Homeಕರ್ನಾಟಕಗ್ರಾಮ್ಯ ಸೊಗಡಿನಲ್ಲಿ ಬಿಜೆಪಿಗರನ್ನು ಹಾಸ್ಯದ ಮೂಲಕವೇ ತರಾಟೆಗೆ ತೆಗೆದುಕೊಂಡ ಶಾಸಕ ಶಿವಲಿಂಗೇಗೌಡ

ಗ್ರಾಮ್ಯ ಸೊಗಡಿನಲ್ಲಿ ಬಿಜೆಪಿಗರನ್ನು ಹಾಸ್ಯದ ಮೂಲಕವೇ ತರಾಟೆಗೆ ತೆಗೆದುಕೊಂಡ ಶಾಸಕ ಶಿವಲಿಂಗೇಗೌಡ

- Advertisement -
- Advertisement -

ಸಮ್ಮಿಶ್ರ ಸರ್ಕಾರದ ಶಾಸಕರ ರಾಜಿನಾಮೆಯ ಪ್ರಹಸನ ಈಗ ವಿಧಾನಸಭೆಯ ಅಂಗಳಕ್ಕೆ ಬಂದಿದ್ದು ಚರ್ಚೆ ನಡೆಯುತ್ತಿದೆ. ಬಿಜೆಪಿಯವರಿಗೆ ವಿಶ್ವಾಸ ಮತಯಾಚನೆಯ ಪ್ರಕ್ರಿಯೆ ಬೇಗ ನಡೆಯಬೆಕೆಂಬ ಕಾತರವಾದರೆ, ಆಡಳಿತ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್‍ಗೆ ಈ ದಿನ ಕಳೆದರೆ ಎರಡು ದಿನ ಸಮಾಯಾವಕಾಶ ಸಿಗುವುದರಿಂದ ಮುಂದೆ ತಮ್ಮ ಸರ್ಕಾರ ಉಳಿಸಿಕೊಳ್ಳಬಹುದೆಂಬ ಯೋಚನೆ.

ಬಿಜೆಪಿಯ ಆಪರೇಷನ್ ಕಮಲದಂತಹ ಶಾಸಕರ ಕುದುರೆ ವ್ಯಾಪಾರದ ಬಗ್ಗೆ ಹಲವರು ಮಾತಾಡಿದ್ದರು. ಈ ಸಂದರ್ಭದಲ್ಲಿ ಅರಸಿಕೆರೆಯ ಶಾಸಕ ಶಿವಲಿಂಗೇಗೌಡರವರು ಹಾಸ್ಯ ಮಿಶ್ರಿತವಾಗಿ ರಾಜಕೀಯದ ಇತಿಹಾಸವನ್ನು ನೆನಪಿಸುತ್ತಾ ಸಭೆಯನ್ನು ಉದ್ದೇಶಿ ಮಾತನಾಡಿದರು. ತಮ್ಮ ಇಂಗ್ಲೀಷ್ ಭಾಷೆಯ ಜ್ಞಾನದ ಬಗ್ಗೆ ಕೆಣಕಿದಾಗ ನಾನು ಇಂಗ್ಲಿಷ್ ನಲ್ಲಿ ಪ್ರವೀಣನಲ್ಲ. ನನಗೆ ಬರುವ ಇಂಗ್ಲಿಷ್ ನಲ್ಲಿ ಬಾಂಬೆಯಲ್ಲಿ ಮಾತಾಡಿದ್ದೆ. ಇಲ್ಲಿ ಕನ್ನಡದಲ್ಲಿ ಮಾತಾನಾಡುತ್ತೇನೆ ಅದರ ಬಗ್ಗೆ ತಾವು ಚಿಂತೆ ಮಾಡಬೇಡಿ ಎಂದು ಹೇಳುತ್ತಲೆ ಭಾಷಣ ಆರಂಭಿಸಿದರು.

ಅಂತರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕದ ರಾಜಕೀಯ ನಾಟಕವನ್ನ ನೋಡಿ ಜನ ಚೀ ತೂ ಎಂದು ಉಗಿಯುತ್ತಿದ್ದಾರೆ. ನೇರವಾಗಿ ಯಾರಿಗೆ ಉಗಿಯುತ್ತಿದ್ದಾರೆ ಎಂಬುದನ್ನು ನೀವೆ ಊಹಿಸಿಕೊಳ್ಳಬಹದು ಎಂದರು. ಅತೃಪ್ತ ಶಾಸಕರೇ ನಮ್ಮನ್ನ ಬಾಂಬೆಗೆ ಬನ್ನಿ ಅಂದಿದ್ದರು. ಅದರಲ್ಲಿ ಗೋಪಾಲಯ್ಯನವರೇ ಫೋನ್ ಮಾಡಿದ್ದರು. ಅದಕ್ಕಾಗಿ ನಾವು ಹೋದೆವು.

ಆದರೆ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಹೋಟೆಲ್ ಅಲ್ಲಿ ರೂಮ್ ಬುಕ್ ಮಾಡಿದ್ದರೂ, ನಮಗೆ ಸ್ನಾನ ಮಾಡೋಕೆ ಬಿಟ್ಟಿಲ್ಲ. ಅಲ್ಲಿ ಬಿಜೆಪಿನ ಸರ್ಕಾರ ಇದೆ. ಹೋಗಿರೋದು ನಾಲ್ಕು ಜನ ನೀವು ಹೇಂಗಯ್ಯ 144 ಸೆಕ್ಷನ್ ಜಾರಿ ಮಾಡಿದ್ದೀರಿ? ಆದರೆ ನಾವು ಡಿಕೆಶಿ ಮಳೆಯಲ್ಲಿಯೇ ಟೀ ಕುಡಿದು, ತಿಂದಿ ತಿಂದು ಬಂದೆವು. ಇದಕ್ಕೆ ಯಾರನ್ನು ನಾವು ಕೇಳಬೇಕು? ಏನು ಮಾಡುತ್ತಿದೆ ಸೆಂಟ್ರಲ್ ಗರ್ಮೆಂಟು. ಏನ್ ಮಾಡ್ತಿದ್ದಾರೆ ಗೃಹ ಸಚಿವರು.

ನಾವು ಇಬ್ಬರು ಸಚಿವರು, ಇಬ್ಬರು ಶಾಸಕರು ಹೋದರೆ ಬಂದು ಮಾತಾಡಿಸುವಷ್ಟು ಸೌಜನ್ಯ ಇಲ್ಲ ಅಲ್ಲಿನ ಸರ್ಕಾರಕ್ಕೆ. ಆ ಹೋಟೆಲ್ ನ ಒಳಗೆ ಬಿಜೆಪಿ ಸಚಿವರು, ಶಾಸಕರು ತುಂಬಿಕೊಂಡಿದ್ದರು. ಈ ಆಟಕ್ಕೆ, ಈ ಕುತಂತ್ರಕ್ಕೆ, ಈ ಘನಕಾರ್ಯಕ್ಕೆ ಕನ್ನಡಿ ಬೇರೆ ಬೇಕಾ ಬಿಜೆಪಿಯವರೆ? ಭಾರೀ ಭಾರೀ ಬೇಕಲ್ವ ಕನ್ನಡಿ ನಿಮಗೆ? ಸಮ್ಮಿಶ್ರ ಸರ್ಕಾರ ಕೆಟ್ಟ ಕೆಲಸ ಮಾಡಿದ್ದರೆ, ಅಪವಿತ್ರ ಕೆಲಸ ಆಗಿದ್ದರೆ ಅದರ ಬಗ್ಗೆ ಚರ್ಚೆಗಿಡಿ. ಅದನ್ನು ಬಿಟ್ಟು ಯಾಕೆ ರಾಜೀನಾಮೆ ಕೊಡಿಸಿದ್ದೀರಿ ಎಂದು ಅಕ್ರೋಶ ವ್ಯಕ್ತಪಡಿಸಿದರು.

ಇವತ್ತು ನಮ್ಮ ನಾಯಕರಾದ ಕುಮಾರಸ್ವಾಮಿಯವರನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಿದ್ದಾರೆ. ಆರೋಪಿ ಸ್ಥಾನದಿಂದ ವಿಮುಕ್ತರಾಗಬೇಕು. ಯಾವ 15 ಜನ ಶಾಸಕರು ರಾಜೀನಾಮೆ ಕೊಟ್ಟು ಹೋಗಿದ್ದಾರೆ ಈ ಸದನದಿಂದ ಅವರಿಗೆ ನಾವು ಕೇಳಬೇಕು? ಈ ಸರ್ಕಾರದಿಂದ ಯಾವುದೇ ಸೌಲಭ್ಯ ಸಿಕ್ಕಲಿಲ್ಲವೇ? ಅನುದಾನ ಸಿಕ್ಕಲಿಲ್ಲವೇ? ಅದಕ್ಕೆ ಈ ಸದನದ ಮೂಲಕ ಜನರಿಗೆ ನಾವು ಉತ್ತರ ಕೊಡಬೇಕಿದೆ.

ಅದಕ್ಕೆ ನಾವು ಅಂಕಿ ಸಂಖ್ಯೆಗಳನ್ನು ಇಟ್ಟುಕೊಂಡು ಚರ್ಚೆ ಮಾಡಬೇಕಿದೆ. ಇನ್ನು ಸಮ್ಮಿಶ್ರ ಸರ್ಕಾರ ನಮ್ಮ ಕರ್ನಾಟಕದಲ್ಲಿ ಮಾತ್ರ ಇದೆಯೇ? ಬೇರೆ ರಾಜ್ಯಗಳಲ್ಲಿ ಇಲ್ಲವೇ? ಗೋವಾದಲ್ಲಿ ಬಿಜೆಪಿಯವರು ಕಡಿಮೆ ಸ್ಥಾನದಲ್ಲಿದ್ದರು ಅವರು ಮುಖ್ಯಮಂತ್ರಿಯಾಗಲಿಲ್ಲವೇ? ದೇಶದಲ್ಲಿ ಎಷ್ಟು ರಾಜ್ಯಗಳಲ್ಲಿ ಸಮ್ಮಿಶ್ರ ಸರ್ಕಾರಗಳು ಇವೆ ಅಲ್ಲವೇ? ಕೇವಲ 37 ಇರುವವರಿಗೆ 80 ಜನ ಇರುವವರು ಮುಖ್ಯಮಂತ್ರಿ ಸ್ಥಾನ ಕೊಟ್ಟುಬಿಟ್ಟಿದ್ದಾರೆ ಎಂದು ಹಬ್ಬಿಸುತ್ತಿದ್ದಾರೆ. ಇದರ ಬಗ್ಗೆ ಚರ್ಚೆ ಮಾಡಬೇಕು. ಅದಕ್ಕೆ ಸಮಯ ಬೇಕಿದೆ. ಈ ದೇಶದಲ್ಲಿ ಇದು ಒಂದೇ ಸರ್ಕಾರವೇ ಎಂದು ತರಾಟೆಗೆ ತೆಗೆದುಕೊಂಡರು. ಹಿಂದೆ ವಾಜಪೇಯಿಯವರ ಸರ್ಕಾರ ಇದೇ ರೀತಿಯ ಬಿಕ್ಕಟ್ಟು ಇದ್ದಾಗ 10 ತಿಂಗಳ ಕಾಲ ಚರ್ಚೆಯಾಯಿತು ಎಂಬುದು ನೆನಪಿಸಿಕೊಟ್ಟರು.

ಹಳ್ಳಿಯ ಗ್ರಾಮ್ಯ ಭಾಷೆಯಲ್ಲಿ ಮುಂದುವರೆಸಿದ ಅವರು ಹಳ್ಳಿಯ ಕಡೆ ಎತ್ತುಗಳನ್ನು ಮಾರಿದರೆ ಚೀಟಿಕೊಡುತ್ತಾರೆ ಆದರೆ ಶಾಸಕರನ್ನು ಕರೆದುಕೊಂಡರೆ ಅದೇನು ಕೊಡೋದೇ ಇಲ್ಲ ಅದಕ್ಕಿಂತ ಕಡೆಯಾಗಿ ಹೋಗಿದ್ಧಾರೆ ಶಾಸಕರು ಎಂದರು. ಬಿಜೆಪಿ ಮಾಡುತ್ತಿರುವ ಎಲ್ಲಾ ಕುತಂತ್ರಗಳಿಗೂ ಯಾವ ಕನ್ನಡಿಯೂ ಬೇಕಿಲ್ಲ ಜನರಿಗೆಲ್ಲ ತಿಳಿದಿದೆ. ನಾನು ಮುಖ್ಯಮಂತ್ರಿ ಯವರ ಸ್ಥಾನ ಉಳಿದರೆ ತಿರುಪತಿಗೆ ಒಂದು ಕೋಟಿ ಕೊಡುವುದಾಗಿ ಬೇಡಿಕೊಂಡು ಹೊರಬಂದೆ ಒಂದು ಗುಳ್ಳೆನರಿ ಎಡದಿಂದ ಬಲಕ್ಕೆ ಹೋಯಿತು ನಾನು ಒಳ್ಳೆಯದಾಗುತ್ತದೆ ಅಂದುಕೊಂಡೆ ಆದರೆ ನಮ್ಮ ಸ್ನೇಹಿತರಿಗೆ ಪೋನಾಯಿಸಿದರೆ ಎಮ್.ಟಿ.ಬಿ ನಾಗರಾಜ್ ಗುಳ್ಳೆನರಿ ತರ ತಪ್ಪಿಸಿಕೊಂಡಿದ್ದರು ಎಂದು ಹೇಳುವ ಮೂಲಕ ಸಭೆ ನಗೆ ಗಡಲಲ್ಲಿ ತೇಲುವಂತೆ ಮಾಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷರ ಚುನಾವಣೆಯ ಸಂಧರ್ಭದಲ್ಲಿ ಸದಸ್ಯರನ್ನ ಕಿಡ್ನಾಪ್ ಮಾಡೋತರ ಶಾಸಕರನ್ನ ಕಿಡ್ನಾಪ್ ಮಾಡಿದ್ದಾರೆ. ಶಾಸಕ ಶ್ರೀಮಂತ್ ಪಾಟೀಲ್ ಗೆ ಆರೋಗ್ಯ ಸರಿಯಿಲ್ಲ ಅಂತ ಅಡ್ಮಿಟ್ ಮಾಡಿದ ಹಾಗೆ ಎಲ್ಲಾ 15 ಅತೃಪ್ತ ಶಾಸಕರನ್ನು ಅಡ್ಮಿಟ್ ಮಾಡಬೇಕಿತ್ತು ಎಂದರು. ಪ್ರತಿ ಬಾರಿ ಕುಟುಂಬ ರಾಜಕಾರಣ ಎಂದು ದೇವೇಗೌಡರ ಕುಟುಂಬವನ್ನು ಹೇಳುತ್ತೀರಿ, ಕುಟುಂಬ ರಾಜಕಾರಣವಿಲ್ಲದ ಒಂದಾದರೂ ರಾಜಕೀಯ ಪಕ್ಷವಿದ್ದರೆ ಚರ್ಚೆಗೆ ಬನ್ನಿ ಎಂದು ವಿರೋಧ ಪಕ್ಷದವರನ್ನು ಆಹ್ವಾನಿಸಿದರು.

ಇನ್ನು ಸರ್ಕಾರ ಇವತ್ತು ಬಿದ್ದೋಯಿತು, ನಾಳೆ ಬಿದ್ದೋಯಿುತು, ಢಮಾರ್ ಅಂತ ಎಲ್ಲ ಚರ್ಚೆ ಮಾಡ್ತೀರಿ ಏನ್ರಿ ಇದು. ನಾವು ಒಂದು ಪಕ್ಷದ ಚಿಹ್ನೆಯ ಕೆಳಗೆ ಗೆದ್ದರೆ ಅದು ನಮಗೆ ತಾಯಿ ಇದ್ದ ಹಾಗೆ. ಆ ಅತೃಪ್ತರು ನಾವು ಕಾಂಗ್ರೇಸ್ ಅಲ್ಲೇ ಇದ್ದೇವೆ ಮುಖ್ಯಮಂತ್ರಿಗಳಿಗೆ ವಿರೋಧ ಎಂದು ಹೇಳುತ್ತಾರೆ. ಆದರೆ ಬನ್ನಿ ಹದಿನೈದು ಜನ ಶಾಸಕರ ಕ್ಷೇತ್ರಕ್ಕೆ ಕೊಟ್ಟ ಅನುದಾನದ ಚರ್ಚೆ ಮಾಡೋಣ ಎಂದು ಸವಾಲು ಹಾಕಿದರು .

ಬೇರೆ ಸಮಯದಲ್ಲಿ ನಾವು ಮಾತಾಡಲು ಇಷ್ಟು ಸಮಯ ನೀವು ಕೊಡಲ್ಲ. ಇವತ್ತು ನಾನು ಏನು ಮಾತನಾಡಿದರು ಸುಮ್ಮನೆ ಇರುತ್ತೀರಿ ಅದಕ್ಕೆ ನಾನು ಚಚ್ಚುತ್ತಿದ್ದೀನಿ ಎಂದು ಹೇಳಿ ಸಭೆಯನ್ನು ನಗೆ ಗಡಲಲ್ಲಿ ತೇಲಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...