Homeಮುಖಪುಟಸಚಿವರಿಗೆ ಹಿಂದಿ ಗೊತ್ತಿಲ್ಲ: ಸಿಎಸ್‌ ಬದಲಾವಣೆಗೆ ಕೋರಿ ಅಮಿತ್‌ ಶಾಗೆ ಮಿಜೋರಾಂ ಸಿಎಂ ಪತ್ರ

ಸಚಿವರಿಗೆ ಹಿಂದಿ ಗೊತ್ತಿಲ್ಲ: ಸಿಎಸ್‌ ಬದಲಾವಣೆಗೆ ಕೋರಿ ಅಮಿತ್‌ ಶಾಗೆ ಮಿಜೋರಾಂ ಸಿಎಂ ಪತ್ರ

"ನಾನು ಎನ್‌ಡಿಎಯ ನಿಷ್ಠಾವಂತ ಪಾಲುದಾರನಾಗಿದ್ದೇನೆ. ಮಿಜೋ ಭಾಷೆ ತಿಳಿಯದ ಮುಖ್ಯ ಕಾರ್ಯದರ್ಶಿಯನ್ನು ಬದಲಿಸದಿದ್ದರೆ ನನ್ನನ್ನು ವಿರೋಧ ಪಕ್ಷಗಳು ಅಪಹಾಸ್ಯ ಮಾಡುತ್ತವೆ"

- Advertisement -
- Advertisement -

“ರಾಜ್ಯದ ಸಚಿವರಿಗೆ ಹಿಂದಿ ಗೊತ್ತಿಲ್ಲ; ಅನೇಕರಿಗೆ ಇಂಗ್ಲಿಷ್‌ ಕೂಡ ಗೊತ್ತಿಲ್ಲ” ಎಂದು ಕೇಂದ್ರದ ಗೃಹಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿರುವ ಮಿಜೋರಾಂ ಮುಖ್ಯಮಂತ್ರಿ ಪು ಜೋರಮ್ತಂಗ ಅವರು, ರಾಜ್ಯ ಮುಖ್ಯ ಕಾರ್ಯದರ್ಶಿ (ಸಿಎಸ್‌) ರೇಣು ಶರ್ಮಾ ಅವರನ್ನು ಬದಲಾಯಿಸಲು ಒತ್ತಾಯಿಸಿದ್ದಾರೆ.

ರೇಣು ಶರ್ಮಾ ಅವರ ಬದಲಿಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜೆ.ಸಿ.ರಾಮತಂಗ ಅವರನ್ನು ನೂತನ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸುವಂತೆ ಮುಖ್ಯಮಂತ್ರಿಯವರು ಕೇಂದ್ರದ ಗೃಹ ಸಚಿವರಲ್ಲಿ ಮನವಿ ಮಾಡಿದ್ದಾರೆ.

“ಗುಜರಾತ್ ಕೇಡರ್‌ನ ನನ್ನ ಮುಖ್ಯ ಕಾರ್ಯದರ್ಶಿ ಲಾಲ್ನುನ್ಮಾವಿಯಾ ಚುವಾಗೊ ಅವರು ನಿವೃತ್ತರಾದ ನಂತರ ನನ್ನ ಈಗಿನ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜೆಸಿ ರಾಮತಂಗ (ಮಣಿಪುರ ಕೇಡರ್) ಅವರನ್ನು ಮುಂದಿನ ಮುಖ್ಯ ಕಾರ್ಯದರ್ಶಿಯನ್ನಾಗಿ ಮಾಡಲು ನಾನು ವಿನಂತಿಸಿದೆ. ಆದರೆ ಗೃಹ ಸಚಿವಾಲಯವು ರೇಣು ಶರ್ಮಾ ಅವರನ್ನು ಹೊಸ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಿದೆ” ಎಂದು ಅಕ್ಟೋಬರ್‌ 29ರಂದು ಬರೆದ ಪತ್ರದಲ್ಲಿ ಮಿಜೋರಾಂ ಸಿಎಂ ಹೇಳಿದ್ದು, ಈ ಪತ್ರವು ತಮಗೆ ಲಭ್ಯವಾಗಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

1988ರ ಬ್ಯಾಚ್‌ನ AGMUT ಕೇಡರ್ ಐಎಎಸ್ ಅಧಿಕಾರಿಯಾಗಿರುವ ರೇಣು ಶರ್ಮಾ ಅವರನ್ನು ನವೆಂಬರ್ 1ರಿಂದ ಮಿಜೋರಾಂನ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲು ಅಕ್ಟೋಬರ್ 28 ರಂದು ಕೇಂದ್ರವು ನೇಮಿಸಿತು.

ಇದನ್ನೂ ಓದಿರಿ: ಒರಿಸ್ಸಾ: ದಲಿತರ ಗುಡಿಸಲುಗಳಿಗೆ ಬೆಂಕಿ; ಹತ್ತು ಮಂದಿಗೆ ಗಾಯ

ಅದೇ ದಿನ, ಮಿಜೋರಾಂ ಸರ್ಕಾರವು ಜೆಸಿ ರಾಮತಂಗ ಅವರಿಗೆ ನವೆಂಬರ್ 1ರಿಂದ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲು ಆದೇಶಿಸಿತು. ಹೀಗಾಗಿ ಮಿಜೋರಾಂ ಈಗ ಇಬ್ಬರು ಮುಖ್ಯ ಕಾರ್ಯದರ್ಶಿಗಳನ್ನು ಹೊಂದಿದೆ.

“ಮಿಜೋ ಭಾಷಿಗರಿಗೆ ಹಿಂದಿ ಅರ್ಥವಾಗುವುದಿಲ್ಲ. ನನ್ನ ಕ್ಯಾಬಿನೆಟ್ ಮಂತ್ರಿಗಳಲ್ಲಿ ಯಾರಿಗೂ ಹಿಂದಿ ಬರುವುದಿಲ್ಲ. ಅವರಲ್ಲಿ ಕೆಲವರಿಗೆ ಇಂಗ್ಲಿಷ್ ಭಾಷೆಯ ಸಮಸ್ಯೆಯೂ ಇದೆ. ಅಂತಹ ಪರಿಸ್ಥಿತಿಯಲ್ಲಿ ಮಿಜೋ ಭಾಷೆಯ ಜ್ಞಾನವಿಲ್ಲದ ಮುಖ್ಯ ಕಾರ್ಯದರ್ಶಿಯವರು ಎಂದಿಗೂ ಪರಿಣಾಮಕಾರಿಯಾಗಿ ಹಾಗೂ ದಕ್ಷತೆಯಿಂದ ಕಾರ್ಯನಿರ್ವಹಿಸಲು ಸಾಧ್ಯವಾಗದು” ಎಂದು ಮುಖ್ಯಮಂತ್ರಿ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

“ಈ ಕಾರಣದಿಂದಾಗಿ ಮಿಜೋರಾಂ ರಾಜ್ಯ ರಚನೆಯಾದಾಗಿನಿಂದಲೂ ಮಿಜೋ ಭಾಷೆಯನ್ನು ತಿಳಿದಿಲ್ಲದ ಮುಖ್ಯ ಕಾರ್ಯದರ್ಶಿಯನ್ನು ಭಾರತ ಸರ್ಕಾರವು ಎಂದಿಗೂ ನೇಮಿಸಲಿಲ್ಲ. ಅದು ಯುಪಿಎ ಸರ್ಕಾರವಾಗಲಿ ಅಥವಾ ಎನ್‌ಡಿಎ ಸರ್ಕಾರವಾಗಲಿ ಮಿಜೋರಾಂ ರಾಜ್ಯ ರಚನೆಯಾದಾಗಿನಿಂದ ಈ ಪದ್ಧತಿ ನಡೆದುಬಂದಿದೆ. ಭಾರತದ ಇತರ ರಾಜ್ಯಗಳಲ್ಲಿ ಆಯಾ ರಾಜ್ಯದ ಭಾಷೆಯನ್ನು ತಿಳಿಯದವರನ್ನು ಮುಖ್ಯ ಕಾರ್ಯದರ್ಶಿಯಾಗಿ ನೇಮಿಸುವುದಿಲ್ಲ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ” ಎಂದು ಮುಖ್ಯಮಂತ್ರಿ ಪ್ರಸ್ತಾಪಿಸಿದ್ದಾರೆ.

“ನಾನು ಮೊದಲಿನಿಂದಲೂ ಈ ಸಮಯದವರೆಗೆ ಈಶಾನ್ಯ ರಾಜ್ಯಗಳಲ್ಲಿ ಎನ್‌ಡಿಎಯ ನಿಷ್ಠಾವಂತ ಪಾಲುದಾರನಾಗಿದ್ದೇನೆ. ಎನ್‌ಡಿಎ ಜೊತೆಗಿನ ಈ ನಿಷ್ಠಾವಂತ ಸ್ನೇಹದಿಂದಾಗಿ ವಿಶೇಷವಾದ ಒಲವು ಮತ್ತು ಪರಿಗಣನೆಗೆ ಅರ್ಹನಾಗಿದ್ದೇನೆ ಎಂದು ನಾನು ನಂಬುತ್ತೇನೆ” ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

“ಹಿಂದಿನ ಕಾಂಗ್ರೆಸ್ ಮುಖ್ಯಮಂತ್ರಿಯವರು ಕೇಳಿದಾಗ ನಿರಾಕರಿಸಲಿಲ್ಲ. ಮುಖ್ಯ ಕಾರ್ಯದರ್ಶಿಯ ಪ್ರಸ್ತಾಪವನ್ನು ನನಗೆ ನಿರಾಕರಿಸಿದರೆ, ಕಾಂಗ್ರೆಸ್ ಪಕ್ಷ ಮತ್ತು ಇತರ ಎಲ್ಲಾ ವಿರೋಧ ಪಕ್ಷಗಳು ಎನ್‌ಡಿಎ ಪಾಲುದಾರಿಕೆಯಲ್ಲಿ ನಿಷ್ಠೆಯಿಂದ ಸೇವೆ ಸಲ್ಲಿಸಿದ ನನ್ನನ್ನು ಅಪಹಾಸ್ಯ ಮಾಡುತ್ತವೆ. ಆದ್ದರಿಂದ ಆದೇಶವನ್ನು ಬದಲಾಯಿಸಬೇಕು, ನನ್ನ ಪ್ರಸ್ತಾವನೆಯನ್ನು ದಯವಿಟ್ಟು ಸ್ವೀಕರಿಸಬೇಕು ಎಂದು ನಿಮ್ಮಲ್ಲಿ ಮನಃಪೂರ್ವಕವಾಗಿ ವಿನಂತಿಸುತ್ತೇನೆ” ಎಂದು ಜೊರಾಮ್‌ತಂಗಾ ಕೋರಿದ್ದಾರೆ.

ಇದನ್ನೂ ಓದಿರಿ: ಹಿಂದಿ ಹೇರಿಕೆಗೆ ಕಪಾಳ ಮೋಕ್ಷ: ’ಜೈ ಭೀಮ್’ ದೃಶ್ಯಕ್ಕೆ ದ್ರಾವಿಡ ಭಾಷಿಗರ ಮೆಚ್ಚುಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...