Homeಮುಖಪುಟಅತಿ ಹೆಚ್ಚು ಮಕ್ಕಳನ್ನು ಹೊಂದಿರುವ ಪೋಷಕರಿಗೆ 1 ಲಕ್ಷ ಬಹುಮಾನ ಘೋಷಿಸಿದ ಮಿಜೋರಾಂ ಸಚಿವ!

ಅತಿ ಹೆಚ್ಚು ಮಕ್ಕಳನ್ನು ಹೊಂದಿರುವ ಪೋಷಕರಿಗೆ 1 ಲಕ್ಷ ಬಹುಮಾನ ಘೋಷಿಸಿದ ಮಿಜೋರಾಂ ಸಚಿವ!

- Advertisement -
- Advertisement -

ದೇಶದಲ್ಲಿ ಜನನ ದರ ನಿಯಂತ್ರಣದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಮೀಜೋರಾಂ ಸಚಿವ ತನ್ನ ಕ್ಷೇತ್ರದಲ್ಲಿ ಅತಿ ಹೆಚ್ಚು ಮಕ್ಕಳನ್ನು ಹೊಂದಿರುವ ಪೋಷಕರಿಗೆ 1 ಲಕ್ಷ ಬಹುಮಾನ ಘೋಷಿಸುವ ಮೂಲಕ ಗಮನ ಸೆಳೆದಿದ್ದಾರೆ.

ಮಿಜೋ ಸಮುದಾಯದ ಜನಸಂಖ್ಯಾ ಬೆಳವಣಿಗೆಯನ್ನು ಉತ್ತೇಜಿಸುವ ಸಲುವಾಗ ಐಜ್ವಾಲ್‌ ಪೂರ್ವ-2 ಕ್ಷೇತ್ರದ ಶಾಸಕ ಮತ್ತು ಮಿಜೋರಾಂನ ಕ್ರೀಡಾ ಸಚಿವ ರಾಬರ್ಟ್ ರೊಮಾವಿಯಾ ರಾಯ್ಟೆ ಈ ಘೋಷಣೆ ಮಾಡಿದ್ದಾರೆ.

ಅತಿ ಹೆಚ್ಚು ಮಕ್ಕಳನ್ನು ಹೊಂದಿರುವ ಪೋಷಕರಿಗೆ ಒಂದು ಲಕ್ಷ ರೂ ಬಹುಮಾನ, ಟ್ರೋಫಿ ಮತ್ತು ಪ್ರಮಾಣಪತ್ರವನ್ನು ವಿತರಿಸುವುದಾಗಿ ತಿಳಿಸಿರುವ ಅವರು ಕಡಿಮೆ ಮಕ್ಕಳನ್ನು ಹೊಂದಿರುವವರ ಕುರಿತು ಯಾವುದೇ ಹೇಳಿಕೆ ನೀಡಿಲ್ಲ.

“ಮಿಜೋ ಜನಸಂಖ್ಯೆಯ ಬೆಳವಣಿಗೆಯ ದರ ಕಡಿಮೆಯಾಗುತ್ತಿರುವುದು ಮತ್ತು ಬಂಜೆತನ ದರ ಹೆಚ್ಚುತ್ತಿರುವುದು ಗಂಭೀರ ಕಳವಳಕಾರಿ ವಿಷಯವಾಗಿದೆ. ಮಿಜೋರಾಂನ ಜನಸಂಖ್ಯೆಯಲ್ಲಿನ ಕುಸಿತದಿಂದಾಗಿ ವಿವಿಧ ಕ್ಷೇತ್ರಗಳಲ್ಲಿ ಅಭಿವೃದ್ಧಿ ಸಾಧಿಸಲು ಸಾಧ್ಯವಾಗುತ್ತಿಲ್ಲ. ಇದು ಸಣ್ಣ ಸಮುದಾಯಗಳು ಅಥವಾ ಮಿಜೋಸ್‌ನಂತಹ ಬುಡಕಟ್ಟು ಜನಾಂಗದವರು ಬದುಕುಳಿಯಲು ಮತ್ತು ಪ್ರಗತಿಗೆ ಅಡ್ಡಿಯಾಗಿದೆ” ಎಂದು ಅವರು ತಿಳಿಸಿದ್ದಾರೆ.

ಮಿಜೋರಾಂ ಮಿಜೋ ಸಮುದಾಯದ ತವರು ಮನೆಯಾಗಿದೆ. 21,087 ಚದರ ಕಿಲೋಮೀಟರ್ ವಿಸ್ತೀರ್ಣವುಳ್ಳ ಅಲ್ಲಿ 2011ರ ಜನಗಣತಿಯ ಪ್ರಕಾರ 10,91,014 ಜನರು ವಾಸಿಸುತ್ತಿದ್ದಾರೆ. ಅಲ್ಲಿನ ಜನಸಾಂದ್ರತೆ (ಒಂದು ಕಿ.ಮೀ ವ್ಯಾಪ್ತಿಯಲ್ಲಿ ವಾಸಿಸುವ ಸರಾಸರಿ ಜನರ ಸಂಖ್ಯೆ) ಕೇವಲ 52 ಆಗಿದೆ. ಇದು ದೇಶದಲ್ಲಿಯೇ ಅತಿ ಕಡಿಮೆ ಜನಸಾಂದ್ರೆತೆ ಹೊಂದಿರುವ ಎರಡನೇ ರಾಜ್ಯವಾಗಿದೆ. ಅರುಣಾಚಲ ಪ್ರದೇಶದ ಜನಸಾಂದ್ರತೆ 17 ಇದ್ದು, ಇದು ಕಡಿಮೆ ಜನಸಾಂದ್ರತೆಯಲ್ಲಿ ಮೊದಲ ಸ್ಥಾನದಲ್ಲಿದೆ. ಭಾರತದ ಸರಾಸರಿ ಜನಸಾಂದ್ರತೆ 382 ಆಗಿದೆ.

ಆದರೆ ಮಿಜೋರಾಂನ ನೆರೆ ರಾಜ್ಯ ಅಸ್ಸಾಂನಲ್ಲಿ ಬೇರೆಯದೆ ಪರಿಸ್ಥಿತಿ ಇದೆ. ಅಲ್ಲಿನ ನೂತನ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಇತ್ತೀಚೆಗೆ ರಾಜ್ಯವು ನೀಡುವ ಕೆಲವು ಯೋಜನೆಗಳ ಅಡಿಯಲ್ಲಿ ಧನಸಹಾಯ ಪ್ರಯೋಜನಗಳನ್ನು ಪಡೆಯಲು ಎರಡು ಮಕ್ಕಳ ನೀತಿಯನ್ನು ಕ್ರಮೇಣ ಜಾರಿಗೆ ತರುವುದಾಗಿ ಘೋಷಿಸಿದ್ದಾರೆ. 2019 ರಲ್ಲಿ ಎರಡಕ್ಕಿಂತ ಹೆಚ್ಚಿನ ಮಕ್ಕಳನ್ನು ಹೊಂದಿರುವವರು 2021 ರ ಜನವರಿಯಿಂದ ಸರ್ಕಾರಿ ಉದ್ಯೋಗಗಳಿಗೆ ಅರ್ಹರಲ್ಲ ಎಂದು ರಾಜ್ಯ ಆಡಳಿತ ನಿರ್ಧರಿಸಿತ್ತು.

ದೇಶದ ಉತ್ತರದ ರಾಜ್ಯಗಳಲ್ಲಿ ಭೌಗೋಳಿಕತೆಗಿಂತ ಹೆಚ್ಚಿನ ಜನಸಂಖ್ಯೆ ಕಂಡುಬಂದರೆ ದಕ್ಷಿಣದ ರಾಜ್ಯಗಳಲ್ಲಿ ಭೌಗೋಳಿಕತೆಗಿಂತ ಕಡಿಮೆ ಜನಸಂಖ್ಯೆ ಇರುವುದು ಕಂಡುಬಂದಿದೆ. ಇದು ಹಲವು ಚರ್ಚೆಗಳಿಗೆ ಎಡೆ ಮಾಡಿಕೊಟ್ಟಿದೆ.


ಇದನ್ನೂ ಓದಿ: ಬೀದಿಬದಿಯ ಬಡ ವ್ಯಾಪಾರಿಗಳ ಮೇಲೆ ದರ್ಪ ತೋರಿದ ಪಿಎಸ್‌ಐ ಅಮಾನತು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಣಿಪುರದಲ್ಲಿ ಹಿಂಸಾಚಾರಕ್ಕೆ ಉತ್ತೇಜನ ನೀಡಿದ ಬಿಜೆಪಿ ಸಿಎಂ ಬಿರೇನ್ ಸಿಂಗ್: ಅಸ್ಸಾಂ ರೈಫಲ್ಸ್ ವರದಿ

0
ಮಣಿಪುರದಲ್ಲಿನ ಸಂಘರ್ಷಕ್ಕೆ ಸಂಬಂಧಿಸಿ ರಾಜ್ಯದಲ್ಲಿ ಅಸ್ಸಾಂ ರೈಫಲ್ಸ್‌ನ ಅಧಿಕಾರಿಗಳು ನಡೆಸಿದ ಮೌಲ್ಯಮಾಪನದಲ್ಲಿ ಸ್ಪೋಟಕ ಅಂಶಗಳನ್ನು ಉಲ್ಲೇಖಿಸಲಾಗಿದ್ದು, ಮಣಿಪುರದಲ್ಲಿನ ಸಂಘರ್ಷಕ್ಕೆ ಸಿಎಂ ಬಿರೇನ್ ಸಿಂಗ್ ಉತ್ತೇಜನ ಕಾರಣ ಎಂದು ಹೇಳಿದೆ. ಅಸ್ಸಾಂ ಸಿಎಂ ಬಿರೇನ್ ಸಿಂಗ್...