ಕರ್ನಾಟಕದ ವಿಧಾನ ಪರಿಷತ್ನಲ್ಲಿ ತೆರವಾಗಿರುವ 3 ಸ್ಥಾನಗಳಿಗೆ ಜೂನ್ 30ರಂದು ಉಪ ಚುನಾವಣೆ ನಿಗಧಿಯಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಜಗದೀಶ್ ಶೆಟ್ಟರ್, ಬೋಸರಾಜು ಮತ್ತು ತಿಪ್ಪಣ್ಣಪ್ಪನವರು ಇಂದು ನಾಮಪತ್ರ ಸಲ್ಲಿಸಿದ್ದಾರೆ.
ವಿಧಾನಸಭೆಯ ಕಾರ್ಯದರ್ಶಿ ಮತ್ತು ಚುನಾವಣಾಧಿಕಾರಿ ಎಂ.ಕೆ ವಿಶಾಲಕ್ಷಿಯವರಿಗೆ ನಾಮಪತ್ರಗಳನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿದ್ದರು.
ವಿಧಾನ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾಗಿ ಜಗದೀಶ್ ಶೆಟ್ಟರ್, ಬೋಸರಾಜು ಹಾಗೂ ತಿಪ್ಪಣ್ಣಪ್ಪ ಕಮಕನೂರು ಅವರು ವಿಧಾನ ಪರಿಷತ್ನ ಕಾರ್ಯದರ್ಶಿಯವರಿಗೆ ನಾಮಪತ್ರ ಸಲ್ಲಿಸಿದ ಸಂದರ್ಭದಲ್ಲಿ ಜೊತೆಗಿದ್ದು, ಶುಭ ಹಾರೈಸಿದೆ. pic.twitter.com/YIVGA1yTgH
— Siddaramaiah (@siddaramaiah) June 20, 2023
ಇತ್ತೀಚೆಗೆ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ತ್ಯಜಿಸಿ ಕಾಂಗ್ರೆಸ್ಗೆ ಬಂದ ಮಾಜಿ ಸಿಂ ಜಗದೀಶ್ ಶೆಟ್ಟರ್ ರವರ ಹೆಸರನ್ನು ಆರು ವರ್ಷಗಳ ಪೂರ್ಣಾವಧಿಗೆ (14.06.2028ರವರೆಗೆ) ಶಿಫಾರಸ್ಸು ಮಾಡಲಾಗಿದೆ.
ತಿಪ್ಪಣ್ಣಪ್ಪ ಕಮಕನೂರುರವರ ಹೆಸರನ್ನು 30.06.2026ರವರೆಗಿನ ಮೂರು ವರ್ಷದ ಅವಧಿಯ ಸ್ಥಾನಕ್ಕೆ ಕಣಕ್ಕಿಳಿಸಲಾಗಿದೆ. ಸಚಿವರಾಗಿ ನೇಮಕಗೊಂಡಿರುವ ಎನ್.ಎಸ್ ಬೋಸರಾಜುರವರನ್ನು 17.06.2024ರ ಒಂದು ವರ್ಷದ ಅವಧಿಯ ಸ್ಥಾಣಕ್ಕೆ ಕಣಕ್ಕಿಳಿಸಲಾಗಿದೆ.
ಕಾಂಗ್ರೆಸ್ ಪಕ್ಷವು ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಬೃಹತ್ ಬಹುಮತ ಸಾಧಿಸಿದೆ. ಹಾಗಾಗಿ ಮೂರು ಪರಿಷತ್ ಸ್ಥಾನಗಳನ್ನು ಗೆದ್ದುಕೊಳ್ಳುವ ವಿಶ್ವಾಸದಲ್ಲಿದೆ.
ಇದನ್ನೂ ಓದಿ: ನಾಯಕರೇ ಇಲ್ಲದ ಬಿಜೆಪಿಗೆ ವಿರೋಧ ಪಕ್ಷದ ನಾಯಕ ಸಿಗುವುದಾದರೂ ಎಲ್ಲಿಂದ?: ಕಾಂಗ್ರೆಸ್ ಪ್ರಶ್ನೆ