Homeಮುಖಪುಟಮುಖ್ಯಮಂತ್ರಿಯಾದ ದಿನದಂದೆ ಪ್ರಮುಖ ಐದು ಯೋಜನೆಗಳಿಗೆ ಸಹಿ ಹಾಕಿದ ಎಂಕೆ ಸ್ಟಾಲಿನ್!

ಮುಖ್ಯಮಂತ್ರಿಯಾದ ದಿನದಂದೆ ಪ್ರಮುಖ ಐದು ಯೋಜನೆಗಳಿಗೆ ಸಹಿ ಹಾಕಿದ ಎಂಕೆ ಸ್ಟಾಲಿನ್!

ಐದು ಯೋಜನೆಗಳಲ್ಲಿ ನಾಲ್ಕು ಚುನಾವಣಾ ಸಮಯಲ್ಲಿ ನೀಡಿದ್ದ ಭರವಸೆಗಳಾಗಿದೆ.

- Advertisement -
- Advertisement -

ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿದ ದಿನದಂದೆ ಎಂ.ಕೆ. ಸ್ಟಾಲಿನ್ ಅವರು, ಪಡಿತರ ಚೀಟಿದಾರರಿಗೆ ನಗದು ರೂಪದಲ್ಲಿ ಕೊರೊನಾ ಪರಿಹಾರ ಸೇರಿದಂತೆ ಐದು ಪ್ರಮುಖ ಯೋಜನೆಗಳಿಗೆ ಶುಕ್ರವಾರ ಸಹಿ ಹಾಕಿದ್ದಾರೆ.

4,153.39 ಕೋಟಿ ರೂ.ಗಳ ವೆಚ್ಚದಲ್ಲಿ ರಾಜ್ಯದ ಎಲ್ಲಾ ಪಡಿತರ ಚೀಟಿದಾರರಿಗೆ ಮೊದಲ ಹಂತದಲ್ಲಿ 2,000 ರೂ. ಕೊರೊನಾ ಪರಿಹಾರವಾಗಿ ನೀಡಲಾಗುವುದು ಎಂದು ಪ್ರಕಟಣೆಗಳು ತಿಳಿಸಿವೆ. ಇದರಿಂದಾಗಿ ಒಟ್ಟು 2.07 ಕೋಟಿ ಪಡಿತರ ಕಾರ್ಡುದಾರರಿಗೆ ಅನುಕೂಲವಾಗಲಿದೆ.

ಇದನ್ನೂ ಓದಿ: ರಾಜ್ಯಕ್ಕೆ ಆಮ್ಲಜನಕ ನೀಡುವಂತೆ ಕೇಂದ್ರಕ್ಕೆ ಸುಪ್ರೀಂಕೋರ್ಟ್ ಆದೇಶ- ’ಬೆಡ್’ ವಿಚಾರದಲ್ಲೇ ಇರುವ BJP ಸಂಸದರು!

ಸಾರ್ವಜನಿಕರಿಗೆ ದೈನಂದಿನ ಖರ್ಚಿನಲ್ಲಿನ ಉಳಿತಾಯ ಮಾಡುವಂತಾಗಲು, ಸರ್ಕಾರಿ ಡೈರಿಯಾದ ‘ಅವಿನ್’ ಹಾಲಿನ ಬೆಲೆಯನ್ನು ಪ್ರತಿ ಲೀಟರ್‌ಗೆ ಮೂರು ರೂಗಳನ್ನು ಇಳಿಸಿದ್ದಾರೆ. ಇದು ಮೇ 16 ರಿಂದ ಜಾರಿಗೆ ಬರಲಿದೆ.

ಮಹಿಳಾ ಕಲ್ಯಾಣ ಕುರಿತ ಮತ್ತೊಂದು ಚುನಾವಣಾ ಪ್ರಣಾಳಿಕೆಯ ಭರವಸೆಯನ್ನು ಈಡೇರಿಸುವ ಹೆಜ್ಜೆಯಾಗಿ, “ದುಡಿಯುವ ಮಹಿಳೆಯರು ಮತ್ತು ಶಾಲಾ-ಕಾಲೇಜಿಗೆ ಹೋಗುವ ಬಾಲಕಿಯರಿಗೆ ಮೇ 8 ರಿಂದ ಸಾಮಾನ್ಯ ಶುಲ್ಕ ಬಸ್ಸುಗಳಲ್ಲಿ ಮತ್ತು ಸಾರ್ವಜನಿಕ ಸಾರಿಗೆ ಬಸ್‌ಗಳಲ್ಲಿ ನಗರಗಳ ನಡುವೆ ಉಚಿತ ಪ್ರಯಾಣವನ್ನು ಘೋಷಿಸಲಾಗಿದೆ”

ಮತ್ತೊಂದು ಮಹತ್ವದ ಘೋಷಣೆಯಲ್ಲಿ, ಎಂಕೆ ಸ್ಟಾಲಿನ್ ಅವರು, ಮುಖ್ಯಮಂತ್ರಿಗಳ ವಿಮಾ ಯೋಜನೆಯಡಿ ಕೊರೊನಾ ವೈರಸ್‌ನಿಂದಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ವೈದ್ಯಕೀಯ ಬಿಲ್‌ಗಳನ್ನು ರಾಜ್ಯ ಸರ್ಕಾರವು ಭರಿಸಲಿದೆ ಎಂದು ಘೋಷಿಸಿದ್ದಾರೆ.

ಇದನ್ನೂ ಓದಿ: ಸಂಸ್ಕಾರಕ್ಕೆ ಬರುವವರಿಗೆ ಉಚಿತ ಟಿ,ಕಾಫಿ ನೀಡುತ್ತೇವೆಂದು ನಗುಮುಖದ ಫ್ಲೆಕ್ಸ್‌; ಕನಿಷ್ಠ ಸಂವೇದನೆ ಮರೆತ BJP

ತಮ್ಮ ಚುನಾವಣಾ ಪ್ರಚಾರದ ಸಮಯದಲ್ಲಿ ಲಕ್ಷಾಂತರ ಅರ್ಜಿಗಳನ್ನು ನೀಡಿದ ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸಲು ಪ್ರತ್ಯೇಕ ಇಲಾಖೆಯನ್ನು ರಚಿಸುವುದಾಗಿ ಅವರು ಘೋಷಿಸಿದ್ದಾರೆ. ಈ ಅರ್ಜಿಗಳನ್ನು 100 ದಿನಗಳಲ್ಲಿ ಪರಿಹರಿಸಲು ಇಲಾಖೆ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ಇಂದು ಘೋಷಣೆಯಾಗಿರುವ ಒಟ್ಟು ಐದು ಯೋಜನೆಗಳಲ್ಲಿ ವೈರಸ್ ರೋಗಿಗಳ ವೈದ್ಯಕೀಯ ಬಿಲ್‌ಗಳನ್ನು ಪಾವತಿಸುವುದರ ಹೊರತುಪಡಿಸಿ, ಇತರ ನಾಲ್ಕು ಯೋಜನೆಗಳು ಡಿಎಂಕೆಯ ಚುನಾವಣಾ ಪ್ರಣಾಳಿಕೆಯ ಭರವಸೆಗಳಾಗಿವೆ.

ಎಂ.ಕೆ ಸ್ವಾಲಿನ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿ ತಮ್ಮ ಕಚೇರಿಗೆ ಬರುವ ಮೊದಲು, ತಮಿಳುನಾಡಿನ ಮಾಜಿ ಮುಖ್ಯಮಂತ್ರಿಗಳು, ಡಿಎಂಕೆಯ ಹಿರಿಯ ನಾಯಕರುಗಳೂ ಆದ ಸಿ.ಎನ್.ಅಣ್ಣಾದೊರೈ ಮತ್ತು ಎಂ. ಕರುಣಾನಿಧಿ ಅವರ ಸ್ಮಾರಕಗಳಿಗೆ ಭೇಟಿ ನೀಡಿ ಹೂವಿನ ಗೌರವ ಸಲ್ಲಿಸಿದರು. ಸಾಮಾಜಿಕ ಸುಧಾರಕ ‘ಪೆರಿಯಾರ್’ ಅವರಿಗೂ ಗೌರವ ಸಲ್ಲಿಸಿದರು.

ಇದನ್ನೂ ಓದಿ: ಬೆಂಬಲಿಗರನ್ನು ಸೆಳೆಯಲು ‘ಪಾಕಿಸ್ತಾನಿ’ ಯುವತಿಯ ಫೋಟೊ ಬಳಸುತ್ತಿರುವ BJP ಐಟಿ ಸೆಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...