Homeಮುಖಪುಟಶಾಸಕರ ಖರೀದಿ ಆರೋಪ; ಅರವಿಂದ್ ಕೇಜ್ರಿವಾಲ್‌ಗೆ ದೆಹಲಿ ಪೊಲೀಸರಿಂದ ನೋಟಿಸ್

ಶಾಸಕರ ಖರೀದಿ ಆರೋಪ; ಅರವಿಂದ್ ಕೇಜ್ರಿವಾಲ್‌ಗೆ ದೆಹಲಿ ಪೊಲೀಸರಿಂದ ನೋಟಿಸ್

- Advertisement -
- Advertisement -

ಆಮ್ ಆದ್ಮಿ ಪಕ್ಷದ ಶಾಸಕರನ್ನು ಬಿಜೆಪಿ ಖರೀದಿಸಲು ಯತ್ನಿಸಿದೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮನೆಗೆ ನೋಟಿಸ್ ನೀಡಲು ರಾಷ್ಟ್ರ ರಾಜಧಾನಿ ಪೊಲೀಸರ ತಂಡ ಇಂದು ಮತ್ತೆ ಅವರ ನಿವಾಸಕ್ಕೆ ತೆರಳಿತ್ತು.

ದೆಹಲಿ ಕ್ರೈಂ ಬ್ರಾಂಚ್ ತಂಡಗಳು ನಿನ್ನೆಯೂ ಮುಖ್ಯಮಂತ್ರಿ ಕೇಜ್ರಿವಾಲ್ ಮತ್ತು ದೆಹಲಿ ಸಚಿವೆ ಅತಿಶಿ ಅವರ ಮನೆಗಳಿಗೆ ನೋಟಿಸ್ ನೀಡಲು ತೆರಳಿದ್ದವು. ಆದರೆ, ಕೇಜ್ರಿವಾಲ್ ಅವರ ಮನೆಯ ಅಧಿಕಾರಿಗಳು ನೋಟಿಸ್ ಸ್ವೀಕರಿಸಲು ನಿರಾಕರಿಸಿದರು. ಅತಿಶಿ ಅವರು ಮನೆಯಲ್ಲಿ ಇರಲಿಲ್ಲ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಕ್ರೈಂ ಬ್ರಾಂಚ್ ಖುದ್ದು ಕೇಜ್ರಿವಾಲ್ ಅವರಿಗೆ ನೋಟಿಸ್ ಹಸ್ತಾಂತರಿಸಲು ಬಯಸಿದೆ ಎಂದು ಮೂಲಗಳು ತಿಳಿಸಿವೆ. ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರ ಆರೋಪ ಗಂಭೀರವಾಗಿದೆ ಎಂದು ದೆಹಲಿ ಬಿಜೆಪಿ ಘಟಕ ಪೊಲೀಸ್ ಕಮಿಷನರ್ ಸಂಜಯ್ ಅರೋರಾ ಅವರಿಗೆ ದೂರು ಸಲ್ಲಿಸಿದೆ.

‘ಕೇಜ್ರಿವಾಲ್ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ನಾವು ಹೇಳಿದ್ದೇವೆ. ಕೇಜ್ರಿವಾಲ್ ಅವರ ಸುಳ್ಳಿನ ಹಿಂದಿನ ಸತ್ಯ ಈಗ ಬಹಿರಂಗಗೊಳ್ಳಲಿದೆ. ಅವರು ಸುಳ್ಳು ಹೇಳಲು ಸಾಧ್ಯವಿಲ್ಲ ಮತ್ತು ತನಿಖೆಯಿಂದ ಓಡಿಹೋಗಲು ಸಾಧ್ಯವಿಲ್ಲ’ ಎಂದು ದೆಹಲಿ ಬಿಜೆಪಿ ಮುಖ್ಯಸ್ಥ ವೀರೇಂದ್ರ ಸಚ್‌ದೇವ ಹೇಳಿದ್ದಾರೆ.

‘ಬಿಜೆಪಿಯು ಎಎಪಿಯ ಏಳು ಶಾಸಕರಿಗೆ ಪಕ್ಷ ತೊರೆಯಲು ತಲಾ ₹25 ಕೋಟಿ ಹಣದ ಆಮಿಷ ನೀಡಿತು; ಕೇಜ್ರಿವಾಲ್ ಸರ್ಕಾರವನ್ನು ಉರುಳಿಸುವ ಬೆದರಿಕೆ ಹಾಕಿದೆ’ ಎಂದು ಆಪ್ ಆರೋಪಿಸಿದೆ.

‘ಬಿಜೆಪಿಯ ಚುನಾವಣಾ ಚಿಹ್ನೆಯನ್ನು ಇಟ್ಟುಕೊಂಡು, ಬಿಜೆಪಿಯು ದೆಹಲಿಯಲ್ಲಿ “ಆಪರೇಷನ್ ಕಮಲ 2.0” ಅನ್ನು ಪ್ರಾರಂಭಿಸಿದೆ’ ಅತಿಶಿ ಸುದ್ದಿಗಾರರಿಗೆ ತಿಳಿಸಿದರು.

‘ಅವರು ಕಳೆದ ವರ್ಷ ಎಎಪಿ ಶಾಸಕರಿಗೆ ಹಣ ನೀಡುವ ಮೂಲಕ ಇದೇ ರೀತಿಯ ಪ್ರಯತ್ನವನ್ನು ಮಾಡಿದ್ದರು; ಆದರೆ ವಿಫಲರಾದರು’ ಎಂದು ಅತಿಶಿ ಹೇಳಿದ್ದಾರೆ.

ಜನವರಿ 30 ರಂದು ಪೊಲೀಸ್ ಮುಖ್ಯಸ್ಥರನ್ನು ಭೇಟಿ ಮಾಡಿದ ದೆಹಲಿ ಬಿಜೆಪಿ ಮುಖ್ಯಸ್ಥ ಸಚ್‌ದೇವ, ‘ಕೇಜ್ರಿವಾಲ್ ತಮ್ಮ ಆರೋಪಗಳನ್ನು ಸಾಬೀತುಪಡಿಸಬೇಕು’ ಎಂದು ಒತ್ತಾಯಿಸಿದರು. ಇಲ್ಲಿಯವರೆಗೆ ಎಎಪಿಯಿಂದ ಯಾರೂ ಸಾಕ್ಷ್ಯಾಧಾರಗಳೊಂದಿಗೆ ಬಂದಿಲ್ಲ. ಇವರ ಆರೋಪಗಳು ನಿರಾಧಾರ’ ಎಂದು ಹೇಳಿದ್ದರು.

ಇದನ್ನೂ ಓದಿ; ಗಾಝಾ ಹತ್ಯಾಕಾಂಡ ಜಗತ್ತಿಗೆ ತೆರೆದಿಟ್ಟಿದ್ದ ಅಲ್ ಜಝೀರಾದ ಅಲ್‌-ದಹದೌಹ್‌ಗೆ ‘ಕೇರಳದ ಮೀಡಿಯಾ ಪರ್ಸನ್‌ ಆಫ್‌ ದಿ ಇಯರ್‌’ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...