Homeಕರ್ನಾಟಕಗ್ರಾಮ್ಯ ಸೊಗಡಿನಲ್ಲಿ ಬಿಜೆಪಿಗರನ್ನು ಹಾಸ್ಯದ ಮೂಲಕವೇ ತರಾಟೆಗೆ ತೆಗೆದುಕೊಂಡ ಶಾಸಕ ಶಿವಲಿಂಗೇಗೌಡ

ಗ್ರಾಮ್ಯ ಸೊಗಡಿನಲ್ಲಿ ಬಿಜೆಪಿಗರನ್ನು ಹಾಸ್ಯದ ಮೂಲಕವೇ ತರಾಟೆಗೆ ತೆಗೆದುಕೊಂಡ ಶಾಸಕ ಶಿವಲಿಂಗೇಗೌಡ

- Advertisement -
- Advertisement -

ಸಮ್ಮಿಶ್ರ ಸರ್ಕಾರದ ಶಾಸಕರ ರಾಜಿನಾಮೆಯ ಪ್ರಹಸನ ಈಗ ವಿಧಾನಸಭೆಯ ಅಂಗಳಕ್ಕೆ ಬಂದಿದ್ದು ಚರ್ಚೆ ನಡೆಯುತ್ತಿದೆ. ಬಿಜೆಪಿಯವರಿಗೆ ವಿಶ್ವಾಸ ಮತಯಾಚನೆಯ ಪ್ರಕ್ರಿಯೆ ಬೇಗ ನಡೆಯಬೆಕೆಂಬ ಕಾತರವಾದರೆ, ಆಡಳಿತ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್‍ಗೆ ಈ ದಿನ ಕಳೆದರೆ ಎರಡು ದಿನ ಸಮಾಯಾವಕಾಶ ಸಿಗುವುದರಿಂದ ಮುಂದೆ ತಮ್ಮ ಸರ್ಕಾರ ಉಳಿಸಿಕೊಳ್ಳಬಹುದೆಂಬ ಯೋಚನೆ.

ಬಿಜೆಪಿಯ ಆಪರೇಷನ್ ಕಮಲದಂತಹ ಶಾಸಕರ ಕುದುರೆ ವ್ಯಾಪಾರದ ಬಗ್ಗೆ ಹಲವರು ಮಾತಾಡಿದ್ದರು. ಈ ಸಂದರ್ಭದಲ್ಲಿ ಅರಸಿಕೆರೆಯ ಶಾಸಕ ಶಿವಲಿಂಗೇಗೌಡರವರು ಹಾಸ್ಯ ಮಿಶ್ರಿತವಾಗಿ ರಾಜಕೀಯದ ಇತಿಹಾಸವನ್ನು ನೆನಪಿಸುತ್ತಾ ಸಭೆಯನ್ನು ಉದ್ದೇಶಿ ಮಾತನಾಡಿದರು. ತಮ್ಮ ಇಂಗ್ಲೀಷ್ ಭಾಷೆಯ ಜ್ಞಾನದ ಬಗ್ಗೆ ಕೆಣಕಿದಾಗ ನಾನು ಇಂಗ್ಲಿಷ್ ನಲ್ಲಿ ಪ್ರವೀಣನಲ್ಲ. ನನಗೆ ಬರುವ ಇಂಗ್ಲಿಷ್ ನಲ್ಲಿ ಬಾಂಬೆಯಲ್ಲಿ ಮಾತಾಡಿದ್ದೆ. ಇಲ್ಲಿ ಕನ್ನಡದಲ್ಲಿ ಮಾತಾನಾಡುತ್ತೇನೆ ಅದರ ಬಗ್ಗೆ ತಾವು ಚಿಂತೆ ಮಾಡಬೇಡಿ ಎಂದು ಹೇಳುತ್ತಲೆ ಭಾಷಣ ಆರಂಭಿಸಿದರು.

ಅಂತರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕದ ರಾಜಕೀಯ ನಾಟಕವನ್ನ ನೋಡಿ ಜನ ಚೀ ತೂ ಎಂದು ಉಗಿಯುತ್ತಿದ್ದಾರೆ. ನೇರವಾಗಿ ಯಾರಿಗೆ ಉಗಿಯುತ್ತಿದ್ದಾರೆ ಎಂಬುದನ್ನು ನೀವೆ ಊಹಿಸಿಕೊಳ್ಳಬಹದು ಎಂದರು. ಅತೃಪ್ತ ಶಾಸಕರೇ ನಮ್ಮನ್ನ ಬಾಂಬೆಗೆ ಬನ್ನಿ ಅಂದಿದ್ದರು. ಅದರಲ್ಲಿ ಗೋಪಾಲಯ್ಯನವರೇ ಫೋನ್ ಮಾಡಿದ್ದರು. ಅದಕ್ಕಾಗಿ ನಾವು ಹೋದೆವು.

ಆದರೆ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಹೋಟೆಲ್ ಅಲ್ಲಿ ರೂಮ್ ಬುಕ್ ಮಾಡಿದ್ದರೂ, ನಮಗೆ ಸ್ನಾನ ಮಾಡೋಕೆ ಬಿಟ್ಟಿಲ್ಲ. ಅಲ್ಲಿ ಬಿಜೆಪಿನ ಸರ್ಕಾರ ಇದೆ. ಹೋಗಿರೋದು ನಾಲ್ಕು ಜನ ನೀವು ಹೇಂಗಯ್ಯ 144 ಸೆಕ್ಷನ್ ಜಾರಿ ಮಾಡಿದ್ದೀರಿ? ಆದರೆ ನಾವು ಡಿಕೆಶಿ ಮಳೆಯಲ್ಲಿಯೇ ಟೀ ಕುಡಿದು, ತಿಂದಿ ತಿಂದು ಬಂದೆವು. ಇದಕ್ಕೆ ಯಾರನ್ನು ನಾವು ಕೇಳಬೇಕು? ಏನು ಮಾಡುತ್ತಿದೆ ಸೆಂಟ್ರಲ್ ಗರ್ಮೆಂಟು. ಏನ್ ಮಾಡ್ತಿದ್ದಾರೆ ಗೃಹ ಸಚಿವರು.

ನಾವು ಇಬ್ಬರು ಸಚಿವರು, ಇಬ್ಬರು ಶಾಸಕರು ಹೋದರೆ ಬಂದು ಮಾತಾಡಿಸುವಷ್ಟು ಸೌಜನ್ಯ ಇಲ್ಲ ಅಲ್ಲಿನ ಸರ್ಕಾರಕ್ಕೆ. ಆ ಹೋಟೆಲ್ ನ ಒಳಗೆ ಬಿಜೆಪಿ ಸಚಿವರು, ಶಾಸಕರು ತುಂಬಿಕೊಂಡಿದ್ದರು. ಈ ಆಟಕ್ಕೆ, ಈ ಕುತಂತ್ರಕ್ಕೆ, ಈ ಘನಕಾರ್ಯಕ್ಕೆ ಕನ್ನಡಿ ಬೇರೆ ಬೇಕಾ ಬಿಜೆಪಿಯವರೆ? ಭಾರೀ ಭಾರೀ ಬೇಕಲ್ವ ಕನ್ನಡಿ ನಿಮಗೆ? ಸಮ್ಮಿಶ್ರ ಸರ್ಕಾರ ಕೆಟ್ಟ ಕೆಲಸ ಮಾಡಿದ್ದರೆ, ಅಪವಿತ್ರ ಕೆಲಸ ಆಗಿದ್ದರೆ ಅದರ ಬಗ್ಗೆ ಚರ್ಚೆಗಿಡಿ. ಅದನ್ನು ಬಿಟ್ಟು ಯಾಕೆ ರಾಜೀನಾಮೆ ಕೊಡಿಸಿದ್ದೀರಿ ಎಂದು ಅಕ್ರೋಶ ವ್ಯಕ್ತಪಡಿಸಿದರು.

ಇವತ್ತು ನಮ್ಮ ನಾಯಕರಾದ ಕುಮಾರಸ್ವಾಮಿಯವರನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಿದ್ದಾರೆ. ಆರೋಪಿ ಸ್ಥಾನದಿಂದ ವಿಮುಕ್ತರಾಗಬೇಕು. ಯಾವ 15 ಜನ ಶಾಸಕರು ರಾಜೀನಾಮೆ ಕೊಟ್ಟು ಹೋಗಿದ್ದಾರೆ ಈ ಸದನದಿಂದ ಅವರಿಗೆ ನಾವು ಕೇಳಬೇಕು? ಈ ಸರ್ಕಾರದಿಂದ ಯಾವುದೇ ಸೌಲಭ್ಯ ಸಿಕ್ಕಲಿಲ್ಲವೇ? ಅನುದಾನ ಸಿಕ್ಕಲಿಲ್ಲವೇ? ಅದಕ್ಕೆ ಈ ಸದನದ ಮೂಲಕ ಜನರಿಗೆ ನಾವು ಉತ್ತರ ಕೊಡಬೇಕಿದೆ.

ಅದಕ್ಕೆ ನಾವು ಅಂಕಿ ಸಂಖ್ಯೆಗಳನ್ನು ಇಟ್ಟುಕೊಂಡು ಚರ್ಚೆ ಮಾಡಬೇಕಿದೆ. ಇನ್ನು ಸಮ್ಮಿಶ್ರ ಸರ್ಕಾರ ನಮ್ಮ ಕರ್ನಾಟಕದಲ್ಲಿ ಮಾತ್ರ ಇದೆಯೇ? ಬೇರೆ ರಾಜ್ಯಗಳಲ್ಲಿ ಇಲ್ಲವೇ? ಗೋವಾದಲ್ಲಿ ಬಿಜೆಪಿಯವರು ಕಡಿಮೆ ಸ್ಥಾನದಲ್ಲಿದ್ದರು ಅವರು ಮುಖ್ಯಮಂತ್ರಿಯಾಗಲಿಲ್ಲವೇ? ದೇಶದಲ್ಲಿ ಎಷ್ಟು ರಾಜ್ಯಗಳಲ್ಲಿ ಸಮ್ಮಿಶ್ರ ಸರ್ಕಾರಗಳು ಇವೆ ಅಲ್ಲವೇ? ಕೇವಲ 37 ಇರುವವರಿಗೆ 80 ಜನ ಇರುವವರು ಮುಖ್ಯಮಂತ್ರಿ ಸ್ಥಾನ ಕೊಟ್ಟುಬಿಟ್ಟಿದ್ದಾರೆ ಎಂದು ಹಬ್ಬಿಸುತ್ತಿದ್ದಾರೆ. ಇದರ ಬಗ್ಗೆ ಚರ್ಚೆ ಮಾಡಬೇಕು. ಅದಕ್ಕೆ ಸಮಯ ಬೇಕಿದೆ. ಈ ದೇಶದಲ್ಲಿ ಇದು ಒಂದೇ ಸರ್ಕಾರವೇ ಎಂದು ತರಾಟೆಗೆ ತೆಗೆದುಕೊಂಡರು. ಹಿಂದೆ ವಾಜಪೇಯಿಯವರ ಸರ್ಕಾರ ಇದೇ ರೀತಿಯ ಬಿಕ್ಕಟ್ಟು ಇದ್ದಾಗ 10 ತಿಂಗಳ ಕಾಲ ಚರ್ಚೆಯಾಯಿತು ಎಂಬುದು ನೆನಪಿಸಿಕೊಟ್ಟರು.

ಹಳ್ಳಿಯ ಗ್ರಾಮ್ಯ ಭಾಷೆಯಲ್ಲಿ ಮುಂದುವರೆಸಿದ ಅವರು ಹಳ್ಳಿಯ ಕಡೆ ಎತ್ತುಗಳನ್ನು ಮಾರಿದರೆ ಚೀಟಿಕೊಡುತ್ತಾರೆ ಆದರೆ ಶಾಸಕರನ್ನು ಕರೆದುಕೊಂಡರೆ ಅದೇನು ಕೊಡೋದೇ ಇಲ್ಲ ಅದಕ್ಕಿಂತ ಕಡೆಯಾಗಿ ಹೋಗಿದ್ಧಾರೆ ಶಾಸಕರು ಎಂದರು. ಬಿಜೆಪಿ ಮಾಡುತ್ತಿರುವ ಎಲ್ಲಾ ಕುತಂತ್ರಗಳಿಗೂ ಯಾವ ಕನ್ನಡಿಯೂ ಬೇಕಿಲ್ಲ ಜನರಿಗೆಲ್ಲ ತಿಳಿದಿದೆ. ನಾನು ಮುಖ್ಯಮಂತ್ರಿ ಯವರ ಸ್ಥಾನ ಉಳಿದರೆ ತಿರುಪತಿಗೆ ಒಂದು ಕೋಟಿ ಕೊಡುವುದಾಗಿ ಬೇಡಿಕೊಂಡು ಹೊರಬಂದೆ ಒಂದು ಗುಳ್ಳೆನರಿ ಎಡದಿಂದ ಬಲಕ್ಕೆ ಹೋಯಿತು ನಾನು ಒಳ್ಳೆಯದಾಗುತ್ತದೆ ಅಂದುಕೊಂಡೆ ಆದರೆ ನಮ್ಮ ಸ್ನೇಹಿತರಿಗೆ ಪೋನಾಯಿಸಿದರೆ ಎಮ್.ಟಿ.ಬಿ ನಾಗರಾಜ್ ಗುಳ್ಳೆನರಿ ತರ ತಪ್ಪಿಸಿಕೊಂಡಿದ್ದರು ಎಂದು ಹೇಳುವ ಮೂಲಕ ಸಭೆ ನಗೆ ಗಡಲಲ್ಲಿ ತೇಲುವಂತೆ ಮಾಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷರ ಚುನಾವಣೆಯ ಸಂಧರ್ಭದಲ್ಲಿ ಸದಸ್ಯರನ್ನ ಕಿಡ್ನಾಪ್ ಮಾಡೋತರ ಶಾಸಕರನ್ನ ಕಿಡ್ನಾಪ್ ಮಾಡಿದ್ದಾರೆ. ಶಾಸಕ ಶ್ರೀಮಂತ್ ಪಾಟೀಲ್ ಗೆ ಆರೋಗ್ಯ ಸರಿಯಿಲ್ಲ ಅಂತ ಅಡ್ಮಿಟ್ ಮಾಡಿದ ಹಾಗೆ ಎಲ್ಲಾ 15 ಅತೃಪ್ತ ಶಾಸಕರನ್ನು ಅಡ್ಮಿಟ್ ಮಾಡಬೇಕಿತ್ತು ಎಂದರು. ಪ್ರತಿ ಬಾರಿ ಕುಟುಂಬ ರಾಜಕಾರಣ ಎಂದು ದೇವೇಗೌಡರ ಕುಟುಂಬವನ್ನು ಹೇಳುತ್ತೀರಿ, ಕುಟುಂಬ ರಾಜಕಾರಣವಿಲ್ಲದ ಒಂದಾದರೂ ರಾಜಕೀಯ ಪಕ್ಷವಿದ್ದರೆ ಚರ್ಚೆಗೆ ಬನ್ನಿ ಎಂದು ವಿರೋಧ ಪಕ್ಷದವರನ್ನು ಆಹ್ವಾನಿಸಿದರು.

ಇನ್ನು ಸರ್ಕಾರ ಇವತ್ತು ಬಿದ್ದೋಯಿತು, ನಾಳೆ ಬಿದ್ದೋಯಿುತು, ಢಮಾರ್ ಅಂತ ಎಲ್ಲ ಚರ್ಚೆ ಮಾಡ್ತೀರಿ ಏನ್ರಿ ಇದು. ನಾವು ಒಂದು ಪಕ್ಷದ ಚಿಹ್ನೆಯ ಕೆಳಗೆ ಗೆದ್ದರೆ ಅದು ನಮಗೆ ತಾಯಿ ಇದ್ದ ಹಾಗೆ. ಆ ಅತೃಪ್ತರು ನಾವು ಕಾಂಗ್ರೇಸ್ ಅಲ್ಲೇ ಇದ್ದೇವೆ ಮುಖ್ಯಮಂತ್ರಿಗಳಿಗೆ ವಿರೋಧ ಎಂದು ಹೇಳುತ್ತಾರೆ. ಆದರೆ ಬನ್ನಿ ಹದಿನೈದು ಜನ ಶಾಸಕರ ಕ್ಷೇತ್ರಕ್ಕೆ ಕೊಟ್ಟ ಅನುದಾನದ ಚರ್ಚೆ ಮಾಡೋಣ ಎಂದು ಸವಾಲು ಹಾಕಿದರು .

ಬೇರೆ ಸಮಯದಲ್ಲಿ ನಾವು ಮಾತಾಡಲು ಇಷ್ಟು ಸಮಯ ನೀವು ಕೊಡಲ್ಲ. ಇವತ್ತು ನಾನು ಏನು ಮಾತನಾಡಿದರು ಸುಮ್ಮನೆ ಇರುತ್ತೀರಿ ಅದಕ್ಕೆ ನಾನು ಚಚ್ಚುತ್ತಿದ್ದೀನಿ ಎಂದು ಹೇಳಿ ಸಭೆಯನ್ನು ನಗೆ ಗಡಲಲ್ಲಿ ತೇಲಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...