Homeಕರ್ನಾಟಕಶಾಸಕ ರಮೇಶ್‌ ಜಾರಕಿಹೊಳಿಯಿಂದ ವಂಚನೆ ಆರೋಪ: ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ಶಾಸಕ ರಮೇಶ್‌ ಜಾರಕಿಹೊಳಿಯಿಂದ ವಂಚನೆ ಆರೋಪ: ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

- Advertisement -
- Advertisement -

ತಮ್ಮ ವಿರುದ್ಧ ಎದುರಾಗಿರುವ ಬ್ಯಾಂಕ್‌ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ದೂರು ಮತ್ತು ಎಫ್‌ಐಆರ್‌ ರದ್ದುಗೊಳಿಸಲು ಕೋರಿ ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ ಶುಕ್ರವಾರ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

ಸಕ್ಕರೆ ಕಾರ್ಖಾನೆಯ ಅಭಿವೃದ್ಧಿಗಾಗಿ ಪಡೆದಿರುವ ಸಾಲ ಮತ್ತು ಬಡ್ಡಿಯ ಹಣ ಸೇರಿ ಬರೋಬ್ಬರಿ ₹439 ಕೋಟಿ ರೂಪಾಯಿ ಪಾವತಿಸದೇ ವಂಚಿಸಿರುವ ಆರೋಪವನ್ನು ರಮೇಶ್‌ ಜಾರಕಿಹೊಳಿ ಎದುರಿಸುತ್ತಿದ್ದಾರೆ.

ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್‌ ಬ್ಯಾಂಕ್‌ ಲಿಮಿಟೆಡ್‌ಗೆ ₹439 ಕೋಟಿ ಸಾಲ ಪಾವತಿಸದೇ ವಂಚಿಸಿರುವ ಆರೋಪಕ್ಕೆ ಗುರಿಯಾಗಿರುವ ಸೌಭಾಗ್ಯಲಕ್ಷ್ಮಿ ಶುಗರ್ಸ್‌ ಲಿಮಿಟೆಡ್‌ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ರಮೇಶ್‌ ಜಾರಕಿಹೊಳಿ, ಮತ್ತಿಬ್ಬರು ನಿರ್ದೇಶಕರಾಗಿದ್ದ ವಸಂತ್‌ ಪಾಟೀಲ್‌ ಮತ್ತು ಶಂಕರ್‌ ಪವಾಡೆ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.‌ ದೀಕ್ಷಿತ್‌ ಅವರ ನೇತೃತ್ವದ ಏಕಸದಸ್ಯ ಪೀಠ ನಡೆಸಿತು.

ವಾದ ಆಲಿಸಿದ ನ್ಯಾಯ ಪೀಠವು ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್‌ ಬ್ಯಾಂಕ್‌ ಲಿಮಿಟೆಡ್ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ.

ಏನಿದು ಪ್ರಕರಣ? ಬೆಳಗಾವಿಯ ಗೋಕಾಕ್‌ನಲ್ಲಿರುವ ಸೌಭಾಗ್ಯಲಕ್ಷ್ಮಿ ಶುಗರ್‌ ಲಿಮಿಟೆಡ್‌ನಲ್ಲಿ ಯಂತ್ರೋಪಕರಣ ಅಳವಡಿಕೆ, ವಿಸ್ತರಣೆ ಮತ್ತು ನಿರ್ವಹಣೆಗಾಗಿ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್‌ ಬ್ಯಾಂಕ್‌ ಲಿಮಿಟೆಡ್‌ ಮತ್ತು ಅದರ ಸಮೂಹದ ಬ್ಯಾಂಕ್‌ಗಳಲ್ಲಿ ಅವಧಿ ಸಾಲ, ದುಡಿಯುವ ಬಂಡವಾಳದ ರೂಪದಲ್ಲಿ 12.07.2013 ರಿಂದ 31.03.2017ರ ಅವಧಿಯಲ್ಲಿ ₹232.88 ಕೋಟಿ ಸಾಲ ಪಡೆಯಲಾಗಿತ್ತು. ಇದು ಬಡ್ಡಿ ಸೇರಿ ₹439.7 ಕೋಟಿಗೆ ಏರಿಕೆಯಾಗಿದ್ದರೂ ಪಾವತಿಸಿರಲಿಲ್ಲ.

ಸಾಲ ಪಡೆಯುವ ಸಂದರ್ಭದಲ್ಲಿ ಶುಗರ್‌ ಕಂಪೆನಿಯಲ್ಲಿ ರಮೇಶ್ ಜಾರಕಿಹೊಳಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದು, ವಸಂತ್‌ ಮತ್ತು ಶಂಕರ್‌ ಅವರು ನಿರ್ದೇಶಕರಾಗಿದ್ದರು. ಸಾಲ ಇರುವ ಸಂದರ್ಭದಲ್ಲಿ ನಿರ್ದೇಶಕರನ್ನು ಬದಲಿಸುವಂತಿಲ್ಲ ಎಂಬ ಷರತ್ತು ವಿಧಿಸಲಾಗಿತ್ತು. ಆದರೆ, ಅರ್ಜಿದಾರರು ಕಂಪೆನಿಯ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದು, ಸಂಬಂಧಪಡದ ವ್ಯಕ್ತಿಗಳನ್ನು ಆ ಹುದ್ದೆಗಳಿಗೆ ನೇಮಿಸಲಾಗಿದೆ.

ಈ ವಿಚಾರವನ್ನು ತಮ್ಮ ಗಮನಕ್ಕೆ ತಂದಿಲ್ಲ ಎಂದು ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್‌ ಬ್ಯಾಂಕ್‌ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರು ಜನವರಿ 5ರಂದು ನೀಡಿದ ದೂರಿನ ಅನ್ವಯ ಬೆಂಗಳೂರಿನ ವಿ ವಿ ಪುರಂ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 406,420&34ರ ಅಡಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಕಲ್ಲಡ್ಕ ಪ್ರಭಾಕರ್ ಭಟ್ ಪರ ವಕಾಲತ್ತು ವಹಿಸಿದ್ದ ವಕೀಲ ಕಾಂಗ್ರೆಸ್‌ನಿಂದ ಉಚ್ಚಾಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...