Homeಕರ್ನಾಟಕಆನಂದಸಿಂಗ್ ರಾಜಿನಾಮೆ ಬ್ಲ್ಯಾಕ್‍ಮೇಲ್ ತಂತ್ರವೋ? ಅಸಲಿ ಕಾರಣ ಇದಲ್ಲವೇ?

ಆನಂದಸಿಂಗ್ ರಾಜಿನಾಮೆ ಬ್ಲ್ಯಾಕ್‍ಮೇಲ್ ತಂತ್ರವೋ? ಅಸಲಿ ಕಾರಣ ಇದಲ್ಲವೇ?

ರಾಜ್ಯ ಸರ್ಕಾರದ ಹೊಸ ಮೈನಿಂಗ್ ಲೀಸ್ ನೀತಿಯ ಪ್ರಕಾರ ಫ್ಯಾಕ್ಟರಿ ಇರುವ ಕಂಪನಿಗಳಿಗೆ ಮಾತ್ರ ಲೀಸ್ ನೀಡಲಾಗುವುದು ಎಂಬ ನಿಯಮವಿದೆ ಎನ್ನಲಾಗಿದೆ. ಹೀಗಾದರೆ ಆನಂದಸಿಂಗ್, ಲಾಡ್ ಮುಂತಾದವರಿಗೆ ಹೊಸ ಲೀಸ್ ಸಿಗುವುದು ಅಸಾಧ್ಯ.

- Advertisement -
- Advertisement -

| ಮಲ್ಲನಗೌಡರ್ |

ಇವತ್ತು ಮುಂಜಾನೆಯಿಂದ ಸರ್ಕಾರ ಬೀಳುವ/ ಬೀಳಿಸುವ ಆಟ ಹೊರನೋಟಕ್ಕೆ ಐಪಿಎಲ್ ಮ್ಯಾಚಿನ ಖದರು ಕಳೆಗಟ್ಟಿಕೊಂಡಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅಮೆರಿಕದಲ್ಲಿರುವಾಗ ದಿಢೀರನೆ ರಾಜಿನಾಮೆಯ ಕರಿಮೋಡಗಳು ಕಾಣತೋಡಗಿದ್ದು ಇವು ಮಳೆ ಸುರಿಸುತ್ತವಾ ಅಥವಾ ಎಂದಿನಂತೆ ಹಾಗೆ ಬಂದಂತೆ ಹೀಗೆ ತೇಲಿ ಹೋಗುತ್ತವಾ ಎಂಬ ಪ್ರಶ್ನೆ ಎದ್ದಿದೆ.

ಈ ರಾಜಿನಾಮೆ ಕ್ಲೈಮೇಟಿನಲ್ಲಿ ಎದ್ದು ಹೊಡೆಯುತ್ತಿರುವುದು ಹೊಸಪೇಟೆಯ ಶಾಸಕ ಆಂದ್‍ಸಿಂಗ್ ನಡವಳಿಕೆ. ಅವರೀಗ ಸ್ಪೀಕರ್ ಪಿ.ಎಸ್‍ಗೆ ರಾಜಿನಾಮೆ ಕೊಟ್ಟು ಮಾಧ್ಯಮಗಳ ಎದುರು ಅವರು ಸ್ಪೀಕರ್ ಹೆಸರಲ್ಲಿ ಬರೆದ ರಾಜಿನಾಮೆ ಪತ್ರವನ್ನು ಪ್ರದರ್ಶಿಸಿದ್ದಾರೆ. ಇದಕ್ಕೂ ಮೊದಲು ಅವರು ರಾಜಿನಾಮೆಯನ್ನು ರಾಜ್ಯಪಾಲರಿಗೆ ಕೊಟ್ಟಿದ್ದು ವಿಚಿತ್ರವೂ ಆಗಿತ್ತು, ಹಾಸ್ಯಾಸ್ಪದವೂ ಆಗಿತ್ತು. ಬಹುಷ ಅದು ಸರ್ಕಾರದ ಮೇಲೆ ಒತ್ತಡ ಹೇರಿ ತಮ್ಮ ಕೆಲಸ ಮಾಡಿಸಿಕೊಳ್ಳುವ ತಂತ್ರವಾಗಿದೆ. ಜಿಂದಾಲ್ ಕಂಪನಿಗೂ ಆನಂದಸಿಂಗ್‍ರಿಗೂ ವ್ಯವಹಾರದ ಮಟ್ಟಿಗೆ ಸರಿಯಿಲ್ಲ.

ಜಿಂದಾಲ್‍ಗೆ ಭೂಮಿ ಮಾರಾಟ ಮಾಡಬಾರದು ಎಂದು ಬಹಿರಂಗವಾಗಿ ಹೇಳಿದ ಏಕೈಕ ಬಳ್ಳಾರಿ ಶಾಸಕ ಅವರು. ಹಿಂದೆಯೂ ಒಮ್ಮೆ ಅವರು ಹೊಸಪೇಟೆ ಡ್ಯಾಂನಲ್ಲಿ ನೀರಿನ ಮಟ್ಟ ಕಡಿಮೆ ಇದ್ದಾಗ ಜಿಂದಾಲ್‍ಗೆ ನೀರು ಬಿಡಬಾರದು ಎಂದಿದ್ದರು.

ಈಗ ಜಿಂದಾಲ್‍ಗೆ ಭೂಮಿ ಮಾರಾಟ ವಿಷಯದ ಮರುಪರಿಶೀಲನೆ ಮಾಡಲು ರಚಿಸಿರುವ ಎಂಬಿ ಪಾಟೀಲ್ ನೇತೃತ್ವದ ಸಚಿವ ಸಂಪುಟ ಉಪಸಮಿತಿಯ ಮೇಲೆ ಒತ್ತಡ ಹೇರಲು, ಆ ಮೂಲಕ ಜಿಂದಾಲ್‍ಗೆ ಭೂಮಿ ಮಾರಾಟ ಆಗದಂತೆ ತಡೆಯುವ ಪ್ರಯತ್ನವನ್ನು ಆನಂದಸಿಂಗ್ ಮಾಡುತ್ತಿರುವ ಸಾಧ್ಯತೆ ಇದೆ. ತಮಗೆ ಕಾಂಗ್ರೆಸ್ ಶಾಸಕ ಅನಿಲ್ ಲಾಡ್ ಬೆಂಬಲವೂ ಇದೆ ಎಂದು ಆನಂದಸಿಂಗ್ ಹೇಳುತ್ತಿರುವುದು ಕುತೂಹಲಕರವಾಗಿದೆ. ಹೊಸಪೇಟೆ ಕೇಂದ್ರವಾಗಿಸಿ ವಿಜಯನಗರ ಹೊಸ ಜಿಲ್ಲೆ ರಚಿಸಬೇಕೆಂಬ ಬೇಡಿಕೆಗಾಗಿ ರಾಜಿನಾಮೆ ನಿಡುತ್ತಿರುವುದಾಗಿಯೂ ಆನಂದಸಿಂಗ್ ಹೇಳಲು ಶುರು ಮಾಡಿದ್ದಾರೆ.

ಇಲ್ಲಿ ಒಂದು ಸೂಕ್ಷ್ಮ ವಿಷಯವೂ ಇದೆ. ರಾಜ್ಯ ಸರ್ಕಾರದ ಹೊಸ ಮೈನಿಂಗ್ ಲೀಸ್ ನೀತಿಯ ಪ್ರಕಾರ ಫ್ಯಾಕ್ಟರಿ ಇರುವ ಕಂಪನಿಗಳಿಗೆ ಮಾತ್ರ ಲೀಸ್ ನೀಡಲಾಗುವುದು ಎಂಬ ನಿಯಮವಿದೆ ಎನ್ನಲಾಗಿದೆ. ಹೀಗಾದರೆ ಆನಂದಸಿಂಗ್, ಲಾಡ್ ಮುಂತಾದವರಿಗೆ ಹೊಸ ಲೀಸ್ ಸಿಗುವುದು ಅಸಾಧ್ಯ. ಹೊಸ ಲೀಸ್‍ಗಳೆಲ್ಲ ಜಿಂದಾಲ್ ಪಾಲಾಗುವ ಸಾಧ್ಯತೆಯೇ ಹೆಚ್ಚು ಎನ್ನಲಾಗುತ್ತಿದೆ. ಈ ಹೊಸ ನಿಯಮ ತಿದ್ದುಪಡಿ ಮಾಡಿ ಫ್ಯಾಕ್ಟರಿ ಇಲ್ಲದ ಮೈನಿಂಗ್ ಕಂಪನಿಗಳಿಗೂ ಲೀಸ್ ನೀಡುವ ಅವಕಾಶ ಮಾಡಿಕೊಡಿ ಎಂಬ ಒತ್ತಡ ಹೇರುವ ತಂತ್ರವಾಗಿಯೂ ಇದನ್ನು ನೋಡಬಹುದು.

ತಮ್ಮ ವೈಯಕ್ತಿಕ ಲಾಭಕ್ಕಾಗಿ ತಾವಿರುವ ಪಕ್ಷದ ಮೇಲೆ ಒತ್ತಡ ಹೇರಲು ಹಿಂದೆ ಇಂತಹ ಹಲವಾರು ಬ್ಲ್ಯಾಕ್‍ಮೇಲ್ ತಂತ್ರಗಳನ್ನು ಆನಂದಸಿಂಗ್ ಅನುಸರಿಸಿದ್ದಾರೆ. ಅವರು ಬಿಜೆಪಿ ಶಾಸಕರಾಗಿದ್ದಾಗ ಮಂತ್ರಿ ಪದವಿ ಪಡೆಯಲು ಒತ್ತಡ ಹೇರುವ ಸಲುವಾಗಿ ಹೊಸಪೇಟೆಯಲ್ಲಿ ಭವ್ಯವಾಗಿ ಟಿಪ್ಪು ಜಯಂತಿ ಆಚರಿಸಿದ್ದರು. ಕಾಂಗ್ರೆಸ್ ಶಾಸಕರಾದ ಮೇಲೆ ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಲು ಒತ್ತಡ ಹೇರಲು ಹನುಮ ಮಾಲೆ ಜಯಂತಿಯಲ್ಲಿ ಭಾಗವಹಿಸಿ ಕಾಂಗ್ರೆಸ್ ನಾಯಕರಲ್ಲಿ ದಿಗಿಲು ಮೂಡಿಸಿದ್ದರು. ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ಗಿಟ್ಟಿಸಲು ರಮೇಶ ಜಾರಕಿಹೊಳಿ ಗುಂಪಿನೊಂದಿಗೆ ಮುಂಬೈ ಸುತ್ತಾಡಿ ಬಂದಿದ್ದ ಅವರು, ಬಹುಮತ ಸಾಬೀತುಪಡಿಸುವ ವೇಳೆಗೆ ಕಾಂಗ್ರೆಸ್ ಗುಂಪಿನಲ್ಲಿ ಕಾಣಿಸಿಕೊಂಡಿದ್ದರು. ಡಿಸೆಂಬರ್‍ನಲ್ಲಿ ಆಪರೇಷನ್ ಕಮಲ ವಿಫಲವಾದ ನಂತರ ರೆಸಾರ್ಟಿನಲ್ಲಿ ಗದ್ದಲ ಮಾಡಿಕೊಂಡು ಹಲ್ಲೆಗೊಳಗಾಗಿದ್ದರು.

ಇದಾದ ಮೇಲೆ ಅವರು ಸುದ್ದಿಯಾಗಿದ್ದು ಜಿಂದಾಲ್‍ಗೆ ಭೂಮಿ ಮಾರಾಟ ಮಾಡಬಾರದೆಂದು ಸರ್ಕಾರಕ್ಕೆ ಆಗ್ರಹಿಸುವ ಮೂಲಕ. ಹೊಸ ಮೈನಿಂಗ್ ನೀತಿಯಲ್ಲಿ ಮಾರ್ಪಾಟು ಮಾಡಿಸಲು ಈಗ ರಾಜಿನಾಮೆ ತಂತ್ರ ಹೂಡಿದ್ದಾರೋ ಅಥವಾ ಜಿಂದಾಲ್‍ಗೆ ಭೂಮಿ ಮಾರಾಟ ತಡೆಯಲು ಯತ್ನಿಸುವುದು, ಆಗದಿದ್ದರೆ ಆ ಕಡೆಯಿಂದ ‘ಫೇವರ್’ ಪಡೆಯುವ ಉದ್ದೇಶವೂ ಇದರ ಹಿಂದಿರಬಹುದೇ?

ಸುದ್ದಿ ಮಾಧ್ಯಮಗಳ ಪ್ರಕಾರ, ಸರ್ಕಾರ ಬೀಳುವುದು ಗ್ಯಾರಂಟಿ ಎಂಬ ಭಾವವನ್ನಂತೂ ಜನರಲ್ಲಿ ತೇಲಿ ಬಿಡಲಾಗಿದೆ. ಇದರ ಮೂಲ ಮಾತ್ರ ಆನಂದಸಿಂಗ್ ಹೊರಡಿಸಿದ ಗುಡುಗಿನ ಆರ್ಭಟವಷ್ಟೇ. ಹಿಂದಿನಂತೆ ಈ ಭಿನ್ನಮತ ಮಳೆ ಸುರಿಸದೇ ಹೋಗಬಹುದು. ರಾಷ್ಟ್ರೀಯ ಬಿಜೆಪಿಯಲ್ಲಿರುವ ಅಧಿಕಾರ ಮತ್ತು ಹಣಬಲದಿಂದ ಕೃತಕ ಮೋಡಬಿತ್ತನೆಯೂ ಆಗಿ ಮಳೆ ಸುರಿಸಲೂಬಹುದು. ಆಗಲೂ ಬಿತ್ತನೆಗೆ ಬೇಕಾದಷ್ಟು ಮಣ್ಣು ಹಸಿ (ಸರ್ಕಾರ ಕೆಡವಲು ಅಗತ್ಯವಾದ ಸಂಖ್ಯೆ) ಆಗುವುದೇ ಎಂಬ ಸಂಶಯ ಎಂದಿನಂತೆ ಇದ್ದೇ ಇದೆ,  ಅಧಿಕಾರದ ಆಟದಲ್ಲಿ ಏನು ಬೇಕಾದರೂ ಸಂಭವಿಸಬಹುದು. ಕಾದು ನೋಡುವುದಷ್ಟೇ ರಾಜ್ಯದ ಜನರ ಕರ್ಮ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...