Homeಮುಖಪುಟಅಸ್ಸಾಂ: ನಿರುದ್ಯೋಗದ ಬಗ್ಗೆ ಮಾತನಾಡಿ ಸದನದಿಂದ ಅಮಾನತುಗೊಂಡ ಶಾಸಕ ಅಖಿಲ್ ಗೊಗೊಯ್

ಅಸ್ಸಾಂ: ನಿರುದ್ಯೋಗದ ಬಗ್ಗೆ ಮಾತನಾಡಿ ಸದನದಿಂದ ಅಮಾನತುಗೊಂಡ ಶಾಸಕ ಅಖಿಲ್ ಗೊಗೊಯ್

- Advertisement -
- Advertisement -

ಅಸ್ಸಾಂ ವಿಧಾನಸಭೆಯ ಬಜೆಟ್ ಅಧಿವೇಶನದ ಮೊದಲ ದಿನದಂದು ರಾಜ್ಯಪಾಲ ಜಗದೀಶ್ ಮುಖಿ ಭಾಷಣದ ವೇಳೆ ಬಿಜೆಪಿ ಸರ್ಕಾರವು ಭರವಸೆ ನೀಡಿದಂತೆ ಒಂದು ಲಕ್ಷ ಯುವಕರಿಗೆ ಉದ್ಯೋಗ ನೀಡದ ಕುರಿತು ಪದೇ ಪದೇ ಪ್ರಸ್ತಾಪಿಸಿದ್ದಕ್ಕಾಗಿ ಸ್ವತಂತ್ರ ಶಾಸಕ, ರೈತ ಹೋರಾಟಗಾರ ಅಖಿಲ್ ಗೊಗೊಯ್ ಅವರನ್ನು ಸೋಮವಾರ ಸದನದಿಂದ ಅಮಾನತುಗೊಳಿಸಲಾಗಿದೆ.

ಸ್ಪೀಕರ್ ಬಿಸ್ವಜಿತ್ ಡೈಮರಿ ಅವರು ರಾಜ್ಯಪಾಲರ ಭಾಷಣದ ಅವಧಿಗೆ ಸದನದಿಂದ ಹೊರಹೋಗುವಂತೆ ಅಖಿಲ್ ಗೊಗೊಯ್ ಅವರನ್ನು ಅಮಾನತುಗೊಳಿಸಿದ್ದರು.

ಅಮಾನತುಗೊಳಿಸಿದರು ಸದನದಿಂದ ಹೊರಹೋಗದ ಹೋರಾಟಗಾರ ಅಖಿಲ್ ಗೊಗೊಯ್ ಅವರು ಭಿತ್ತಿಫಲಕ ತೋರಿಸಿ ಪ್ರತಿಭಟನೆ ಮುಂದುವರೆಸಿದ್ದರು. ಇದರಿಂದ ಮಾರ್ಷಲ್‌ಗಳು ಅವರನ್ನು ಹೊರಗೆ ಎಳೆದೊಯ್ದರು. ರಾಜ್ಯಪಾಲರು ತಮ್ಮ 38 ಪುಟಗಳ ಭಾಷಣವನ್ನು ಓದುವುದನ್ನು ಮುಂದುವರಿಸಿದ್ದರು.

ಇದನ್ನೂ ಓದಿ: ಸಿಎಎ ವಿರೋಧಿ ಹೋರಾಟಗಾರ ಅಖಿಲ್ ಗೊಗೊಯ್‌‌ ವಿರುದ್ದದ ಪ್ರಕರಣ ಖುಲಾಸೆಗೊಳಿಸಿದ ಕೋರ್ಟ್‌

ರಾಜ್ಯಪಾಲ ಜಗದೀಶ್ ಮುಖಿ, “ಚುನಾವಣೆಯ ಪ್ರಮುಖ ಭರವಸೆಗಳಲ್ಲಿ ಒಂದಾದ, ನಮ್ಮ ಯುವಕರಿಗೆ ಒಂದು ಲಕ್ಷ ಉದ್ಯೋಗಗಳನ್ನು ಒದಗಿಸುವ ಪ್ರಕ್ರಿಯೆಯನ್ನು ಸರ್ಕಾರವು ಪ್ರಾರಂಭಿಸಿದೆ. ವಿವಿಧ ಹುದ್ದೆಗಳಲ್ಲಿ ಯುವಕರನ್ನು ನೇಮಿಸಿಕೊಳ್ಳಲು ರಾಜ್ಯ ಸರ್ಕಾರ ಕೈಗೊಳ್ಳುತ್ತಿರುವ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ” ಎಂದು ಪ್ರಸ್ತಾಪಿಸಿದ್ದರು.

ಯುವಕರಿಗೆ ಒಂದು ಲಕ್ಷ ಉದ್ಯೋಗದ ಹೊರತಾಗಿಯೂ ಶಾಸಕ ಗೊಗೋಯ್, ರಾಜ್ಯಪಾಲರ ಭಾಷಣದ ವೇಳೆ ರೈತರಿಂದ ಭತ್ತ ಖರೀದಿ, ಸ್ಥಳೀಯರಿಗೆ ಭೂಮಿಯ ಹಕ್ಕು ಮತ್ತು ನೀರು ಸರಬರಾಜು ಯೋಜನೆಯಲ್ಲಿನ ಭ್ರಷ್ಟಾಚಾರದಂತಹ ಇತರ ಸಮಸ್ಯೆಗಳನ್ನು ಪ್ರಸ್ತಾಪಿಸಲು ಪ್ರಯತ್ನಿಸಿದ್ದರು.

ಹೀಗೆ ಪ್ರತಿ ಬಾರಿಯೂ ರಾಜ್ಯಪಾಲರ ಭಾಷಣಕ್ಕೆ ಅಡ್ಡಿಪಡಿಸಬೇಡಿ ಎಂದು ಸಭಾಧ್ಯಕ್ಷರು ಮನವಿ ಮಾಡಿದ ನಂತರ ಅಖಿಲ್ ಗೊಗೊಯ್ ಕುಳಿತುಕೊಳ್ಳುತ್ತಿದ್ದರು. ಹೀಗಗಾಗಿ ಅವರನ್ನು ಅಮಾನತು ಮಾಡಲಾಗಿತ್ತು. ರಾಜ್ಯಪಾಲ ಜಗದೀಶ್ ಮುಖಿ ಭಾಷಣದ ನಂತರ ಸದನ ಮರು ಸ್ಥಾಪಿತವಾದ ತಕ್ಷಣ ಸ್ಪೀಕರ್, ಗೊಗೊಯ್ ಅವರ ಅಮಾನತು ರದ್ದುಗೊಳಿಸಿದ್ದಾರೆ.

ರೈತ ಹಕ್ಕುಗಳ ಹೋರಾಟಗಾರರ ಸಮೂಹವಾದ ಕೃಷಿಕ್ ಮುಕ್ತಿ ಸಂಗ್ರಾಮ್ ಸಮಿತಿ (ಕೆಎಂಎಸ್ಎಸ್)ಯಲ್ಲಿ ಅಖಿಲ್ ಗೊಗೋಯ್ ತೊಡಗಿಸಿಕೊಂಡಿದ್ದರು. ಸಿಎಎ ಹೋರಾಟದ ಸಮಯದಲ್ಲಿ ದೇಶದ್ರೋಹದ ಪ್ರಕರಣದಲ್ಲಿ ಬಂಧನವಾದ ನಂತರ ಜೈಲಿನಲ್ಲಿದ್ದುಕೊಂಡೇ 2020ರ ಅಕ್ಟೋಬರ್‌ನಲ್ಲಿ ರೈಜೋರ್ ದಳ ಪಕ್ಷವನ್ನು ಸ್ಥಾಪಿಸಿದ್ದರು. ಅವರು ಅದರ ಅಧ್ಯಕ್ಷರಾಗಿದ್ದು, ಮತ್ತೊಬ್ಬ ಹೋರಾಟಗಾರ ಭಾಸ್ಕೊ ಡಿ ಸೈಕಿಯಾ ಅದರ ಕಾರ್ಯಕಾರಿ ಅಧ್ಯಕ್ಷರಾಗಿದ್ದಾರೆ. ಜೈಲಿನಲ್ಲಿದ್ದುಕೊಂಡೆ ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಸಿಬ್ಸಾಗರ್‌ ಕ್ಷೇತ್ರದಿಂದ ಗೊಗೊಯ್ ಜಯ ಗಳಿಸಿದ್ದರು.


ಇದನ್ನೂ ಓದಿ: ಅಸ್ಸಾಂ ಚುನಾವಣೆ: ಜೈಲಿನಲ್ಲಿದ್ದುಕೊಂಡೇ ಜಯಗಳಿಸಿದ ಹೋರಾಟಗಾರ ಅಖಿಲ್ ಗೊಗೊಯ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...