Homeಕರ್ನಾಟಕಶಾಸಕ ಮುನಿರತ್ನ ಪ್ರಕರಣ | ಶೆಡ್‌ ತೆರವಿಗೆ ಆದೇಶಿಸಿದ್ದು ಯಾರು? ಕೋರ್ಟ್ ಪ್ರಶ್ನೆ

ಶಾಸಕ ಮುನಿರತ್ನ ಪ್ರಕರಣ | ಶೆಡ್‌ ತೆರವಿಗೆ ಆದೇಶಿಸಿದ್ದು ಯಾರು? ಕೋರ್ಟ್ ಪ್ರಶ್ನೆ

- Advertisement -
- Advertisement -

ಬೆಂಗಳೂರಿನ ಹೆಚ್‌ಎಂಟಿ ವಾರ್ಡ್‌ನ ಪೀಣ್ಯದ ಎಸ್‌ಆರ್‌ಎಸ್‌ ರಸ್ತೆಯ ಪ್ರಥಮ ದರ್ಜೆ ಕಾಲೇಜು ಪಕ್ಕದ ಅಕ್ಕಮಹಾದೇವಿ ಕೊಳೆಗೇರಿಯ 100 ಮೀಟರ್‌ ಪ್ರದೇಶದಲ್ಲಿ ಶೆಡ್‌ಗಳನ್ನು ನಿರ್ಮಿಸಿಕೊಂಡಿದ್ದ 53 ಕುಟುಂಬಗಳನ್ನು ತೆರವುಗೊಳಿಸಲು ಯಾರ ಆದೇಶವಿತ್ತು ಎಂಬುದರ ಬಗ್ಗೆ ರಾಜ್ಯ ಸರ್ಕಾರ ವಿವರಣೆ ನೀಡಬೇಕು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ (ಫೆ.5) ಆದೇಶಿಸಿದೆ.

ತೆರವು ಕಾರ್ಯಾಚರಣೆ ವೇಳೆ ಮಾದಿಗ ಸಮುದಾಯದ ಮಹಿಳೆಯನ್ನು ನಿಂದಿಸಿ, ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ದಾಖಲಾಗಿರುವ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಶಾಸಕ ಮುನಿರತ್ನ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ವಿಶೇಷ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ನಡೆಸಿದ್ದಾರೆ.

ಮುನಿರತ್ನ ಪರ ವಕೀಲ ಎಸ್‌ ಎಸ್‌ ಶ್ರೀನಿವಾಸ ರಾವ್‌ ವಾದ ಮಂಡಿಸಿ, “ಈ ಪ್ರಕರಣದಲ್ಲಿ ಮುನಿರತ್ನ ಮುಗ್ಧರು. ಮೇಲಿಂದ ಮೇಲೆ ಅವರ ವಿರುದ್ಧ ಪ್ರಕರಣಗಳನ್ನು ದಾಖಲಿಸುತ್ತಿರುವುದರಿಂದ ಕ್ಷೇತ್ರದಲ್ಲಿ ಅವರು ಸಾರ್ವಜನಿಕರ ಕೆಲಸ ಮಾಡುವುದೇ ಕಷ್ಟವಾಗಿದೆ” ಎಂದಿದ್ದಾರೆ.

ಒಕ್ಕಲೆಬ್ಬಿಸುವ ಕಾರ್ಯಾಚರಣೆಯನ್ನು ಬಿಬಿಎಂಪಿ ಕಾನೂನುಬದ್ಧವಾಗಿ ನಡೆಸಿದೆ. ಆದರೆ, ಮಾಧ್ಯಮಗಳಲ್ಲಿ ಮುನಿರತ್ನ ಅವರ ವ್ಯಕ್ತಿತ್ವಕ್ಕೆ ಹಾನಿ ಮಾಡಲು ಅಪಪ್ರಚಾರ ಮಾಡಲಾಗುತ್ತಿದೆ. ದೂರುದಾರರ ಪರ ಹಿರಿಯ ವಕೀಲ ಸಿ. ಹೆಚ್‌ ಹನುಮಂತರಾಯ ಅವರು ಆರೋಪಿಸಿರುವಂತೆ ಅಲ್ಲಿ ಕೇವಲ ದಲಿತ ಕುಟುಂಬಗಳು ಮಾತ್ರವೇ ಇರಲಿಲ್ಲ. ಅವರಲ್ಲಿ ಮುಸ್ಲಿಂ ಮತ್ತು ಸಾಮಾನ್ಯ ವರ್ಗದ ಜನರೂ ಇದ್ದರು” ಎಂದಿದ್ದಾರೆ.

ಈ ವೇಳೆ ಹನುಮಂತರಾಯ ಅವರು “ಬಿಬಿಎಂಪಿ ಕಾರ್ಯಾಚರಣೆ ನಡೆಸಿದ್ದರೆ ಮುನಿರತ್ನ ಏಕೆ ಅದನ್ನು ಮೌನವಾಗಿ ವೀಕ್ಷಿಸಿದರು? ಕ್ಷೇತ್ರದ ಶಾಸಕರಾಗಿ ನಿರ್ಗತಿಕರಿಗೆ ಏಕೆ ಪುನರ್ವಸತಿ ಕಲ್ಪಿಸಲಿಲ್ಲ” ಎಂದು ಪ್ರಶ್ನಿಸಿದ್ದಾರೆ.

ಆಗ ಮಧ್ಯಪ್ರವೇಶಿಸಿದ ಪೀಠ “ಈ ಪ್ರಕರಣದಲ್ಲಿ ಯಾರು ತೆರವು ಕಾರ್ಯಾಚರಣೆ ನಡೆಸಿದರು ಎಂಬುವುದೇ ಯಕ್ಷ ಪ್ರಶ್ನೆಯಾಗಿದೆ. ನ್ಯಾಯಾಲಯಕ್ಕೆ ಪ್ರಾಸಿಕ್ಯೂಷನ್‌ ಸಮರ್ಪಕವಾಗಿ ಉತ್ತರಿಸಿಲ್ಲ. ಇದರಿಂದ ಮಧ್ಯಂತರ ಆದೇಶವನ್ನು ಮತ್ತೆ ವಿಸ್ತರಿಸಬೇಕಾಗಿ ಬಂದಿದೆ. ಪೊಲೀಸ್ ಇಲಾಖೆ ಕ್ಷಮತೆಯಿಂದ ಕಾರ್ಯ ನಿರ್ವಹಿಸಬೇಕಾದ ಅವಶ್ಯಕತೆ ಇದೆ” ಎಂದು ಮೌಖಿಕವಾಗಿ ಅಸಮಾಧಾನ ವ್ಯಕ್ತಪಡಿಸಿದೆ.

ಅಲ್ಲದೇ, “ಯಾರ ಆದೇಶದ ಅನ್ವಯ ಒತ್ತುವರಿ ಕಾರ್ಯಾಚರಣೆ ನಡೆಸಲಾಗಿದೆ ಎಂಬುವುದನ್ನು ತಿಳಿಸಬೇಕು” ಎಂದು ಸರ್ಕಾರಿ ಅಭಿಯೋಜಕಿ ಪಾರ್ವತಿ ಅವರಿಗೆ ನಿರ್ದೇಶಿಸಿ, ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ : ಬೆಂಗಳೂರಿನ ಪೀಣ್ಯ ಪ್ರಥಮ ದರ್ಜೆ ಕಾಲೇಜು ಪಕ್ಕದ ಅಕ್ಕಮಹಾದೇವಿ ಕೊಳೆಗೇರಿಯ 100 ಮೀಟರ್‌ ಪ್ರದೇಶದಲ್ಲಿ ಶೆಡ್‌ಗಳನ್ನು ನಿರ್ಮಿಸಿಕೊಂಡಿದ್ದ 60ರಿಂದ 70ರಷ್ಟು ಉತ್ತರ ಕರ್ನಾಟಕದ ದಲಿತ ಕುಟುಂಬಗಳನ್ನು ಜನವರಿ 20ರಂದು ಶಾಸಕ ಮುನಿರತ್ನ ಮತ್ತು ಬೆಂಬಲಿಗರಾದ ವಸಂತಕುಮಾರ್, ಚನ್ನಕೇಶವ, ಗೊರಗುಂಟೆಪಾಳ್ಯದ ನವೀನ, ಶ್ರೀರಾಮ, ಪೀಣ್ಯದ ಕಿಟ್ಟಿ, ಗಂಗಾ ಮತ್ತು ಇತರರು ಕಾನೂನು ಬಾಹಿರವಾಗಿ ಜೆಸಿಬಿ ತಂದು ತೆರವುಗೊಳಿಸಿದ್ದಾರೆ. ಅಲ್ಲದೆ, ನನಗೆ ಜಾತಿನಿಂದನೆ ಮಾಡಿ ಅಲ್ಲಿದ್ದ ಕೆಲ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅವರ ಎದೆಗೆ ಮುನಿರತ್ನ ಒದ್ದಿದ್ದಾರೆ ಎಂದು ಸಂತ್ರಸ್ತೆಯೊಬ್ಬರು ಆರ್‌ಎಂಸಿ ಯಾರ್ಡ್‌ ಪೊಲೀಸ್‌ ಠಾಣೆಯಲ್ಲಿ ಜನವರಿ 20ರಂದು ದೂರು ನೀಡಿದ್ದರು.

ಈ ದೂರು ಆಧರಿಸಿ ಪೊಲೀಸರು ಭಾರತೀಯ ನ್ಯಾಯ ಸುರಕ್ಷಾ ಸಂಹಿತೆ-2023ರ ಸೆಕ್ಷನ್‌ಗಳಾದ 324(2),74,351(2), 351(3) ಮತ್ತು 190 ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯಿದೆ–2014ರ ಸೆಕ್ಷನ್‌ 3(1), ಆರ್‌(ಎಸ್‌) ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿದ್ದಾರೆ.

ಬ್ಯಾಂಕ್‌ಗೆ ವಂಚನೆ ಸಾಬೀತು; ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ ಜೈಲು ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...