Homeಮುಖಪುಟಮಿಜೋರಾಂ ಅನ್ನು ಸಂಪೂರ್ಣ ಸಾಕ್ಷರ ರಾಜ್ಯ ಎಂದು ಘೋಷಿಸಿದ ಸಿಎಂ ಲಾಲ್ದುಹೋಮ

ಮಿಜೋರಾಂ ಅನ್ನು ಸಂಪೂರ್ಣ ಸಾಕ್ಷರ ರಾಜ್ಯ ಎಂದು ಘೋಷಿಸಿದ ಸಿಎಂ ಲಾಲ್ದುಹೋಮ

- Advertisement -
- Advertisement -

ಮಿಜೋರಾಂ ಭಾರತದ ಮೊದಲ ಸಂಪೂರ್ಣ ಸಾಕ್ಷರ ರಾಜ್ಯ ಎಂದು ಮುಖ್ಯಮಂತ್ರಿ ಲಾಲ್ದುಹೋಮ ಮಂಗಳವಾರ ಘೋಷಿಸಿದ್ದಾರೆ. ರಾಜ್ಯದ ರಾಜಧಾನಿ ಐಜ್ವಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಶಿಕ್ಷಣ ರಾಜ್ಯ ಸಚಿವ ಜಯಂತ್ ಚೌಧರಿ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಈ ಘೋಷಣೆ ಮಾಡಿದದಾರೆ. ಅದಾಗ್ಯೂ, ಭಾರತದ ಮೊದಲ ಸಂಪೂರ್ಣ ಸಾಕ್ಷರ ರಾಜ್ಯ ಕೇರಳ ಆಗಿದ್ದು, 1989ರಲ್ಲೆ ರಾಜ್ಯವು 100% ಸಾಕ್ಷರತೆಯನ್ನು ಸಾಧಿಸಿದೆ ಎಂದು ಘೋಷಿಸಲಾಯಿತು.

2011 ರ ಜನಗಣತಿಯ ಪ್ರಕಾರ ಮಿಜೋರಾಂನ ಸಾಕ್ಷರತಾ ಪ್ರಮಾಣ 91.3% ರಷ್ಟಿದೆ. ಇದು ರಾಜ್ಯವನ್ನು ದೇಶದ ಮೂರನೇ ಅತ್ಯಂತ ಸಾಕ್ಷರರನ್ನಾಗಿ ಮಾಡಿದೆ. ಇದರ ನಂತರ, ಉಳಿದ ವ್ಯಕ್ತಿಗಳಿಗೆ ಶಿಕ್ಷಣ ನೀಡಲು ಕೇಂದ್ರ ಪ್ರಾಯೋಜಿತ ಯೋಜನೆಯಾದ ನ್ಯೂ ಇಂಡಿಯಾ ಲಿಟರಸಿ ಪ್ರೋಗ್ರಾಂ ಅನ್ನು ಜಾರಿಗೆ ತರಲಾಯಿತು ಎಂದು ಕೇಂದ್ರ ಶಿಕ್ಷಣ ಸಚಿವಾಲಯ ತಿಳಿಸಿದೆ.

ಮಿಜೋರಾಂನಲ್ಲಿ ಸಾಕ್ಷರತಾ ಪ್ರಮಾಣವು 95% ರ ಗಡಿಯನ್ನು ದಾಟಿದ್ದು, ಇದನ್ನು ಕೇಂದ್ರ ಶಿಕ್ಷಣ ಸಚಿವಾಲಯವು ಪೂರ್ಣ ಸಾಕ್ಷರತೆಗೆ ಸಮಾನವೆಂದು ಪರಿಗಣಿಸುತ್ತದೆ.

ಸಂಪೂರ್ಣ ಸಾಕ್ಷರ ರಾಜ್ಯವಾಗುವುದು ಮಿಜೋರಾಂನ “ಪ್ರಯಾಣದಲ್ಲಿ ಒಂದು ಐತಿಹಾಸಿಕ ಕ್ಷಣ” ಎಂದು ಲಾಲ್ದುಹೋಮ ಹೇಳಿದ್ದಾರೆ. “ಇದು ಪರಿವರ್ತನೆಯ ಮೈಲಿಗಲ್ಲು, ಇದು ನಮ್ಮ ಜನರ ಸಾಮೂಹಿಕ ಇಚ್ಛಾಶಕ್ತಿ, ಶಿಸ್ತು ಮತ್ತು ದೃಷ್ಟಿಕೋನವನ್ನು ಹೇಳುತ್ತದೆ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

“ನಿರಂತರ ಶಿಕ್ಷಣ, ಡಿಜಿಟಲ್ ಬಳಕೆ ಮತ್ತು ವೃತ್ತಿಪರ ಕೌಶಲ್ಯ ತರಬೇತಿಯ ಮೂಲಕ” ರಾಜ್ಯದಲ್ಲಿ ಉನ್ನತ ಮಟ್ಟದ ಸಾಕ್ಷರತೆಯನ್ನು ಉಳಿಸಿಕೊಳ್ಳಬೇಕು. ಎಲ್ಲಾ ಮಿಜೋಗಳಿಗೆ ಡಿಜಿಟಲ್ ಸಾಕ್ಷರತೆ, ಆರ್ಥಿಕ ಸಾಕ್ಷರತೆ ಮತ್ತು ಉದ್ಯಮಶೀಲತಾ ಕೌಶಲ್ಯದ ಹೆಚ್ಚಿನ ಗುರಿಯನ್ನು ಈಗ ನಾವು ಹೊಂದಬೇಕಿದೆ” ಎಂದು ಲಾಲ್ದುಹೋಮ ಹೇಳಿದ್ದಾರೆ.

ಕೇರಳವನ್ನು ಭಾರತದ ಮೊದಲ ಸಂಪೂರ್ಣ ಸಾಕ್ಷರ ರಾಜ್ಯ ಎಂದು 1989 ರಿಂದಲೇ ಗುರುತಿಸಲಾಗಿದೆ ಎಂಬುದು ಐತಿಹಾಸಿಕವಾಗಿ ದಾಖಲಾಗಿದೆ. ಕೇರಳವು 100% ಸಾಕ್ಷರತೆಯನ್ನು ಸಾಧಿಸಿದ ಮೊದಲ ರಾಜ್ಯವಾಗಿದ್ದು, ಇದನ್ನು ಭಾರತ ಸರ್ಕಾರ ಮತ್ತು ಇತರ ಸಂಸ್ಥೆಗಳು ಒಪ್ಪಿಕೊಂಡಿವೆ. ಅದಾಗ್ಯೂ, ಮಿಜೋರಾಂನ ಮುಖ್ಯಮಂತ್ರಿಯ ಘೋಷಣೆಯು 98.2% ಸಾಕ್ಷರತೆಯ ದರವನ್ನು ಆಧರಿಸಿ ಹೇಳಲಾಗಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ದಲಿತ ಎಂಬ ಕಾರಣಕ್ಕೆ ಮುಖ್ಯ ನ್ಯಾಯಮೂರ್ತಿಗೆ ಅಗೌರವ: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ.ಎ. ಬೇಬಿ ಆಕ್ರೋಶ

ದಲಿತ ಎಂಬ ಕಾರಣಕ್ಕೆ ಮುಖ್ಯ ನ್ಯಾಯಮೂರ್ತಿಗೆ ಅಗೌರವ: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ.ಎ. ಬೇಬಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...