Homeಮುಖಪುಟಅತಿ ಹೆಚ್ಚು ಮಕ್ಕಳನ್ನು ಹೊಂದಿರುವ ಪೋಷಕರಿಗೆ 1 ಲಕ್ಷ ಬಹುಮಾನ ಘೋಷಿಸಿದ ಮಿಜೋರಾಂ ಸಚಿವ!

ಅತಿ ಹೆಚ್ಚು ಮಕ್ಕಳನ್ನು ಹೊಂದಿರುವ ಪೋಷಕರಿಗೆ 1 ಲಕ್ಷ ಬಹುಮಾನ ಘೋಷಿಸಿದ ಮಿಜೋರಾಂ ಸಚಿವ!

- Advertisement -
- Advertisement -

ದೇಶದಲ್ಲಿ ಜನನ ದರ ನಿಯಂತ್ರಣದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಮೀಜೋರಾಂ ಸಚಿವ ತನ್ನ ಕ್ಷೇತ್ರದಲ್ಲಿ ಅತಿ ಹೆಚ್ಚು ಮಕ್ಕಳನ್ನು ಹೊಂದಿರುವ ಪೋಷಕರಿಗೆ 1 ಲಕ್ಷ ಬಹುಮಾನ ಘೋಷಿಸುವ ಮೂಲಕ ಗಮನ ಸೆಳೆದಿದ್ದಾರೆ.

ಮಿಜೋ ಸಮುದಾಯದ ಜನಸಂಖ್ಯಾ ಬೆಳವಣಿಗೆಯನ್ನು ಉತ್ತೇಜಿಸುವ ಸಲುವಾಗ ಐಜ್ವಾಲ್‌ ಪೂರ್ವ-2 ಕ್ಷೇತ್ರದ ಶಾಸಕ ಮತ್ತು ಮಿಜೋರಾಂನ ಕ್ರೀಡಾ ಸಚಿವ ರಾಬರ್ಟ್ ರೊಮಾವಿಯಾ ರಾಯ್ಟೆ ಈ ಘೋಷಣೆ ಮಾಡಿದ್ದಾರೆ.

ಅತಿ ಹೆಚ್ಚು ಮಕ್ಕಳನ್ನು ಹೊಂದಿರುವ ಪೋಷಕರಿಗೆ ಒಂದು ಲಕ್ಷ ರೂ ಬಹುಮಾನ, ಟ್ರೋಫಿ ಮತ್ತು ಪ್ರಮಾಣಪತ್ರವನ್ನು ವಿತರಿಸುವುದಾಗಿ ತಿಳಿಸಿರುವ ಅವರು ಕಡಿಮೆ ಮಕ್ಕಳನ್ನು ಹೊಂದಿರುವವರ ಕುರಿತು ಯಾವುದೇ ಹೇಳಿಕೆ ನೀಡಿಲ್ಲ.

“ಮಿಜೋ ಜನಸಂಖ್ಯೆಯ ಬೆಳವಣಿಗೆಯ ದರ ಕಡಿಮೆಯಾಗುತ್ತಿರುವುದು ಮತ್ತು ಬಂಜೆತನ ದರ ಹೆಚ್ಚುತ್ತಿರುವುದು ಗಂಭೀರ ಕಳವಳಕಾರಿ ವಿಷಯವಾಗಿದೆ. ಮಿಜೋರಾಂನ ಜನಸಂಖ್ಯೆಯಲ್ಲಿನ ಕುಸಿತದಿಂದಾಗಿ ವಿವಿಧ ಕ್ಷೇತ್ರಗಳಲ್ಲಿ ಅಭಿವೃದ್ಧಿ ಸಾಧಿಸಲು ಸಾಧ್ಯವಾಗುತ್ತಿಲ್ಲ. ಇದು ಸಣ್ಣ ಸಮುದಾಯಗಳು ಅಥವಾ ಮಿಜೋಸ್‌ನಂತಹ ಬುಡಕಟ್ಟು ಜನಾಂಗದವರು ಬದುಕುಳಿಯಲು ಮತ್ತು ಪ್ರಗತಿಗೆ ಅಡ್ಡಿಯಾಗಿದೆ” ಎಂದು ಅವರು ತಿಳಿಸಿದ್ದಾರೆ.

ಮಿಜೋರಾಂ ಮಿಜೋ ಸಮುದಾಯದ ತವರು ಮನೆಯಾಗಿದೆ. 21,087 ಚದರ ಕಿಲೋಮೀಟರ್ ವಿಸ್ತೀರ್ಣವುಳ್ಳ ಅಲ್ಲಿ 2011ರ ಜನಗಣತಿಯ ಪ್ರಕಾರ 10,91,014 ಜನರು ವಾಸಿಸುತ್ತಿದ್ದಾರೆ. ಅಲ್ಲಿನ ಜನಸಾಂದ್ರತೆ (ಒಂದು ಕಿ.ಮೀ ವ್ಯಾಪ್ತಿಯಲ್ಲಿ ವಾಸಿಸುವ ಸರಾಸರಿ ಜನರ ಸಂಖ್ಯೆ) ಕೇವಲ 52 ಆಗಿದೆ. ಇದು ದೇಶದಲ್ಲಿಯೇ ಅತಿ ಕಡಿಮೆ ಜನಸಾಂದ್ರೆತೆ ಹೊಂದಿರುವ ಎರಡನೇ ರಾಜ್ಯವಾಗಿದೆ. ಅರುಣಾಚಲ ಪ್ರದೇಶದ ಜನಸಾಂದ್ರತೆ 17 ಇದ್ದು, ಇದು ಕಡಿಮೆ ಜನಸಾಂದ್ರತೆಯಲ್ಲಿ ಮೊದಲ ಸ್ಥಾನದಲ್ಲಿದೆ. ಭಾರತದ ಸರಾಸರಿ ಜನಸಾಂದ್ರತೆ 382 ಆಗಿದೆ.

ಆದರೆ ಮಿಜೋರಾಂನ ನೆರೆ ರಾಜ್ಯ ಅಸ್ಸಾಂನಲ್ಲಿ ಬೇರೆಯದೆ ಪರಿಸ್ಥಿತಿ ಇದೆ. ಅಲ್ಲಿನ ನೂತನ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಇತ್ತೀಚೆಗೆ ರಾಜ್ಯವು ನೀಡುವ ಕೆಲವು ಯೋಜನೆಗಳ ಅಡಿಯಲ್ಲಿ ಧನಸಹಾಯ ಪ್ರಯೋಜನಗಳನ್ನು ಪಡೆಯಲು ಎರಡು ಮಕ್ಕಳ ನೀತಿಯನ್ನು ಕ್ರಮೇಣ ಜಾರಿಗೆ ತರುವುದಾಗಿ ಘೋಷಿಸಿದ್ದಾರೆ. 2019 ರಲ್ಲಿ ಎರಡಕ್ಕಿಂತ ಹೆಚ್ಚಿನ ಮಕ್ಕಳನ್ನು ಹೊಂದಿರುವವರು 2021 ರ ಜನವರಿಯಿಂದ ಸರ್ಕಾರಿ ಉದ್ಯೋಗಗಳಿಗೆ ಅರ್ಹರಲ್ಲ ಎಂದು ರಾಜ್ಯ ಆಡಳಿತ ನಿರ್ಧರಿಸಿತ್ತು.

ದೇಶದ ಉತ್ತರದ ರಾಜ್ಯಗಳಲ್ಲಿ ಭೌಗೋಳಿಕತೆಗಿಂತ ಹೆಚ್ಚಿನ ಜನಸಂಖ್ಯೆ ಕಂಡುಬಂದರೆ ದಕ್ಷಿಣದ ರಾಜ್ಯಗಳಲ್ಲಿ ಭೌಗೋಳಿಕತೆಗಿಂತ ಕಡಿಮೆ ಜನಸಂಖ್ಯೆ ಇರುವುದು ಕಂಡುಬಂದಿದೆ. ಇದು ಹಲವು ಚರ್ಚೆಗಳಿಗೆ ಎಡೆ ಮಾಡಿಕೊಟ್ಟಿದೆ.


ಇದನ್ನೂ ಓದಿ: ಬೀದಿಬದಿಯ ಬಡ ವ್ಯಾಪಾರಿಗಳ ಮೇಲೆ ದರ್ಪ ತೋರಿದ ಪಿಎಸ್‌ಐ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...