Homeಮುಖಪುಟಅಸ್ಸಾಂ: ನಿರುದ್ಯೋಗದ ಬಗ್ಗೆ ಮಾತನಾಡಿ ಸದನದಿಂದ ಅಮಾನತುಗೊಂಡ ಶಾಸಕ ಅಖಿಲ್ ಗೊಗೊಯ್

ಅಸ್ಸಾಂ: ನಿರುದ್ಯೋಗದ ಬಗ್ಗೆ ಮಾತನಾಡಿ ಸದನದಿಂದ ಅಮಾನತುಗೊಂಡ ಶಾಸಕ ಅಖಿಲ್ ಗೊಗೊಯ್

- Advertisement -
- Advertisement -

ಅಸ್ಸಾಂ ವಿಧಾನಸಭೆಯ ಬಜೆಟ್ ಅಧಿವೇಶನದ ಮೊದಲ ದಿನದಂದು ರಾಜ್ಯಪಾಲ ಜಗದೀಶ್ ಮುಖಿ ಭಾಷಣದ ವೇಳೆ ಬಿಜೆಪಿ ಸರ್ಕಾರವು ಭರವಸೆ ನೀಡಿದಂತೆ ಒಂದು ಲಕ್ಷ ಯುವಕರಿಗೆ ಉದ್ಯೋಗ ನೀಡದ ಕುರಿತು ಪದೇ ಪದೇ ಪ್ರಸ್ತಾಪಿಸಿದ್ದಕ್ಕಾಗಿ ಸ್ವತಂತ್ರ ಶಾಸಕ, ರೈತ ಹೋರಾಟಗಾರ ಅಖಿಲ್ ಗೊಗೊಯ್ ಅವರನ್ನು ಸೋಮವಾರ ಸದನದಿಂದ ಅಮಾನತುಗೊಳಿಸಲಾಗಿದೆ.

ಸ್ಪೀಕರ್ ಬಿಸ್ವಜಿತ್ ಡೈಮರಿ ಅವರು ರಾಜ್ಯಪಾಲರ ಭಾಷಣದ ಅವಧಿಗೆ ಸದನದಿಂದ ಹೊರಹೋಗುವಂತೆ ಅಖಿಲ್ ಗೊಗೊಯ್ ಅವರನ್ನು ಅಮಾನತುಗೊಳಿಸಿದ್ದರು.

ಅಮಾನತುಗೊಳಿಸಿದರು ಸದನದಿಂದ ಹೊರಹೋಗದ ಹೋರಾಟಗಾರ ಅಖಿಲ್ ಗೊಗೊಯ್ ಅವರು ಭಿತ್ತಿಫಲಕ ತೋರಿಸಿ ಪ್ರತಿಭಟನೆ ಮುಂದುವರೆಸಿದ್ದರು. ಇದರಿಂದ ಮಾರ್ಷಲ್‌ಗಳು ಅವರನ್ನು ಹೊರಗೆ ಎಳೆದೊಯ್ದರು. ರಾಜ್ಯಪಾಲರು ತಮ್ಮ 38 ಪುಟಗಳ ಭಾಷಣವನ್ನು ಓದುವುದನ್ನು ಮುಂದುವರಿಸಿದ್ದರು.

ಇದನ್ನೂ ಓದಿ: ಸಿಎಎ ವಿರೋಧಿ ಹೋರಾಟಗಾರ ಅಖಿಲ್ ಗೊಗೊಯ್‌‌ ವಿರುದ್ದದ ಪ್ರಕರಣ ಖುಲಾಸೆಗೊಳಿಸಿದ ಕೋರ್ಟ್‌

ರಾಜ್ಯಪಾಲ ಜಗದೀಶ್ ಮುಖಿ, “ಚುನಾವಣೆಯ ಪ್ರಮುಖ ಭರವಸೆಗಳಲ್ಲಿ ಒಂದಾದ, ನಮ್ಮ ಯುವಕರಿಗೆ ಒಂದು ಲಕ್ಷ ಉದ್ಯೋಗಗಳನ್ನು ಒದಗಿಸುವ ಪ್ರಕ್ರಿಯೆಯನ್ನು ಸರ್ಕಾರವು ಪ್ರಾರಂಭಿಸಿದೆ. ವಿವಿಧ ಹುದ್ದೆಗಳಲ್ಲಿ ಯುವಕರನ್ನು ನೇಮಿಸಿಕೊಳ್ಳಲು ರಾಜ್ಯ ಸರ್ಕಾರ ಕೈಗೊಳ್ಳುತ್ತಿರುವ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ” ಎಂದು ಪ್ರಸ್ತಾಪಿಸಿದ್ದರು.

ಯುವಕರಿಗೆ ಒಂದು ಲಕ್ಷ ಉದ್ಯೋಗದ ಹೊರತಾಗಿಯೂ ಶಾಸಕ ಗೊಗೋಯ್, ರಾಜ್ಯಪಾಲರ ಭಾಷಣದ ವೇಳೆ ರೈತರಿಂದ ಭತ್ತ ಖರೀದಿ, ಸ್ಥಳೀಯರಿಗೆ ಭೂಮಿಯ ಹಕ್ಕು ಮತ್ತು ನೀರು ಸರಬರಾಜು ಯೋಜನೆಯಲ್ಲಿನ ಭ್ರಷ್ಟಾಚಾರದಂತಹ ಇತರ ಸಮಸ್ಯೆಗಳನ್ನು ಪ್ರಸ್ತಾಪಿಸಲು ಪ್ರಯತ್ನಿಸಿದ್ದರು.

ಹೀಗೆ ಪ್ರತಿ ಬಾರಿಯೂ ರಾಜ್ಯಪಾಲರ ಭಾಷಣಕ್ಕೆ ಅಡ್ಡಿಪಡಿಸಬೇಡಿ ಎಂದು ಸಭಾಧ್ಯಕ್ಷರು ಮನವಿ ಮಾಡಿದ ನಂತರ ಅಖಿಲ್ ಗೊಗೊಯ್ ಕುಳಿತುಕೊಳ್ಳುತ್ತಿದ್ದರು. ಹೀಗಗಾಗಿ ಅವರನ್ನು ಅಮಾನತು ಮಾಡಲಾಗಿತ್ತು. ರಾಜ್ಯಪಾಲ ಜಗದೀಶ್ ಮುಖಿ ಭಾಷಣದ ನಂತರ ಸದನ ಮರು ಸ್ಥಾಪಿತವಾದ ತಕ್ಷಣ ಸ್ಪೀಕರ್, ಗೊಗೊಯ್ ಅವರ ಅಮಾನತು ರದ್ದುಗೊಳಿಸಿದ್ದಾರೆ.

ರೈತ ಹಕ್ಕುಗಳ ಹೋರಾಟಗಾರರ ಸಮೂಹವಾದ ಕೃಷಿಕ್ ಮುಕ್ತಿ ಸಂಗ್ರಾಮ್ ಸಮಿತಿ (ಕೆಎಂಎಸ್ಎಸ್)ಯಲ್ಲಿ ಅಖಿಲ್ ಗೊಗೋಯ್ ತೊಡಗಿಸಿಕೊಂಡಿದ್ದರು. ಸಿಎಎ ಹೋರಾಟದ ಸಮಯದಲ್ಲಿ ದೇಶದ್ರೋಹದ ಪ್ರಕರಣದಲ್ಲಿ ಬಂಧನವಾದ ನಂತರ ಜೈಲಿನಲ್ಲಿದ್ದುಕೊಂಡೇ 2020ರ ಅಕ್ಟೋಬರ್‌ನಲ್ಲಿ ರೈಜೋರ್ ದಳ ಪಕ್ಷವನ್ನು ಸ್ಥಾಪಿಸಿದ್ದರು. ಅವರು ಅದರ ಅಧ್ಯಕ್ಷರಾಗಿದ್ದು, ಮತ್ತೊಬ್ಬ ಹೋರಾಟಗಾರ ಭಾಸ್ಕೊ ಡಿ ಸೈಕಿಯಾ ಅದರ ಕಾರ್ಯಕಾರಿ ಅಧ್ಯಕ್ಷರಾಗಿದ್ದಾರೆ. ಜೈಲಿನಲ್ಲಿದ್ದುಕೊಂಡೆ ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಸಿಬ್ಸಾಗರ್‌ ಕ್ಷೇತ್ರದಿಂದ ಗೊಗೊಯ್ ಜಯ ಗಳಿಸಿದ್ದರು.


ಇದನ್ನೂ ಓದಿ: ಅಸ್ಸಾಂ ಚುನಾವಣೆ: ಜೈಲಿನಲ್ಲಿದ್ದುಕೊಂಡೇ ಜಯಗಳಿಸಿದ ಹೋರಾಟಗಾರ ಅಖಿಲ್ ಗೊಗೊಯ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....