Homeಮುಖಪುಟಸಚಿವರಿಗೆ ಹಿಂದಿ ಗೊತ್ತಿಲ್ಲ: ಸಿಎಸ್‌ ಬದಲಾವಣೆಗೆ ಕೋರಿ ಅಮಿತ್‌ ಶಾಗೆ ಮಿಜೋರಾಂ ಸಿಎಂ ಪತ್ರ

ಸಚಿವರಿಗೆ ಹಿಂದಿ ಗೊತ್ತಿಲ್ಲ: ಸಿಎಸ್‌ ಬದಲಾವಣೆಗೆ ಕೋರಿ ಅಮಿತ್‌ ಶಾಗೆ ಮಿಜೋರಾಂ ಸಿಎಂ ಪತ್ರ

"ನಾನು ಎನ್‌ಡಿಎಯ ನಿಷ್ಠಾವಂತ ಪಾಲುದಾರನಾಗಿದ್ದೇನೆ. ಮಿಜೋ ಭಾಷೆ ತಿಳಿಯದ ಮುಖ್ಯ ಕಾರ್ಯದರ್ಶಿಯನ್ನು ಬದಲಿಸದಿದ್ದರೆ ನನ್ನನ್ನು ವಿರೋಧ ಪಕ್ಷಗಳು ಅಪಹಾಸ್ಯ ಮಾಡುತ್ತವೆ"

- Advertisement -
- Advertisement -

“ರಾಜ್ಯದ ಸಚಿವರಿಗೆ ಹಿಂದಿ ಗೊತ್ತಿಲ್ಲ; ಅನೇಕರಿಗೆ ಇಂಗ್ಲಿಷ್‌ ಕೂಡ ಗೊತ್ತಿಲ್ಲ” ಎಂದು ಕೇಂದ್ರದ ಗೃಹಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿರುವ ಮಿಜೋರಾಂ ಮುಖ್ಯಮಂತ್ರಿ ಪು ಜೋರಮ್ತಂಗ ಅವರು, ರಾಜ್ಯ ಮುಖ್ಯ ಕಾರ್ಯದರ್ಶಿ (ಸಿಎಸ್‌) ರೇಣು ಶರ್ಮಾ ಅವರನ್ನು ಬದಲಾಯಿಸಲು ಒತ್ತಾಯಿಸಿದ್ದಾರೆ.

ರೇಣು ಶರ್ಮಾ ಅವರ ಬದಲಿಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜೆ.ಸಿ.ರಾಮತಂಗ ಅವರನ್ನು ನೂತನ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸುವಂತೆ ಮುಖ್ಯಮಂತ್ರಿಯವರು ಕೇಂದ್ರದ ಗೃಹ ಸಚಿವರಲ್ಲಿ ಮನವಿ ಮಾಡಿದ್ದಾರೆ.

“ಗುಜರಾತ್ ಕೇಡರ್‌ನ ನನ್ನ ಮುಖ್ಯ ಕಾರ್ಯದರ್ಶಿ ಲಾಲ್ನುನ್ಮಾವಿಯಾ ಚುವಾಗೊ ಅವರು ನಿವೃತ್ತರಾದ ನಂತರ ನನ್ನ ಈಗಿನ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜೆಸಿ ರಾಮತಂಗ (ಮಣಿಪುರ ಕೇಡರ್) ಅವರನ್ನು ಮುಂದಿನ ಮುಖ್ಯ ಕಾರ್ಯದರ್ಶಿಯನ್ನಾಗಿ ಮಾಡಲು ನಾನು ವಿನಂತಿಸಿದೆ. ಆದರೆ ಗೃಹ ಸಚಿವಾಲಯವು ರೇಣು ಶರ್ಮಾ ಅವರನ್ನು ಹೊಸ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಿದೆ” ಎಂದು ಅಕ್ಟೋಬರ್‌ 29ರಂದು ಬರೆದ ಪತ್ರದಲ್ಲಿ ಮಿಜೋರಾಂ ಸಿಎಂ ಹೇಳಿದ್ದು, ಈ ಪತ್ರವು ತಮಗೆ ಲಭ್ಯವಾಗಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

1988ರ ಬ್ಯಾಚ್‌ನ AGMUT ಕೇಡರ್ ಐಎಎಸ್ ಅಧಿಕಾರಿಯಾಗಿರುವ ರೇಣು ಶರ್ಮಾ ಅವರನ್ನು ನವೆಂಬರ್ 1ರಿಂದ ಮಿಜೋರಾಂನ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲು ಅಕ್ಟೋಬರ್ 28 ರಂದು ಕೇಂದ್ರವು ನೇಮಿಸಿತು.

ಇದನ್ನೂ ಓದಿರಿ: ಒರಿಸ್ಸಾ: ದಲಿತರ ಗುಡಿಸಲುಗಳಿಗೆ ಬೆಂಕಿ; ಹತ್ತು ಮಂದಿಗೆ ಗಾಯ

ಅದೇ ದಿನ, ಮಿಜೋರಾಂ ಸರ್ಕಾರವು ಜೆಸಿ ರಾಮತಂಗ ಅವರಿಗೆ ನವೆಂಬರ್ 1ರಿಂದ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲು ಆದೇಶಿಸಿತು. ಹೀಗಾಗಿ ಮಿಜೋರಾಂ ಈಗ ಇಬ್ಬರು ಮುಖ್ಯ ಕಾರ್ಯದರ್ಶಿಗಳನ್ನು ಹೊಂದಿದೆ.

“ಮಿಜೋ ಭಾಷಿಗರಿಗೆ ಹಿಂದಿ ಅರ್ಥವಾಗುವುದಿಲ್ಲ. ನನ್ನ ಕ್ಯಾಬಿನೆಟ್ ಮಂತ್ರಿಗಳಲ್ಲಿ ಯಾರಿಗೂ ಹಿಂದಿ ಬರುವುದಿಲ್ಲ. ಅವರಲ್ಲಿ ಕೆಲವರಿಗೆ ಇಂಗ್ಲಿಷ್ ಭಾಷೆಯ ಸಮಸ್ಯೆಯೂ ಇದೆ. ಅಂತಹ ಪರಿಸ್ಥಿತಿಯಲ್ಲಿ ಮಿಜೋ ಭಾಷೆಯ ಜ್ಞಾನವಿಲ್ಲದ ಮುಖ್ಯ ಕಾರ್ಯದರ್ಶಿಯವರು ಎಂದಿಗೂ ಪರಿಣಾಮಕಾರಿಯಾಗಿ ಹಾಗೂ ದಕ್ಷತೆಯಿಂದ ಕಾರ್ಯನಿರ್ವಹಿಸಲು ಸಾಧ್ಯವಾಗದು” ಎಂದು ಮುಖ್ಯಮಂತ್ರಿ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

“ಈ ಕಾರಣದಿಂದಾಗಿ ಮಿಜೋರಾಂ ರಾಜ್ಯ ರಚನೆಯಾದಾಗಿನಿಂದಲೂ ಮಿಜೋ ಭಾಷೆಯನ್ನು ತಿಳಿದಿಲ್ಲದ ಮುಖ್ಯ ಕಾರ್ಯದರ್ಶಿಯನ್ನು ಭಾರತ ಸರ್ಕಾರವು ಎಂದಿಗೂ ನೇಮಿಸಲಿಲ್ಲ. ಅದು ಯುಪಿಎ ಸರ್ಕಾರವಾಗಲಿ ಅಥವಾ ಎನ್‌ಡಿಎ ಸರ್ಕಾರವಾಗಲಿ ಮಿಜೋರಾಂ ರಾಜ್ಯ ರಚನೆಯಾದಾಗಿನಿಂದ ಈ ಪದ್ಧತಿ ನಡೆದುಬಂದಿದೆ. ಭಾರತದ ಇತರ ರಾಜ್ಯಗಳಲ್ಲಿ ಆಯಾ ರಾಜ್ಯದ ಭಾಷೆಯನ್ನು ತಿಳಿಯದವರನ್ನು ಮುಖ್ಯ ಕಾರ್ಯದರ್ಶಿಯಾಗಿ ನೇಮಿಸುವುದಿಲ್ಲ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ” ಎಂದು ಮುಖ್ಯಮಂತ್ರಿ ಪ್ರಸ್ತಾಪಿಸಿದ್ದಾರೆ.

“ನಾನು ಮೊದಲಿನಿಂದಲೂ ಈ ಸಮಯದವರೆಗೆ ಈಶಾನ್ಯ ರಾಜ್ಯಗಳಲ್ಲಿ ಎನ್‌ಡಿಎಯ ನಿಷ್ಠಾವಂತ ಪಾಲುದಾರನಾಗಿದ್ದೇನೆ. ಎನ್‌ಡಿಎ ಜೊತೆಗಿನ ಈ ನಿಷ್ಠಾವಂತ ಸ್ನೇಹದಿಂದಾಗಿ ವಿಶೇಷವಾದ ಒಲವು ಮತ್ತು ಪರಿಗಣನೆಗೆ ಅರ್ಹನಾಗಿದ್ದೇನೆ ಎಂದು ನಾನು ನಂಬುತ್ತೇನೆ” ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

“ಹಿಂದಿನ ಕಾಂಗ್ರೆಸ್ ಮುಖ್ಯಮಂತ್ರಿಯವರು ಕೇಳಿದಾಗ ನಿರಾಕರಿಸಲಿಲ್ಲ. ಮುಖ್ಯ ಕಾರ್ಯದರ್ಶಿಯ ಪ್ರಸ್ತಾಪವನ್ನು ನನಗೆ ನಿರಾಕರಿಸಿದರೆ, ಕಾಂಗ್ರೆಸ್ ಪಕ್ಷ ಮತ್ತು ಇತರ ಎಲ್ಲಾ ವಿರೋಧ ಪಕ್ಷಗಳು ಎನ್‌ಡಿಎ ಪಾಲುದಾರಿಕೆಯಲ್ಲಿ ನಿಷ್ಠೆಯಿಂದ ಸೇವೆ ಸಲ್ಲಿಸಿದ ನನ್ನನ್ನು ಅಪಹಾಸ್ಯ ಮಾಡುತ್ತವೆ. ಆದ್ದರಿಂದ ಆದೇಶವನ್ನು ಬದಲಾಯಿಸಬೇಕು, ನನ್ನ ಪ್ರಸ್ತಾವನೆಯನ್ನು ದಯವಿಟ್ಟು ಸ್ವೀಕರಿಸಬೇಕು ಎಂದು ನಿಮ್ಮಲ್ಲಿ ಮನಃಪೂರ್ವಕವಾಗಿ ವಿನಂತಿಸುತ್ತೇನೆ” ಎಂದು ಜೊರಾಮ್‌ತಂಗಾ ಕೋರಿದ್ದಾರೆ.

ಇದನ್ನೂ ಓದಿರಿ: ಹಿಂದಿ ಹೇರಿಕೆಗೆ ಕಪಾಳ ಮೋಕ್ಷ: ’ಜೈ ಭೀಮ್’ ದೃಶ್ಯಕ್ಕೆ ದ್ರಾವಿಡ ಭಾಷಿಗರ ಮೆಚ್ಚುಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...