Homeಕರ್ನಾಟಕಆನಂದಸಿಂಗ್ ರಾಜಿನಾಮೆ ಬ್ಲ್ಯಾಕ್‍ಮೇಲ್ ತಂತ್ರವೋ? ಅಸಲಿ ಕಾರಣ ಇದಲ್ಲವೇ?

ಆನಂದಸಿಂಗ್ ರಾಜಿನಾಮೆ ಬ್ಲ್ಯಾಕ್‍ಮೇಲ್ ತಂತ್ರವೋ? ಅಸಲಿ ಕಾರಣ ಇದಲ್ಲವೇ?

ರಾಜ್ಯ ಸರ್ಕಾರದ ಹೊಸ ಮೈನಿಂಗ್ ಲೀಸ್ ನೀತಿಯ ಪ್ರಕಾರ ಫ್ಯಾಕ್ಟರಿ ಇರುವ ಕಂಪನಿಗಳಿಗೆ ಮಾತ್ರ ಲೀಸ್ ನೀಡಲಾಗುವುದು ಎಂಬ ನಿಯಮವಿದೆ ಎನ್ನಲಾಗಿದೆ. ಹೀಗಾದರೆ ಆನಂದಸಿಂಗ್, ಲಾಡ್ ಮುಂತಾದವರಿಗೆ ಹೊಸ ಲೀಸ್ ಸಿಗುವುದು ಅಸಾಧ್ಯ.

- Advertisement -
- Advertisement -

| ಮಲ್ಲನಗೌಡರ್ |

ಇವತ್ತು ಮುಂಜಾನೆಯಿಂದ ಸರ್ಕಾರ ಬೀಳುವ/ ಬೀಳಿಸುವ ಆಟ ಹೊರನೋಟಕ್ಕೆ ಐಪಿಎಲ್ ಮ್ಯಾಚಿನ ಖದರು ಕಳೆಗಟ್ಟಿಕೊಂಡಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅಮೆರಿಕದಲ್ಲಿರುವಾಗ ದಿಢೀರನೆ ರಾಜಿನಾಮೆಯ ಕರಿಮೋಡಗಳು ಕಾಣತೋಡಗಿದ್ದು ಇವು ಮಳೆ ಸುರಿಸುತ್ತವಾ ಅಥವಾ ಎಂದಿನಂತೆ ಹಾಗೆ ಬಂದಂತೆ ಹೀಗೆ ತೇಲಿ ಹೋಗುತ್ತವಾ ಎಂಬ ಪ್ರಶ್ನೆ ಎದ್ದಿದೆ.

ಈ ರಾಜಿನಾಮೆ ಕ್ಲೈಮೇಟಿನಲ್ಲಿ ಎದ್ದು ಹೊಡೆಯುತ್ತಿರುವುದು ಹೊಸಪೇಟೆಯ ಶಾಸಕ ಆಂದ್‍ಸಿಂಗ್ ನಡವಳಿಕೆ. ಅವರೀಗ ಸ್ಪೀಕರ್ ಪಿ.ಎಸ್‍ಗೆ ರಾಜಿನಾಮೆ ಕೊಟ್ಟು ಮಾಧ್ಯಮಗಳ ಎದುರು ಅವರು ಸ್ಪೀಕರ್ ಹೆಸರಲ್ಲಿ ಬರೆದ ರಾಜಿನಾಮೆ ಪತ್ರವನ್ನು ಪ್ರದರ್ಶಿಸಿದ್ದಾರೆ. ಇದಕ್ಕೂ ಮೊದಲು ಅವರು ರಾಜಿನಾಮೆಯನ್ನು ರಾಜ್ಯಪಾಲರಿಗೆ ಕೊಟ್ಟಿದ್ದು ವಿಚಿತ್ರವೂ ಆಗಿತ್ತು, ಹಾಸ್ಯಾಸ್ಪದವೂ ಆಗಿತ್ತು. ಬಹುಷ ಅದು ಸರ್ಕಾರದ ಮೇಲೆ ಒತ್ತಡ ಹೇರಿ ತಮ್ಮ ಕೆಲಸ ಮಾಡಿಸಿಕೊಳ್ಳುವ ತಂತ್ರವಾಗಿದೆ. ಜಿಂದಾಲ್ ಕಂಪನಿಗೂ ಆನಂದಸಿಂಗ್‍ರಿಗೂ ವ್ಯವಹಾರದ ಮಟ್ಟಿಗೆ ಸರಿಯಿಲ್ಲ.

ಜಿಂದಾಲ್‍ಗೆ ಭೂಮಿ ಮಾರಾಟ ಮಾಡಬಾರದು ಎಂದು ಬಹಿರಂಗವಾಗಿ ಹೇಳಿದ ಏಕೈಕ ಬಳ್ಳಾರಿ ಶಾಸಕ ಅವರು. ಹಿಂದೆಯೂ ಒಮ್ಮೆ ಅವರು ಹೊಸಪೇಟೆ ಡ್ಯಾಂನಲ್ಲಿ ನೀರಿನ ಮಟ್ಟ ಕಡಿಮೆ ಇದ್ದಾಗ ಜಿಂದಾಲ್‍ಗೆ ನೀರು ಬಿಡಬಾರದು ಎಂದಿದ್ದರು.

ಈಗ ಜಿಂದಾಲ್‍ಗೆ ಭೂಮಿ ಮಾರಾಟ ವಿಷಯದ ಮರುಪರಿಶೀಲನೆ ಮಾಡಲು ರಚಿಸಿರುವ ಎಂಬಿ ಪಾಟೀಲ್ ನೇತೃತ್ವದ ಸಚಿವ ಸಂಪುಟ ಉಪಸಮಿತಿಯ ಮೇಲೆ ಒತ್ತಡ ಹೇರಲು, ಆ ಮೂಲಕ ಜಿಂದಾಲ್‍ಗೆ ಭೂಮಿ ಮಾರಾಟ ಆಗದಂತೆ ತಡೆಯುವ ಪ್ರಯತ್ನವನ್ನು ಆನಂದಸಿಂಗ್ ಮಾಡುತ್ತಿರುವ ಸಾಧ್ಯತೆ ಇದೆ. ತಮಗೆ ಕಾಂಗ್ರೆಸ್ ಶಾಸಕ ಅನಿಲ್ ಲಾಡ್ ಬೆಂಬಲವೂ ಇದೆ ಎಂದು ಆನಂದಸಿಂಗ್ ಹೇಳುತ್ತಿರುವುದು ಕುತೂಹಲಕರವಾಗಿದೆ. ಹೊಸಪೇಟೆ ಕೇಂದ್ರವಾಗಿಸಿ ವಿಜಯನಗರ ಹೊಸ ಜಿಲ್ಲೆ ರಚಿಸಬೇಕೆಂಬ ಬೇಡಿಕೆಗಾಗಿ ರಾಜಿನಾಮೆ ನಿಡುತ್ತಿರುವುದಾಗಿಯೂ ಆನಂದಸಿಂಗ್ ಹೇಳಲು ಶುರು ಮಾಡಿದ್ದಾರೆ.

ಇಲ್ಲಿ ಒಂದು ಸೂಕ್ಷ್ಮ ವಿಷಯವೂ ಇದೆ. ರಾಜ್ಯ ಸರ್ಕಾರದ ಹೊಸ ಮೈನಿಂಗ್ ಲೀಸ್ ನೀತಿಯ ಪ್ರಕಾರ ಫ್ಯಾಕ್ಟರಿ ಇರುವ ಕಂಪನಿಗಳಿಗೆ ಮಾತ್ರ ಲೀಸ್ ನೀಡಲಾಗುವುದು ಎಂಬ ನಿಯಮವಿದೆ ಎನ್ನಲಾಗಿದೆ. ಹೀಗಾದರೆ ಆನಂದಸಿಂಗ್, ಲಾಡ್ ಮುಂತಾದವರಿಗೆ ಹೊಸ ಲೀಸ್ ಸಿಗುವುದು ಅಸಾಧ್ಯ. ಹೊಸ ಲೀಸ್‍ಗಳೆಲ್ಲ ಜಿಂದಾಲ್ ಪಾಲಾಗುವ ಸಾಧ್ಯತೆಯೇ ಹೆಚ್ಚು ಎನ್ನಲಾಗುತ್ತಿದೆ. ಈ ಹೊಸ ನಿಯಮ ತಿದ್ದುಪಡಿ ಮಾಡಿ ಫ್ಯಾಕ್ಟರಿ ಇಲ್ಲದ ಮೈನಿಂಗ್ ಕಂಪನಿಗಳಿಗೂ ಲೀಸ್ ನೀಡುವ ಅವಕಾಶ ಮಾಡಿಕೊಡಿ ಎಂಬ ಒತ್ತಡ ಹೇರುವ ತಂತ್ರವಾಗಿಯೂ ಇದನ್ನು ನೋಡಬಹುದು.

ತಮ್ಮ ವೈಯಕ್ತಿಕ ಲಾಭಕ್ಕಾಗಿ ತಾವಿರುವ ಪಕ್ಷದ ಮೇಲೆ ಒತ್ತಡ ಹೇರಲು ಹಿಂದೆ ಇಂತಹ ಹಲವಾರು ಬ್ಲ್ಯಾಕ್‍ಮೇಲ್ ತಂತ್ರಗಳನ್ನು ಆನಂದಸಿಂಗ್ ಅನುಸರಿಸಿದ್ದಾರೆ. ಅವರು ಬಿಜೆಪಿ ಶಾಸಕರಾಗಿದ್ದಾಗ ಮಂತ್ರಿ ಪದವಿ ಪಡೆಯಲು ಒತ್ತಡ ಹೇರುವ ಸಲುವಾಗಿ ಹೊಸಪೇಟೆಯಲ್ಲಿ ಭವ್ಯವಾಗಿ ಟಿಪ್ಪು ಜಯಂತಿ ಆಚರಿಸಿದ್ದರು. ಕಾಂಗ್ರೆಸ್ ಶಾಸಕರಾದ ಮೇಲೆ ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಲು ಒತ್ತಡ ಹೇರಲು ಹನುಮ ಮಾಲೆ ಜಯಂತಿಯಲ್ಲಿ ಭಾಗವಹಿಸಿ ಕಾಂಗ್ರೆಸ್ ನಾಯಕರಲ್ಲಿ ದಿಗಿಲು ಮೂಡಿಸಿದ್ದರು. ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ಗಿಟ್ಟಿಸಲು ರಮೇಶ ಜಾರಕಿಹೊಳಿ ಗುಂಪಿನೊಂದಿಗೆ ಮುಂಬೈ ಸುತ್ತಾಡಿ ಬಂದಿದ್ದ ಅವರು, ಬಹುಮತ ಸಾಬೀತುಪಡಿಸುವ ವೇಳೆಗೆ ಕಾಂಗ್ರೆಸ್ ಗುಂಪಿನಲ್ಲಿ ಕಾಣಿಸಿಕೊಂಡಿದ್ದರು. ಡಿಸೆಂಬರ್‍ನಲ್ಲಿ ಆಪರೇಷನ್ ಕಮಲ ವಿಫಲವಾದ ನಂತರ ರೆಸಾರ್ಟಿನಲ್ಲಿ ಗದ್ದಲ ಮಾಡಿಕೊಂಡು ಹಲ್ಲೆಗೊಳಗಾಗಿದ್ದರು.

ಇದಾದ ಮೇಲೆ ಅವರು ಸುದ್ದಿಯಾಗಿದ್ದು ಜಿಂದಾಲ್‍ಗೆ ಭೂಮಿ ಮಾರಾಟ ಮಾಡಬಾರದೆಂದು ಸರ್ಕಾರಕ್ಕೆ ಆಗ್ರಹಿಸುವ ಮೂಲಕ. ಹೊಸ ಮೈನಿಂಗ್ ನೀತಿಯಲ್ಲಿ ಮಾರ್ಪಾಟು ಮಾಡಿಸಲು ಈಗ ರಾಜಿನಾಮೆ ತಂತ್ರ ಹೂಡಿದ್ದಾರೋ ಅಥವಾ ಜಿಂದಾಲ್‍ಗೆ ಭೂಮಿ ಮಾರಾಟ ತಡೆಯಲು ಯತ್ನಿಸುವುದು, ಆಗದಿದ್ದರೆ ಆ ಕಡೆಯಿಂದ ‘ಫೇವರ್’ ಪಡೆಯುವ ಉದ್ದೇಶವೂ ಇದರ ಹಿಂದಿರಬಹುದೇ?

ಸುದ್ದಿ ಮಾಧ್ಯಮಗಳ ಪ್ರಕಾರ, ಸರ್ಕಾರ ಬೀಳುವುದು ಗ್ಯಾರಂಟಿ ಎಂಬ ಭಾವವನ್ನಂತೂ ಜನರಲ್ಲಿ ತೇಲಿ ಬಿಡಲಾಗಿದೆ. ಇದರ ಮೂಲ ಮಾತ್ರ ಆನಂದಸಿಂಗ್ ಹೊರಡಿಸಿದ ಗುಡುಗಿನ ಆರ್ಭಟವಷ್ಟೇ. ಹಿಂದಿನಂತೆ ಈ ಭಿನ್ನಮತ ಮಳೆ ಸುರಿಸದೇ ಹೋಗಬಹುದು. ರಾಷ್ಟ್ರೀಯ ಬಿಜೆಪಿಯಲ್ಲಿರುವ ಅಧಿಕಾರ ಮತ್ತು ಹಣಬಲದಿಂದ ಕೃತಕ ಮೋಡಬಿತ್ತನೆಯೂ ಆಗಿ ಮಳೆ ಸುರಿಸಲೂಬಹುದು. ಆಗಲೂ ಬಿತ್ತನೆಗೆ ಬೇಕಾದಷ್ಟು ಮಣ್ಣು ಹಸಿ (ಸರ್ಕಾರ ಕೆಡವಲು ಅಗತ್ಯವಾದ ಸಂಖ್ಯೆ) ಆಗುವುದೇ ಎಂಬ ಸಂಶಯ ಎಂದಿನಂತೆ ಇದ್ದೇ ಇದೆ,  ಅಧಿಕಾರದ ಆಟದಲ್ಲಿ ಏನು ಬೇಕಾದರೂ ಸಂಭವಿಸಬಹುದು. ಕಾದು ನೋಡುವುದಷ್ಟೇ ರಾಜ್ಯದ ಜನರ ಕರ್ಮ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...