Homeಮುಖಪುಟಸಚಿವರಿಗೆ ಹಿಂದಿ ಗೊತ್ತಿಲ್ಲ: ಸಿಎಸ್‌ ಬದಲಾವಣೆಗೆ ಕೋರಿ ಅಮಿತ್‌ ಶಾಗೆ ಮಿಜೋರಾಂ ಸಿಎಂ ಪತ್ರ

ಸಚಿವರಿಗೆ ಹಿಂದಿ ಗೊತ್ತಿಲ್ಲ: ಸಿಎಸ್‌ ಬದಲಾವಣೆಗೆ ಕೋರಿ ಅಮಿತ್‌ ಶಾಗೆ ಮಿಜೋರಾಂ ಸಿಎಂ ಪತ್ರ

"ನಾನು ಎನ್‌ಡಿಎಯ ನಿಷ್ಠಾವಂತ ಪಾಲುದಾರನಾಗಿದ್ದೇನೆ. ಮಿಜೋ ಭಾಷೆ ತಿಳಿಯದ ಮುಖ್ಯ ಕಾರ್ಯದರ್ಶಿಯನ್ನು ಬದಲಿಸದಿದ್ದರೆ ನನ್ನನ್ನು ವಿರೋಧ ಪಕ್ಷಗಳು ಅಪಹಾಸ್ಯ ಮಾಡುತ್ತವೆ"

- Advertisement -
- Advertisement -

“ರಾಜ್ಯದ ಸಚಿವರಿಗೆ ಹಿಂದಿ ಗೊತ್ತಿಲ್ಲ; ಅನೇಕರಿಗೆ ಇಂಗ್ಲಿಷ್‌ ಕೂಡ ಗೊತ್ತಿಲ್ಲ” ಎಂದು ಕೇಂದ್ರದ ಗೃಹಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿರುವ ಮಿಜೋರಾಂ ಮುಖ್ಯಮಂತ್ರಿ ಪು ಜೋರಮ್ತಂಗ ಅವರು, ರಾಜ್ಯ ಮುಖ್ಯ ಕಾರ್ಯದರ್ಶಿ (ಸಿಎಸ್‌) ರೇಣು ಶರ್ಮಾ ಅವರನ್ನು ಬದಲಾಯಿಸಲು ಒತ್ತಾಯಿಸಿದ್ದಾರೆ.

ರೇಣು ಶರ್ಮಾ ಅವರ ಬದಲಿಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜೆ.ಸಿ.ರಾಮತಂಗ ಅವರನ್ನು ನೂತನ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸುವಂತೆ ಮುಖ್ಯಮಂತ್ರಿಯವರು ಕೇಂದ್ರದ ಗೃಹ ಸಚಿವರಲ್ಲಿ ಮನವಿ ಮಾಡಿದ್ದಾರೆ.

“ಗುಜರಾತ್ ಕೇಡರ್‌ನ ನನ್ನ ಮುಖ್ಯ ಕಾರ್ಯದರ್ಶಿ ಲಾಲ್ನುನ್ಮಾವಿಯಾ ಚುವಾಗೊ ಅವರು ನಿವೃತ್ತರಾದ ನಂತರ ನನ್ನ ಈಗಿನ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜೆಸಿ ರಾಮತಂಗ (ಮಣಿಪುರ ಕೇಡರ್) ಅವರನ್ನು ಮುಂದಿನ ಮುಖ್ಯ ಕಾರ್ಯದರ್ಶಿಯನ್ನಾಗಿ ಮಾಡಲು ನಾನು ವಿನಂತಿಸಿದೆ. ಆದರೆ ಗೃಹ ಸಚಿವಾಲಯವು ರೇಣು ಶರ್ಮಾ ಅವರನ್ನು ಹೊಸ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಿದೆ” ಎಂದು ಅಕ್ಟೋಬರ್‌ 29ರಂದು ಬರೆದ ಪತ್ರದಲ್ಲಿ ಮಿಜೋರಾಂ ಸಿಎಂ ಹೇಳಿದ್ದು, ಈ ಪತ್ರವು ತಮಗೆ ಲಭ್ಯವಾಗಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

1988ರ ಬ್ಯಾಚ್‌ನ AGMUT ಕೇಡರ್ ಐಎಎಸ್ ಅಧಿಕಾರಿಯಾಗಿರುವ ರೇಣು ಶರ್ಮಾ ಅವರನ್ನು ನವೆಂಬರ್ 1ರಿಂದ ಮಿಜೋರಾಂನ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲು ಅಕ್ಟೋಬರ್ 28 ರಂದು ಕೇಂದ್ರವು ನೇಮಿಸಿತು.

ಇದನ್ನೂ ಓದಿರಿ: ಒರಿಸ್ಸಾ: ದಲಿತರ ಗುಡಿಸಲುಗಳಿಗೆ ಬೆಂಕಿ; ಹತ್ತು ಮಂದಿಗೆ ಗಾಯ

ಅದೇ ದಿನ, ಮಿಜೋರಾಂ ಸರ್ಕಾರವು ಜೆಸಿ ರಾಮತಂಗ ಅವರಿಗೆ ನವೆಂಬರ್ 1ರಿಂದ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲು ಆದೇಶಿಸಿತು. ಹೀಗಾಗಿ ಮಿಜೋರಾಂ ಈಗ ಇಬ್ಬರು ಮುಖ್ಯ ಕಾರ್ಯದರ್ಶಿಗಳನ್ನು ಹೊಂದಿದೆ.

“ಮಿಜೋ ಭಾಷಿಗರಿಗೆ ಹಿಂದಿ ಅರ್ಥವಾಗುವುದಿಲ್ಲ. ನನ್ನ ಕ್ಯಾಬಿನೆಟ್ ಮಂತ್ರಿಗಳಲ್ಲಿ ಯಾರಿಗೂ ಹಿಂದಿ ಬರುವುದಿಲ್ಲ. ಅವರಲ್ಲಿ ಕೆಲವರಿಗೆ ಇಂಗ್ಲಿಷ್ ಭಾಷೆಯ ಸಮಸ್ಯೆಯೂ ಇದೆ. ಅಂತಹ ಪರಿಸ್ಥಿತಿಯಲ್ಲಿ ಮಿಜೋ ಭಾಷೆಯ ಜ್ಞಾನವಿಲ್ಲದ ಮುಖ್ಯ ಕಾರ್ಯದರ್ಶಿಯವರು ಎಂದಿಗೂ ಪರಿಣಾಮಕಾರಿಯಾಗಿ ಹಾಗೂ ದಕ್ಷತೆಯಿಂದ ಕಾರ್ಯನಿರ್ವಹಿಸಲು ಸಾಧ್ಯವಾಗದು” ಎಂದು ಮುಖ್ಯಮಂತ್ರಿ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

“ಈ ಕಾರಣದಿಂದಾಗಿ ಮಿಜೋರಾಂ ರಾಜ್ಯ ರಚನೆಯಾದಾಗಿನಿಂದಲೂ ಮಿಜೋ ಭಾಷೆಯನ್ನು ತಿಳಿದಿಲ್ಲದ ಮುಖ್ಯ ಕಾರ್ಯದರ್ಶಿಯನ್ನು ಭಾರತ ಸರ್ಕಾರವು ಎಂದಿಗೂ ನೇಮಿಸಲಿಲ್ಲ. ಅದು ಯುಪಿಎ ಸರ್ಕಾರವಾಗಲಿ ಅಥವಾ ಎನ್‌ಡಿಎ ಸರ್ಕಾರವಾಗಲಿ ಮಿಜೋರಾಂ ರಾಜ್ಯ ರಚನೆಯಾದಾಗಿನಿಂದ ಈ ಪದ್ಧತಿ ನಡೆದುಬಂದಿದೆ. ಭಾರತದ ಇತರ ರಾಜ್ಯಗಳಲ್ಲಿ ಆಯಾ ರಾಜ್ಯದ ಭಾಷೆಯನ್ನು ತಿಳಿಯದವರನ್ನು ಮುಖ್ಯ ಕಾರ್ಯದರ್ಶಿಯಾಗಿ ನೇಮಿಸುವುದಿಲ್ಲ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ” ಎಂದು ಮುಖ್ಯಮಂತ್ರಿ ಪ್ರಸ್ತಾಪಿಸಿದ್ದಾರೆ.

“ನಾನು ಮೊದಲಿನಿಂದಲೂ ಈ ಸಮಯದವರೆಗೆ ಈಶಾನ್ಯ ರಾಜ್ಯಗಳಲ್ಲಿ ಎನ್‌ಡಿಎಯ ನಿಷ್ಠಾವಂತ ಪಾಲುದಾರನಾಗಿದ್ದೇನೆ. ಎನ್‌ಡಿಎ ಜೊತೆಗಿನ ಈ ನಿಷ್ಠಾವಂತ ಸ್ನೇಹದಿಂದಾಗಿ ವಿಶೇಷವಾದ ಒಲವು ಮತ್ತು ಪರಿಗಣನೆಗೆ ಅರ್ಹನಾಗಿದ್ದೇನೆ ಎಂದು ನಾನು ನಂಬುತ್ತೇನೆ” ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

“ಹಿಂದಿನ ಕಾಂಗ್ರೆಸ್ ಮುಖ್ಯಮಂತ್ರಿಯವರು ಕೇಳಿದಾಗ ನಿರಾಕರಿಸಲಿಲ್ಲ. ಮುಖ್ಯ ಕಾರ್ಯದರ್ಶಿಯ ಪ್ರಸ್ತಾಪವನ್ನು ನನಗೆ ನಿರಾಕರಿಸಿದರೆ, ಕಾಂಗ್ರೆಸ್ ಪಕ್ಷ ಮತ್ತು ಇತರ ಎಲ್ಲಾ ವಿರೋಧ ಪಕ್ಷಗಳು ಎನ್‌ಡಿಎ ಪಾಲುದಾರಿಕೆಯಲ್ಲಿ ನಿಷ್ಠೆಯಿಂದ ಸೇವೆ ಸಲ್ಲಿಸಿದ ನನ್ನನ್ನು ಅಪಹಾಸ್ಯ ಮಾಡುತ್ತವೆ. ಆದ್ದರಿಂದ ಆದೇಶವನ್ನು ಬದಲಾಯಿಸಬೇಕು, ನನ್ನ ಪ್ರಸ್ತಾವನೆಯನ್ನು ದಯವಿಟ್ಟು ಸ್ವೀಕರಿಸಬೇಕು ಎಂದು ನಿಮ್ಮಲ್ಲಿ ಮನಃಪೂರ್ವಕವಾಗಿ ವಿನಂತಿಸುತ್ತೇನೆ” ಎಂದು ಜೊರಾಮ್‌ತಂಗಾ ಕೋರಿದ್ದಾರೆ.

ಇದನ್ನೂ ಓದಿರಿ: ಹಿಂದಿ ಹೇರಿಕೆಗೆ ಕಪಾಳ ಮೋಕ್ಷ: ’ಜೈ ಭೀಮ್’ ದೃಶ್ಯಕ್ಕೆ ದ್ರಾವಿಡ ಭಾಷಿಗರ ಮೆಚ್ಚುಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...