Homeಮುಖಪುಟಸಚಿವರಿಗೆ ಹಿಂದಿ ಗೊತ್ತಿಲ್ಲ: ಸಿಎಸ್‌ ಬದಲಾವಣೆಗೆ ಕೋರಿ ಅಮಿತ್‌ ಶಾಗೆ ಮಿಜೋರಾಂ ಸಿಎಂ ಪತ್ರ

ಸಚಿವರಿಗೆ ಹಿಂದಿ ಗೊತ್ತಿಲ್ಲ: ಸಿಎಸ್‌ ಬದಲಾವಣೆಗೆ ಕೋರಿ ಅಮಿತ್‌ ಶಾಗೆ ಮಿಜೋರಾಂ ಸಿಎಂ ಪತ್ರ

"ನಾನು ಎನ್‌ಡಿಎಯ ನಿಷ್ಠಾವಂತ ಪಾಲುದಾರನಾಗಿದ್ದೇನೆ. ಮಿಜೋ ಭಾಷೆ ತಿಳಿಯದ ಮುಖ್ಯ ಕಾರ್ಯದರ್ಶಿಯನ್ನು ಬದಲಿಸದಿದ್ದರೆ ನನ್ನನ್ನು ವಿರೋಧ ಪಕ್ಷಗಳು ಅಪಹಾಸ್ಯ ಮಾಡುತ್ತವೆ"

- Advertisement -
- Advertisement -

“ರಾಜ್ಯದ ಸಚಿವರಿಗೆ ಹಿಂದಿ ಗೊತ್ತಿಲ್ಲ; ಅನೇಕರಿಗೆ ಇಂಗ್ಲಿಷ್‌ ಕೂಡ ಗೊತ್ತಿಲ್ಲ” ಎಂದು ಕೇಂದ್ರದ ಗೃಹಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿರುವ ಮಿಜೋರಾಂ ಮುಖ್ಯಮಂತ್ರಿ ಪು ಜೋರಮ್ತಂಗ ಅವರು, ರಾಜ್ಯ ಮುಖ್ಯ ಕಾರ್ಯದರ್ಶಿ (ಸಿಎಸ್‌) ರೇಣು ಶರ್ಮಾ ಅವರನ್ನು ಬದಲಾಯಿಸಲು ಒತ್ತಾಯಿಸಿದ್ದಾರೆ.

ರೇಣು ಶರ್ಮಾ ಅವರ ಬದಲಿಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜೆ.ಸಿ.ರಾಮತಂಗ ಅವರನ್ನು ನೂತನ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸುವಂತೆ ಮುಖ್ಯಮಂತ್ರಿಯವರು ಕೇಂದ್ರದ ಗೃಹ ಸಚಿವರಲ್ಲಿ ಮನವಿ ಮಾಡಿದ್ದಾರೆ.

“ಗುಜರಾತ್ ಕೇಡರ್‌ನ ನನ್ನ ಮುಖ್ಯ ಕಾರ್ಯದರ್ಶಿ ಲಾಲ್ನುನ್ಮಾವಿಯಾ ಚುವಾಗೊ ಅವರು ನಿವೃತ್ತರಾದ ನಂತರ ನನ್ನ ಈಗಿನ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜೆಸಿ ರಾಮತಂಗ (ಮಣಿಪುರ ಕೇಡರ್) ಅವರನ್ನು ಮುಂದಿನ ಮುಖ್ಯ ಕಾರ್ಯದರ್ಶಿಯನ್ನಾಗಿ ಮಾಡಲು ನಾನು ವಿನಂತಿಸಿದೆ. ಆದರೆ ಗೃಹ ಸಚಿವಾಲಯವು ರೇಣು ಶರ್ಮಾ ಅವರನ್ನು ಹೊಸ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಿದೆ” ಎಂದು ಅಕ್ಟೋಬರ್‌ 29ರಂದು ಬರೆದ ಪತ್ರದಲ್ಲಿ ಮಿಜೋರಾಂ ಸಿಎಂ ಹೇಳಿದ್ದು, ಈ ಪತ್ರವು ತಮಗೆ ಲಭ್ಯವಾಗಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

1988ರ ಬ್ಯಾಚ್‌ನ AGMUT ಕೇಡರ್ ಐಎಎಸ್ ಅಧಿಕಾರಿಯಾಗಿರುವ ರೇಣು ಶರ್ಮಾ ಅವರನ್ನು ನವೆಂಬರ್ 1ರಿಂದ ಮಿಜೋರಾಂನ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲು ಅಕ್ಟೋಬರ್ 28 ರಂದು ಕೇಂದ್ರವು ನೇಮಿಸಿತು.

ಇದನ್ನೂ ಓದಿರಿ: ಒರಿಸ್ಸಾ: ದಲಿತರ ಗುಡಿಸಲುಗಳಿಗೆ ಬೆಂಕಿ; ಹತ್ತು ಮಂದಿಗೆ ಗಾಯ

ಅದೇ ದಿನ, ಮಿಜೋರಾಂ ಸರ್ಕಾರವು ಜೆಸಿ ರಾಮತಂಗ ಅವರಿಗೆ ನವೆಂಬರ್ 1ರಿಂದ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲು ಆದೇಶಿಸಿತು. ಹೀಗಾಗಿ ಮಿಜೋರಾಂ ಈಗ ಇಬ್ಬರು ಮುಖ್ಯ ಕಾರ್ಯದರ್ಶಿಗಳನ್ನು ಹೊಂದಿದೆ.

“ಮಿಜೋ ಭಾಷಿಗರಿಗೆ ಹಿಂದಿ ಅರ್ಥವಾಗುವುದಿಲ್ಲ. ನನ್ನ ಕ್ಯಾಬಿನೆಟ್ ಮಂತ್ರಿಗಳಲ್ಲಿ ಯಾರಿಗೂ ಹಿಂದಿ ಬರುವುದಿಲ್ಲ. ಅವರಲ್ಲಿ ಕೆಲವರಿಗೆ ಇಂಗ್ಲಿಷ್ ಭಾಷೆಯ ಸಮಸ್ಯೆಯೂ ಇದೆ. ಅಂತಹ ಪರಿಸ್ಥಿತಿಯಲ್ಲಿ ಮಿಜೋ ಭಾಷೆಯ ಜ್ಞಾನವಿಲ್ಲದ ಮುಖ್ಯ ಕಾರ್ಯದರ್ಶಿಯವರು ಎಂದಿಗೂ ಪರಿಣಾಮಕಾರಿಯಾಗಿ ಹಾಗೂ ದಕ್ಷತೆಯಿಂದ ಕಾರ್ಯನಿರ್ವಹಿಸಲು ಸಾಧ್ಯವಾಗದು” ಎಂದು ಮುಖ್ಯಮಂತ್ರಿ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

“ಈ ಕಾರಣದಿಂದಾಗಿ ಮಿಜೋರಾಂ ರಾಜ್ಯ ರಚನೆಯಾದಾಗಿನಿಂದಲೂ ಮಿಜೋ ಭಾಷೆಯನ್ನು ತಿಳಿದಿಲ್ಲದ ಮುಖ್ಯ ಕಾರ್ಯದರ್ಶಿಯನ್ನು ಭಾರತ ಸರ್ಕಾರವು ಎಂದಿಗೂ ನೇಮಿಸಲಿಲ್ಲ. ಅದು ಯುಪಿಎ ಸರ್ಕಾರವಾಗಲಿ ಅಥವಾ ಎನ್‌ಡಿಎ ಸರ್ಕಾರವಾಗಲಿ ಮಿಜೋರಾಂ ರಾಜ್ಯ ರಚನೆಯಾದಾಗಿನಿಂದ ಈ ಪದ್ಧತಿ ನಡೆದುಬಂದಿದೆ. ಭಾರತದ ಇತರ ರಾಜ್ಯಗಳಲ್ಲಿ ಆಯಾ ರಾಜ್ಯದ ಭಾಷೆಯನ್ನು ತಿಳಿಯದವರನ್ನು ಮುಖ್ಯ ಕಾರ್ಯದರ್ಶಿಯಾಗಿ ನೇಮಿಸುವುದಿಲ್ಲ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ” ಎಂದು ಮುಖ್ಯಮಂತ್ರಿ ಪ್ರಸ್ತಾಪಿಸಿದ್ದಾರೆ.

“ನಾನು ಮೊದಲಿನಿಂದಲೂ ಈ ಸಮಯದವರೆಗೆ ಈಶಾನ್ಯ ರಾಜ್ಯಗಳಲ್ಲಿ ಎನ್‌ಡಿಎಯ ನಿಷ್ಠಾವಂತ ಪಾಲುದಾರನಾಗಿದ್ದೇನೆ. ಎನ್‌ಡಿಎ ಜೊತೆಗಿನ ಈ ನಿಷ್ಠಾವಂತ ಸ್ನೇಹದಿಂದಾಗಿ ವಿಶೇಷವಾದ ಒಲವು ಮತ್ತು ಪರಿಗಣನೆಗೆ ಅರ್ಹನಾಗಿದ್ದೇನೆ ಎಂದು ನಾನು ನಂಬುತ್ತೇನೆ” ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

“ಹಿಂದಿನ ಕಾಂಗ್ರೆಸ್ ಮುಖ್ಯಮಂತ್ರಿಯವರು ಕೇಳಿದಾಗ ನಿರಾಕರಿಸಲಿಲ್ಲ. ಮುಖ್ಯ ಕಾರ್ಯದರ್ಶಿಯ ಪ್ರಸ್ತಾಪವನ್ನು ನನಗೆ ನಿರಾಕರಿಸಿದರೆ, ಕಾಂಗ್ರೆಸ್ ಪಕ್ಷ ಮತ್ತು ಇತರ ಎಲ್ಲಾ ವಿರೋಧ ಪಕ್ಷಗಳು ಎನ್‌ಡಿಎ ಪಾಲುದಾರಿಕೆಯಲ್ಲಿ ನಿಷ್ಠೆಯಿಂದ ಸೇವೆ ಸಲ್ಲಿಸಿದ ನನ್ನನ್ನು ಅಪಹಾಸ್ಯ ಮಾಡುತ್ತವೆ. ಆದ್ದರಿಂದ ಆದೇಶವನ್ನು ಬದಲಾಯಿಸಬೇಕು, ನನ್ನ ಪ್ರಸ್ತಾವನೆಯನ್ನು ದಯವಿಟ್ಟು ಸ್ವೀಕರಿಸಬೇಕು ಎಂದು ನಿಮ್ಮಲ್ಲಿ ಮನಃಪೂರ್ವಕವಾಗಿ ವಿನಂತಿಸುತ್ತೇನೆ” ಎಂದು ಜೊರಾಮ್‌ತಂಗಾ ಕೋರಿದ್ದಾರೆ.

ಇದನ್ನೂ ಓದಿರಿ: ಹಿಂದಿ ಹೇರಿಕೆಗೆ ಕಪಾಳ ಮೋಕ್ಷ: ’ಜೈ ಭೀಮ್’ ದೃಶ್ಯಕ್ಕೆ ದ್ರಾವಿಡ ಭಾಷಿಗರ ಮೆಚ್ಚುಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...