Homeಕರ್ನಾಟಕಸದನಕ್ಕೆ ಗೈರಾದ ಶಾಸಕ ಶ್ರೀಮಂತ ಪಾಟೀಲ್: ಬಿಜೆಪಿಯಿಂದ ಮತ್ತೊಂದು ಆಪರೇಷನ್ ಎಂದ ಡಿಕೆಶಿ

ಸದನಕ್ಕೆ ಗೈರಾದ ಶಾಸಕ ಶ್ರೀಮಂತ ಪಾಟೀಲ್: ಬಿಜೆಪಿಯಿಂದ ಮತ್ತೊಂದು ಆಪರೇಷನ್ ಎಂದ ಡಿಕೆಶಿ

- Advertisement -
- Advertisement -

ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಶ್ರೀಮಂತ ಪಾಟೀಲ್ ರನ್ನು ಬಿಜೆಪಿ ಕಿಡ್ನಾಪ್ ಮಾಡಿದೆ ಎಂದು ಸಚಿವ ಡಿ.ಕೆ ಶಿವಕುಮಾರ್ ಸದನದಲ್ಲಿಂದು ಆರೋಪ ಮಾಡಿದರು. ಅವರು ನಿನ್ನೆ ತಾನೇ ನಮ್ಮ ಜೊತೆಯಲ್ಲಿಯೇ ಇದ್ದರು, ಚೆನ್ನಾಗಿಯೇ ಮಾತನಾಡಿದರು ಆದರೆ ರಾತ್ರಿಯೇ ಕಣ್ಮರೆಯಾಗಿದ್ದು ಬಿಜೆಪಿಯವರು ಅಪಹರಿಸಿದ್ದು ಇದರ ತನಿಖೆ ನಡೆಸಬೇಕು ಎಂದು ಪಟ್ಟು ಹಿಡಿದರು.

ಅವರು ಬೆಂಗಳೂರಿನ ರೆಸಾರ್ಟ್ ನಿಂದ ಚನ್ನೈಗೆ ಹೋಗಿ ಅಲ್ಲಿಂದ ಮುಂಬೈಗೆ ಹೋಗಿರುವ ಕುರಿತು ವಿಮಾನ ಟಿಕೆಟ್ ಗಳನ್ನು ಪ್ರದರ್ಶಿಸಿದ ಡಿ.ಕೆ ಶಿವಕುಮಾರ್ ಇದೆಲ್ಲದರ ಹಿಂದೆ ಬಿಜೆಪಿಯಿದೆ ಎಂದು ಆರೋಪಿಸಿದರು. ಅದೇ ಸಮಯಕ್ಕೆ ಅವರು ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ಹೋಗಿದ್ದಾರೆ ಎಂಬ ಚರ್ಚೆ ಬಂತು. ಅವರು ಆಸ್ಪತ್ರೆಯಲ್ಲಿ ಮಲಗಿರುವ ಫೋಟೊಗಳು ಓಡಾಡಿದವು. ಕೆಲವೇ ಕ್ಷಣಗಳಲ್ಲಿ ಶ್ರೀಮಂತ ಪಾಟೀಲ ಕಡೆಯಿಂದ ಸ್ಪೀಕರ್ ರವರಿಗೆ ಪತ್ರವೊಂದು ತಲುಪಿತ್ತು.

ಈ ಫೋಟೊಗಳನ್ನು ತೆಗೆದು ಕಳಿಸಿದ್ದು ಯಾರು ಮತ್ತು ಏಕೆ? ಇದು ದೊಡ್ಡ ನಾಟಕ ಎಂದು ಆಡಳಿತ ಪಕ್ಷದ ಶಾಸಕರು ಗದ್ದಲ ಮಾಡಿದರು. ಈ ಕುರಿತು ಮಾತನಾಡಿದ ಸ್ಪೀಕರ್ ರಮೇಶ್ ಕುಮಾರ್ “ಅವರು ಏಕೆ ಹೋಗಿದ್ದಾರೆ, ಹೇಗೆ ಹೋಗಿದ್ದಾರೆ ನನಗೆ ಗೊತ್ತಿಲ್ಲ” ಆದರೆ ಅವರಿಂದ ಒಂದು ಪತ್ರ ಬಂದಿದೆ. ಅದಕ್ಕೆ ತಳಬುಡವಿಲ್ಲ. ಲೆಟರ್ ಹೆಡ್ ಕೂಡ ಇಲ್ಲ. ನಾನು ಈ ಸ್ಥಾನದಲ್ಲಿ ಇರುತ್ತೇನೆ, ನಾಳೆ ಹೋಗುತ್ತೇನೆ, ಆದರೆ ಹೀಗೆ ಪತ್ರ ಕಳಿಸುವುದು ಸ್ಪೀಕರ್ ಘಟನೆಗೆ ಧಕ್ಕೆ ತರುವಂತದ್ದು” ಎಂದು ಕಿಡಿಕಾರಿದ್ದಾರೆ.

ಇದರ ಜೊತೆಗೆ ಡಿ.ಕೆ ಶಿವಕುಮಾರ್ ರವರು ಅವರು ವಿಮಾನದಲ್ಲಿ ಹೋಗಿರುವ ಟಕೇಟ್ ಕಾಪಿಗಳನ್ನು ಪ್ರದರ್ಶನ ಮಾಡಿ ಇದೆಲ್ಲದರ ಹಿಂದೆ ಬಿಜೆಪಿ ಇದೆ ಎಂದು ಆರೋಪಿಸಿದರು. ದಿನೇಶ್ ಗುಂಡೂರಾವ್ ಕೂಡ ಇದಕ್ಕೆ ದನಿಗೂಡಿಸಿದರು.

ಪಾಟೀಲರ ಪತ್ರವನ್ನು ಓದಿ ಹೇಳಿದ ಸ್ಪೀಕರ್ ಇಂದು ಗೈರು ಹಾಜರಾಗುತ್ತೇನೆ ಎಂದು, ಅನಾರೋಗ್ಯವೆಂದು ಇಂದು 10.45ಕ್ಕೆ ಪತ್ರ ಕಳಿಸುವುದು ಸರಿಯಲ್ಲ. ಮುಂಬೈನಲ್ಲಿ ಆ ಆಸ್ಪತ್ರೆ ಇದಿಯೋ ಇಲ್ವೋ ನನಗೆ ಗೊತ್ತಿಲ್ಲ. ಹೀಗೆ ಮನಬಂದಂತೆ ಪತ್ರ ಬರೆಯುವುದು ಸರಿಯಲ್ಲ ಎಂದು ಅಸಮಧಾನ ವ್ಯಕ್ತಿಪಡಿಸಿದರು. ಗೃಹ ಸಚಿವರು ಇದರ ಕುರಿತು ಕುಟುಂಬವನ್ನು ಸಂಪರ್ಕಿಸಬೇಕು., ತನಿಖೆ ನಡೆಸಿ ವರದಿ ಕೊಡಬೇಕೆಂದು ತಿಳಿಸಿದರು. ಇಲ್ಲವಾದಲ್ಲಿ ಡಿ.ಜಿ.ಪಿ ವರ್ಗಾಹಿಸುತ್ತೇನೆ ಎಂದಿದ್ದಾರೆ. ಗೃಹ ಸಚಿವರು ಒಪ್ಪಿಕೊಂಡಿದ್ದರೆ.

“ಶ್ರೀಮಂತ ಪಾಟೀಲ್ ನಿಜಕ್ಕೂ ಅಸ್ವಸ್ಥರಾಗಿದ್ದರೆ ಬೇಗ ಗುಣಮುಖ ಆಗಲಿ. ಆದರೆ ಅದು ಡ್ರಾಮಾ ಅಂತಾದರೆ, ಟಿವಿಯಲ್ಲಿ ತೋರಿಸುತ್ತಿರುವ ಅವರ ಆ ಚಿತ್ರ ಪ್ರಜಾಪ್ರಭುತ್ವದ ಇಂದಿನ ಸ್ಥಿತಿಯ ರೂಪಕವೇ ಆಗಿದೆ” ಎಂದು ಪತ್ರಕರ್ತ ಮಲ್ಲನಗೌಡರ್ ಅಭಿಪ್ರಾಯಪಟ್ಟಿದ್ದಾರೆ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಲಗುವ ಸಮಯದಲ್ಲಿ ಕನ್ನಡಕ ದರಿಸುವ ಏಕೈಕ ವ್ಯಕ್ತಿ ಶ್ರೀಮಂತ ಪಾಟಿಲ್

LEAVE A REPLY

Please enter your comment!
Please enter your name here

- Advertisment -

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...