Homeಕರ್ನಾಟಕವಿಶ್ವನಾಥ್ ನಾಲಿಗೆ ಸಂಸ್ಕೃತಿಯವರು: ಹೆಚ್.ವಿಶ್ವನಾಥ್ ವಿರುದ್ಧ ಶಾಸಕ ರೇಣುಕಾಚಾರ್ಯ ಗರಂ

ವಿಶ್ವನಾಥ್ ನಾಲಿಗೆ ಸಂಸ್ಕೃತಿಯವರು: ಹೆಚ್.ವಿಶ್ವನಾಥ್ ವಿರುದ್ಧ ಶಾಸಕ ರೇಣುಕಾಚಾರ್ಯ ಗರಂ

- Advertisement -
- Advertisement -

ಬಿಜೆಪಿಯಲ್ಲಿ ವಲಸಿಗರು ಮತ್ತು ಮೂಲನಿವಾಸಿಗರ ನಡುವಿನ ವಾಕ್ಸಮರ ತೀವ್ರಗೊಂಡಿದೆ. ಮೊನ್ನೆ ಈಶ್ವರಪ್ಪ ವಲಸೆ ಸಚಿವರಿಂದಲೇ ಸರ್ಕಾರದಲ್ಲಿ ಗೊಂದಲಗಳು ಸೃಷ್ಟಿಯಾಗುತ್ತಿವೆ ಎಂದು ಹೇಳಿಕೆ ನೀಡಿದ್ದರು. ಇದಾದ ಬೆನ್ನಲ್ಲೇ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿರುವ ಎಂಎಲ್‌ಸಿ ಹೆಚ್. ವಿಶ್ವನಾಥ್, ಬಿ.ಎಸ್. ಯಡಿಯೂರಪ್ಪನವರಿಗೆ ವಯಸ್ಸಾಗಿದೆ, ಆರೋಗ್ಯ ಸ್ಪಂದಿಸುತ್ತಿಲ್ಲ, ಸರ್ಕಾರ ನಡೆಸುವ ಉತ್ಸಾಹವಿಲ್ಲ. ಹಾಗಾಗಿ ಅವರು ರಾಜಿನಾಮೆ ಕೊಟ್ಟು ಬೇರೆಯವರಿಗೆ ಅವಕಾಶಮಾಡಿಕೊಡಬೇಕು ಎಂದು ಹೇಳಿಕೆ ನೀಡಿ ವಿವಾದವನ್ನು ಹುಟ್ಟುಹಾಕಿದ್ದರು. ಬಿಜೆಪಿ ನಾಯಕ ಹೆಚ್.ವಿಶ್ವನಾಥ್ ಹೇಳಿಕೆಗೆ ಬಿಜೆಪಿ ವಲಯದಲ್ಲಿ ತೀವ್ರ ಅಸಮಾಧನ ವ್ಯಕ್ತವಾಗಿದೆ. ಬಿಜೆಪಿಯ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೂ ವಿಶ್ವನಾಥ್ ದೂರು ನೀಡಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಬೇರೊಬ್ಬರು ಸಿಎಂ ಆಗಲಿ: ಎಚ್.ವಿಶ್ವನಾಥ್

ಇನ್ನು ಈ ನಡುವೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಕಟ್ಟಾ ಬೆಂಬಲಿಗರಾಗಿರುವ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಮತ್ತು ಹೊನ್ನಾಳಿಯ ಶಾಸಕ ಎಂ.ಪಿ. ರೇಣುಕಾಚಾರ್ಯ ಹೆಚ್. ವಿಶ್ವನಾಥ್ ವಿರುದ್ಧ ಆರೋಪಗಳ ಸುರಿಮಳೆ ಮಾಡಿದ್ದಾರೆ. ಹೆಚ್. ವಿಶ್ವನಾಥ್ ಹಿರಿಯರು, ಅವರ ಹಿರಿತನದ ಗೌರವವನ್ನು ಉಳಿಸಿಕೊಳ್ಳಬೇಕು ಎಂದು ವ್ಯಂಗ್ಯವಾಗಿ ವಿಶ್ವನಾಥ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.

ವಿಶ್ವನಾಥ್ ಅವರಿಗೆ ಪಕ್ಷನಿಷ್ಠೆಯೆಂಬುದು ತಿಳಿದಿಲ್ಲ ಎಂಬರ್ಥದಲ್ಲಿ ಮಾತನಾಡಿದ ಶಾಸಕ ರೇಣುಕಾಚಾರ್ಯ ಹೆಚ್. ವಿಶ್ವನಾಥ್ ನಾಲಿಗೆ ಸಂಸ್ಕೃತಿಯವರು ಎಂದು ವ್ಯಂಗ್ಯವಾಡಿದ್ದಾರೆ. ಹೆಚ್. ವಿಶ್ವನಾಥ್ ಹಿಂದೆ ಕಾಂಗ್ರೆಸ್‌ನಲ್ಲಿದ್ದ ಸಂದರ್ಭದಲ್ಲಿ ಹಿರಿಯ ನಾಯಕ ಎಸ್.ಎಂ.ಕೃಷ್ಣ ವಿರುದ್ದ ಲಘುವಾಗಿ ಮಾತನಾಡಿದ್ದರು. ಆ ನಂತರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಬೇಕಾಬಿಟ್ಟಿ ಹೇಳಿಕೆಗಳನ್ನು ನೀಡಲು ಅರಂಭಿಸಿದರು. ನಂತರ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ ಮೇಲೆ ತಮ್ಮದೇ ಪಕ್ಷದ ನಾಯಕರ ವಿರುದ್ಧ ಬಹಿರಂಗ ಹೇಳಿಕೆಗಳನ್ನು ನೀಡಲು ಆರಂಭಿಸಿದರು. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕುರಿತಾಗಿ ವಿಶ್ವನಾಥ್ ಅತ್ಯಂತ ಲಘುವಾಗಿ ಮಾತನಾಡಿದ್ದಾರೆ. ಅವರ ನಾಲಿಗೆಗೆ ಸಂಸ್ಕೃತಿ ಇಲ್ಲ. ಯಡಿಯೂರಪ್ಪ ವಿಶ್ವನಾಥ್‌ಗೆ ಎಲ್ಲವನ್ನೂ ನೀಡಿದ್ದಾರೆ. ಆದರೆ ಅವರಿಗೆ ಕೃತಜ್ಞತೆ ಎಂಬುದು ತಿಳಿದಿಲ್ಲ ಎಂದು  ಹೆಚ್.ವಿಶ್ವನಾಥ್ ವಿರುದ್ಧ ಹರಿಹಾಯ್ದಿದ್ದಾರೆ.

ನನ್ನ ಫೋನ್ ಟ್ಯಾಪ್ ಆಗುತ್ತಿದೆ: ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಆರೋಪ

ಈ ನಡುವೆ ಸಿಎಂ ಯಡಿಯೂರಪ್ಪ ವಿರುದ್ಧ ಬಣದಲ್ಲಿ ಗುರುತಿಸಿಕೊಂಡಿರುವ ಮತ್ತು ದೆಹಲಿಗೆ ತೆರಳಿ ಯಡಿಯೂರಪ್ಪ ವಿರುದ್ಧ ದೂರು ನೀಡಿರುವ ಧಾರವಾಡ ಪಶ್ಚಿಮ ಶಾಸಕ ಅರವಿಂದ್ ಬೆಲ್ಲದ್ ನನ್ನ ಫೋನ್‌ ಅನ್ನು ಕದ್ದಾಲಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಕುರಿತು ತನಿಖೆ ನಡೆಸುವಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಸ್ವೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಡಿಜಿಪಿ ಪ್ರವೀಣ್‌ ಸೂದ್‌ರವರಿಗೆ ದೂರು ನೀಡಿದ್ದಾರೆ.

ಸದ್ಯಕ್ಕೆ ವಿಚಾರಣಾಧೀನ ಖೈದಿಯಾಗಿ ಜೈಲಿನಲ್ಲಿರುವ ಯುವರಾಜ್‌ಸ್ವಾಮಿ ನನಗೆ ಕರೆ ಮಾಡಿದರು. ನಿಮ್ಮ ನಂಬರ್‌ನಿಂದ ಮಿಸ್‌ ಕಾಲ್ ಬಂದಿತ್ತು ಅದಕ್ಕೆ ಕರೆ ಮಾಡಿದೆ ಎಂದರು. ಆಗ ನನಗೆ ಈತ ರಾಜಕೀಯ ಬೆಳವಣಿಗೆಗಳ ಕುರಿತು ಮಾತನಾಡಲು ಕರೆ ಮಾಡಿದ್ದಾನೆ ಎಂಬುದು ಅರಿವಾಯಿತು. ಇದು ನನ್ನನ್ನು ಈ ಪ್ರಕರಣದಲ್ಲಿ ಸಿಕ್ಕಿ ಹಾಕಿಸಲು ಯಾರೋ ಮಾಡಿರುವ ಹುನ್ನಾರ. ನಮ್ಮ ತಂದೆಯವರು ಐದು ಬಾರಿ ಶಾಸಕರಾದವರು. ನಾನು ಸ್ವಚ್ಚ ಚಾರಿತ್ರ್ಯ ರಾಜಕಾರಣಿ, ನನ್ನ ವರ್ಚಸ್ಸಿಗೆ ಧಕ್ಕೆ ತರಲು ಯತ್ನಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಒಟ್ಟಿನಲ್ಲಿ ಬಿಜೆಪಿಯೊಳಗಿನ ಆಂತರಿಕ ಬಿಕ್ಕಟ್ಟು ಸದ್ಯಕ್ಕೆ ಶಮನವಾಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಇದೇ ಸಂದರ್ಭದಲ್ಲಿ ಇಂದು ಸಂಜೆಗೆ ಮುಖ್ಯಮಂತ್ರಿಗಳು ಸಭೆ ಕರೆದಿದ್ದಾರೆ. ಮುಂದೆ ಏನಾಗಲಿದೆ ಕಾದು ನೋಡಬೇಕಿದೆ.


ಇದನ್ನೂ ಓದಿ : ನಂದಿಗ್ರಾಮ ಫಲಿತಾಂಶ: ಮಮತಾ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ನಡೆಸುತ್ತಿರುವ ಜಸ್ಟೀಸ್ ಕೌಶಿಕ್ ಚಂದ ಬಗ್ಗೆ ಟಿಎಂಸಿ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...