Homeಕರ್ನಾಟಕಸದನಕ್ಕೆ ಗೈರಾದ ಶಾಸಕ ಶ್ರೀಮಂತ ಪಾಟೀಲ್: ಬಿಜೆಪಿಯಿಂದ ಮತ್ತೊಂದು ಆಪರೇಷನ್ ಎಂದ ಡಿಕೆಶಿ

ಸದನಕ್ಕೆ ಗೈರಾದ ಶಾಸಕ ಶ್ರೀಮಂತ ಪಾಟೀಲ್: ಬಿಜೆಪಿಯಿಂದ ಮತ್ತೊಂದು ಆಪರೇಷನ್ ಎಂದ ಡಿಕೆಶಿ

- Advertisement -
- Advertisement -

ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಶ್ರೀಮಂತ ಪಾಟೀಲ್ ರನ್ನು ಬಿಜೆಪಿ ಕಿಡ್ನಾಪ್ ಮಾಡಿದೆ ಎಂದು ಸಚಿವ ಡಿ.ಕೆ ಶಿವಕುಮಾರ್ ಸದನದಲ್ಲಿಂದು ಆರೋಪ ಮಾಡಿದರು. ಅವರು ನಿನ್ನೆ ತಾನೇ ನಮ್ಮ ಜೊತೆಯಲ್ಲಿಯೇ ಇದ್ದರು, ಚೆನ್ನಾಗಿಯೇ ಮಾತನಾಡಿದರು ಆದರೆ ರಾತ್ರಿಯೇ ಕಣ್ಮರೆಯಾಗಿದ್ದು ಬಿಜೆಪಿಯವರು ಅಪಹರಿಸಿದ್ದು ಇದರ ತನಿಖೆ ನಡೆಸಬೇಕು ಎಂದು ಪಟ್ಟು ಹಿಡಿದರು.

ಅವರು ಬೆಂಗಳೂರಿನ ರೆಸಾರ್ಟ್ ನಿಂದ ಚನ್ನೈಗೆ ಹೋಗಿ ಅಲ್ಲಿಂದ ಮುಂಬೈಗೆ ಹೋಗಿರುವ ಕುರಿತು ವಿಮಾನ ಟಿಕೆಟ್ ಗಳನ್ನು ಪ್ರದರ್ಶಿಸಿದ ಡಿ.ಕೆ ಶಿವಕುಮಾರ್ ಇದೆಲ್ಲದರ ಹಿಂದೆ ಬಿಜೆಪಿಯಿದೆ ಎಂದು ಆರೋಪಿಸಿದರು. ಅದೇ ಸಮಯಕ್ಕೆ ಅವರು ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ಹೋಗಿದ್ದಾರೆ ಎಂಬ ಚರ್ಚೆ ಬಂತು. ಅವರು ಆಸ್ಪತ್ರೆಯಲ್ಲಿ ಮಲಗಿರುವ ಫೋಟೊಗಳು ಓಡಾಡಿದವು. ಕೆಲವೇ ಕ್ಷಣಗಳಲ್ಲಿ ಶ್ರೀಮಂತ ಪಾಟೀಲ ಕಡೆಯಿಂದ ಸ್ಪೀಕರ್ ರವರಿಗೆ ಪತ್ರವೊಂದು ತಲುಪಿತ್ತು.

ಈ ಫೋಟೊಗಳನ್ನು ತೆಗೆದು ಕಳಿಸಿದ್ದು ಯಾರು ಮತ್ತು ಏಕೆ? ಇದು ದೊಡ್ಡ ನಾಟಕ ಎಂದು ಆಡಳಿತ ಪಕ್ಷದ ಶಾಸಕರು ಗದ್ದಲ ಮಾಡಿದರು. ಈ ಕುರಿತು ಮಾತನಾಡಿದ ಸ್ಪೀಕರ್ ರಮೇಶ್ ಕುಮಾರ್ “ಅವರು ಏಕೆ ಹೋಗಿದ್ದಾರೆ, ಹೇಗೆ ಹೋಗಿದ್ದಾರೆ ನನಗೆ ಗೊತ್ತಿಲ್ಲ” ಆದರೆ ಅವರಿಂದ ಒಂದು ಪತ್ರ ಬಂದಿದೆ. ಅದಕ್ಕೆ ತಳಬುಡವಿಲ್ಲ. ಲೆಟರ್ ಹೆಡ್ ಕೂಡ ಇಲ್ಲ. ನಾನು ಈ ಸ್ಥಾನದಲ್ಲಿ ಇರುತ್ತೇನೆ, ನಾಳೆ ಹೋಗುತ್ತೇನೆ, ಆದರೆ ಹೀಗೆ ಪತ್ರ ಕಳಿಸುವುದು ಸ್ಪೀಕರ್ ಘಟನೆಗೆ ಧಕ್ಕೆ ತರುವಂತದ್ದು” ಎಂದು ಕಿಡಿಕಾರಿದ್ದಾರೆ.

ಇದರ ಜೊತೆಗೆ ಡಿ.ಕೆ ಶಿವಕುಮಾರ್ ರವರು ಅವರು ವಿಮಾನದಲ್ಲಿ ಹೋಗಿರುವ ಟಕೇಟ್ ಕಾಪಿಗಳನ್ನು ಪ್ರದರ್ಶನ ಮಾಡಿ ಇದೆಲ್ಲದರ ಹಿಂದೆ ಬಿಜೆಪಿ ಇದೆ ಎಂದು ಆರೋಪಿಸಿದರು. ದಿನೇಶ್ ಗುಂಡೂರಾವ್ ಕೂಡ ಇದಕ್ಕೆ ದನಿಗೂಡಿಸಿದರು.

ಪಾಟೀಲರ ಪತ್ರವನ್ನು ಓದಿ ಹೇಳಿದ ಸ್ಪೀಕರ್ ಇಂದು ಗೈರು ಹಾಜರಾಗುತ್ತೇನೆ ಎಂದು, ಅನಾರೋಗ್ಯವೆಂದು ಇಂದು 10.45ಕ್ಕೆ ಪತ್ರ ಕಳಿಸುವುದು ಸರಿಯಲ್ಲ. ಮುಂಬೈನಲ್ಲಿ ಆ ಆಸ್ಪತ್ರೆ ಇದಿಯೋ ಇಲ್ವೋ ನನಗೆ ಗೊತ್ತಿಲ್ಲ. ಹೀಗೆ ಮನಬಂದಂತೆ ಪತ್ರ ಬರೆಯುವುದು ಸರಿಯಲ್ಲ ಎಂದು ಅಸಮಧಾನ ವ್ಯಕ್ತಿಪಡಿಸಿದರು. ಗೃಹ ಸಚಿವರು ಇದರ ಕುರಿತು ಕುಟುಂಬವನ್ನು ಸಂಪರ್ಕಿಸಬೇಕು., ತನಿಖೆ ನಡೆಸಿ ವರದಿ ಕೊಡಬೇಕೆಂದು ತಿಳಿಸಿದರು. ಇಲ್ಲವಾದಲ್ಲಿ ಡಿ.ಜಿ.ಪಿ ವರ್ಗಾಹಿಸುತ್ತೇನೆ ಎಂದಿದ್ದಾರೆ. ಗೃಹ ಸಚಿವರು ಒಪ್ಪಿಕೊಂಡಿದ್ದರೆ.

“ಶ್ರೀಮಂತ ಪಾಟೀಲ್ ನಿಜಕ್ಕೂ ಅಸ್ವಸ್ಥರಾಗಿದ್ದರೆ ಬೇಗ ಗುಣಮುಖ ಆಗಲಿ. ಆದರೆ ಅದು ಡ್ರಾಮಾ ಅಂತಾದರೆ, ಟಿವಿಯಲ್ಲಿ ತೋರಿಸುತ್ತಿರುವ ಅವರ ಆ ಚಿತ್ರ ಪ್ರಜಾಪ್ರಭುತ್ವದ ಇಂದಿನ ಸ್ಥಿತಿಯ ರೂಪಕವೇ ಆಗಿದೆ” ಎಂದು ಪತ್ರಕರ್ತ ಮಲ್ಲನಗೌಡರ್ ಅಭಿಪ್ರಾಯಪಟ್ಟಿದ್ದಾರೆ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಲಗುವ ಸಮಯದಲ್ಲಿ ಕನ್ನಡಕ ದರಿಸುವ ಏಕೈಕ ವ್ಯಕ್ತಿ ಶ್ರೀಮಂತ ಪಾಟಿಲ್

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...