Homeಕರ್ನಾಟಕಆನಂದಸಿಂಗ್ ರಾಜಿನಾಮೆ ಬ್ಲ್ಯಾಕ್‍ಮೇಲ್ ತಂತ್ರವೋ? ಅಸಲಿ ಕಾರಣ ಇದಲ್ಲವೇ?

ಆನಂದಸಿಂಗ್ ರಾಜಿನಾಮೆ ಬ್ಲ್ಯಾಕ್‍ಮೇಲ್ ತಂತ್ರವೋ? ಅಸಲಿ ಕಾರಣ ಇದಲ್ಲವೇ?

ರಾಜ್ಯ ಸರ್ಕಾರದ ಹೊಸ ಮೈನಿಂಗ್ ಲೀಸ್ ನೀತಿಯ ಪ್ರಕಾರ ಫ್ಯಾಕ್ಟರಿ ಇರುವ ಕಂಪನಿಗಳಿಗೆ ಮಾತ್ರ ಲೀಸ್ ನೀಡಲಾಗುವುದು ಎಂಬ ನಿಯಮವಿದೆ ಎನ್ನಲಾಗಿದೆ. ಹೀಗಾದರೆ ಆನಂದಸಿಂಗ್, ಲಾಡ್ ಮುಂತಾದವರಿಗೆ ಹೊಸ ಲೀಸ್ ಸಿಗುವುದು ಅಸಾಧ್ಯ.

- Advertisement -
- Advertisement -

| ಮಲ್ಲನಗೌಡರ್ |

ಇವತ್ತು ಮುಂಜಾನೆಯಿಂದ ಸರ್ಕಾರ ಬೀಳುವ/ ಬೀಳಿಸುವ ಆಟ ಹೊರನೋಟಕ್ಕೆ ಐಪಿಎಲ್ ಮ್ಯಾಚಿನ ಖದರು ಕಳೆಗಟ್ಟಿಕೊಂಡಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅಮೆರಿಕದಲ್ಲಿರುವಾಗ ದಿಢೀರನೆ ರಾಜಿನಾಮೆಯ ಕರಿಮೋಡಗಳು ಕಾಣತೋಡಗಿದ್ದು ಇವು ಮಳೆ ಸುರಿಸುತ್ತವಾ ಅಥವಾ ಎಂದಿನಂತೆ ಹಾಗೆ ಬಂದಂತೆ ಹೀಗೆ ತೇಲಿ ಹೋಗುತ್ತವಾ ಎಂಬ ಪ್ರಶ್ನೆ ಎದ್ದಿದೆ.

ಈ ರಾಜಿನಾಮೆ ಕ್ಲೈಮೇಟಿನಲ್ಲಿ ಎದ್ದು ಹೊಡೆಯುತ್ತಿರುವುದು ಹೊಸಪೇಟೆಯ ಶಾಸಕ ಆಂದ್‍ಸಿಂಗ್ ನಡವಳಿಕೆ. ಅವರೀಗ ಸ್ಪೀಕರ್ ಪಿ.ಎಸ್‍ಗೆ ರಾಜಿನಾಮೆ ಕೊಟ್ಟು ಮಾಧ್ಯಮಗಳ ಎದುರು ಅವರು ಸ್ಪೀಕರ್ ಹೆಸರಲ್ಲಿ ಬರೆದ ರಾಜಿನಾಮೆ ಪತ್ರವನ್ನು ಪ್ರದರ್ಶಿಸಿದ್ದಾರೆ. ಇದಕ್ಕೂ ಮೊದಲು ಅವರು ರಾಜಿನಾಮೆಯನ್ನು ರಾಜ್ಯಪಾಲರಿಗೆ ಕೊಟ್ಟಿದ್ದು ವಿಚಿತ್ರವೂ ಆಗಿತ್ತು, ಹಾಸ್ಯಾಸ್ಪದವೂ ಆಗಿತ್ತು. ಬಹುಷ ಅದು ಸರ್ಕಾರದ ಮೇಲೆ ಒತ್ತಡ ಹೇರಿ ತಮ್ಮ ಕೆಲಸ ಮಾಡಿಸಿಕೊಳ್ಳುವ ತಂತ್ರವಾಗಿದೆ. ಜಿಂದಾಲ್ ಕಂಪನಿಗೂ ಆನಂದಸಿಂಗ್‍ರಿಗೂ ವ್ಯವಹಾರದ ಮಟ್ಟಿಗೆ ಸರಿಯಿಲ್ಲ.

ಜಿಂದಾಲ್‍ಗೆ ಭೂಮಿ ಮಾರಾಟ ಮಾಡಬಾರದು ಎಂದು ಬಹಿರಂಗವಾಗಿ ಹೇಳಿದ ಏಕೈಕ ಬಳ್ಳಾರಿ ಶಾಸಕ ಅವರು. ಹಿಂದೆಯೂ ಒಮ್ಮೆ ಅವರು ಹೊಸಪೇಟೆ ಡ್ಯಾಂನಲ್ಲಿ ನೀರಿನ ಮಟ್ಟ ಕಡಿಮೆ ಇದ್ದಾಗ ಜಿಂದಾಲ್‍ಗೆ ನೀರು ಬಿಡಬಾರದು ಎಂದಿದ್ದರು.

ಈಗ ಜಿಂದಾಲ್‍ಗೆ ಭೂಮಿ ಮಾರಾಟ ವಿಷಯದ ಮರುಪರಿಶೀಲನೆ ಮಾಡಲು ರಚಿಸಿರುವ ಎಂಬಿ ಪಾಟೀಲ್ ನೇತೃತ್ವದ ಸಚಿವ ಸಂಪುಟ ಉಪಸಮಿತಿಯ ಮೇಲೆ ಒತ್ತಡ ಹೇರಲು, ಆ ಮೂಲಕ ಜಿಂದಾಲ್‍ಗೆ ಭೂಮಿ ಮಾರಾಟ ಆಗದಂತೆ ತಡೆಯುವ ಪ್ರಯತ್ನವನ್ನು ಆನಂದಸಿಂಗ್ ಮಾಡುತ್ತಿರುವ ಸಾಧ್ಯತೆ ಇದೆ. ತಮಗೆ ಕಾಂಗ್ರೆಸ್ ಶಾಸಕ ಅನಿಲ್ ಲಾಡ್ ಬೆಂಬಲವೂ ಇದೆ ಎಂದು ಆನಂದಸಿಂಗ್ ಹೇಳುತ್ತಿರುವುದು ಕುತೂಹಲಕರವಾಗಿದೆ. ಹೊಸಪೇಟೆ ಕೇಂದ್ರವಾಗಿಸಿ ವಿಜಯನಗರ ಹೊಸ ಜಿಲ್ಲೆ ರಚಿಸಬೇಕೆಂಬ ಬೇಡಿಕೆಗಾಗಿ ರಾಜಿನಾಮೆ ನಿಡುತ್ತಿರುವುದಾಗಿಯೂ ಆನಂದಸಿಂಗ್ ಹೇಳಲು ಶುರು ಮಾಡಿದ್ದಾರೆ.

ಇಲ್ಲಿ ಒಂದು ಸೂಕ್ಷ್ಮ ವಿಷಯವೂ ಇದೆ. ರಾಜ್ಯ ಸರ್ಕಾರದ ಹೊಸ ಮೈನಿಂಗ್ ಲೀಸ್ ನೀತಿಯ ಪ್ರಕಾರ ಫ್ಯಾಕ್ಟರಿ ಇರುವ ಕಂಪನಿಗಳಿಗೆ ಮಾತ್ರ ಲೀಸ್ ನೀಡಲಾಗುವುದು ಎಂಬ ನಿಯಮವಿದೆ ಎನ್ನಲಾಗಿದೆ. ಹೀಗಾದರೆ ಆನಂದಸಿಂಗ್, ಲಾಡ್ ಮುಂತಾದವರಿಗೆ ಹೊಸ ಲೀಸ್ ಸಿಗುವುದು ಅಸಾಧ್ಯ. ಹೊಸ ಲೀಸ್‍ಗಳೆಲ್ಲ ಜಿಂದಾಲ್ ಪಾಲಾಗುವ ಸಾಧ್ಯತೆಯೇ ಹೆಚ್ಚು ಎನ್ನಲಾಗುತ್ತಿದೆ. ಈ ಹೊಸ ನಿಯಮ ತಿದ್ದುಪಡಿ ಮಾಡಿ ಫ್ಯಾಕ್ಟರಿ ಇಲ್ಲದ ಮೈನಿಂಗ್ ಕಂಪನಿಗಳಿಗೂ ಲೀಸ್ ನೀಡುವ ಅವಕಾಶ ಮಾಡಿಕೊಡಿ ಎಂಬ ಒತ್ತಡ ಹೇರುವ ತಂತ್ರವಾಗಿಯೂ ಇದನ್ನು ನೋಡಬಹುದು.

ತಮ್ಮ ವೈಯಕ್ತಿಕ ಲಾಭಕ್ಕಾಗಿ ತಾವಿರುವ ಪಕ್ಷದ ಮೇಲೆ ಒತ್ತಡ ಹೇರಲು ಹಿಂದೆ ಇಂತಹ ಹಲವಾರು ಬ್ಲ್ಯಾಕ್‍ಮೇಲ್ ತಂತ್ರಗಳನ್ನು ಆನಂದಸಿಂಗ್ ಅನುಸರಿಸಿದ್ದಾರೆ. ಅವರು ಬಿಜೆಪಿ ಶಾಸಕರಾಗಿದ್ದಾಗ ಮಂತ್ರಿ ಪದವಿ ಪಡೆಯಲು ಒತ್ತಡ ಹೇರುವ ಸಲುವಾಗಿ ಹೊಸಪೇಟೆಯಲ್ಲಿ ಭವ್ಯವಾಗಿ ಟಿಪ್ಪು ಜಯಂತಿ ಆಚರಿಸಿದ್ದರು. ಕಾಂಗ್ರೆಸ್ ಶಾಸಕರಾದ ಮೇಲೆ ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಲು ಒತ್ತಡ ಹೇರಲು ಹನುಮ ಮಾಲೆ ಜಯಂತಿಯಲ್ಲಿ ಭಾಗವಹಿಸಿ ಕಾಂಗ್ರೆಸ್ ನಾಯಕರಲ್ಲಿ ದಿಗಿಲು ಮೂಡಿಸಿದ್ದರು. ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ಗಿಟ್ಟಿಸಲು ರಮೇಶ ಜಾರಕಿಹೊಳಿ ಗುಂಪಿನೊಂದಿಗೆ ಮುಂಬೈ ಸುತ್ತಾಡಿ ಬಂದಿದ್ದ ಅವರು, ಬಹುಮತ ಸಾಬೀತುಪಡಿಸುವ ವೇಳೆಗೆ ಕಾಂಗ್ರೆಸ್ ಗುಂಪಿನಲ್ಲಿ ಕಾಣಿಸಿಕೊಂಡಿದ್ದರು. ಡಿಸೆಂಬರ್‍ನಲ್ಲಿ ಆಪರೇಷನ್ ಕಮಲ ವಿಫಲವಾದ ನಂತರ ರೆಸಾರ್ಟಿನಲ್ಲಿ ಗದ್ದಲ ಮಾಡಿಕೊಂಡು ಹಲ್ಲೆಗೊಳಗಾಗಿದ್ದರು.

ಇದಾದ ಮೇಲೆ ಅವರು ಸುದ್ದಿಯಾಗಿದ್ದು ಜಿಂದಾಲ್‍ಗೆ ಭೂಮಿ ಮಾರಾಟ ಮಾಡಬಾರದೆಂದು ಸರ್ಕಾರಕ್ಕೆ ಆಗ್ರಹಿಸುವ ಮೂಲಕ. ಹೊಸ ಮೈನಿಂಗ್ ನೀತಿಯಲ್ಲಿ ಮಾರ್ಪಾಟು ಮಾಡಿಸಲು ಈಗ ರಾಜಿನಾಮೆ ತಂತ್ರ ಹೂಡಿದ್ದಾರೋ ಅಥವಾ ಜಿಂದಾಲ್‍ಗೆ ಭೂಮಿ ಮಾರಾಟ ತಡೆಯಲು ಯತ್ನಿಸುವುದು, ಆಗದಿದ್ದರೆ ಆ ಕಡೆಯಿಂದ ‘ಫೇವರ್’ ಪಡೆಯುವ ಉದ್ದೇಶವೂ ಇದರ ಹಿಂದಿರಬಹುದೇ?

ಸುದ್ದಿ ಮಾಧ್ಯಮಗಳ ಪ್ರಕಾರ, ಸರ್ಕಾರ ಬೀಳುವುದು ಗ್ಯಾರಂಟಿ ಎಂಬ ಭಾವವನ್ನಂತೂ ಜನರಲ್ಲಿ ತೇಲಿ ಬಿಡಲಾಗಿದೆ. ಇದರ ಮೂಲ ಮಾತ್ರ ಆನಂದಸಿಂಗ್ ಹೊರಡಿಸಿದ ಗುಡುಗಿನ ಆರ್ಭಟವಷ್ಟೇ. ಹಿಂದಿನಂತೆ ಈ ಭಿನ್ನಮತ ಮಳೆ ಸುರಿಸದೇ ಹೋಗಬಹುದು. ರಾಷ್ಟ್ರೀಯ ಬಿಜೆಪಿಯಲ್ಲಿರುವ ಅಧಿಕಾರ ಮತ್ತು ಹಣಬಲದಿಂದ ಕೃತಕ ಮೋಡಬಿತ್ತನೆಯೂ ಆಗಿ ಮಳೆ ಸುರಿಸಲೂಬಹುದು. ಆಗಲೂ ಬಿತ್ತನೆಗೆ ಬೇಕಾದಷ್ಟು ಮಣ್ಣು ಹಸಿ (ಸರ್ಕಾರ ಕೆಡವಲು ಅಗತ್ಯವಾದ ಸಂಖ್ಯೆ) ಆಗುವುದೇ ಎಂಬ ಸಂಶಯ ಎಂದಿನಂತೆ ಇದ್ದೇ ಇದೆ,  ಅಧಿಕಾರದ ಆಟದಲ್ಲಿ ಏನು ಬೇಕಾದರೂ ಸಂಭವಿಸಬಹುದು. ಕಾದು ನೋಡುವುದಷ್ಟೇ ರಾಜ್ಯದ ಜನರ ಕರ್ಮ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....