Homeಮುಖಪುಟನಿರಾಶ್ರಿತರ ಬಯೋಮೆಟ್ರಿಕ್ ಡೇಟಾ ಸಂಗ್ರಹ: ಕೇಂದ್ರದ ಆದೇಶ ನಿರ್ಲಕ್ಷಿಸುವುದಾಗಿ ಘೋಷಿಸಿದ ಮಿಜೋರಾಂ ಸರ್ಕಾರ

ನಿರಾಶ್ರಿತರ ಬಯೋಮೆಟ್ರಿಕ್ ಡೇಟಾ ಸಂಗ್ರಹ: ಕೇಂದ್ರದ ಆದೇಶ ನಿರ್ಲಕ್ಷಿಸುವುದಾಗಿ ಘೋಷಿಸಿದ ಮಿಜೋರಾಂ ಸರ್ಕಾರ

- Advertisement -
- Advertisement -

ಮ್ಯಾನ್ಮಾರ್‌ನ ಜುಂಟಾದಿಂದ ರಾಜ್ಯಕ್ಕೆ ಪ್ರವೇಶಿಸಿರುವ ನಿರಾಶ್ರಿತರ ಬಯೋಮೆಟ್ರಿಕ್ ಡೇಟಾವನ್ನು ಸಂಗ್ರಹಿಸುವ ಕೇಂದ್ರ ಗೃಹ ಸಚಿವಾಲಯದ ಆದೇಶವನ್ನು ನಿರ್ಲಕ್ಷಿಸುವುದಾಗಿ ಮಿಜೋರಾಂ ಸರ್ಕಾರ ಘೋಷಿಸಿದೆ.

ಏಪ್ರಿಲ್‌ನಲ್ಲಿ ಗೃಹ ಸಚಿವಾಲಯವು ಮಿಜೋರಾಂ ಮತ್ತು ಮಣಿಪುರ ರಾಜ್ಯಗಳಿಗೆ ಬಂದಿರುವ “ಅಕ್ರಮ ವಲಸಿಗರ” ಬಯೋಮೆಟ್ರಿಕ್ ಮತ್ತು ಸ್ವವಿವರಗಳನ್ನು ಸಂಗ್ರಹಿಸಲು ನಿರ್ದೇಶನ ನೀಡಿತ್ತು. ಎರಡೂ ರಾಜ್ಯಗಳು ಮ್ಯಾನ್ಮಾರ್‌ನೊಂದಿಗೆ ಗಡಿಯನ್ನು ಹಂಚಿಕೊಂಡಿವೆ. ಜೂನ್‌ನಲ್ಲಿ, ಸೆಪ್ಟೆಂಬರ್ ಅಂತ್ಯದೊಳಗೆ ಎಷ್ಟು ಜನ ನಿರಾಶ್ರಿತರು ರಾಜ್ಯ ಪ್ರವೇಶಿಸಿದ್ದಾರೆ ಎನ್ನುವ ವಿವರವನ್ನು ಕೇಳಲಾಯಿತು.

ಜುಂಟಾದಿಂದ ಪಲಾಯನ ಮಾಡುತ್ತಿರುವ ಮ್ಯಾನ್ಮಾರ್‌ನ ಜನರನ್ನು ಮರಳಿ ಕಳಿಸುವ ಗೃಹ ಸಚಿವಾಲಯದ ನಿರ್ದೇಶನವನ್ನು ಮಿಜೋರಾಂ ಮುಖ್ಯಮಂತ್ರಿ ಝೋರಂತಂಗಾ ತಿರಸ್ಕರಿಸಿದ್ದರು. ಮಿಜೋಗಳು ಮ್ಯಾನ್ಮಾರ್‌ನ ಚಿನ್ ಬುಡಕಟ್ಟಿನೊಂದಿಗೆ ನಿಕಟ ಸಂಬಂಧವನ್ನು ಹೊಂದಿದ್ದಾರೆ  ಎಂದು ಹೇಳಿದ್ದರು.

”ಮ್ಯಾನ್ಮಾರ್ ನಿರಾಶ್ರಿತರ ಬಯೋಮೆಟ್ರಿಕ್ ಮತ್ತು ಸ್ವವಿವರಗಳ ದತ್ತಾಂಶಗಳ ಸಂಗ್ರಹವು ನಮ್ಮ ಸಹೋದರರು ಮತ್ತು ಸಹೋದರಿಯರ ವಿರುದ್ಧ ತಾರತಮ್ಯವನ್ನು ಉಂಟುಮಾಡುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಸದ್ಯಕ್ಕೆ ಇದನ್ನು ಕೈಗೊಳ್ಳದಿರಲು ನಿರ್ಧರಿಸಲಾಗಿದೆ” ಎಂದು ಅವರು ಹೇಳಿದರು.

ಚುನಾಯಿತ ಪ್ರತಿನಿಧಿಗಳು ಸೇರಿದಂತೆ 30,000ಕ್ಕೂ ಹೆಚ್ಚು ಮ್ಯಾನ್ಮಾರ್ ಪ್ರಜೆಗಳು ಮಿಜೋರಾಂನಲ್ಲಿ ಆಶ್ರಯ ಪಡೆದಿದ್ದಾರೆ ಎಂದು ಅಂದಾಜಿಸಲಾಗಿದೆ. ಅವರು ಸಮುದಾಯ ಭವನಗಳು, ತಾತ್ಕಾಲಿಕ ಶಿಬಿರಗಳು, ಚರ್ಚ್‌ಗಳು ಮತ್ತು ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿದ್ದಾರೆ.

ಮಣಿಪುರ ಸರ್ಕಾರದ ವಿನಂತಿಯ ಮೇರೆಗೆ ಬಯೋಮೆಟ್ರಿಕ್ಸ್ ಸಂಗ್ರಹದ ಗಡುವನ್ನು ಗೃಹ ಸಚಿವಾಲಯವು ಮಾರ್ಚ್ 2024ಕ್ಕೆ ವಿಸ್ತರಿಸಿದೆ.

ಮಣಿಪುರವು ಜುಲೈ 29ರಂದು ಈ ಪ್ರಕ್ರಿಯೆಯನ್ನು ಆರಂಭಿಸಿತು, ಆದರೆ ಕುಕಿ ಮತ್ತು ಮೈತಿ ಸಮುದಾಯಗಳ ನಡುವೆ ನಡೆಯುತ್ತಿರುವ ಹಿಂಸಾಚಾರದ ಕಾರಣ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರು ಒಂದು ವರ್ಷದವರೆಗೆ ವಿಸ್ತರಣೆಯನ್ನು ಕೋರಿದರು. ಗೃಹ ಸಚಿವಾಲಯವು ಆರು ತಿಂಗಳ ವಿಸ್ತರಣೆಯನ್ನು ನೀಡಿತು, ಮಾರ್ಚ್ 31, 2024ರೊಳಗೆ ಪ್ರಕ್ರಿಯೆ ಪೂರ್ಣಗೊಳಿಸಲು ಮಣಿಪುರ ಸರ್ಕಾರವನ್ನು ಕೇಳಿದೆ.

ಇದನ್ನೂ ಓದಿ: ಮಣಿಪುರ: ಸಿಎಂ ಕುಟುಂಬದ ಮನೆ ಮೇಲೆ ದಾಳಿಗೆ ಯತ್ನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...