Homeಮುಖಪುಟಸಚಿವರಿಗೆ ಹಿಂದಿ ಗೊತ್ತಿಲ್ಲ: ಸಿಎಸ್‌ ಬದಲಾವಣೆಗೆ ಕೋರಿ ಅಮಿತ್‌ ಶಾಗೆ ಮಿಜೋರಾಂ ಸಿಎಂ ಪತ್ರ

ಸಚಿವರಿಗೆ ಹಿಂದಿ ಗೊತ್ತಿಲ್ಲ: ಸಿಎಸ್‌ ಬದಲಾವಣೆಗೆ ಕೋರಿ ಅಮಿತ್‌ ಶಾಗೆ ಮಿಜೋರಾಂ ಸಿಎಂ ಪತ್ರ

"ನಾನು ಎನ್‌ಡಿಎಯ ನಿಷ್ಠಾವಂತ ಪಾಲುದಾರನಾಗಿದ್ದೇನೆ. ಮಿಜೋ ಭಾಷೆ ತಿಳಿಯದ ಮುಖ್ಯ ಕಾರ್ಯದರ್ಶಿಯನ್ನು ಬದಲಿಸದಿದ್ದರೆ ನನ್ನನ್ನು ವಿರೋಧ ಪಕ್ಷಗಳು ಅಪಹಾಸ್ಯ ಮಾಡುತ್ತವೆ"

- Advertisement -
- Advertisement -

“ರಾಜ್ಯದ ಸಚಿವರಿಗೆ ಹಿಂದಿ ಗೊತ್ತಿಲ್ಲ; ಅನೇಕರಿಗೆ ಇಂಗ್ಲಿಷ್‌ ಕೂಡ ಗೊತ್ತಿಲ್ಲ” ಎಂದು ಕೇಂದ್ರದ ಗೃಹಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿರುವ ಮಿಜೋರಾಂ ಮುಖ್ಯಮಂತ್ರಿ ಪು ಜೋರಮ್ತಂಗ ಅವರು, ರಾಜ್ಯ ಮುಖ್ಯ ಕಾರ್ಯದರ್ಶಿ (ಸಿಎಸ್‌) ರೇಣು ಶರ್ಮಾ ಅವರನ್ನು ಬದಲಾಯಿಸಲು ಒತ್ತಾಯಿಸಿದ್ದಾರೆ.

ರೇಣು ಶರ್ಮಾ ಅವರ ಬದಲಿಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜೆ.ಸಿ.ರಾಮತಂಗ ಅವರನ್ನು ನೂತನ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸುವಂತೆ ಮುಖ್ಯಮಂತ್ರಿಯವರು ಕೇಂದ್ರದ ಗೃಹ ಸಚಿವರಲ್ಲಿ ಮನವಿ ಮಾಡಿದ್ದಾರೆ.

“ಗುಜರಾತ್ ಕೇಡರ್‌ನ ನನ್ನ ಮುಖ್ಯ ಕಾರ್ಯದರ್ಶಿ ಲಾಲ್ನುನ್ಮಾವಿಯಾ ಚುವಾಗೊ ಅವರು ನಿವೃತ್ತರಾದ ನಂತರ ನನ್ನ ಈಗಿನ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜೆಸಿ ರಾಮತಂಗ (ಮಣಿಪುರ ಕೇಡರ್) ಅವರನ್ನು ಮುಂದಿನ ಮುಖ್ಯ ಕಾರ್ಯದರ್ಶಿಯನ್ನಾಗಿ ಮಾಡಲು ನಾನು ವಿನಂತಿಸಿದೆ. ಆದರೆ ಗೃಹ ಸಚಿವಾಲಯವು ರೇಣು ಶರ್ಮಾ ಅವರನ್ನು ಹೊಸ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಿದೆ” ಎಂದು ಅಕ್ಟೋಬರ್‌ 29ರಂದು ಬರೆದ ಪತ್ರದಲ್ಲಿ ಮಿಜೋರಾಂ ಸಿಎಂ ಹೇಳಿದ್ದು, ಈ ಪತ್ರವು ತಮಗೆ ಲಭ್ಯವಾಗಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

1988ರ ಬ್ಯಾಚ್‌ನ AGMUT ಕೇಡರ್ ಐಎಎಸ್ ಅಧಿಕಾರಿಯಾಗಿರುವ ರೇಣು ಶರ್ಮಾ ಅವರನ್ನು ನವೆಂಬರ್ 1ರಿಂದ ಮಿಜೋರಾಂನ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲು ಅಕ್ಟೋಬರ್ 28 ರಂದು ಕೇಂದ್ರವು ನೇಮಿಸಿತು.

ಇದನ್ನೂ ಓದಿರಿ: ಒರಿಸ್ಸಾ: ದಲಿತರ ಗುಡಿಸಲುಗಳಿಗೆ ಬೆಂಕಿ; ಹತ್ತು ಮಂದಿಗೆ ಗಾಯ

ಅದೇ ದಿನ, ಮಿಜೋರಾಂ ಸರ್ಕಾರವು ಜೆಸಿ ರಾಮತಂಗ ಅವರಿಗೆ ನವೆಂಬರ್ 1ರಿಂದ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲು ಆದೇಶಿಸಿತು. ಹೀಗಾಗಿ ಮಿಜೋರಾಂ ಈಗ ಇಬ್ಬರು ಮುಖ್ಯ ಕಾರ್ಯದರ್ಶಿಗಳನ್ನು ಹೊಂದಿದೆ.

“ಮಿಜೋ ಭಾಷಿಗರಿಗೆ ಹಿಂದಿ ಅರ್ಥವಾಗುವುದಿಲ್ಲ. ನನ್ನ ಕ್ಯಾಬಿನೆಟ್ ಮಂತ್ರಿಗಳಲ್ಲಿ ಯಾರಿಗೂ ಹಿಂದಿ ಬರುವುದಿಲ್ಲ. ಅವರಲ್ಲಿ ಕೆಲವರಿಗೆ ಇಂಗ್ಲಿಷ್ ಭಾಷೆಯ ಸಮಸ್ಯೆಯೂ ಇದೆ. ಅಂತಹ ಪರಿಸ್ಥಿತಿಯಲ್ಲಿ ಮಿಜೋ ಭಾಷೆಯ ಜ್ಞಾನವಿಲ್ಲದ ಮುಖ್ಯ ಕಾರ್ಯದರ್ಶಿಯವರು ಎಂದಿಗೂ ಪರಿಣಾಮಕಾರಿಯಾಗಿ ಹಾಗೂ ದಕ್ಷತೆಯಿಂದ ಕಾರ್ಯನಿರ್ವಹಿಸಲು ಸಾಧ್ಯವಾಗದು” ಎಂದು ಮುಖ್ಯಮಂತ್ರಿ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

“ಈ ಕಾರಣದಿಂದಾಗಿ ಮಿಜೋರಾಂ ರಾಜ್ಯ ರಚನೆಯಾದಾಗಿನಿಂದಲೂ ಮಿಜೋ ಭಾಷೆಯನ್ನು ತಿಳಿದಿಲ್ಲದ ಮುಖ್ಯ ಕಾರ್ಯದರ್ಶಿಯನ್ನು ಭಾರತ ಸರ್ಕಾರವು ಎಂದಿಗೂ ನೇಮಿಸಲಿಲ್ಲ. ಅದು ಯುಪಿಎ ಸರ್ಕಾರವಾಗಲಿ ಅಥವಾ ಎನ್‌ಡಿಎ ಸರ್ಕಾರವಾಗಲಿ ಮಿಜೋರಾಂ ರಾಜ್ಯ ರಚನೆಯಾದಾಗಿನಿಂದ ಈ ಪದ್ಧತಿ ನಡೆದುಬಂದಿದೆ. ಭಾರತದ ಇತರ ರಾಜ್ಯಗಳಲ್ಲಿ ಆಯಾ ರಾಜ್ಯದ ಭಾಷೆಯನ್ನು ತಿಳಿಯದವರನ್ನು ಮುಖ್ಯ ಕಾರ್ಯದರ್ಶಿಯಾಗಿ ನೇಮಿಸುವುದಿಲ್ಲ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ” ಎಂದು ಮುಖ್ಯಮಂತ್ರಿ ಪ್ರಸ್ತಾಪಿಸಿದ್ದಾರೆ.

“ನಾನು ಮೊದಲಿನಿಂದಲೂ ಈ ಸಮಯದವರೆಗೆ ಈಶಾನ್ಯ ರಾಜ್ಯಗಳಲ್ಲಿ ಎನ್‌ಡಿಎಯ ನಿಷ್ಠಾವಂತ ಪಾಲುದಾರನಾಗಿದ್ದೇನೆ. ಎನ್‌ಡಿಎ ಜೊತೆಗಿನ ಈ ನಿಷ್ಠಾವಂತ ಸ್ನೇಹದಿಂದಾಗಿ ವಿಶೇಷವಾದ ಒಲವು ಮತ್ತು ಪರಿಗಣನೆಗೆ ಅರ್ಹನಾಗಿದ್ದೇನೆ ಎಂದು ನಾನು ನಂಬುತ್ತೇನೆ” ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

“ಹಿಂದಿನ ಕಾಂಗ್ರೆಸ್ ಮುಖ್ಯಮಂತ್ರಿಯವರು ಕೇಳಿದಾಗ ನಿರಾಕರಿಸಲಿಲ್ಲ. ಮುಖ್ಯ ಕಾರ್ಯದರ್ಶಿಯ ಪ್ರಸ್ತಾಪವನ್ನು ನನಗೆ ನಿರಾಕರಿಸಿದರೆ, ಕಾಂಗ್ರೆಸ್ ಪಕ್ಷ ಮತ್ತು ಇತರ ಎಲ್ಲಾ ವಿರೋಧ ಪಕ್ಷಗಳು ಎನ್‌ಡಿಎ ಪಾಲುದಾರಿಕೆಯಲ್ಲಿ ನಿಷ್ಠೆಯಿಂದ ಸೇವೆ ಸಲ್ಲಿಸಿದ ನನ್ನನ್ನು ಅಪಹಾಸ್ಯ ಮಾಡುತ್ತವೆ. ಆದ್ದರಿಂದ ಆದೇಶವನ್ನು ಬದಲಾಯಿಸಬೇಕು, ನನ್ನ ಪ್ರಸ್ತಾವನೆಯನ್ನು ದಯವಿಟ್ಟು ಸ್ವೀಕರಿಸಬೇಕು ಎಂದು ನಿಮ್ಮಲ್ಲಿ ಮನಃಪೂರ್ವಕವಾಗಿ ವಿನಂತಿಸುತ್ತೇನೆ” ಎಂದು ಜೊರಾಮ್‌ತಂಗಾ ಕೋರಿದ್ದಾರೆ.

ಇದನ್ನೂ ಓದಿರಿ: ಹಿಂದಿ ಹೇರಿಕೆಗೆ ಕಪಾಳ ಮೋಕ್ಷ: ’ಜೈ ಭೀಮ್’ ದೃಶ್ಯಕ್ಕೆ ದ್ರಾವಿಡ ಭಾಷಿಗರ ಮೆಚ್ಚುಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...