Homeಕರ್ನಾಟಕಸದನಕ್ಕೆ ಗೈರಾದ ಶಾಸಕ ಶ್ರೀಮಂತ ಪಾಟೀಲ್: ಬಿಜೆಪಿಯಿಂದ ಮತ್ತೊಂದು ಆಪರೇಷನ್ ಎಂದ ಡಿಕೆಶಿ

ಸದನಕ್ಕೆ ಗೈರಾದ ಶಾಸಕ ಶ್ರೀಮಂತ ಪಾಟೀಲ್: ಬಿಜೆಪಿಯಿಂದ ಮತ್ತೊಂದು ಆಪರೇಷನ್ ಎಂದ ಡಿಕೆಶಿ

- Advertisement -
- Advertisement -

ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಶ್ರೀಮಂತ ಪಾಟೀಲ್ ರನ್ನು ಬಿಜೆಪಿ ಕಿಡ್ನಾಪ್ ಮಾಡಿದೆ ಎಂದು ಸಚಿವ ಡಿ.ಕೆ ಶಿವಕುಮಾರ್ ಸದನದಲ್ಲಿಂದು ಆರೋಪ ಮಾಡಿದರು. ಅವರು ನಿನ್ನೆ ತಾನೇ ನಮ್ಮ ಜೊತೆಯಲ್ಲಿಯೇ ಇದ್ದರು, ಚೆನ್ನಾಗಿಯೇ ಮಾತನಾಡಿದರು ಆದರೆ ರಾತ್ರಿಯೇ ಕಣ್ಮರೆಯಾಗಿದ್ದು ಬಿಜೆಪಿಯವರು ಅಪಹರಿಸಿದ್ದು ಇದರ ತನಿಖೆ ನಡೆಸಬೇಕು ಎಂದು ಪಟ್ಟು ಹಿಡಿದರು.

ಅವರು ಬೆಂಗಳೂರಿನ ರೆಸಾರ್ಟ್ ನಿಂದ ಚನ್ನೈಗೆ ಹೋಗಿ ಅಲ್ಲಿಂದ ಮುಂಬೈಗೆ ಹೋಗಿರುವ ಕುರಿತು ವಿಮಾನ ಟಿಕೆಟ್ ಗಳನ್ನು ಪ್ರದರ್ಶಿಸಿದ ಡಿ.ಕೆ ಶಿವಕುಮಾರ್ ಇದೆಲ್ಲದರ ಹಿಂದೆ ಬಿಜೆಪಿಯಿದೆ ಎಂದು ಆರೋಪಿಸಿದರು. ಅದೇ ಸಮಯಕ್ಕೆ ಅವರು ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ಹೋಗಿದ್ದಾರೆ ಎಂಬ ಚರ್ಚೆ ಬಂತು. ಅವರು ಆಸ್ಪತ್ರೆಯಲ್ಲಿ ಮಲಗಿರುವ ಫೋಟೊಗಳು ಓಡಾಡಿದವು. ಕೆಲವೇ ಕ್ಷಣಗಳಲ್ಲಿ ಶ್ರೀಮಂತ ಪಾಟೀಲ ಕಡೆಯಿಂದ ಸ್ಪೀಕರ್ ರವರಿಗೆ ಪತ್ರವೊಂದು ತಲುಪಿತ್ತು.

ಈ ಫೋಟೊಗಳನ್ನು ತೆಗೆದು ಕಳಿಸಿದ್ದು ಯಾರು ಮತ್ತು ಏಕೆ? ಇದು ದೊಡ್ಡ ನಾಟಕ ಎಂದು ಆಡಳಿತ ಪಕ್ಷದ ಶಾಸಕರು ಗದ್ದಲ ಮಾಡಿದರು. ಈ ಕುರಿತು ಮಾತನಾಡಿದ ಸ್ಪೀಕರ್ ರಮೇಶ್ ಕುಮಾರ್ “ಅವರು ಏಕೆ ಹೋಗಿದ್ದಾರೆ, ಹೇಗೆ ಹೋಗಿದ್ದಾರೆ ನನಗೆ ಗೊತ್ತಿಲ್ಲ” ಆದರೆ ಅವರಿಂದ ಒಂದು ಪತ್ರ ಬಂದಿದೆ. ಅದಕ್ಕೆ ತಳಬುಡವಿಲ್ಲ. ಲೆಟರ್ ಹೆಡ್ ಕೂಡ ಇಲ್ಲ. ನಾನು ಈ ಸ್ಥಾನದಲ್ಲಿ ಇರುತ್ತೇನೆ, ನಾಳೆ ಹೋಗುತ್ತೇನೆ, ಆದರೆ ಹೀಗೆ ಪತ್ರ ಕಳಿಸುವುದು ಸ್ಪೀಕರ್ ಘಟನೆಗೆ ಧಕ್ಕೆ ತರುವಂತದ್ದು” ಎಂದು ಕಿಡಿಕಾರಿದ್ದಾರೆ.

ಇದರ ಜೊತೆಗೆ ಡಿ.ಕೆ ಶಿವಕುಮಾರ್ ರವರು ಅವರು ವಿಮಾನದಲ್ಲಿ ಹೋಗಿರುವ ಟಕೇಟ್ ಕಾಪಿಗಳನ್ನು ಪ್ರದರ್ಶನ ಮಾಡಿ ಇದೆಲ್ಲದರ ಹಿಂದೆ ಬಿಜೆಪಿ ಇದೆ ಎಂದು ಆರೋಪಿಸಿದರು. ದಿನೇಶ್ ಗುಂಡೂರಾವ್ ಕೂಡ ಇದಕ್ಕೆ ದನಿಗೂಡಿಸಿದರು.

ಪಾಟೀಲರ ಪತ್ರವನ್ನು ಓದಿ ಹೇಳಿದ ಸ್ಪೀಕರ್ ಇಂದು ಗೈರು ಹಾಜರಾಗುತ್ತೇನೆ ಎಂದು, ಅನಾರೋಗ್ಯವೆಂದು ಇಂದು 10.45ಕ್ಕೆ ಪತ್ರ ಕಳಿಸುವುದು ಸರಿಯಲ್ಲ. ಮುಂಬೈನಲ್ಲಿ ಆ ಆಸ್ಪತ್ರೆ ಇದಿಯೋ ಇಲ್ವೋ ನನಗೆ ಗೊತ್ತಿಲ್ಲ. ಹೀಗೆ ಮನಬಂದಂತೆ ಪತ್ರ ಬರೆಯುವುದು ಸರಿಯಲ್ಲ ಎಂದು ಅಸಮಧಾನ ವ್ಯಕ್ತಿಪಡಿಸಿದರು. ಗೃಹ ಸಚಿವರು ಇದರ ಕುರಿತು ಕುಟುಂಬವನ್ನು ಸಂಪರ್ಕಿಸಬೇಕು., ತನಿಖೆ ನಡೆಸಿ ವರದಿ ಕೊಡಬೇಕೆಂದು ತಿಳಿಸಿದರು. ಇಲ್ಲವಾದಲ್ಲಿ ಡಿ.ಜಿ.ಪಿ ವರ್ಗಾಹಿಸುತ್ತೇನೆ ಎಂದಿದ್ದಾರೆ. ಗೃಹ ಸಚಿವರು ಒಪ್ಪಿಕೊಂಡಿದ್ದರೆ.

“ಶ್ರೀಮಂತ ಪಾಟೀಲ್ ನಿಜಕ್ಕೂ ಅಸ್ವಸ್ಥರಾಗಿದ್ದರೆ ಬೇಗ ಗುಣಮುಖ ಆಗಲಿ. ಆದರೆ ಅದು ಡ್ರಾಮಾ ಅಂತಾದರೆ, ಟಿವಿಯಲ್ಲಿ ತೋರಿಸುತ್ತಿರುವ ಅವರ ಆ ಚಿತ್ರ ಪ್ರಜಾಪ್ರಭುತ್ವದ ಇಂದಿನ ಸ್ಥಿತಿಯ ರೂಪಕವೇ ಆಗಿದೆ” ಎಂದು ಪತ್ರಕರ್ತ ಮಲ್ಲನಗೌಡರ್ ಅಭಿಪ್ರಾಯಪಟ್ಟಿದ್ದಾರೆ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಲಗುವ ಸಮಯದಲ್ಲಿ ಕನ್ನಡಕ ದರಿಸುವ ಏಕೈಕ ವ್ಯಕ್ತಿ ಶ್ರೀಮಂತ ಪಾಟಿಲ್

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...