Homeಕರ್ನಾಟಕಸದನಕ್ಕೆ ಗೈರಾದ ಶಾಸಕ ಶ್ರೀಮಂತ ಪಾಟೀಲ್: ಬಿಜೆಪಿಯಿಂದ ಮತ್ತೊಂದು ಆಪರೇಷನ್ ಎಂದ ಡಿಕೆಶಿ

ಸದನಕ್ಕೆ ಗೈರಾದ ಶಾಸಕ ಶ್ರೀಮಂತ ಪಾಟೀಲ್: ಬಿಜೆಪಿಯಿಂದ ಮತ್ತೊಂದು ಆಪರೇಷನ್ ಎಂದ ಡಿಕೆಶಿ

- Advertisement -
- Advertisement -

ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಶ್ರೀಮಂತ ಪಾಟೀಲ್ ರನ್ನು ಬಿಜೆಪಿ ಕಿಡ್ನಾಪ್ ಮಾಡಿದೆ ಎಂದು ಸಚಿವ ಡಿ.ಕೆ ಶಿವಕುಮಾರ್ ಸದನದಲ್ಲಿಂದು ಆರೋಪ ಮಾಡಿದರು. ಅವರು ನಿನ್ನೆ ತಾನೇ ನಮ್ಮ ಜೊತೆಯಲ್ಲಿಯೇ ಇದ್ದರು, ಚೆನ್ನಾಗಿಯೇ ಮಾತನಾಡಿದರು ಆದರೆ ರಾತ್ರಿಯೇ ಕಣ್ಮರೆಯಾಗಿದ್ದು ಬಿಜೆಪಿಯವರು ಅಪಹರಿಸಿದ್ದು ಇದರ ತನಿಖೆ ನಡೆಸಬೇಕು ಎಂದು ಪಟ್ಟು ಹಿಡಿದರು.

ಅವರು ಬೆಂಗಳೂರಿನ ರೆಸಾರ್ಟ್ ನಿಂದ ಚನ್ನೈಗೆ ಹೋಗಿ ಅಲ್ಲಿಂದ ಮುಂಬೈಗೆ ಹೋಗಿರುವ ಕುರಿತು ವಿಮಾನ ಟಿಕೆಟ್ ಗಳನ್ನು ಪ್ರದರ್ಶಿಸಿದ ಡಿ.ಕೆ ಶಿವಕುಮಾರ್ ಇದೆಲ್ಲದರ ಹಿಂದೆ ಬಿಜೆಪಿಯಿದೆ ಎಂದು ಆರೋಪಿಸಿದರು. ಅದೇ ಸಮಯಕ್ಕೆ ಅವರು ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ಹೋಗಿದ್ದಾರೆ ಎಂಬ ಚರ್ಚೆ ಬಂತು. ಅವರು ಆಸ್ಪತ್ರೆಯಲ್ಲಿ ಮಲಗಿರುವ ಫೋಟೊಗಳು ಓಡಾಡಿದವು. ಕೆಲವೇ ಕ್ಷಣಗಳಲ್ಲಿ ಶ್ರೀಮಂತ ಪಾಟೀಲ ಕಡೆಯಿಂದ ಸ್ಪೀಕರ್ ರವರಿಗೆ ಪತ್ರವೊಂದು ತಲುಪಿತ್ತು.

ಈ ಫೋಟೊಗಳನ್ನು ತೆಗೆದು ಕಳಿಸಿದ್ದು ಯಾರು ಮತ್ತು ಏಕೆ? ಇದು ದೊಡ್ಡ ನಾಟಕ ಎಂದು ಆಡಳಿತ ಪಕ್ಷದ ಶಾಸಕರು ಗದ್ದಲ ಮಾಡಿದರು. ಈ ಕುರಿತು ಮಾತನಾಡಿದ ಸ್ಪೀಕರ್ ರಮೇಶ್ ಕುಮಾರ್ “ಅವರು ಏಕೆ ಹೋಗಿದ್ದಾರೆ, ಹೇಗೆ ಹೋಗಿದ್ದಾರೆ ನನಗೆ ಗೊತ್ತಿಲ್ಲ” ಆದರೆ ಅವರಿಂದ ಒಂದು ಪತ್ರ ಬಂದಿದೆ. ಅದಕ್ಕೆ ತಳಬುಡವಿಲ್ಲ. ಲೆಟರ್ ಹೆಡ್ ಕೂಡ ಇಲ್ಲ. ನಾನು ಈ ಸ್ಥಾನದಲ್ಲಿ ಇರುತ್ತೇನೆ, ನಾಳೆ ಹೋಗುತ್ತೇನೆ, ಆದರೆ ಹೀಗೆ ಪತ್ರ ಕಳಿಸುವುದು ಸ್ಪೀಕರ್ ಘಟನೆಗೆ ಧಕ್ಕೆ ತರುವಂತದ್ದು” ಎಂದು ಕಿಡಿಕಾರಿದ್ದಾರೆ.

ಇದರ ಜೊತೆಗೆ ಡಿ.ಕೆ ಶಿವಕುಮಾರ್ ರವರು ಅವರು ವಿಮಾನದಲ್ಲಿ ಹೋಗಿರುವ ಟಕೇಟ್ ಕಾಪಿಗಳನ್ನು ಪ್ರದರ್ಶನ ಮಾಡಿ ಇದೆಲ್ಲದರ ಹಿಂದೆ ಬಿಜೆಪಿ ಇದೆ ಎಂದು ಆರೋಪಿಸಿದರು. ದಿನೇಶ್ ಗುಂಡೂರಾವ್ ಕೂಡ ಇದಕ್ಕೆ ದನಿಗೂಡಿಸಿದರು.

ಪಾಟೀಲರ ಪತ್ರವನ್ನು ಓದಿ ಹೇಳಿದ ಸ್ಪೀಕರ್ ಇಂದು ಗೈರು ಹಾಜರಾಗುತ್ತೇನೆ ಎಂದು, ಅನಾರೋಗ್ಯವೆಂದು ಇಂದು 10.45ಕ್ಕೆ ಪತ್ರ ಕಳಿಸುವುದು ಸರಿಯಲ್ಲ. ಮುಂಬೈನಲ್ಲಿ ಆ ಆಸ್ಪತ್ರೆ ಇದಿಯೋ ಇಲ್ವೋ ನನಗೆ ಗೊತ್ತಿಲ್ಲ. ಹೀಗೆ ಮನಬಂದಂತೆ ಪತ್ರ ಬರೆಯುವುದು ಸರಿಯಲ್ಲ ಎಂದು ಅಸಮಧಾನ ವ್ಯಕ್ತಿಪಡಿಸಿದರು. ಗೃಹ ಸಚಿವರು ಇದರ ಕುರಿತು ಕುಟುಂಬವನ್ನು ಸಂಪರ್ಕಿಸಬೇಕು., ತನಿಖೆ ನಡೆಸಿ ವರದಿ ಕೊಡಬೇಕೆಂದು ತಿಳಿಸಿದರು. ಇಲ್ಲವಾದಲ್ಲಿ ಡಿ.ಜಿ.ಪಿ ವರ್ಗಾಹಿಸುತ್ತೇನೆ ಎಂದಿದ್ದಾರೆ. ಗೃಹ ಸಚಿವರು ಒಪ್ಪಿಕೊಂಡಿದ್ದರೆ.

“ಶ್ರೀಮಂತ ಪಾಟೀಲ್ ನಿಜಕ್ಕೂ ಅಸ್ವಸ್ಥರಾಗಿದ್ದರೆ ಬೇಗ ಗುಣಮುಖ ಆಗಲಿ. ಆದರೆ ಅದು ಡ್ರಾಮಾ ಅಂತಾದರೆ, ಟಿವಿಯಲ್ಲಿ ತೋರಿಸುತ್ತಿರುವ ಅವರ ಆ ಚಿತ್ರ ಪ್ರಜಾಪ್ರಭುತ್ವದ ಇಂದಿನ ಸ್ಥಿತಿಯ ರೂಪಕವೇ ಆಗಿದೆ” ಎಂದು ಪತ್ರಕರ್ತ ಮಲ್ಲನಗೌಡರ್ ಅಭಿಪ್ರಾಯಪಟ್ಟಿದ್ದಾರೆ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಲಗುವ ಸಮಯದಲ್ಲಿ ಕನ್ನಡಕ ದರಿಸುವ ಏಕೈಕ ವ್ಯಕ್ತಿ ಶ್ರೀಮಂತ ಪಾಟಿಲ್

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...