Homeಮುಖಪುಟಅಸ್ಸಾಂ: ನಿರುದ್ಯೋಗದ ಬಗ್ಗೆ ಮಾತನಾಡಿ ಸದನದಿಂದ ಅಮಾನತುಗೊಂಡ ಶಾಸಕ ಅಖಿಲ್ ಗೊಗೊಯ್

ಅಸ್ಸಾಂ: ನಿರುದ್ಯೋಗದ ಬಗ್ಗೆ ಮಾತನಾಡಿ ಸದನದಿಂದ ಅಮಾನತುಗೊಂಡ ಶಾಸಕ ಅಖಿಲ್ ಗೊಗೊಯ್

- Advertisement -
- Advertisement -

ಅಸ್ಸಾಂ ವಿಧಾನಸಭೆಯ ಬಜೆಟ್ ಅಧಿವೇಶನದ ಮೊದಲ ದಿನದಂದು ರಾಜ್ಯಪಾಲ ಜಗದೀಶ್ ಮುಖಿ ಭಾಷಣದ ವೇಳೆ ಬಿಜೆಪಿ ಸರ್ಕಾರವು ಭರವಸೆ ನೀಡಿದಂತೆ ಒಂದು ಲಕ್ಷ ಯುವಕರಿಗೆ ಉದ್ಯೋಗ ನೀಡದ ಕುರಿತು ಪದೇ ಪದೇ ಪ್ರಸ್ತಾಪಿಸಿದ್ದಕ್ಕಾಗಿ ಸ್ವತಂತ್ರ ಶಾಸಕ, ರೈತ ಹೋರಾಟಗಾರ ಅಖಿಲ್ ಗೊಗೊಯ್ ಅವರನ್ನು ಸೋಮವಾರ ಸದನದಿಂದ ಅಮಾನತುಗೊಳಿಸಲಾಗಿದೆ.

ಸ್ಪೀಕರ್ ಬಿಸ್ವಜಿತ್ ಡೈಮರಿ ಅವರು ರಾಜ್ಯಪಾಲರ ಭಾಷಣದ ಅವಧಿಗೆ ಸದನದಿಂದ ಹೊರಹೋಗುವಂತೆ ಅಖಿಲ್ ಗೊಗೊಯ್ ಅವರನ್ನು ಅಮಾನತುಗೊಳಿಸಿದ್ದರು.

ಅಮಾನತುಗೊಳಿಸಿದರು ಸದನದಿಂದ ಹೊರಹೋಗದ ಹೋರಾಟಗಾರ ಅಖಿಲ್ ಗೊಗೊಯ್ ಅವರು ಭಿತ್ತಿಫಲಕ ತೋರಿಸಿ ಪ್ರತಿಭಟನೆ ಮುಂದುವರೆಸಿದ್ದರು. ಇದರಿಂದ ಮಾರ್ಷಲ್‌ಗಳು ಅವರನ್ನು ಹೊರಗೆ ಎಳೆದೊಯ್ದರು. ರಾಜ್ಯಪಾಲರು ತಮ್ಮ 38 ಪುಟಗಳ ಭಾಷಣವನ್ನು ಓದುವುದನ್ನು ಮುಂದುವರಿಸಿದ್ದರು.

ಇದನ್ನೂ ಓದಿ: ಸಿಎಎ ವಿರೋಧಿ ಹೋರಾಟಗಾರ ಅಖಿಲ್ ಗೊಗೊಯ್‌‌ ವಿರುದ್ದದ ಪ್ರಕರಣ ಖುಲಾಸೆಗೊಳಿಸಿದ ಕೋರ್ಟ್‌

ರಾಜ್ಯಪಾಲ ಜಗದೀಶ್ ಮುಖಿ, “ಚುನಾವಣೆಯ ಪ್ರಮುಖ ಭರವಸೆಗಳಲ್ಲಿ ಒಂದಾದ, ನಮ್ಮ ಯುವಕರಿಗೆ ಒಂದು ಲಕ್ಷ ಉದ್ಯೋಗಗಳನ್ನು ಒದಗಿಸುವ ಪ್ರಕ್ರಿಯೆಯನ್ನು ಸರ್ಕಾರವು ಪ್ರಾರಂಭಿಸಿದೆ. ವಿವಿಧ ಹುದ್ದೆಗಳಲ್ಲಿ ಯುವಕರನ್ನು ನೇಮಿಸಿಕೊಳ್ಳಲು ರಾಜ್ಯ ಸರ್ಕಾರ ಕೈಗೊಳ್ಳುತ್ತಿರುವ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ” ಎಂದು ಪ್ರಸ್ತಾಪಿಸಿದ್ದರು.

ಯುವಕರಿಗೆ ಒಂದು ಲಕ್ಷ ಉದ್ಯೋಗದ ಹೊರತಾಗಿಯೂ ಶಾಸಕ ಗೊಗೋಯ್, ರಾಜ್ಯಪಾಲರ ಭಾಷಣದ ವೇಳೆ ರೈತರಿಂದ ಭತ್ತ ಖರೀದಿ, ಸ್ಥಳೀಯರಿಗೆ ಭೂಮಿಯ ಹಕ್ಕು ಮತ್ತು ನೀರು ಸರಬರಾಜು ಯೋಜನೆಯಲ್ಲಿನ ಭ್ರಷ್ಟಾಚಾರದಂತಹ ಇತರ ಸಮಸ್ಯೆಗಳನ್ನು ಪ್ರಸ್ತಾಪಿಸಲು ಪ್ರಯತ್ನಿಸಿದ್ದರು.

ಹೀಗೆ ಪ್ರತಿ ಬಾರಿಯೂ ರಾಜ್ಯಪಾಲರ ಭಾಷಣಕ್ಕೆ ಅಡ್ಡಿಪಡಿಸಬೇಡಿ ಎಂದು ಸಭಾಧ್ಯಕ್ಷರು ಮನವಿ ಮಾಡಿದ ನಂತರ ಅಖಿಲ್ ಗೊಗೊಯ್ ಕುಳಿತುಕೊಳ್ಳುತ್ತಿದ್ದರು. ಹೀಗಗಾಗಿ ಅವರನ್ನು ಅಮಾನತು ಮಾಡಲಾಗಿತ್ತು. ರಾಜ್ಯಪಾಲ ಜಗದೀಶ್ ಮುಖಿ ಭಾಷಣದ ನಂತರ ಸದನ ಮರು ಸ್ಥಾಪಿತವಾದ ತಕ್ಷಣ ಸ್ಪೀಕರ್, ಗೊಗೊಯ್ ಅವರ ಅಮಾನತು ರದ್ದುಗೊಳಿಸಿದ್ದಾರೆ.

ರೈತ ಹಕ್ಕುಗಳ ಹೋರಾಟಗಾರರ ಸಮೂಹವಾದ ಕೃಷಿಕ್ ಮುಕ್ತಿ ಸಂಗ್ರಾಮ್ ಸಮಿತಿ (ಕೆಎಂಎಸ್ಎಸ್)ಯಲ್ಲಿ ಅಖಿಲ್ ಗೊಗೋಯ್ ತೊಡಗಿಸಿಕೊಂಡಿದ್ದರು. ಸಿಎಎ ಹೋರಾಟದ ಸಮಯದಲ್ಲಿ ದೇಶದ್ರೋಹದ ಪ್ರಕರಣದಲ್ಲಿ ಬಂಧನವಾದ ನಂತರ ಜೈಲಿನಲ್ಲಿದ್ದುಕೊಂಡೇ 2020ರ ಅಕ್ಟೋಬರ್‌ನಲ್ಲಿ ರೈಜೋರ್ ದಳ ಪಕ್ಷವನ್ನು ಸ್ಥಾಪಿಸಿದ್ದರು. ಅವರು ಅದರ ಅಧ್ಯಕ್ಷರಾಗಿದ್ದು, ಮತ್ತೊಬ್ಬ ಹೋರಾಟಗಾರ ಭಾಸ್ಕೊ ಡಿ ಸೈಕಿಯಾ ಅದರ ಕಾರ್ಯಕಾರಿ ಅಧ್ಯಕ್ಷರಾಗಿದ್ದಾರೆ. ಜೈಲಿನಲ್ಲಿದ್ದುಕೊಂಡೆ ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಸಿಬ್ಸಾಗರ್‌ ಕ್ಷೇತ್ರದಿಂದ ಗೊಗೊಯ್ ಜಯ ಗಳಿಸಿದ್ದರು.


ಇದನ್ನೂ ಓದಿ: ಅಸ್ಸಾಂ ಚುನಾವಣೆ: ಜೈಲಿನಲ್ಲಿದ್ದುಕೊಂಡೇ ಜಯಗಳಿಸಿದ ಹೋರಾಟಗಾರ ಅಖಿಲ್ ಗೊಗೊಯ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...