Homeಕರ್ನಾಟಕಆನಂದಸಿಂಗ್ ರಾಜಿನಾಮೆ ಬ್ಲ್ಯಾಕ್‍ಮೇಲ್ ತಂತ್ರವೋ? ಅಸಲಿ ಕಾರಣ ಇದಲ್ಲವೇ?

ಆನಂದಸಿಂಗ್ ರಾಜಿನಾಮೆ ಬ್ಲ್ಯಾಕ್‍ಮೇಲ್ ತಂತ್ರವೋ? ಅಸಲಿ ಕಾರಣ ಇದಲ್ಲವೇ?

ರಾಜ್ಯ ಸರ್ಕಾರದ ಹೊಸ ಮೈನಿಂಗ್ ಲೀಸ್ ನೀತಿಯ ಪ್ರಕಾರ ಫ್ಯಾಕ್ಟರಿ ಇರುವ ಕಂಪನಿಗಳಿಗೆ ಮಾತ್ರ ಲೀಸ್ ನೀಡಲಾಗುವುದು ಎಂಬ ನಿಯಮವಿದೆ ಎನ್ನಲಾಗಿದೆ. ಹೀಗಾದರೆ ಆನಂದಸಿಂಗ್, ಲಾಡ್ ಮುಂತಾದವರಿಗೆ ಹೊಸ ಲೀಸ್ ಸಿಗುವುದು ಅಸಾಧ್ಯ.

- Advertisement -
- Advertisement -

| ಮಲ್ಲನಗೌಡರ್ |

ಇವತ್ತು ಮುಂಜಾನೆಯಿಂದ ಸರ್ಕಾರ ಬೀಳುವ/ ಬೀಳಿಸುವ ಆಟ ಹೊರನೋಟಕ್ಕೆ ಐಪಿಎಲ್ ಮ್ಯಾಚಿನ ಖದರು ಕಳೆಗಟ್ಟಿಕೊಂಡಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅಮೆರಿಕದಲ್ಲಿರುವಾಗ ದಿಢೀರನೆ ರಾಜಿನಾಮೆಯ ಕರಿಮೋಡಗಳು ಕಾಣತೋಡಗಿದ್ದು ಇವು ಮಳೆ ಸುರಿಸುತ್ತವಾ ಅಥವಾ ಎಂದಿನಂತೆ ಹಾಗೆ ಬಂದಂತೆ ಹೀಗೆ ತೇಲಿ ಹೋಗುತ್ತವಾ ಎಂಬ ಪ್ರಶ್ನೆ ಎದ್ದಿದೆ.

ಈ ರಾಜಿನಾಮೆ ಕ್ಲೈಮೇಟಿನಲ್ಲಿ ಎದ್ದು ಹೊಡೆಯುತ್ತಿರುವುದು ಹೊಸಪೇಟೆಯ ಶಾಸಕ ಆಂದ್‍ಸಿಂಗ್ ನಡವಳಿಕೆ. ಅವರೀಗ ಸ್ಪೀಕರ್ ಪಿ.ಎಸ್‍ಗೆ ರಾಜಿನಾಮೆ ಕೊಟ್ಟು ಮಾಧ್ಯಮಗಳ ಎದುರು ಅವರು ಸ್ಪೀಕರ್ ಹೆಸರಲ್ಲಿ ಬರೆದ ರಾಜಿನಾಮೆ ಪತ್ರವನ್ನು ಪ್ರದರ್ಶಿಸಿದ್ದಾರೆ. ಇದಕ್ಕೂ ಮೊದಲು ಅವರು ರಾಜಿನಾಮೆಯನ್ನು ರಾಜ್ಯಪಾಲರಿಗೆ ಕೊಟ್ಟಿದ್ದು ವಿಚಿತ್ರವೂ ಆಗಿತ್ತು, ಹಾಸ್ಯಾಸ್ಪದವೂ ಆಗಿತ್ತು. ಬಹುಷ ಅದು ಸರ್ಕಾರದ ಮೇಲೆ ಒತ್ತಡ ಹೇರಿ ತಮ್ಮ ಕೆಲಸ ಮಾಡಿಸಿಕೊಳ್ಳುವ ತಂತ್ರವಾಗಿದೆ. ಜಿಂದಾಲ್ ಕಂಪನಿಗೂ ಆನಂದಸಿಂಗ್‍ರಿಗೂ ವ್ಯವಹಾರದ ಮಟ್ಟಿಗೆ ಸರಿಯಿಲ್ಲ.

ಜಿಂದಾಲ್‍ಗೆ ಭೂಮಿ ಮಾರಾಟ ಮಾಡಬಾರದು ಎಂದು ಬಹಿರಂಗವಾಗಿ ಹೇಳಿದ ಏಕೈಕ ಬಳ್ಳಾರಿ ಶಾಸಕ ಅವರು. ಹಿಂದೆಯೂ ಒಮ್ಮೆ ಅವರು ಹೊಸಪೇಟೆ ಡ್ಯಾಂನಲ್ಲಿ ನೀರಿನ ಮಟ್ಟ ಕಡಿಮೆ ಇದ್ದಾಗ ಜಿಂದಾಲ್‍ಗೆ ನೀರು ಬಿಡಬಾರದು ಎಂದಿದ್ದರು.

ಈಗ ಜಿಂದಾಲ್‍ಗೆ ಭೂಮಿ ಮಾರಾಟ ವಿಷಯದ ಮರುಪರಿಶೀಲನೆ ಮಾಡಲು ರಚಿಸಿರುವ ಎಂಬಿ ಪಾಟೀಲ್ ನೇತೃತ್ವದ ಸಚಿವ ಸಂಪುಟ ಉಪಸಮಿತಿಯ ಮೇಲೆ ಒತ್ತಡ ಹೇರಲು, ಆ ಮೂಲಕ ಜಿಂದಾಲ್‍ಗೆ ಭೂಮಿ ಮಾರಾಟ ಆಗದಂತೆ ತಡೆಯುವ ಪ್ರಯತ್ನವನ್ನು ಆನಂದಸಿಂಗ್ ಮಾಡುತ್ತಿರುವ ಸಾಧ್ಯತೆ ಇದೆ. ತಮಗೆ ಕಾಂಗ್ರೆಸ್ ಶಾಸಕ ಅನಿಲ್ ಲಾಡ್ ಬೆಂಬಲವೂ ಇದೆ ಎಂದು ಆನಂದಸಿಂಗ್ ಹೇಳುತ್ತಿರುವುದು ಕುತೂಹಲಕರವಾಗಿದೆ. ಹೊಸಪೇಟೆ ಕೇಂದ್ರವಾಗಿಸಿ ವಿಜಯನಗರ ಹೊಸ ಜಿಲ್ಲೆ ರಚಿಸಬೇಕೆಂಬ ಬೇಡಿಕೆಗಾಗಿ ರಾಜಿನಾಮೆ ನಿಡುತ್ತಿರುವುದಾಗಿಯೂ ಆನಂದಸಿಂಗ್ ಹೇಳಲು ಶುರು ಮಾಡಿದ್ದಾರೆ.

ಇಲ್ಲಿ ಒಂದು ಸೂಕ್ಷ್ಮ ವಿಷಯವೂ ಇದೆ. ರಾಜ್ಯ ಸರ್ಕಾರದ ಹೊಸ ಮೈನಿಂಗ್ ಲೀಸ್ ನೀತಿಯ ಪ್ರಕಾರ ಫ್ಯಾಕ್ಟರಿ ಇರುವ ಕಂಪನಿಗಳಿಗೆ ಮಾತ್ರ ಲೀಸ್ ನೀಡಲಾಗುವುದು ಎಂಬ ನಿಯಮವಿದೆ ಎನ್ನಲಾಗಿದೆ. ಹೀಗಾದರೆ ಆನಂದಸಿಂಗ್, ಲಾಡ್ ಮುಂತಾದವರಿಗೆ ಹೊಸ ಲೀಸ್ ಸಿಗುವುದು ಅಸಾಧ್ಯ. ಹೊಸ ಲೀಸ್‍ಗಳೆಲ್ಲ ಜಿಂದಾಲ್ ಪಾಲಾಗುವ ಸಾಧ್ಯತೆಯೇ ಹೆಚ್ಚು ಎನ್ನಲಾಗುತ್ತಿದೆ. ಈ ಹೊಸ ನಿಯಮ ತಿದ್ದುಪಡಿ ಮಾಡಿ ಫ್ಯಾಕ್ಟರಿ ಇಲ್ಲದ ಮೈನಿಂಗ್ ಕಂಪನಿಗಳಿಗೂ ಲೀಸ್ ನೀಡುವ ಅವಕಾಶ ಮಾಡಿಕೊಡಿ ಎಂಬ ಒತ್ತಡ ಹೇರುವ ತಂತ್ರವಾಗಿಯೂ ಇದನ್ನು ನೋಡಬಹುದು.

ತಮ್ಮ ವೈಯಕ್ತಿಕ ಲಾಭಕ್ಕಾಗಿ ತಾವಿರುವ ಪಕ್ಷದ ಮೇಲೆ ಒತ್ತಡ ಹೇರಲು ಹಿಂದೆ ಇಂತಹ ಹಲವಾರು ಬ್ಲ್ಯಾಕ್‍ಮೇಲ್ ತಂತ್ರಗಳನ್ನು ಆನಂದಸಿಂಗ್ ಅನುಸರಿಸಿದ್ದಾರೆ. ಅವರು ಬಿಜೆಪಿ ಶಾಸಕರಾಗಿದ್ದಾಗ ಮಂತ್ರಿ ಪದವಿ ಪಡೆಯಲು ಒತ್ತಡ ಹೇರುವ ಸಲುವಾಗಿ ಹೊಸಪೇಟೆಯಲ್ಲಿ ಭವ್ಯವಾಗಿ ಟಿಪ್ಪು ಜಯಂತಿ ಆಚರಿಸಿದ್ದರು. ಕಾಂಗ್ರೆಸ್ ಶಾಸಕರಾದ ಮೇಲೆ ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಲು ಒತ್ತಡ ಹೇರಲು ಹನುಮ ಮಾಲೆ ಜಯಂತಿಯಲ್ಲಿ ಭಾಗವಹಿಸಿ ಕಾಂಗ್ರೆಸ್ ನಾಯಕರಲ್ಲಿ ದಿಗಿಲು ಮೂಡಿಸಿದ್ದರು. ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ಗಿಟ್ಟಿಸಲು ರಮೇಶ ಜಾರಕಿಹೊಳಿ ಗುಂಪಿನೊಂದಿಗೆ ಮುಂಬೈ ಸುತ್ತಾಡಿ ಬಂದಿದ್ದ ಅವರು, ಬಹುಮತ ಸಾಬೀತುಪಡಿಸುವ ವೇಳೆಗೆ ಕಾಂಗ್ರೆಸ್ ಗುಂಪಿನಲ್ಲಿ ಕಾಣಿಸಿಕೊಂಡಿದ್ದರು. ಡಿಸೆಂಬರ್‍ನಲ್ಲಿ ಆಪರೇಷನ್ ಕಮಲ ವಿಫಲವಾದ ನಂತರ ರೆಸಾರ್ಟಿನಲ್ಲಿ ಗದ್ದಲ ಮಾಡಿಕೊಂಡು ಹಲ್ಲೆಗೊಳಗಾಗಿದ್ದರು.

ಇದಾದ ಮೇಲೆ ಅವರು ಸುದ್ದಿಯಾಗಿದ್ದು ಜಿಂದಾಲ್‍ಗೆ ಭೂಮಿ ಮಾರಾಟ ಮಾಡಬಾರದೆಂದು ಸರ್ಕಾರಕ್ಕೆ ಆಗ್ರಹಿಸುವ ಮೂಲಕ. ಹೊಸ ಮೈನಿಂಗ್ ನೀತಿಯಲ್ಲಿ ಮಾರ್ಪಾಟು ಮಾಡಿಸಲು ಈಗ ರಾಜಿನಾಮೆ ತಂತ್ರ ಹೂಡಿದ್ದಾರೋ ಅಥವಾ ಜಿಂದಾಲ್‍ಗೆ ಭೂಮಿ ಮಾರಾಟ ತಡೆಯಲು ಯತ್ನಿಸುವುದು, ಆಗದಿದ್ದರೆ ಆ ಕಡೆಯಿಂದ ‘ಫೇವರ್’ ಪಡೆಯುವ ಉದ್ದೇಶವೂ ಇದರ ಹಿಂದಿರಬಹುದೇ?

ಸುದ್ದಿ ಮಾಧ್ಯಮಗಳ ಪ್ರಕಾರ, ಸರ್ಕಾರ ಬೀಳುವುದು ಗ್ಯಾರಂಟಿ ಎಂಬ ಭಾವವನ್ನಂತೂ ಜನರಲ್ಲಿ ತೇಲಿ ಬಿಡಲಾಗಿದೆ. ಇದರ ಮೂಲ ಮಾತ್ರ ಆನಂದಸಿಂಗ್ ಹೊರಡಿಸಿದ ಗುಡುಗಿನ ಆರ್ಭಟವಷ್ಟೇ. ಹಿಂದಿನಂತೆ ಈ ಭಿನ್ನಮತ ಮಳೆ ಸುರಿಸದೇ ಹೋಗಬಹುದು. ರಾಷ್ಟ್ರೀಯ ಬಿಜೆಪಿಯಲ್ಲಿರುವ ಅಧಿಕಾರ ಮತ್ತು ಹಣಬಲದಿಂದ ಕೃತಕ ಮೋಡಬಿತ್ತನೆಯೂ ಆಗಿ ಮಳೆ ಸುರಿಸಲೂಬಹುದು. ಆಗಲೂ ಬಿತ್ತನೆಗೆ ಬೇಕಾದಷ್ಟು ಮಣ್ಣು ಹಸಿ (ಸರ್ಕಾರ ಕೆಡವಲು ಅಗತ್ಯವಾದ ಸಂಖ್ಯೆ) ಆಗುವುದೇ ಎಂಬ ಸಂಶಯ ಎಂದಿನಂತೆ ಇದ್ದೇ ಇದೆ,  ಅಧಿಕಾರದ ಆಟದಲ್ಲಿ ಏನು ಬೇಕಾದರೂ ಸಂಭವಿಸಬಹುದು. ಕಾದು ನೋಡುವುದಷ್ಟೇ ರಾಜ್ಯದ ಜನರ ಕರ್ಮ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...