Homeಮುಖಪುಟನಿರಾಶ್ರಿತರ ಬಯೋಮೆಟ್ರಿಕ್ ಡೇಟಾ ಸಂಗ್ರಹ: ಕೇಂದ್ರದ ಆದೇಶ ನಿರ್ಲಕ್ಷಿಸುವುದಾಗಿ ಘೋಷಿಸಿದ ಮಿಜೋರಾಂ ಸರ್ಕಾರ

ನಿರಾಶ್ರಿತರ ಬಯೋಮೆಟ್ರಿಕ್ ಡೇಟಾ ಸಂಗ್ರಹ: ಕೇಂದ್ರದ ಆದೇಶ ನಿರ್ಲಕ್ಷಿಸುವುದಾಗಿ ಘೋಷಿಸಿದ ಮಿಜೋರಾಂ ಸರ್ಕಾರ

- Advertisement -
- Advertisement -

ಮ್ಯಾನ್ಮಾರ್‌ನ ಜುಂಟಾದಿಂದ ರಾಜ್ಯಕ್ಕೆ ಪ್ರವೇಶಿಸಿರುವ ನಿರಾಶ್ರಿತರ ಬಯೋಮೆಟ್ರಿಕ್ ಡೇಟಾವನ್ನು ಸಂಗ್ರಹಿಸುವ ಕೇಂದ್ರ ಗೃಹ ಸಚಿವಾಲಯದ ಆದೇಶವನ್ನು ನಿರ್ಲಕ್ಷಿಸುವುದಾಗಿ ಮಿಜೋರಾಂ ಸರ್ಕಾರ ಘೋಷಿಸಿದೆ.

ಏಪ್ರಿಲ್‌ನಲ್ಲಿ ಗೃಹ ಸಚಿವಾಲಯವು ಮಿಜೋರಾಂ ಮತ್ತು ಮಣಿಪುರ ರಾಜ್ಯಗಳಿಗೆ ಬಂದಿರುವ “ಅಕ್ರಮ ವಲಸಿಗರ” ಬಯೋಮೆಟ್ರಿಕ್ ಮತ್ತು ಸ್ವವಿವರಗಳನ್ನು ಸಂಗ್ರಹಿಸಲು ನಿರ್ದೇಶನ ನೀಡಿತ್ತು. ಎರಡೂ ರಾಜ್ಯಗಳು ಮ್ಯಾನ್ಮಾರ್‌ನೊಂದಿಗೆ ಗಡಿಯನ್ನು ಹಂಚಿಕೊಂಡಿವೆ. ಜೂನ್‌ನಲ್ಲಿ, ಸೆಪ್ಟೆಂಬರ್ ಅಂತ್ಯದೊಳಗೆ ಎಷ್ಟು ಜನ ನಿರಾಶ್ರಿತರು ರಾಜ್ಯ ಪ್ರವೇಶಿಸಿದ್ದಾರೆ ಎನ್ನುವ ವಿವರವನ್ನು ಕೇಳಲಾಯಿತು.

ಜುಂಟಾದಿಂದ ಪಲಾಯನ ಮಾಡುತ್ತಿರುವ ಮ್ಯಾನ್ಮಾರ್‌ನ ಜನರನ್ನು ಮರಳಿ ಕಳಿಸುವ ಗೃಹ ಸಚಿವಾಲಯದ ನಿರ್ದೇಶನವನ್ನು ಮಿಜೋರಾಂ ಮುಖ್ಯಮಂತ್ರಿ ಝೋರಂತಂಗಾ ತಿರಸ್ಕರಿಸಿದ್ದರು. ಮಿಜೋಗಳು ಮ್ಯಾನ್ಮಾರ್‌ನ ಚಿನ್ ಬುಡಕಟ್ಟಿನೊಂದಿಗೆ ನಿಕಟ ಸಂಬಂಧವನ್ನು ಹೊಂದಿದ್ದಾರೆ  ಎಂದು ಹೇಳಿದ್ದರು.

”ಮ್ಯಾನ್ಮಾರ್ ನಿರಾಶ್ರಿತರ ಬಯೋಮೆಟ್ರಿಕ್ ಮತ್ತು ಸ್ವವಿವರಗಳ ದತ್ತಾಂಶಗಳ ಸಂಗ್ರಹವು ನಮ್ಮ ಸಹೋದರರು ಮತ್ತು ಸಹೋದರಿಯರ ವಿರುದ್ಧ ತಾರತಮ್ಯವನ್ನು ಉಂಟುಮಾಡುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಸದ್ಯಕ್ಕೆ ಇದನ್ನು ಕೈಗೊಳ್ಳದಿರಲು ನಿರ್ಧರಿಸಲಾಗಿದೆ” ಎಂದು ಅವರು ಹೇಳಿದರು.

ಚುನಾಯಿತ ಪ್ರತಿನಿಧಿಗಳು ಸೇರಿದಂತೆ 30,000ಕ್ಕೂ ಹೆಚ್ಚು ಮ್ಯಾನ್ಮಾರ್ ಪ್ರಜೆಗಳು ಮಿಜೋರಾಂನಲ್ಲಿ ಆಶ್ರಯ ಪಡೆದಿದ್ದಾರೆ ಎಂದು ಅಂದಾಜಿಸಲಾಗಿದೆ. ಅವರು ಸಮುದಾಯ ಭವನಗಳು, ತಾತ್ಕಾಲಿಕ ಶಿಬಿರಗಳು, ಚರ್ಚ್‌ಗಳು ಮತ್ತು ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿದ್ದಾರೆ.

ಮಣಿಪುರ ಸರ್ಕಾರದ ವಿನಂತಿಯ ಮೇರೆಗೆ ಬಯೋಮೆಟ್ರಿಕ್ಸ್ ಸಂಗ್ರಹದ ಗಡುವನ್ನು ಗೃಹ ಸಚಿವಾಲಯವು ಮಾರ್ಚ್ 2024ಕ್ಕೆ ವಿಸ್ತರಿಸಿದೆ.

ಮಣಿಪುರವು ಜುಲೈ 29ರಂದು ಈ ಪ್ರಕ್ರಿಯೆಯನ್ನು ಆರಂಭಿಸಿತು, ಆದರೆ ಕುಕಿ ಮತ್ತು ಮೈತಿ ಸಮುದಾಯಗಳ ನಡುವೆ ನಡೆಯುತ್ತಿರುವ ಹಿಂಸಾಚಾರದ ಕಾರಣ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರು ಒಂದು ವರ್ಷದವರೆಗೆ ವಿಸ್ತರಣೆಯನ್ನು ಕೋರಿದರು. ಗೃಹ ಸಚಿವಾಲಯವು ಆರು ತಿಂಗಳ ವಿಸ್ತರಣೆಯನ್ನು ನೀಡಿತು, ಮಾರ್ಚ್ 31, 2024ರೊಳಗೆ ಪ್ರಕ್ರಿಯೆ ಪೂರ್ಣಗೊಳಿಸಲು ಮಣಿಪುರ ಸರ್ಕಾರವನ್ನು ಕೇಳಿದೆ.

ಇದನ್ನೂ ಓದಿ: ಮಣಿಪುರ: ಸಿಎಂ ಕುಟುಂಬದ ಮನೆ ಮೇಲೆ ದಾಳಿಗೆ ಯತ್ನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...