Homeಮುಖಪುಟಎಂಎಲ್‌ಸಿ ಚುನಾವಣೆಗೆ ಆಸ್ತಿವಿವರ ಘೋಷಣೆ: ಎಂಟಿಬಿ ನಾಗರಾಜ್ ಆಸ್ತಿಯಲ್ಲಾದ ಹೆಚ್ಚಳವೆಷ್ಟು ಗೊತ್ತೆ?

ಎಂಎಲ್‌ಸಿ ಚುನಾವಣೆಗೆ ಆಸ್ತಿವಿವರ ಘೋಷಣೆ: ಎಂಟಿಬಿ ನಾಗರಾಜ್ ಆಸ್ತಿಯಲ್ಲಾದ ಹೆಚ್ಚಳವೆಷ್ಟು ಗೊತ್ತೆ?

- Advertisement -
- Advertisement -

ವಿಧಾನ ಪರಿಷತ್ ಚುನಾವಣೆಗೆ ಮೂರು ಪಕ್ಷದಿಂದ ಅಭ್ಯರ್ಥಿಗಳು ನಾಪಪತ್ರ ಸಲ್ಲಿಸಿದ್ದಾರೆ. ಬಿಜೆಪಿಯಿಂದ ಎಂಟಿಬಿ ನಾಗರಾಜ್, ಪ್ರತಾಪ್ ಸಿಂಹ ನಾಯಕ್, ಸುನೀಲ್ ವಲ್ಯಾಪುರೆ, ಆರ್. ಶಂಕರ್, ಕಾಂಗ್ರೆಸ್‌ನಿಂದ ಬಿ.ಕೆ. ಹರಿಪ್ರಸಾದ್, ನಜೀರ್ ಅಹಮದ್ ಜೆಡಿಎಸ್‌ನಿಂದ ಇಂಚರ ಗೋವಿಂದರಾಜು ಅಭ್ಯರ್ಥಿಗಳಾಗಿ ಚುನಾವಣಾ ಕಣದಲ್ಲಿದ್ದಾರೆ.

ಅಂತೆಯೇ ವಿಧಾನ ಪರಿಷತ್ತಿಗೆ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿಗಳು ತಮ್ಮ ಆಸ್ತಿ ವಿವರವನ್ನು ಘೋಷಿಸಿದ್ದಾರೆ. ಒಟ್ಟು ಏಳು ಜನ ಅಭ್ಯರ್ಥಿಗಳಲ್ಲಿ ಬಿಜೆಪಿಯ ಎಂಟಿಬಿ ನಾಗರಾಜ್ ಅತಿ ಶ್ರೀಮಂತ ಅಭ್ಯರ್ಥಿ ಎನಿಸಿದ್ದಾರೆ.

ಎಂಟಿಬಿ ನಾಗರಾಜ್ ಈಸಲ 1,224 ಕೋಟಿ ರೂ.ಗಿಂತ ಅಧಿಕ ಆಸ್ತಿ ಘೋಷಿಸಿದ್ದಾರೆ. ಇದರಲ್ಲಿ ಅಪಾರ ಮೌಲ್ಯದ ಡೈಮೆಂಡ್, ಪ್ಲಾಟಿನಂ ಸೇರಿದಂತೆ ಚಿನ್ನಾಭರಣಗಳು ಸೇರಿವೆ. ನಾಗರಾಜ್ ಹೆಸರಲ್ಲಿ 884 ಕೋಟಿ ರೂ.ಗಿಂತ ಹೆಚ್ಚು ಆಸ್ತಿ ಇದ್ದು, ಅವರ ಪತ್ನಿ ಶಾಂತಕುಮಾರಿ ಹೆಸರಲ್ಲಿ 331 ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ ಆಸ್ತಿಯಿದೆ. ಎಂಟಿಬಿ ನಾಗರಾಜ್ ಹೆಸರಿನಲ್ಲಿ 461 ಕೋಟಿ ರೂ. ಮೌಲ್ಯದ ಚರಾಸ್ತಿ, 416 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಇದೆ. ಅವರ ಹೆಂಡತಿ 160 ಕೋಟಿ ರೂ. ಮೌಲ್ಯದ ಚರಾಸ್ತಿ ಮತ್ತು 179 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ.

ಇದೇ ಎಂಟಿಬಿ ನಾಗರಾಜ್‌ರವರು ಆರು ತಿಂಗಳ ಹಿಂದೆಯಷ್ಟೇ ನಡೆದ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದಾಗ ಒಟ್ಟು ಆಸ್ತಿ ಮೌಲ್ಯ 1201.50 ಕೋಟಿ ರೂ ಘೋಷಿಸಿದ್ದರು. ಅಂದರೆ ಈ ಆರು ತಿಂಗಳಲ್ಲಿ ಅವರ ಒಟ್ಟು ಆಸ್ತಿಯಲ್ಲಿ 23 ಕೋಟಿ ರೂ ಹೆಚ್ಚಳ ಕಂಡುಬಂದಿದೆ.

ಇನ್ನು ಹಿಂದಕ್ಕೆ ಹೋಗುವುದಾರೆ ಎರಡು ವ‍ರ್ಷಗಳ ಹಿಂದೆ ಅಂದರೆ 2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅವರು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಹೊಸಕೋಟೆಯಿಂದ ಸ್ಪರ್ಧಿಸಿದ್ದಾಗ ಇದೇ ಎಂಟಿಬಿ ನಾಗರಾಜ್‌ರವರು 1015 ಕೋಟಿ ರೂ ಆಸ್ತಿ ಘೋಷಿಸಿದ್ದರು. ಅಂದರೆ ಎರಡು ವರ್ಷದಲ್ಲಿ ಅವರ ಆಸ್ತಿಯಲ್ಲಿ 209 ಕೋಟಿ ರೂ ಹೆಚ್ಚಳವಾಗಿದೆ.

ಅವರು ಕಾಂಗ್ರೆಸ್‌ ತ್ಯಜಿಸಿ ಬಿಜೆಪಿ ಸೇರಿ ಕಾಂಗ್ರೆಸ್‌ ಜೆಡಿಎಸ್‌ ಸರ್ಕಾರ ಉರುಳಲು ಕಾರಣರಲ್ಲಿ ಒಬ್ಬರಾಗಿದ್ದರು. ಅದಕ್ಕಾಗಿಯೇ ಅವರಿಗೆ 50 ಕೋಟಿಗೂ ಹೆಚ್ಚಿನ ಹಣ ಸಂದಾಯವಾಗಿದೆ. ಕೇವಲ ಒಂದು ವಾರದ ಅವಧಿಯಲ್ಲಿ ಅವರ ಖಾತೆಗೆ 48 ಕೋಟಿಗೂ ಅಧಿಕ ಮೊತ್ತ ವರ್ಗಾವಣೆಯಾಗಿದೆ ಎಂದು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳು ಆರೋಪಿಸಿದ್ದವು. 2018ರಿಂದ 2019 ರ ನಡುವೆ ಕೇವಲ 18 ತಿಂಗಳಿನಲ್ಲಿ 180 ಕೋಟಿ ರೂ ಹೆಚ್ಚಳವಾಗಿತ್ತು.

ಅಲ್ಲದೇ ಸದ್ಯಕ್ಕೆ ಘೋಷಿಸಿರುವ ಅಫಿಡವಿಟ್‌ನಂತೆ ಎಂಟಿಬಿ ನಾಗರಾಜ್ 52.75 ಕೋಟಿ ರೂ. ಸಾಲ ಹೊಂದಿದ್ದಾರೆ. ಅವರ ಪತ್ನಿ ಹೆಸರಲ್ಲಿ 1.97 ಕೋಟಿ ರೂ. ಸಾಲ ಇದೆ. ನಾಗರಾಜ್ ಅವರು 2.23 ಕೋಟಿ ರೂ. ಮೌಲ್ಯದ ಡೈಮೆಂಡ್, ಪ್ಲಾಟಿನಂ ಸೇರಿದಂತೆ ಚಿನ್ನಾಭರಣ ಹೊಂದಿದ್ದಾರೆ. ಪತ್ನಿಯ ಬಳಿ 1.48 ಕೋಟಿ ರೂ. ಮೌಲ್ಯದ ಡೈಮೆಂಡ್, ಪ್ಲಾಟಿನಂ ಸೇರಿದಂತೆ ಚಿನ್ನಾಭರಣ ಇದೆ. ನಾಗರಾಜ್ ಬಳಿ 32.60 ಲಕ್ಷ ರೂ. ನಗದು ಇದ್ದರೆ, ಪತ್ನಿ ಬಳಿ 45.60 ಲಕ್ಷ ರೂ. ನಗದು ಇದೆ. ಇವರು 2.48 ಕೋಟಿ ರೂ. ಮೌಲ್ಯದ ಐದು ಕಾರುಗಳನ್ನು ಹೊಂದಿದ್ದಾರೆ. ಈ ಪೈಕಿ 51.50 ಲಕ್ಷ ರೂ. ಮೌಲ್ಯದ ಲ್ಯಾಂಡ್ ರೋವರ್, 96.12 ಲಕ್ಷ ರೂ. ಮೌಲ್ಯದ ಮರ್ಸಿಡೀಸ್ ಬೆನ್ಜ್ ಕಾರ್, 29 ಲಕ್ಷ ರೂ. ಮೌಲ್ಯದ ಫಾರ್ಚೂನರ್ ದುಬಾರಿ ಮೌಲ್ಯದ ಕಾರುಗಳಿವೆ.


ಇದನ್ನೂ ಓದಿ: ಬಿಜೆಪಿ ಸೇರಿದ ಅನರ್ಹ ಶಾಸಕ ಎಂಟಿಬಿ ನಾಗರಾಜ್‌ ಆಸ್ತಿ 18 ತಿಂಗಳಲ್ಲಿ 185 ಕೋಟಿ ಏರಿಕೆ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...