Homeಮುಖಪುಟಮುಖ್ಯಮಂತ್ರಿಯಾದ ದಿನದಂದೆ ಪ್ರಮುಖ ಐದು ಯೋಜನೆಗಳಿಗೆ ಸಹಿ ಹಾಕಿದ ಎಂಕೆ ಸ್ಟಾಲಿನ್!

ಮುಖ್ಯಮಂತ್ರಿಯಾದ ದಿನದಂದೆ ಪ್ರಮುಖ ಐದು ಯೋಜನೆಗಳಿಗೆ ಸಹಿ ಹಾಕಿದ ಎಂಕೆ ಸ್ಟಾಲಿನ್!

ಐದು ಯೋಜನೆಗಳಲ್ಲಿ ನಾಲ್ಕು ಚುನಾವಣಾ ಸಮಯಲ್ಲಿ ನೀಡಿದ್ದ ಭರವಸೆಗಳಾಗಿದೆ.

- Advertisement -
- Advertisement -

ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿದ ದಿನದಂದೆ ಎಂ.ಕೆ. ಸ್ಟಾಲಿನ್ ಅವರು, ಪಡಿತರ ಚೀಟಿದಾರರಿಗೆ ನಗದು ರೂಪದಲ್ಲಿ ಕೊರೊನಾ ಪರಿಹಾರ ಸೇರಿದಂತೆ ಐದು ಪ್ರಮುಖ ಯೋಜನೆಗಳಿಗೆ ಶುಕ್ರವಾರ ಸಹಿ ಹಾಕಿದ್ದಾರೆ.

4,153.39 ಕೋಟಿ ರೂ.ಗಳ ವೆಚ್ಚದಲ್ಲಿ ರಾಜ್ಯದ ಎಲ್ಲಾ ಪಡಿತರ ಚೀಟಿದಾರರಿಗೆ ಮೊದಲ ಹಂತದಲ್ಲಿ 2,000 ರೂ. ಕೊರೊನಾ ಪರಿಹಾರವಾಗಿ ನೀಡಲಾಗುವುದು ಎಂದು ಪ್ರಕಟಣೆಗಳು ತಿಳಿಸಿವೆ. ಇದರಿಂದಾಗಿ ಒಟ್ಟು 2.07 ಕೋಟಿ ಪಡಿತರ ಕಾರ್ಡುದಾರರಿಗೆ ಅನುಕೂಲವಾಗಲಿದೆ.

ಇದನ್ನೂ ಓದಿ: ರಾಜ್ಯಕ್ಕೆ ಆಮ್ಲಜನಕ ನೀಡುವಂತೆ ಕೇಂದ್ರಕ್ಕೆ ಸುಪ್ರೀಂಕೋರ್ಟ್ ಆದೇಶ- ’ಬೆಡ್’ ವಿಚಾರದಲ್ಲೇ ಇರುವ BJP ಸಂಸದರು!

ಸಾರ್ವಜನಿಕರಿಗೆ ದೈನಂದಿನ ಖರ್ಚಿನಲ್ಲಿನ ಉಳಿತಾಯ ಮಾಡುವಂತಾಗಲು, ಸರ್ಕಾರಿ ಡೈರಿಯಾದ ‘ಅವಿನ್’ ಹಾಲಿನ ಬೆಲೆಯನ್ನು ಪ್ರತಿ ಲೀಟರ್‌ಗೆ ಮೂರು ರೂಗಳನ್ನು ಇಳಿಸಿದ್ದಾರೆ. ಇದು ಮೇ 16 ರಿಂದ ಜಾರಿಗೆ ಬರಲಿದೆ.

ಮಹಿಳಾ ಕಲ್ಯಾಣ ಕುರಿತ ಮತ್ತೊಂದು ಚುನಾವಣಾ ಪ್ರಣಾಳಿಕೆಯ ಭರವಸೆಯನ್ನು ಈಡೇರಿಸುವ ಹೆಜ್ಜೆಯಾಗಿ, “ದುಡಿಯುವ ಮಹಿಳೆಯರು ಮತ್ತು ಶಾಲಾ-ಕಾಲೇಜಿಗೆ ಹೋಗುವ ಬಾಲಕಿಯರಿಗೆ ಮೇ 8 ರಿಂದ ಸಾಮಾನ್ಯ ಶುಲ್ಕ ಬಸ್ಸುಗಳಲ್ಲಿ ಮತ್ತು ಸಾರ್ವಜನಿಕ ಸಾರಿಗೆ ಬಸ್‌ಗಳಲ್ಲಿ ನಗರಗಳ ನಡುವೆ ಉಚಿತ ಪ್ರಯಾಣವನ್ನು ಘೋಷಿಸಲಾಗಿದೆ”

ಮತ್ತೊಂದು ಮಹತ್ವದ ಘೋಷಣೆಯಲ್ಲಿ, ಎಂಕೆ ಸ್ಟಾಲಿನ್ ಅವರು, ಮುಖ್ಯಮಂತ್ರಿಗಳ ವಿಮಾ ಯೋಜನೆಯಡಿ ಕೊರೊನಾ ವೈರಸ್‌ನಿಂದಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ವೈದ್ಯಕೀಯ ಬಿಲ್‌ಗಳನ್ನು ರಾಜ್ಯ ಸರ್ಕಾರವು ಭರಿಸಲಿದೆ ಎಂದು ಘೋಷಿಸಿದ್ದಾರೆ.

ಇದನ್ನೂ ಓದಿ: ಸಂಸ್ಕಾರಕ್ಕೆ ಬರುವವರಿಗೆ ಉಚಿತ ಟಿ,ಕಾಫಿ ನೀಡುತ್ತೇವೆಂದು ನಗುಮುಖದ ಫ್ಲೆಕ್ಸ್‌; ಕನಿಷ್ಠ ಸಂವೇದನೆ ಮರೆತ BJP

ತಮ್ಮ ಚುನಾವಣಾ ಪ್ರಚಾರದ ಸಮಯದಲ್ಲಿ ಲಕ್ಷಾಂತರ ಅರ್ಜಿಗಳನ್ನು ನೀಡಿದ ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸಲು ಪ್ರತ್ಯೇಕ ಇಲಾಖೆಯನ್ನು ರಚಿಸುವುದಾಗಿ ಅವರು ಘೋಷಿಸಿದ್ದಾರೆ. ಈ ಅರ್ಜಿಗಳನ್ನು 100 ದಿನಗಳಲ್ಲಿ ಪರಿಹರಿಸಲು ಇಲಾಖೆ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ಇಂದು ಘೋಷಣೆಯಾಗಿರುವ ಒಟ್ಟು ಐದು ಯೋಜನೆಗಳಲ್ಲಿ ವೈರಸ್ ರೋಗಿಗಳ ವೈದ್ಯಕೀಯ ಬಿಲ್‌ಗಳನ್ನು ಪಾವತಿಸುವುದರ ಹೊರತುಪಡಿಸಿ, ಇತರ ನಾಲ್ಕು ಯೋಜನೆಗಳು ಡಿಎಂಕೆಯ ಚುನಾವಣಾ ಪ್ರಣಾಳಿಕೆಯ ಭರವಸೆಗಳಾಗಿವೆ.

ಎಂ.ಕೆ ಸ್ವಾಲಿನ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿ ತಮ್ಮ ಕಚೇರಿಗೆ ಬರುವ ಮೊದಲು, ತಮಿಳುನಾಡಿನ ಮಾಜಿ ಮುಖ್ಯಮಂತ್ರಿಗಳು, ಡಿಎಂಕೆಯ ಹಿರಿಯ ನಾಯಕರುಗಳೂ ಆದ ಸಿ.ಎನ್.ಅಣ್ಣಾದೊರೈ ಮತ್ತು ಎಂ. ಕರುಣಾನಿಧಿ ಅವರ ಸ್ಮಾರಕಗಳಿಗೆ ಭೇಟಿ ನೀಡಿ ಹೂವಿನ ಗೌರವ ಸಲ್ಲಿಸಿದರು. ಸಾಮಾಜಿಕ ಸುಧಾರಕ ‘ಪೆರಿಯಾರ್’ ಅವರಿಗೂ ಗೌರವ ಸಲ್ಲಿಸಿದರು.

ಇದನ್ನೂ ಓದಿ: ಬೆಂಬಲಿಗರನ್ನು ಸೆಳೆಯಲು ‘ಪಾಕಿಸ್ತಾನಿ’ ಯುವತಿಯ ಫೋಟೊ ಬಳಸುತ್ತಿರುವ BJP ಐಟಿ ಸೆಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...