Homeಮುಖಪುಟವಿಧಾನಸೌಧ ಸಭಾಂಗಣದಲ್ಲಿ ಪಾನ್ ಮಸಾಲ ಉಗುಳಿದ ಶಾಸಕ: ಕಲೆಯನ್ನು ಸ್ವಚ್ಚಗೊಳಿಸಿದ ಸ್ಪೀಕರ್

ವಿಧಾನಸೌಧ ಸಭಾಂಗಣದಲ್ಲಿ ಪಾನ್ ಮಸಾಲ ಉಗುಳಿದ ಶಾಸಕ: ಕಲೆಯನ್ನು ಸ್ವಚ್ಚಗೊಳಿಸಿದ ಸ್ಪೀಕರ್

- Advertisement -
- Advertisement -

ಮಂಗಳವಾರ ಉತ್ತರಪ್ರದೇಶದ ವಿಧಾನಸಭಾ ಸಭಾಂಗಣದಲ್ಲಿ ಶಾಸಕರೊಬ್ಬರು ಪಾನ್ ಮಸಾಲ ಉಗುಳಿರುವ ಘಟನೆ ನಡೆದಿದೆ. ಈ ಕುರಿತು ಮಾಹಿತಿ ಪಡೆದ ಸ್ಫೀಕರ್,  ಸ್ವತಃ ಅವರೆ ಸ್ಥಳವನ್ನು ಸ್ವಚ್ಛಗೊಳಿಸಿದ್ದಾರೆ.

ಮಂಗಳವಾರ ಸದನ ಆರಂಭವಾಗುವ ಮೊದಲು ಸದಸ್ಯರನ್ನುದ್ದೇಶಿಸಿ ಮಾತನಾಡಿದ ಸತೀಶ್ ಮಹಾನಾ, ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ ಆ ಪ್ರದೇಶವನ್ನು ಸ್ವಚ್ಛಗೊಳಿಸಿದೆ ಎಂದು ಹೇಳಿದ್ದಾರೆ.

ವಿಡಿಯೋ ಮೂಲಕ ಶಾಸಕರು ಉಗುಳಿರುವ ಕೃತ್ಯದಲ್ಲಿ ಭಾಗಿಯಾಗಿರುವುದನ್ನು ನೋಡಿದ್ದೇನೆ. ಸಾರ್ವಜನಿಕ ಅವಮಾನವನ್ನು ತಪ್ಪಿಸಲು ಶಾಸಕರ ಹೆಸರನ್ನು ಹೇಳುವುದಿಲ್ಲ ಎಂದು ಸತೀಶ್ ಮಹಾನ ಅವರು ತಿಳಿಸಿದ್ದಾರೆ.

“ಇಂದು ಬೆಳಿಗ್ಗೆ, ನಮ್ಮ ವಿಧಾನಸಭಾ ಸಭಾಂಗಣದಲ್ಲಿ ಯಾರೋ ಸದಸ್ಯರು ಪಾನ್ ಮಸಾಲ ಜಿಗಿದು, ಉಗುಳಿದ್ದಾರೆ ಎಂಬ ಮಾಹಿತಿ ನನಗೆ ಸಿಕ್ಕಿತು. ಹಾಗಾಗಿ, ನಾನು ಇಲ್ಲಿಗೆ ಬಂದು ಅದನ್ನು ಸ್ವಚ್ಛಗೊಳಿಸಿದೆ. ನಾನು ವೀಡಿಯೊದಲ್ಲಿ ಶಾಸಕರನ್ನು ನೋಡಿದ್ದೇನೆ. ಆದರೆ ನಾನು ಯಾವುದೇ ವ್ಯಕ್ತಿಯನ್ನು ಅವಮಾನಿಸಲು ಬಯಸುವುದಿಲ್ಲ. ಆದ್ದರಿಂದ, ನಾನು ಅವರ ಹೆಸರನ್ನು ಬಹಿರಂಗಪಡಿಸುತ್ತಿಲ್ಲ. ಯಾರಾದರೂ ಹೀಗೆ ಮಾಡುವುದನ್ನು ನೋಡಿದರೆ, ಅವರನ್ನು ತಡೆಯಬೇಕು ಎಂದು ನಾನು ಎಲ್ಲಾ ಸದಸ್ಯರನ್ನು ಒತ್ತಾಯಿಸುತ್ತೇನೆ… ಈ ಸಭೆಯನ್ನು ಸ್ವಚ್ಛವಾಗಿಡುವುದು ನಮ್ಮ ಜವಾಬ್ದಾರಿ… ಶಾಸಕರು ಬಂದು ಅವರು ಇದನ್ನು ಮಾಡಿದ್ದಾರೆಂದು ಹೇಳಿದರೆ ಒಳ್ಳೆಯದು; ಇಲ್ಲದಿದ್ದರೆ, ನಾನು ಅವರಿಗೆ ಕರೆ ಮಾಡುತ್ತೇನೆ” ಎಂದು ಅವರು ಹೇಳಿದ್ದಾರೆ.

ಉತ್ತರಪ್ರದೇಶದ ಹಣಕಾಸು ಸಚಿವ ಸುರೇಶ್ ಕುಮಾರ್ ಖನ್ನಾ ಫೆಬ್ರವರಿ 20ರಂದು 2025-26ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮಂಡಿಸಿದರು, ಇದು 2024-25ರ ಬಜೆಟ್‌ಗಿಂತ ಶೇ. 9.8 ರಷ್ಟು ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೂಲಸೌಕರ್ಯ ಅಭಿವೃದ್ಧಿಯ ಮೇಲೆ ಕೇಂದ್ರೀಕರಿಸಿದ್ದಾರೆ ಎಂದು ಅವರು ಹೇಳಿದರು.

“ಈ ಬಜೆಟ್ 8,08,736 ಕೋಟಿ ರೂ.ಗಳಿಗಿಂತ ಹೆಚ್ಚಾಗಿದೆ, ಇದು 2024-25ರ ಬಜೆಟ್‌ಗಿಂತ ಶೇ. 9.8 ರಷ್ಟು ಹೆಚ್ಚಾಗಿದೆ. ಒಂದೆಡೆ, ಬಜೆಟ್ ಗಾತ್ರದಲ್ಲಿನ ಬೆಳವಣಿಗೆ ರಾಜ್ಯದ ಶಕ್ತಿಯನ್ನು ಪ್ರತಿಬಿಂಬಿಸುತ್ತದೆ, ಮತ್ತೊಂದೆಡೆ, ಇದು ಡಬಲ್ ಎಂಜಿನ್ ಸರ್ಕಾರದ ಬದ್ಧತೆಯನ್ನು ಸಹ ತೋರಿಸುತ್ತದೆ” ಎಂದು ಸಿಎಂ ಯೋಗಿ ಪತ್ರಿಕಾಗೋಷ್ಠಿಯಲ್ಲಿ ಹೇಳಿರುವುದಾಗಿ ಸುದ್ದಿ ಸಂಸ್ಥೆ ಎಎನ್‌ಐ ಉಲ್ಲೇಖಿಸಿದೆ.

ಯುಪಿಯ ಆರ್ಥಿಕತೆಯು ಈ ಹಿಂದೆ ದೇಶದಲ್ಲಿ 6-7ನೇ ಸ್ಥಾನದಲ್ಲಿದ್ದರೆ, ಈಗ ಅದು ಭಾರತದ ಎರಡನೇ ಅತಿದೊಡ್ಡ ಆರ್ಥಿಕತೆಯಾಗಿದೆ ಎಂದು ಯೋಗಿ ಆದಿತ್ಯನಾಥ್ ಎತ್ತಿ ಹೇಳಿದರು.

ಅಂಬೇಡ್ಕರ್-ದಲಿತ ಸಮುದಾಯದ ಅವಹೇಳನ ನಾಟಕ; ಜೈನ್ ಯೂನಿವರ್ಸಿಟಿ ವಿದ್ಯಾರ್ಥಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...