Homeಮುಖಪುಟವಿಧಾನಸೌಧ ಸಭಾಂಗಣದಲ್ಲಿ ಪಾನ್ ಮಸಾಲ ಉಗುಳಿದ ಶಾಸಕ: ಕಲೆಯನ್ನು ಸ್ವಚ್ಚಗೊಳಿಸಿದ ಸ್ಪೀಕರ್

ವಿಧಾನಸೌಧ ಸಭಾಂಗಣದಲ್ಲಿ ಪಾನ್ ಮಸಾಲ ಉಗುಳಿದ ಶಾಸಕ: ಕಲೆಯನ್ನು ಸ್ವಚ್ಚಗೊಳಿಸಿದ ಸ್ಪೀಕರ್

- Advertisement -
- Advertisement -

ಮಂಗಳವಾರ ಉತ್ತರಪ್ರದೇಶದ ವಿಧಾನಸಭಾ ಸಭಾಂಗಣದಲ್ಲಿ ಶಾಸಕರೊಬ್ಬರು ಪಾನ್ ಮಸಾಲ ಉಗುಳಿರುವ ಘಟನೆ ನಡೆದಿದೆ. ಈ ಕುರಿತು ಮಾಹಿತಿ ಪಡೆದ ಸ್ಫೀಕರ್,  ಸ್ವತಃ ಅವರೆ ಸ್ಥಳವನ್ನು ಸ್ವಚ್ಛಗೊಳಿಸಿದ್ದಾರೆ.

ಮಂಗಳವಾರ ಸದನ ಆರಂಭವಾಗುವ ಮೊದಲು ಸದಸ್ಯರನ್ನುದ್ದೇಶಿಸಿ ಮಾತನಾಡಿದ ಸತೀಶ್ ಮಹಾನಾ, ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ ಆ ಪ್ರದೇಶವನ್ನು ಸ್ವಚ್ಛಗೊಳಿಸಿದೆ ಎಂದು ಹೇಳಿದ್ದಾರೆ.

ವಿಡಿಯೋ ಮೂಲಕ ಶಾಸಕರು ಉಗುಳಿರುವ ಕೃತ್ಯದಲ್ಲಿ ಭಾಗಿಯಾಗಿರುವುದನ್ನು ನೋಡಿದ್ದೇನೆ. ಸಾರ್ವಜನಿಕ ಅವಮಾನವನ್ನು ತಪ್ಪಿಸಲು ಶಾಸಕರ ಹೆಸರನ್ನು ಹೇಳುವುದಿಲ್ಲ ಎಂದು ಸತೀಶ್ ಮಹಾನ ಅವರು ತಿಳಿಸಿದ್ದಾರೆ.

“ಇಂದು ಬೆಳಿಗ್ಗೆ, ನಮ್ಮ ವಿಧಾನಸಭಾ ಸಭಾಂಗಣದಲ್ಲಿ ಯಾರೋ ಸದಸ್ಯರು ಪಾನ್ ಮಸಾಲ ಜಿಗಿದು, ಉಗುಳಿದ್ದಾರೆ ಎಂಬ ಮಾಹಿತಿ ನನಗೆ ಸಿಕ್ಕಿತು. ಹಾಗಾಗಿ, ನಾನು ಇಲ್ಲಿಗೆ ಬಂದು ಅದನ್ನು ಸ್ವಚ್ಛಗೊಳಿಸಿದೆ. ನಾನು ವೀಡಿಯೊದಲ್ಲಿ ಶಾಸಕರನ್ನು ನೋಡಿದ್ದೇನೆ. ಆದರೆ ನಾನು ಯಾವುದೇ ವ್ಯಕ್ತಿಯನ್ನು ಅವಮಾನಿಸಲು ಬಯಸುವುದಿಲ್ಲ. ಆದ್ದರಿಂದ, ನಾನು ಅವರ ಹೆಸರನ್ನು ಬಹಿರಂಗಪಡಿಸುತ್ತಿಲ್ಲ. ಯಾರಾದರೂ ಹೀಗೆ ಮಾಡುವುದನ್ನು ನೋಡಿದರೆ, ಅವರನ್ನು ತಡೆಯಬೇಕು ಎಂದು ನಾನು ಎಲ್ಲಾ ಸದಸ್ಯರನ್ನು ಒತ್ತಾಯಿಸುತ್ತೇನೆ… ಈ ಸಭೆಯನ್ನು ಸ್ವಚ್ಛವಾಗಿಡುವುದು ನಮ್ಮ ಜವಾಬ್ದಾರಿ… ಶಾಸಕರು ಬಂದು ಅವರು ಇದನ್ನು ಮಾಡಿದ್ದಾರೆಂದು ಹೇಳಿದರೆ ಒಳ್ಳೆಯದು; ಇಲ್ಲದಿದ್ದರೆ, ನಾನು ಅವರಿಗೆ ಕರೆ ಮಾಡುತ್ತೇನೆ” ಎಂದು ಅವರು ಹೇಳಿದ್ದಾರೆ.

ಉತ್ತರಪ್ರದೇಶದ ಹಣಕಾಸು ಸಚಿವ ಸುರೇಶ್ ಕುಮಾರ್ ಖನ್ನಾ ಫೆಬ್ರವರಿ 20ರಂದು 2025-26ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮಂಡಿಸಿದರು, ಇದು 2024-25ರ ಬಜೆಟ್‌ಗಿಂತ ಶೇ. 9.8 ರಷ್ಟು ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೂಲಸೌಕರ್ಯ ಅಭಿವೃದ್ಧಿಯ ಮೇಲೆ ಕೇಂದ್ರೀಕರಿಸಿದ್ದಾರೆ ಎಂದು ಅವರು ಹೇಳಿದರು.

“ಈ ಬಜೆಟ್ 8,08,736 ಕೋಟಿ ರೂ.ಗಳಿಗಿಂತ ಹೆಚ್ಚಾಗಿದೆ, ಇದು 2024-25ರ ಬಜೆಟ್‌ಗಿಂತ ಶೇ. 9.8 ರಷ್ಟು ಹೆಚ್ಚಾಗಿದೆ. ಒಂದೆಡೆ, ಬಜೆಟ್ ಗಾತ್ರದಲ್ಲಿನ ಬೆಳವಣಿಗೆ ರಾಜ್ಯದ ಶಕ್ತಿಯನ್ನು ಪ್ರತಿಬಿಂಬಿಸುತ್ತದೆ, ಮತ್ತೊಂದೆಡೆ, ಇದು ಡಬಲ್ ಎಂಜಿನ್ ಸರ್ಕಾರದ ಬದ್ಧತೆಯನ್ನು ಸಹ ತೋರಿಸುತ್ತದೆ” ಎಂದು ಸಿಎಂ ಯೋಗಿ ಪತ್ರಿಕಾಗೋಷ್ಠಿಯಲ್ಲಿ ಹೇಳಿರುವುದಾಗಿ ಸುದ್ದಿ ಸಂಸ್ಥೆ ಎಎನ್‌ಐ ಉಲ್ಲೇಖಿಸಿದೆ.

ಯುಪಿಯ ಆರ್ಥಿಕತೆಯು ಈ ಹಿಂದೆ ದೇಶದಲ್ಲಿ 6-7ನೇ ಸ್ಥಾನದಲ್ಲಿದ್ದರೆ, ಈಗ ಅದು ಭಾರತದ ಎರಡನೇ ಅತಿದೊಡ್ಡ ಆರ್ಥಿಕತೆಯಾಗಿದೆ ಎಂದು ಯೋಗಿ ಆದಿತ್ಯನಾಥ್ ಎತ್ತಿ ಹೇಳಿದರು.

ಅಂಬೇಡ್ಕರ್-ದಲಿತ ಸಮುದಾಯದ ಅವಹೇಳನ ನಾಟಕ; ಜೈನ್ ಯೂನಿವರ್ಸಿಟಿ ವಿದ್ಯಾರ್ಥಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...