Homeಕರ್ನಾಟಕಸದನಕ್ಕೆ ಗೈರಾದ ಶಾಸಕ ಶ್ರೀಮಂತ ಪಾಟೀಲ್: ಬಿಜೆಪಿಯಿಂದ ಮತ್ತೊಂದು ಆಪರೇಷನ್ ಎಂದ ಡಿಕೆಶಿ

ಸದನಕ್ಕೆ ಗೈರಾದ ಶಾಸಕ ಶ್ರೀಮಂತ ಪಾಟೀಲ್: ಬಿಜೆಪಿಯಿಂದ ಮತ್ತೊಂದು ಆಪರೇಷನ್ ಎಂದ ಡಿಕೆಶಿ

- Advertisement -
- Advertisement -

ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಶ್ರೀಮಂತ ಪಾಟೀಲ್ ರನ್ನು ಬಿಜೆಪಿ ಕಿಡ್ನಾಪ್ ಮಾಡಿದೆ ಎಂದು ಸಚಿವ ಡಿ.ಕೆ ಶಿವಕುಮಾರ್ ಸದನದಲ್ಲಿಂದು ಆರೋಪ ಮಾಡಿದರು. ಅವರು ನಿನ್ನೆ ತಾನೇ ನಮ್ಮ ಜೊತೆಯಲ್ಲಿಯೇ ಇದ್ದರು, ಚೆನ್ನಾಗಿಯೇ ಮಾತನಾಡಿದರು ಆದರೆ ರಾತ್ರಿಯೇ ಕಣ್ಮರೆಯಾಗಿದ್ದು ಬಿಜೆಪಿಯವರು ಅಪಹರಿಸಿದ್ದು ಇದರ ತನಿಖೆ ನಡೆಸಬೇಕು ಎಂದು ಪಟ್ಟು ಹಿಡಿದರು.

ಅವರು ಬೆಂಗಳೂರಿನ ರೆಸಾರ್ಟ್ ನಿಂದ ಚನ್ನೈಗೆ ಹೋಗಿ ಅಲ್ಲಿಂದ ಮುಂಬೈಗೆ ಹೋಗಿರುವ ಕುರಿತು ವಿಮಾನ ಟಿಕೆಟ್ ಗಳನ್ನು ಪ್ರದರ್ಶಿಸಿದ ಡಿ.ಕೆ ಶಿವಕುಮಾರ್ ಇದೆಲ್ಲದರ ಹಿಂದೆ ಬಿಜೆಪಿಯಿದೆ ಎಂದು ಆರೋಪಿಸಿದರು. ಅದೇ ಸಮಯಕ್ಕೆ ಅವರು ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ಹೋಗಿದ್ದಾರೆ ಎಂಬ ಚರ್ಚೆ ಬಂತು. ಅವರು ಆಸ್ಪತ್ರೆಯಲ್ಲಿ ಮಲಗಿರುವ ಫೋಟೊಗಳು ಓಡಾಡಿದವು. ಕೆಲವೇ ಕ್ಷಣಗಳಲ್ಲಿ ಶ್ರೀಮಂತ ಪಾಟೀಲ ಕಡೆಯಿಂದ ಸ್ಪೀಕರ್ ರವರಿಗೆ ಪತ್ರವೊಂದು ತಲುಪಿತ್ತು.

ಈ ಫೋಟೊಗಳನ್ನು ತೆಗೆದು ಕಳಿಸಿದ್ದು ಯಾರು ಮತ್ತು ಏಕೆ? ಇದು ದೊಡ್ಡ ನಾಟಕ ಎಂದು ಆಡಳಿತ ಪಕ್ಷದ ಶಾಸಕರು ಗದ್ದಲ ಮಾಡಿದರು. ಈ ಕುರಿತು ಮಾತನಾಡಿದ ಸ್ಪೀಕರ್ ರಮೇಶ್ ಕುಮಾರ್ “ಅವರು ಏಕೆ ಹೋಗಿದ್ದಾರೆ, ಹೇಗೆ ಹೋಗಿದ್ದಾರೆ ನನಗೆ ಗೊತ್ತಿಲ್ಲ” ಆದರೆ ಅವರಿಂದ ಒಂದು ಪತ್ರ ಬಂದಿದೆ. ಅದಕ್ಕೆ ತಳಬುಡವಿಲ್ಲ. ಲೆಟರ್ ಹೆಡ್ ಕೂಡ ಇಲ್ಲ. ನಾನು ಈ ಸ್ಥಾನದಲ್ಲಿ ಇರುತ್ತೇನೆ, ನಾಳೆ ಹೋಗುತ್ತೇನೆ, ಆದರೆ ಹೀಗೆ ಪತ್ರ ಕಳಿಸುವುದು ಸ್ಪೀಕರ್ ಘಟನೆಗೆ ಧಕ್ಕೆ ತರುವಂತದ್ದು” ಎಂದು ಕಿಡಿಕಾರಿದ್ದಾರೆ.

ಇದರ ಜೊತೆಗೆ ಡಿ.ಕೆ ಶಿವಕುಮಾರ್ ರವರು ಅವರು ವಿಮಾನದಲ್ಲಿ ಹೋಗಿರುವ ಟಕೇಟ್ ಕಾಪಿಗಳನ್ನು ಪ್ರದರ್ಶನ ಮಾಡಿ ಇದೆಲ್ಲದರ ಹಿಂದೆ ಬಿಜೆಪಿ ಇದೆ ಎಂದು ಆರೋಪಿಸಿದರು. ದಿನೇಶ್ ಗುಂಡೂರಾವ್ ಕೂಡ ಇದಕ್ಕೆ ದನಿಗೂಡಿಸಿದರು.

ಪಾಟೀಲರ ಪತ್ರವನ್ನು ಓದಿ ಹೇಳಿದ ಸ್ಪೀಕರ್ ಇಂದು ಗೈರು ಹಾಜರಾಗುತ್ತೇನೆ ಎಂದು, ಅನಾರೋಗ್ಯವೆಂದು ಇಂದು 10.45ಕ್ಕೆ ಪತ್ರ ಕಳಿಸುವುದು ಸರಿಯಲ್ಲ. ಮುಂಬೈನಲ್ಲಿ ಆ ಆಸ್ಪತ್ರೆ ಇದಿಯೋ ಇಲ್ವೋ ನನಗೆ ಗೊತ್ತಿಲ್ಲ. ಹೀಗೆ ಮನಬಂದಂತೆ ಪತ್ರ ಬರೆಯುವುದು ಸರಿಯಲ್ಲ ಎಂದು ಅಸಮಧಾನ ವ್ಯಕ್ತಿಪಡಿಸಿದರು. ಗೃಹ ಸಚಿವರು ಇದರ ಕುರಿತು ಕುಟುಂಬವನ್ನು ಸಂಪರ್ಕಿಸಬೇಕು., ತನಿಖೆ ನಡೆಸಿ ವರದಿ ಕೊಡಬೇಕೆಂದು ತಿಳಿಸಿದರು. ಇಲ್ಲವಾದಲ್ಲಿ ಡಿ.ಜಿ.ಪಿ ವರ್ಗಾಹಿಸುತ್ತೇನೆ ಎಂದಿದ್ದಾರೆ. ಗೃಹ ಸಚಿವರು ಒಪ್ಪಿಕೊಂಡಿದ್ದರೆ.

“ಶ್ರೀಮಂತ ಪಾಟೀಲ್ ನಿಜಕ್ಕೂ ಅಸ್ವಸ್ಥರಾಗಿದ್ದರೆ ಬೇಗ ಗುಣಮುಖ ಆಗಲಿ. ಆದರೆ ಅದು ಡ್ರಾಮಾ ಅಂತಾದರೆ, ಟಿವಿಯಲ್ಲಿ ತೋರಿಸುತ್ತಿರುವ ಅವರ ಆ ಚಿತ್ರ ಪ್ರಜಾಪ್ರಭುತ್ವದ ಇಂದಿನ ಸ್ಥಿತಿಯ ರೂಪಕವೇ ಆಗಿದೆ” ಎಂದು ಪತ್ರಕರ್ತ ಮಲ್ಲನಗೌಡರ್ ಅಭಿಪ್ರಾಯಪಟ್ಟಿದ್ದಾರೆ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಲಗುವ ಸಮಯದಲ್ಲಿ ಕನ್ನಡಕ ದರಿಸುವ ಏಕೈಕ ವ್ಯಕ್ತಿ ಶ್ರೀಮಂತ ಪಾಟಿಲ್

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...