HomeಮುಖಪುಟELECTION UPDATE: ಮಿಜೋರಾಂನಲ್ಲಿ ಬಹುಮತ ಪಡೆದ ZPM: ಸಿಎಂಗೆ ಸೋಲು

ELECTION UPDATE: ಮಿಜೋರಾಂನಲ್ಲಿ ಬಹುಮತ ಪಡೆದ ZPM: ಸಿಎಂಗೆ ಸೋಲು

- Advertisement -
- Advertisement -

ಮಿಜೋರಾಂ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದ್ದು  ಜೋರಾಮ್ ಪೀಪಲ್ಸ್ ಪಾರ್ಟಿ 25 ಕ್ಷೇತ್ರಗಳಲ್ಲಿ ಗೆಲುವನ್ನು ಸಾಧಿಸಿ ಬಹುಮತವನ್ನು ಪಡೆದುಕೊಂಡಿದ್ದು, ಆಡಳಿತರೂಢ ಮಿಜೋ ನ್ಯಾಷನಲ್ ಫ್ರಂಟ್ ಭಾರೀ ಹಿನ್ನೆಡೆಯನ್ನು ಅನುಭವಿಸಿದೆ.

ಜೋರಾಮ್ ಪೀಪಲ್ಸ್ ಪಾರ್ಟಿ 27 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿತ್ತು. ಈ ಪೈಕಿ 25ಕ್ಷೇತ್ರಗಳಲ್ಲಿ ಈಗಾಗಲೇ ಗೆಲುವನ್ನು ಸಾಧಿಸಿದ್ದು, ಮ್ಯಾಜಿಕ್‌ ನಂಬರನ್ನು ದಾಟಿದೆ. ಜೋರಾಮ್ ಪೀಪಲ್ಸ್ ಪಾರ್ಟಿ ಮುನ್ನಡೆ ಸಾಧಿಸಿರುವ ಇನ್ನೆರಡು ಕ್ಷೇತ್ರಗಳ ಫಲಿತಾಂಶ ಕೆಲವೇ ಕ್ಷಣದಲ್ಲಿ ಹೊರಬೀಳಲಿದೆ.

ಮಿಜೋರಾಂನಲ್ಲಿ ಆಡಳಿತ ನಡೆಸುತ್ತಿದ್ದ ಮಿಜೋ ನ್ಯಾಷನಲ್ ಫ್ರಂಟ್ 7 ಕ್ಷೇತ್ರಗಳಲ್ಲಿ ಗೆಲುವನ್ನು ಸಾಧಿಸಿದ್ದು, ಮೂರು ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ ಮಿಜೋರಾಂನಲ್ಲಿ 2 ಕ್ಷೇತ್ರಗಳಲ್ಲಿ ಗೆಲುವನ್ನು ಸಾಧಿಸಿದ್ದು, ಕಾಂಗ್ರೆಸ್‌ ಒಂದು ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದೆ.

ಕಳೆದ ಬಾರಿ ಚುನಾವಣೆಯಲ್ಲಿ ಮಿಜೋ ನ್ಯಾಷನಲ್ ಫ್ರಂಟ್ 27 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಮಿಜೋರಾಂನಲ್ಲಿ ಅಧಿಕಾರಕ್ಕೇರಿತ್ತು. ಈ ಬಾರಿ 17ಕ್ಕೂ ಅಧಿಕ ಸ್ಥಾನಗಳನ್ನು ಮಿಜೋ ನ್ಯಾಷನಲ್ ಫ್ರಂಟ್ ಕಳೆದುಕೊಂಡಿದೆ.

ಜೋರಾಮ್ ಪೀಪಲ್ಸ್ ಪಾರ್ಟಿ ಕಳೆದ ಭಾರಿಗಿಂತ ಈ ಬಾರಿ 25 ಹೆಚ್ಚುವರಿ ಸ್ಥಾನಗಳನ್ನು ಪಡೆದುಕೊಂಡು ರಾಜ್ಯದಲ್ಲಿ ಅಧಿಕಾರಕ್ಕೇರಿದೆ. ಕಾಂಗ್ರೆಸ್‌ ಕಳೆದ ಚುನಾವಣೆಯಲ್ಲಿ 3 ಕ್ಷೇತ್ರಗಳಲ್ಲಿ ಗೆಲುವು ಕಂಡಿತ್ತು. ಈ ಬಾರಿ 2 ಕ್ಷೇತ್ರಗಳನ್ನು ಕಳೆದುಕೊಂಡಿದೆ.

ಪೂರ್ವ ಐಜ್ವಾಲ್‌ನಲ್ಲಿ ಪ್ರತಿಸ್ಪರ್ಧಿ ZPM ಅಭ್ಯರ್ಥಿ ಎದುರು ಮಿಝೋರಾಂ ಮುಖ್ಯಮಂತ್ರಿ ಸೋತಿದ್ದಾರೆ. ಮುಖ್ಯಮಂತ್ರಿ ಝೊರಾಂಥಾಂಗ ವಿರುದ್ಧ ZPM ಅಭ್ಯರ್ಥಿ ಲಾಲತನಸಂಗ 2,101 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಆಡಳಿತಾರೂಢ ಮಿಜೋ ನ್ಯಾಷನಲ್ ಫ್ರಂಟ್ (ಎಂಎನ್‌ಎಫ್), ವಿರೋಧ ಪಕ್ಷವಾದ ಜೋರಾಮ್ ಪೀಪಲ್ಸ್ ಪಾರ್ಟಿ(ಜೆಡ್‌ಪಿಎಂ) ನಡುವೆ ಮಿಝೋರಾಂನಲ್ಲಿ ಸ್ಪರ್ಧೆ ಇತ್ತು. ಕೊನೆಗೆ ಜೋರಾಮ್ ಪೀಪಲ್ಸ್ ಪಾರ್ಟಿ ರಾಜ್ಯದಲ್ಲಿ ಬಹುಮತವನ್ನು ಪಡೆದುಕೊಂಡಿದೆ.

ನವೆಂಬರ್‌ನಲ್ಲಿ ನಡೆದ ಪಂಚರಾಜ್ಯಗಳ ಚುನಾವಣೆಯಲ್ಲಿ 4 ರಾಜ್ಯಗಳ ಚುನಾವಣಾ ಫಲಿತಾಂಶ ನಿನ್ನೆ ಪ್ರಕಟವಾಗಿತ್ತು. ತೆಲಂಗಾಣದಲ್ಲಿ ಕಾಂಗ್ರೆಸ್‌ ಬಹುಮತವನ್ನು ಪಡೆದುಕೊಂಡರೆ, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಬಿಜೆಪಿ ಬಹುಮತವನ್ನು ಪಡೆದುಕೊಂಡಿದೆ. ಮಧ್ಯಪ್ರದೇಶದಲ್ಲಿ 163 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿನ ಮೂಲಕ ಅಧಿಕಾರವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಬಾರಿ ಮಧ್ಯಪ್ರದೇಶದಲ್ಲಿ ಬಿಜೆಪಿ ಹೆಚ್ಚುವರಿ 54 ಕ್ಷೇತ್ರಗಳಲ್ಲಿ ಗೆಲುವನ್ನು ಪಡೆದುಕೊಂಡಿದೆ. ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಅಧಿಕಾರವನ್ನು ಉಳಿಸಿಕೊಳ್ಳುವಲ್ಲಿ ವಿಫಲವಾಗಿದೆ. ಬಿಜೆಪಿ ಎರಡು ರಾಜ್ಯಗಳಲ್ಲಿ ಹೆಚ್ಚುವರಿಯಾಗಿ ಅಧಿಕಾರ ಪಡೆಯುವಲ್ಲಿ ಯಶಸ್ವಿಯಾಗಿದೆ.

ರಾಜಸ್ಥಾನದಲ್ಲಿ ಕಾಂಗ್ರೆಸ್‌ 70 ಕ್ಷೇತ್ರಗಳಲ್ಲಿ ಗೆಲುವನ್ನು ಸಾಧಿಸಿದ್ದು 2018ರ ಚುನಾವಣೆಗೆ ಹೋಲಿಸಿದರೆ 30 ಕ್ಷೇತ್ರಗಳನ್ನು ಕಳೆದುಕೊಂಡಿದೆ. ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ 35 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, 2018ರ ಚುನಾವಣೆಗೆ ಹೋಲಿಸಿದರೆ 33 ಸ್ಥಾನಗಳನ್ನು ಕಾಂಗ್ರೆಸ್‌ ಕಳೆದುಕೊಂಡಿದೆ.

ಇದನ್ನು ಓದಿ: 3 ರಾಜ್ಯಗಳಲ್ಲಿ ಒಂದೇ ಒಂದು ಖಾತೆ ತೆರೆಯದ ಎಎಪಿ: ನೋಟಾಗಿಂತಲೂ ಅಲ್ಪ ಮತ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...