Homeಕರ್ನಾಟಕಸದನಕ್ಕೆ ಗೈರಾದ ಶಾಸಕ ಶ್ರೀಮಂತ ಪಾಟೀಲ್: ಬಿಜೆಪಿಯಿಂದ ಮತ್ತೊಂದು ಆಪರೇಷನ್ ಎಂದ ಡಿಕೆಶಿ

ಸದನಕ್ಕೆ ಗೈರಾದ ಶಾಸಕ ಶ್ರೀಮಂತ ಪಾಟೀಲ್: ಬಿಜೆಪಿಯಿಂದ ಮತ್ತೊಂದು ಆಪರೇಷನ್ ಎಂದ ಡಿಕೆಶಿ

- Advertisement -
- Advertisement -

ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಶ್ರೀಮಂತ ಪಾಟೀಲ್ ರನ್ನು ಬಿಜೆಪಿ ಕಿಡ್ನಾಪ್ ಮಾಡಿದೆ ಎಂದು ಸಚಿವ ಡಿ.ಕೆ ಶಿವಕುಮಾರ್ ಸದನದಲ್ಲಿಂದು ಆರೋಪ ಮಾಡಿದರು. ಅವರು ನಿನ್ನೆ ತಾನೇ ನಮ್ಮ ಜೊತೆಯಲ್ಲಿಯೇ ಇದ್ದರು, ಚೆನ್ನಾಗಿಯೇ ಮಾತನಾಡಿದರು ಆದರೆ ರಾತ್ರಿಯೇ ಕಣ್ಮರೆಯಾಗಿದ್ದು ಬಿಜೆಪಿಯವರು ಅಪಹರಿಸಿದ್ದು ಇದರ ತನಿಖೆ ನಡೆಸಬೇಕು ಎಂದು ಪಟ್ಟು ಹಿಡಿದರು.

ಅವರು ಬೆಂಗಳೂರಿನ ರೆಸಾರ್ಟ್ ನಿಂದ ಚನ್ನೈಗೆ ಹೋಗಿ ಅಲ್ಲಿಂದ ಮುಂಬೈಗೆ ಹೋಗಿರುವ ಕುರಿತು ವಿಮಾನ ಟಿಕೆಟ್ ಗಳನ್ನು ಪ್ರದರ್ಶಿಸಿದ ಡಿ.ಕೆ ಶಿವಕುಮಾರ್ ಇದೆಲ್ಲದರ ಹಿಂದೆ ಬಿಜೆಪಿಯಿದೆ ಎಂದು ಆರೋಪಿಸಿದರು. ಅದೇ ಸಮಯಕ್ಕೆ ಅವರು ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ಹೋಗಿದ್ದಾರೆ ಎಂಬ ಚರ್ಚೆ ಬಂತು. ಅವರು ಆಸ್ಪತ್ರೆಯಲ್ಲಿ ಮಲಗಿರುವ ಫೋಟೊಗಳು ಓಡಾಡಿದವು. ಕೆಲವೇ ಕ್ಷಣಗಳಲ್ಲಿ ಶ್ರೀಮಂತ ಪಾಟೀಲ ಕಡೆಯಿಂದ ಸ್ಪೀಕರ್ ರವರಿಗೆ ಪತ್ರವೊಂದು ತಲುಪಿತ್ತು.

ಈ ಫೋಟೊಗಳನ್ನು ತೆಗೆದು ಕಳಿಸಿದ್ದು ಯಾರು ಮತ್ತು ಏಕೆ? ಇದು ದೊಡ್ಡ ನಾಟಕ ಎಂದು ಆಡಳಿತ ಪಕ್ಷದ ಶಾಸಕರು ಗದ್ದಲ ಮಾಡಿದರು. ಈ ಕುರಿತು ಮಾತನಾಡಿದ ಸ್ಪೀಕರ್ ರಮೇಶ್ ಕುಮಾರ್ “ಅವರು ಏಕೆ ಹೋಗಿದ್ದಾರೆ, ಹೇಗೆ ಹೋಗಿದ್ದಾರೆ ನನಗೆ ಗೊತ್ತಿಲ್ಲ” ಆದರೆ ಅವರಿಂದ ಒಂದು ಪತ್ರ ಬಂದಿದೆ. ಅದಕ್ಕೆ ತಳಬುಡವಿಲ್ಲ. ಲೆಟರ್ ಹೆಡ್ ಕೂಡ ಇಲ್ಲ. ನಾನು ಈ ಸ್ಥಾನದಲ್ಲಿ ಇರುತ್ತೇನೆ, ನಾಳೆ ಹೋಗುತ್ತೇನೆ, ಆದರೆ ಹೀಗೆ ಪತ್ರ ಕಳಿಸುವುದು ಸ್ಪೀಕರ್ ಘಟನೆಗೆ ಧಕ್ಕೆ ತರುವಂತದ್ದು” ಎಂದು ಕಿಡಿಕಾರಿದ್ದಾರೆ.

ಇದರ ಜೊತೆಗೆ ಡಿ.ಕೆ ಶಿವಕುಮಾರ್ ರವರು ಅವರು ವಿಮಾನದಲ್ಲಿ ಹೋಗಿರುವ ಟಕೇಟ್ ಕಾಪಿಗಳನ್ನು ಪ್ರದರ್ಶನ ಮಾಡಿ ಇದೆಲ್ಲದರ ಹಿಂದೆ ಬಿಜೆಪಿ ಇದೆ ಎಂದು ಆರೋಪಿಸಿದರು. ದಿನೇಶ್ ಗುಂಡೂರಾವ್ ಕೂಡ ಇದಕ್ಕೆ ದನಿಗೂಡಿಸಿದರು.

ಪಾಟೀಲರ ಪತ್ರವನ್ನು ಓದಿ ಹೇಳಿದ ಸ್ಪೀಕರ್ ಇಂದು ಗೈರು ಹಾಜರಾಗುತ್ತೇನೆ ಎಂದು, ಅನಾರೋಗ್ಯವೆಂದು ಇಂದು 10.45ಕ್ಕೆ ಪತ್ರ ಕಳಿಸುವುದು ಸರಿಯಲ್ಲ. ಮುಂಬೈನಲ್ಲಿ ಆ ಆಸ್ಪತ್ರೆ ಇದಿಯೋ ಇಲ್ವೋ ನನಗೆ ಗೊತ್ತಿಲ್ಲ. ಹೀಗೆ ಮನಬಂದಂತೆ ಪತ್ರ ಬರೆಯುವುದು ಸರಿಯಲ್ಲ ಎಂದು ಅಸಮಧಾನ ವ್ಯಕ್ತಿಪಡಿಸಿದರು. ಗೃಹ ಸಚಿವರು ಇದರ ಕುರಿತು ಕುಟುಂಬವನ್ನು ಸಂಪರ್ಕಿಸಬೇಕು., ತನಿಖೆ ನಡೆಸಿ ವರದಿ ಕೊಡಬೇಕೆಂದು ತಿಳಿಸಿದರು. ಇಲ್ಲವಾದಲ್ಲಿ ಡಿ.ಜಿ.ಪಿ ವರ್ಗಾಹಿಸುತ್ತೇನೆ ಎಂದಿದ್ದಾರೆ. ಗೃಹ ಸಚಿವರು ಒಪ್ಪಿಕೊಂಡಿದ್ದರೆ.

“ಶ್ರೀಮಂತ ಪಾಟೀಲ್ ನಿಜಕ್ಕೂ ಅಸ್ವಸ್ಥರಾಗಿದ್ದರೆ ಬೇಗ ಗುಣಮುಖ ಆಗಲಿ. ಆದರೆ ಅದು ಡ್ರಾಮಾ ಅಂತಾದರೆ, ಟಿವಿಯಲ್ಲಿ ತೋರಿಸುತ್ತಿರುವ ಅವರ ಆ ಚಿತ್ರ ಪ್ರಜಾಪ್ರಭುತ್ವದ ಇಂದಿನ ಸ್ಥಿತಿಯ ರೂಪಕವೇ ಆಗಿದೆ” ಎಂದು ಪತ್ರಕರ್ತ ಮಲ್ಲನಗೌಡರ್ ಅಭಿಪ್ರಾಯಪಟ್ಟಿದ್ದಾರೆ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಲಗುವ ಸಮಯದಲ್ಲಿ ಕನ್ನಡಕ ದರಿಸುವ ಏಕೈಕ ವ್ಯಕ್ತಿ ಶ್ರೀಮಂತ ಪಾಟಿಲ್

LEAVE A REPLY

Please enter your comment!
Please enter your name here

- Advertisment -

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...