ್ಮಾ ಅವರನ್ನು ನವೆಂಬರ್ 1ರಿಂದ ಮಿಜೋರಾಂನ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲು ಅಕ್ಟೋಬರ್ 28 ರಂದು ಕೇಂದ್ರವು ನೇಮಿಸಿತು.

ಇದನ್ನೂ ಓದಿರಿ: ಒರಿಸ್ಸಾ: ದಲಿತರ ಗುಡಿಸಲುಗಳಿಗೆ ಬೆಂಕಿ; ಹತ್ತು ಮಂದಿಗೆ ಗಾಯ

ಅದೇ ದಿನ, ಮಿಜೋರಾಂ ಸರ್ಕಾರವು ಜೆಸಿ ರಾಮತಂಗ ಅವರಿಗೆ ನವೆಂಬರ್ 1ರಿಂದ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲು ಆದೇಶಿಸಿತು. ಹೀಗಾಗಿ ಮಿಜೋರಾಂ ಈಗ ಇಬ್ಬರು ಮುಖ್ಯ ಕಾರ್ಯದರ್ಶಿಗಳನ್ನು ಹೊಂದಿದೆ.

“ಮಿಜೋ ಭಾಷಿಗರಿಗೆ ಹಿಂದಿ ಅರ್ಥವಾಗುವುದಿಲ್ಲ. ನನ್ನ ಕ್ಯಾಬಿನೆಟ್ ಮಂತ್ರಿಗಳಲ್ಲಿ ಯಾರಿಗೂ ಹಿಂದಿ ಬರುವುದಿಲ್ಲ. ಅವರಲ್ಲಿ ಕೆಲವರಿಗೆ ಇಂಗ್ಲಿಷ್ ಭಾಷೆಯ ಸಮಸ್ಯೆಯೂ ಇದೆ. ಅಂತಹ ಪರಿಸ್ಥಿತಿಯಲ್ಲಿ ಮಿಜೋ ಭಾಷೆಯ ಜ್ಞಾನವಿಲ್ಲದ ಮುಖ್ಯ ಕಾರ್ಯದರ್ಶಿಯವರು ಎಂದಿಗೂ ಪರಿಣಾಮಕಾರಿಯಾಗಿ ಹಾಗೂ ದಕ್ಷತೆಯಿಂದ ಕಾರ್ಯನಿರ್ವಹಿಸಲು ಸಾಧ್ಯವಾಗದು” ಎಂದು ಮುಖ್ಯಮಂತ್ರಿ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

“ಈ ಕಾರಣದಿಂದಾಗಿ ಮಿಜೋರಾಂ ರಾಜ್ಯ ರಚನೆಯಾದಾಗಿನಿಂದಲೂ ಮಿಜೋ ಭಾಷೆಯನ್ನು ತಿಳಿದಿಲ್ಲದ ಮುಖ್ಯ ಕಾರ್ಯದರ್ಶಿಯನ್ನು ಭಾರತ ಸರ್ಕಾರವು ಎಂದಿಗೂ ನೇಮಿಸಲಿಲ್ಲ. ಅದು ಯುಪಿಎ ಸರ್ಕಾರವಾಗಲಿ ಅಥವಾ ಎನ್‌ಡಿಎ ಸರ್ಕಾರವಾಗಲಿ ಮಿಜೋರಾಂ ರಾಜ್ಯ ರಚನೆಯಾದಾಗಿನಿಂದ ಈ ಪದ್ಧತಿ ನಡೆದುಬಂದಿದೆ. ಭಾರತದ ಇತರ ರಾಜ್ಯಗಳಲ್ಲಿ ಆಯಾ ರಾಜ್ಯದ ಭಾಷೆಯನ್ನು ತಿಳಿಯದವರನ್ನು ಮುಖ್ಯ ಕಾರ್ಯದರ್ಶಿಯಾಗಿ ನೇಮಿಸುವುದಿಲ್ಲ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ” ಎಂದು ಮುಖ್ಯಮಂತ್ರಿ ಪ್ರಸ್ತಾಪಿಸಿದ್ದಾರೆ.

“ನಾನು ಮೊದಲಿನಿಂದಲೂ ಈ ಸಮಯದವರೆಗೆ ಈಶಾನ್ಯ ರಾಜ್ಯಗಳಲ್ಲಿ ಎನ್‌ಡಿಎಯ ನಿಷ್ಠಾವಂತ ಪಾಲುದಾರನಾಗಿದ್ದೇನೆ. ಎನ್‌ಡಿಎ ಜೊತೆಗಿನ ಈ ನಿಷ್ಠಾವಂತ ಸ್ನೇಹದಿಂದಾಗಿ ವಿಶೇಷವಾದ ಒಲವು ಮತ್ತು ಪರಿಗಣನೆಗೆ ಅರ್ಹನಾಗಿದ್ದೇನೆ ಎಂದು ನಾನು ನಂಬುತ್ತೇನೆ” ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

“ಹಿಂದಿನ ಕಾಂಗ್ರೆಸ್ ಮುಖ್ಯಮಂತ್ರಿಯವರು ಕೇಳಿದಾಗ ನಿರಾಕರಿಸಲಿಲ್ಲ. ಮುಖ್ಯ ಕಾರ್ಯದರ್ಶಿಯ ಪ್ರಸ್ತಾಪವನ್ನು ನನಗೆ ನಿರಾಕರಿಸಿದರೆ, ಕಾಂಗ್ರೆಸ್ ಪಕ್ಷ ಮತ್ತು ಇತರ ಎಲ್ಲಾ ವಿರೋಧ ಪಕ್ಷಗಳು ಎನ್‌ಡಿಎ ಪಾಲುದಾರಿಕೆಯಲ್ಲಿ ನಿಷ್ಠೆಯಿಂದ ಸೇವೆ ಸಲ್ಲಿಸಿದ ನನ್ನನ್ನು ಅಪಹಾಸ್ಯ ಮಾಡುತ್ತವೆ. ಆದ್ದರಿಂದ ಆದೇಶವನ್ನು ಬದಲಾಯಿಸಬೇಕು, ನನ್ನ ಪ್ರಸ್ತಾವನೆಯನ್ನು ದಯವಿಟ್ಟು ಸ್ವೀಕರಿಸಬೇಕು ಎಂದು ನಿಮ್ಮಲ್ಲಿ ಮನಃಪೂರ್ವಕವಾಗಿ ವಿನಂತಿಸುತ್ತೇನೆ” ಎಂದು ಜೊರಾಮ್‌ತಂಗಾ ಕೋರಿದ್ದಾರೆ.

ಇದನ್ನೂ ಓದಿರಿ: ಹಿಂದಿ ಹೇರಿಕೆಗೆ ಕಪಾಳ ಮೋಕ್ಷ: ’ಜೈ ಭೀಮ್’ ದೃಶ್ಯಕ್ಕೆ ದ್ರಾವಿಡ ಭಾಷಿಗರ ಮೆಚ್ಚುಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...