Homeಕರ್ನಾಟಕವಿಶ್ವನಾಥ್ ನಾಲಿಗೆ ಸಂಸ್ಕೃತಿಯವರು: ಹೆಚ್.ವಿಶ್ವನಾಥ್ ವಿರುದ್ಧ ಶಾಸಕ ರೇಣುಕಾಚಾರ್ಯ ಗರಂ

ವಿಶ್ವನಾಥ್ ನಾಲಿಗೆ ಸಂಸ್ಕೃತಿಯವರು: ಹೆಚ್.ವಿಶ್ವನಾಥ್ ವಿರುದ್ಧ ಶಾಸಕ ರೇಣುಕಾಚಾರ್ಯ ಗರಂ

- Advertisement -
- Advertisement -

ಬಿಜೆಪಿಯಲ್ಲಿ ವಲಸಿಗರು ಮತ್ತು ಮೂಲನಿವಾಸಿಗರ ನಡುವಿನ ವಾಕ್ಸಮರ ತೀವ್ರಗೊಂಡಿದೆ. ಮೊನ್ನೆ ಈಶ್ವರಪ್ಪ ವಲಸೆ ಸಚಿವರಿಂದಲೇ ಸರ್ಕಾರದಲ್ಲಿ ಗೊಂದಲಗಳು ಸೃಷ್ಟಿಯಾಗುತ್ತಿವೆ ಎಂದು ಹೇಳಿಕೆ ನೀಡಿದ್ದರು. ಇದಾದ ಬೆನ್ನಲ್ಲೇ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿರುವ ಎಂಎಲ್‌ಸಿ ಹೆಚ್. ವಿಶ್ವನಾಥ್, ಬಿ.ಎಸ್. ಯಡಿಯೂರಪ್ಪನವರಿಗೆ ವಯಸ್ಸಾಗಿದೆ, ಆರೋಗ್ಯ ಸ್ಪಂದಿಸುತ್ತಿಲ್ಲ, ಸರ್ಕಾರ ನಡೆಸುವ ಉತ್ಸಾಹವಿಲ್ಲ. ಹಾಗಾಗಿ ಅವರು ರಾಜಿನಾಮೆ ಕೊಟ್ಟು ಬೇರೆಯವರಿಗೆ ಅವಕಾಶಮಾಡಿಕೊಡಬೇಕು ಎಂದು ಹೇಳಿಕೆ ನೀಡಿ ವಿವಾದವನ್ನು ಹುಟ್ಟುಹಾಕಿದ್ದರು. ಬಿಜೆಪಿ ನಾಯಕ ಹೆಚ್.ವಿಶ್ವನಾಥ್ ಹೇಳಿಕೆಗೆ ಬಿಜೆಪಿ ವಲಯದಲ್ಲಿ ತೀವ್ರ ಅಸಮಾಧನ ವ್ಯಕ್ತವಾಗಿದೆ. ಬಿಜೆಪಿಯ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೂ ವಿಶ್ವನಾಥ್ ದೂರು ನೀಡಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಬೇರೊಬ್ಬರು ಸಿಎಂ ಆಗಲಿ: ಎಚ್.ವಿಶ್ವನಾಥ್

ಇನ್ನು ಈ ನಡುವೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಕಟ್ಟಾ ಬೆಂಬಲಿಗರಾಗಿರುವ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಮತ್ತು ಹೊನ್ನಾಳಿಯ ಶಾಸಕ ಎಂ.ಪಿ. ರೇಣುಕಾಚಾರ್ಯ ಹೆಚ್. ವಿಶ್ವನಾಥ್ ವಿರುದ್ಧ ಆರೋಪಗಳ ಸುರಿಮಳೆ ಮಾಡಿದ್ದಾರೆ. ಹೆಚ್. ವಿಶ್ವನಾಥ್ ಹಿರಿಯರು, ಅವರ ಹಿರಿತನದ ಗೌರವವನ್ನು ಉಳಿಸಿಕೊಳ್ಳಬೇಕು ಎಂದು ವ್ಯಂಗ್ಯವಾಗಿ ವಿಶ್ವನಾಥ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.

ವಿಶ್ವನಾಥ್ ಅವರಿಗೆ ಪಕ್ಷನಿಷ್ಠೆಯೆಂಬುದು ತಿಳಿದಿಲ್ಲ ಎಂಬರ್ಥದಲ್ಲಿ ಮಾತನಾಡಿದ ಶಾಸಕ ರೇಣುಕಾಚಾರ್ಯ ಹೆಚ್. ವಿಶ್ವನಾಥ್ ನಾಲಿಗೆ ಸಂಸ್ಕೃತಿಯವರು ಎಂದು ವ್ಯಂಗ್ಯವಾಡಿದ್ದಾರೆ. ಹೆಚ್. ವಿಶ್ವನಾಥ್ ಹಿಂದೆ ಕಾಂಗ್ರೆಸ್‌ನಲ್ಲಿದ್ದ ಸಂದರ್ಭದಲ್ಲಿ ಹಿರಿಯ ನಾಯಕ ಎಸ್.ಎಂ.ಕೃಷ್ಣ ವಿರುದ್ದ ಲಘುವಾಗಿ ಮಾತನಾಡಿದ್ದರು. ಆ ನಂತರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಬೇಕಾಬಿಟ್ಟಿ ಹೇಳಿಕೆಗಳನ್ನು ನೀಡಲು ಅರಂಭಿಸಿದರು. ನಂತರ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ ಮೇಲೆ ತಮ್ಮದೇ ಪಕ್ಷದ ನಾಯಕರ ವಿರುದ್ಧ ಬಹಿರಂಗ ಹೇಳಿಕೆಗಳನ್ನು ನೀಡಲು ಆರಂಭಿಸಿದರು. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕುರಿತಾಗಿ ವಿಶ್ವನಾಥ್ ಅತ್ಯಂತ ಲಘುವಾಗಿ ಮಾತನಾಡಿದ್ದಾರೆ. ಅವರ ನಾಲಿಗೆಗೆ ಸಂಸ್ಕೃತಿ ಇಲ್ಲ. ಯಡಿಯೂರಪ್ಪ ವಿಶ್ವನಾಥ್‌ಗೆ ಎಲ್ಲವನ್ನೂ ನೀಡಿದ್ದಾರೆ. ಆದರೆ ಅವರಿಗೆ ಕೃತಜ್ಞತೆ ಎಂಬುದು ತಿಳಿದಿಲ್ಲ ಎಂದು  ಹೆಚ್.ವಿಶ್ವನಾಥ್ ವಿರುದ್ಧ ಹರಿಹಾಯ್ದಿದ್ದಾರೆ.

ನನ್ನ ಫೋನ್ ಟ್ಯಾಪ್ ಆಗುತ್ತಿದೆ: ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಆರೋಪ

ಈ ನಡುವೆ ಸಿಎಂ ಯಡಿಯೂರಪ್ಪ ವಿರುದ್ಧ ಬಣದಲ್ಲಿ ಗುರುತಿಸಿಕೊಂಡಿರುವ ಮತ್ತು ದೆಹಲಿಗೆ ತೆರಳಿ ಯಡಿಯೂರಪ್ಪ ವಿರುದ್ಧ ದೂರು ನೀಡಿರುವ ಧಾರವಾಡ ಪಶ್ಚಿಮ ಶಾಸಕ ಅರವಿಂದ್ ಬೆಲ್ಲದ್ ನನ್ನ ಫೋನ್‌ ಅನ್ನು ಕದ್ದಾಲಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಕುರಿತು ತನಿಖೆ ನಡೆಸುವಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಸ್ವೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಡಿಜಿಪಿ ಪ್ರವೀಣ್‌ ಸೂದ್‌ರವರಿಗೆ ದೂರು ನೀಡಿದ್ದಾರೆ.

ಸದ್ಯಕ್ಕೆ ವಿಚಾರಣಾಧೀನ ಖೈದಿಯಾಗಿ ಜೈಲಿನಲ್ಲಿರುವ ಯುವರಾಜ್‌ಸ್ವಾಮಿ ನನಗೆ ಕರೆ ಮಾಡಿದರು. ನಿಮ್ಮ ನಂಬರ್‌ನಿಂದ ಮಿಸ್‌ ಕಾಲ್ ಬಂದಿತ್ತು ಅದಕ್ಕೆ ಕರೆ ಮಾಡಿದೆ ಎಂದರು. ಆಗ ನನಗೆ ಈತ ರಾಜಕೀಯ ಬೆಳವಣಿಗೆಗಳ ಕುರಿತು ಮಾತನಾಡಲು ಕರೆ ಮಾಡಿದ್ದಾನೆ ಎಂಬುದು ಅರಿವಾಯಿತು. ಇದು ನನ್ನನ್ನು ಈ ಪ್ರಕರಣದಲ್ಲಿ ಸಿಕ್ಕಿ ಹಾಕಿಸಲು ಯಾರೋ ಮಾಡಿರುವ ಹುನ್ನಾರ. ನಮ್ಮ ತಂದೆಯವರು ಐದು ಬಾರಿ ಶಾಸಕರಾದವರು. ನಾನು ಸ್ವಚ್ಚ ಚಾರಿತ್ರ್ಯ ರಾಜಕಾರಣಿ, ನನ್ನ ವರ್ಚಸ್ಸಿಗೆ ಧಕ್ಕೆ ತರಲು ಯತ್ನಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಒಟ್ಟಿನಲ್ಲಿ ಬಿಜೆಪಿಯೊಳಗಿನ ಆಂತರಿಕ ಬಿಕ್ಕಟ್ಟು ಸದ್ಯಕ್ಕೆ ಶಮನವಾಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಇದೇ ಸಂದರ್ಭದಲ್ಲಿ ಇಂದು ಸಂಜೆಗೆ ಮುಖ್ಯಮಂತ್ರಿಗಳು ಸಭೆ ಕರೆದಿದ್ದಾರೆ. ಮುಂದೆ ಏನಾಗಲಿದೆ ಕಾದು ನೋಡಬೇಕಿದೆ.


ಇದನ್ನೂ ಓದಿ : ನಂದಿಗ್ರಾಮ ಫಲಿತಾಂಶ: ಮಮತಾ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ನಡೆಸುತ್ತಿರುವ ಜಸ್ಟೀಸ್ ಕೌಶಿಕ್ ಚಂದ ಬಗ್ಗೆ ಟಿಎಂಸಿ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...