Homeಕರ್ನಾಟಕಆನಂದಸಿಂಗ್ ರಾಜಿನಾಮೆ ಬ್ಲ್ಯಾಕ್‍ಮೇಲ್ ತಂತ್ರವೋ? ಅಸಲಿ ಕಾರಣ ಇದಲ್ಲವೇ?

ಆನಂದಸಿಂಗ್ ರಾಜಿನಾಮೆ ಬ್ಲ್ಯಾಕ್‍ಮೇಲ್ ತಂತ್ರವೋ? ಅಸಲಿ ಕಾರಣ ಇದಲ್ಲವೇ?

ರಾಜ್ಯ ಸರ್ಕಾರದ ಹೊಸ ಮೈನಿಂಗ್ ಲೀಸ್ ನೀತಿಯ ಪ್ರಕಾರ ಫ್ಯಾಕ್ಟರಿ ಇರುವ ಕಂಪನಿಗಳಿಗೆ ಮಾತ್ರ ಲೀಸ್ ನೀಡಲಾಗುವುದು ಎಂಬ ನಿಯಮವಿದೆ ಎನ್ನಲಾಗಿದೆ. ಹೀಗಾದರೆ ಆನಂದಸಿಂಗ್, ಲಾಡ್ ಮುಂತಾದವರಿಗೆ ಹೊಸ ಲೀಸ್ ಸಿಗುವುದು ಅಸಾಧ್ಯ.

- Advertisement -
- Advertisement -

| ಮಲ್ಲನಗೌಡರ್ |

ಇವತ್ತು ಮುಂಜಾನೆಯಿಂದ ಸರ್ಕಾರ ಬೀಳುವ/ ಬೀಳಿಸುವ ಆಟ ಹೊರನೋಟಕ್ಕೆ ಐಪಿಎಲ್ ಮ್ಯಾಚಿನ ಖದರು ಕಳೆಗಟ್ಟಿಕೊಂಡಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅಮೆರಿಕದಲ್ಲಿರುವಾಗ ದಿಢೀರನೆ ರಾಜಿನಾಮೆಯ ಕರಿಮೋಡಗಳು ಕಾಣತೋಡಗಿದ್ದು ಇವು ಮಳೆ ಸುರಿಸುತ್ತವಾ ಅಥವಾ ಎಂದಿನಂತೆ ಹಾಗೆ ಬಂದಂತೆ ಹೀಗೆ ತೇಲಿ ಹೋಗುತ್ತವಾ ಎಂಬ ಪ್ರಶ್ನೆ ಎದ್ದಿದೆ.

ಈ ರಾಜಿನಾಮೆ ಕ್ಲೈಮೇಟಿನಲ್ಲಿ ಎದ್ದು ಹೊಡೆಯುತ್ತಿರುವುದು ಹೊಸಪೇಟೆಯ ಶಾಸಕ ಆಂದ್‍ಸಿಂಗ್ ನಡವಳಿಕೆ. ಅವರೀಗ ಸ್ಪೀಕರ್ ಪಿ.ಎಸ್‍ಗೆ ರಾಜಿನಾಮೆ ಕೊಟ್ಟು ಮಾಧ್ಯಮಗಳ ಎದುರು ಅವರು ಸ್ಪೀಕರ್ ಹೆಸರಲ್ಲಿ ಬರೆದ ರಾಜಿನಾಮೆ ಪತ್ರವನ್ನು ಪ್ರದರ್ಶಿಸಿದ್ದಾರೆ. ಇದಕ್ಕೂ ಮೊದಲು ಅವರು ರಾಜಿನಾಮೆಯನ್ನು ರಾಜ್ಯಪಾಲರಿಗೆ ಕೊಟ್ಟಿದ್ದು ವಿಚಿತ್ರವೂ ಆಗಿತ್ತು, ಹಾಸ್ಯಾಸ್ಪದವೂ ಆಗಿತ್ತು. ಬಹುಷ ಅದು ಸರ್ಕಾರದ ಮೇಲೆ ಒತ್ತಡ ಹೇರಿ ತಮ್ಮ ಕೆಲಸ ಮಾಡಿಸಿಕೊಳ್ಳುವ ತಂತ್ರವಾಗಿದೆ. ಜಿಂದಾಲ್ ಕಂಪನಿಗೂ ಆನಂದಸಿಂಗ್‍ರಿಗೂ ವ್ಯವಹಾರದ ಮಟ್ಟಿಗೆ ಸರಿಯಿಲ್ಲ.

ಜಿಂದಾಲ್‍ಗೆ ಭೂಮಿ ಮಾರಾಟ ಮಾಡಬಾರದು ಎಂದು ಬಹಿರಂಗವಾಗಿ ಹೇಳಿದ ಏಕೈಕ ಬಳ್ಳಾರಿ ಶಾಸಕ ಅವರು. ಹಿಂದೆಯೂ ಒಮ್ಮೆ ಅವರು ಹೊಸಪೇಟೆ ಡ್ಯಾಂನಲ್ಲಿ ನೀರಿನ ಮಟ್ಟ ಕಡಿಮೆ ಇದ್ದಾಗ ಜಿಂದಾಲ್‍ಗೆ ನೀರು ಬಿಡಬಾರದು ಎಂದಿದ್ದರು.

ಈಗ ಜಿಂದಾಲ್‍ಗೆ ಭೂಮಿ ಮಾರಾಟ ವಿಷಯದ ಮರುಪರಿಶೀಲನೆ ಮಾಡಲು ರಚಿಸಿರುವ ಎಂಬಿ ಪಾಟೀಲ್ ನೇತೃತ್ವದ ಸಚಿವ ಸಂಪುಟ ಉಪಸಮಿತಿಯ ಮೇಲೆ ಒತ್ತಡ ಹೇರಲು, ಆ ಮೂಲಕ ಜಿಂದಾಲ್‍ಗೆ ಭೂಮಿ ಮಾರಾಟ ಆಗದಂತೆ ತಡೆಯುವ ಪ್ರಯತ್ನವನ್ನು ಆನಂದಸಿಂಗ್ ಮಾಡುತ್ತಿರುವ ಸಾಧ್ಯತೆ ಇದೆ. ತಮಗೆ ಕಾಂಗ್ರೆಸ್ ಶಾಸಕ ಅನಿಲ್ ಲಾಡ್ ಬೆಂಬಲವೂ ಇದೆ ಎಂದು ಆನಂದಸಿಂಗ್ ಹೇಳುತ್ತಿರುವುದು ಕುತೂಹಲಕರವಾಗಿದೆ. ಹೊಸಪೇಟೆ ಕೇಂದ್ರವಾಗಿಸಿ ವಿಜಯನಗರ ಹೊಸ ಜಿಲ್ಲೆ ರಚಿಸಬೇಕೆಂಬ ಬೇಡಿಕೆಗಾಗಿ ರಾಜಿನಾಮೆ ನಿಡುತ್ತಿರುವುದಾಗಿಯೂ ಆನಂದಸಿಂಗ್ ಹೇಳಲು ಶುರು ಮಾಡಿದ್ದಾರೆ.

ಇಲ್ಲಿ ಒಂದು ಸೂಕ್ಷ್ಮ ವಿಷಯವೂ ಇದೆ. ರಾಜ್ಯ ಸರ್ಕಾರದ ಹೊಸ ಮೈನಿಂಗ್ ಲೀಸ್ ನೀತಿಯ ಪ್ರಕಾರ ಫ್ಯಾಕ್ಟರಿ ಇರುವ ಕಂಪನಿಗಳಿಗೆ ಮಾತ್ರ ಲೀಸ್ ನೀಡಲಾಗುವುದು ಎಂಬ ನಿಯಮವಿದೆ ಎನ್ನಲಾಗಿದೆ. ಹೀಗಾದರೆ ಆನಂದಸಿಂಗ್, ಲಾಡ್ ಮುಂತಾದವರಿಗೆ ಹೊಸ ಲೀಸ್ ಸಿಗುವುದು ಅಸಾಧ್ಯ. ಹೊಸ ಲೀಸ್‍ಗಳೆಲ್ಲ ಜಿಂದಾಲ್ ಪಾಲಾಗುವ ಸಾಧ್ಯತೆಯೇ ಹೆಚ್ಚು ಎನ್ನಲಾಗುತ್ತಿದೆ. ಈ ಹೊಸ ನಿಯಮ ತಿದ್ದುಪಡಿ ಮಾಡಿ ಫ್ಯಾಕ್ಟರಿ ಇಲ್ಲದ ಮೈನಿಂಗ್ ಕಂಪನಿಗಳಿಗೂ ಲೀಸ್ ನೀಡುವ ಅವಕಾಶ ಮಾಡಿಕೊಡಿ ಎಂಬ ಒತ್ತಡ ಹೇರುವ ತಂತ್ರವಾಗಿಯೂ ಇದನ್ನು ನೋಡಬಹುದು.

ತಮ್ಮ ವೈಯಕ್ತಿಕ ಲಾಭಕ್ಕಾಗಿ ತಾವಿರುವ ಪಕ್ಷದ ಮೇಲೆ ಒತ್ತಡ ಹೇರಲು ಹಿಂದೆ ಇಂತಹ ಹಲವಾರು ಬ್ಲ್ಯಾಕ್‍ಮೇಲ್ ತಂತ್ರಗಳನ್ನು ಆನಂದಸಿಂಗ್ ಅನುಸರಿಸಿದ್ದಾರೆ. ಅವರು ಬಿಜೆಪಿ ಶಾಸಕರಾಗಿದ್ದಾಗ ಮಂತ್ರಿ ಪದವಿ ಪಡೆಯಲು ಒತ್ತಡ ಹೇರುವ ಸಲುವಾಗಿ ಹೊಸಪೇಟೆಯಲ್ಲಿ ಭವ್ಯವಾಗಿ ಟಿಪ್ಪು ಜಯಂತಿ ಆಚರಿಸಿದ್ದರು. ಕಾಂಗ್ರೆಸ್ ಶಾಸಕರಾದ ಮೇಲೆ ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಲು ಒತ್ತಡ ಹೇರಲು ಹನುಮ ಮಾಲೆ ಜಯಂತಿಯಲ್ಲಿ ಭಾಗವಹಿಸಿ ಕಾಂಗ್ರೆಸ್ ನಾಯಕರಲ್ಲಿ ದಿಗಿಲು ಮೂಡಿಸಿದ್ದರು. ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ಗಿಟ್ಟಿಸಲು ರಮೇಶ ಜಾರಕಿಹೊಳಿ ಗುಂಪಿನೊಂದಿಗೆ ಮುಂಬೈ ಸುತ್ತಾಡಿ ಬಂದಿದ್ದ ಅವರು, ಬಹುಮತ ಸಾಬೀತುಪಡಿಸುವ ವೇಳೆಗೆ ಕಾಂಗ್ರೆಸ್ ಗುಂಪಿನಲ್ಲಿ ಕಾಣಿಸಿಕೊಂಡಿದ್ದರು. ಡಿಸೆಂಬರ್‍ನಲ್ಲಿ ಆಪರೇಷನ್ ಕಮಲ ವಿಫಲವಾದ ನಂತರ ರೆಸಾರ್ಟಿನಲ್ಲಿ ಗದ್ದಲ ಮಾಡಿಕೊಂಡು ಹಲ್ಲೆಗೊಳಗಾಗಿದ್ದರು.

ಇದಾದ ಮೇಲೆ ಅವರು ಸುದ್ದಿಯಾಗಿದ್ದು ಜಿಂದಾಲ್‍ಗೆ ಭೂಮಿ ಮಾರಾಟ ಮಾಡಬಾರದೆಂದು ಸರ್ಕಾರಕ್ಕೆ ಆಗ್ರಹಿಸುವ ಮೂಲಕ. ಹೊಸ ಮೈನಿಂಗ್ ನೀತಿಯಲ್ಲಿ ಮಾರ್ಪಾಟು ಮಾಡಿಸಲು ಈಗ ರಾಜಿನಾಮೆ ತಂತ್ರ ಹೂಡಿದ್ದಾರೋ ಅಥವಾ ಜಿಂದಾಲ್‍ಗೆ ಭೂಮಿ ಮಾರಾಟ ತಡೆಯಲು ಯತ್ನಿಸುವುದು, ಆಗದಿದ್ದರೆ ಆ ಕಡೆಯಿಂದ ‘ಫೇವರ್’ ಪಡೆಯುವ ಉದ್ದೇಶವೂ ಇದರ ಹಿಂದಿರಬಹುದೇ?

ಸುದ್ದಿ ಮಾಧ್ಯಮಗಳ ಪ್ರಕಾರ, ಸರ್ಕಾರ ಬೀಳುವುದು ಗ್ಯಾರಂಟಿ ಎಂಬ ಭಾವವನ್ನಂತೂ ಜನರಲ್ಲಿ ತೇಲಿ ಬಿಡಲಾಗಿದೆ. ಇದರ ಮೂಲ ಮಾತ್ರ ಆನಂದಸಿಂಗ್ ಹೊರಡಿಸಿದ ಗುಡುಗಿನ ಆರ್ಭಟವಷ್ಟೇ. ಹಿಂದಿನಂತೆ ಈ ಭಿನ್ನಮತ ಮಳೆ ಸುರಿಸದೇ ಹೋಗಬಹುದು. ರಾಷ್ಟ್ರೀಯ ಬಿಜೆಪಿಯಲ್ಲಿರುವ ಅಧಿಕಾರ ಮತ್ತು ಹಣಬಲದಿಂದ ಕೃತಕ ಮೋಡಬಿತ್ತನೆಯೂ ಆಗಿ ಮಳೆ ಸುರಿಸಲೂಬಹುದು. ಆಗಲೂ ಬಿತ್ತನೆಗೆ ಬೇಕಾದಷ್ಟು ಮಣ್ಣು ಹಸಿ (ಸರ್ಕಾರ ಕೆಡವಲು ಅಗತ್ಯವಾದ ಸಂಖ್ಯೆ) ಆಗುವುದೇ ಎಂಬ ಸಂಶಯ ಎಂದಿನಂತೆ ಇದ್ದೇ ಇದೆ,  ಅಧಿಕಾರದ ಆಟದಲ್ಲಿ ಏನು ಬೇಕಾದರೂ ಸಂಭವಿಸಬಹುದು. ಕಾದು ನೋಡುವುದಷ್ಟೇ ರಾಜ್ಯದ ಜನರ ಕರ್ಮ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...