Homeಮುಖಪುಟಎಂಎಲ್‌ಸಿ ಚುನಾವಣೆಗೆ ಆಸ್ತಿವಿವರ ಘೋಷಣೆ: ಎಂಟಿಬಿ ನಾಗರಾಜ್ ಆಸ್ತಿಯಲ್ಲಾದ ಹೆಚ್ಚಳವೆಷ್ಟು ಗೊತ್ತೆ?

ಎಂಎಲ್‌ಸಿ ಚುನಾವಣೆಗೆ ಆಸ್ತಿವಿವರ ಘೋಷಣೆ: ಎಂಟಿಬಿ ನಾಗರಾಜ್ ಆಸ್ತಿಯಲ್ಲಾದ ಹೆಚ್ಚಳವೆಷ್ಟು ಗೊತ್ತೆ?

- Advertisement -
- Advertisement -

ವಿಧಾನ ಪರಿಷತ್ ಚುನಾವಣೆಗೆ ಮೂರು ಪಕ್ಷದಿಂದ ಅಭ್ಯರ್ಥಿಗಳು ನಾಪಪತ್ರ ಸಲ್ಲಿಸಿದ್ದಾರೆ. ಬಿಜೆಪಿಯಿಂದ ಎಂಟಿಬಿ ನಾಗರಾಜ್, ಪ್ರತಾಪ್ ಸಿಂಹ ನಾಯಕ್, ಸುನೀಲ್ ವಲ್ಯಾಪುರೆ, ಆರ್. ಶಂಕರ್, ಕಾಂಗ್ರೆಸ್‌ನಿಂದ ಬಿ.ಕೆ. ಹರಿಪ್ರಸಾದ್, ನಜೀರ್ ಅಹಮದ್ ಜೆಡಿಎಸ್‌ನಿಂದ ಇಂಚರ ಗೋವಿಂದರಾಜು ಅಭ್ಯರ್ಥಿಗಳಾಗಿ ಚುನಾವಣಾ ಕಣದಲ್ಲಿದ್ದಾರೆ.

ಅಂತೆಯೇ ವಿಧಾನ ಪರಿಷತ್ತಿಗೆ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿಗಳು ತಮ್ಮ ಆಸ್ತಿ ವಿವರವನ್ನು ಘೋಷಿಸಿದ್ದಾರೆ. ಒಟ್ಟು ಏಳು ಜನ ಅಭ್ಯರ್ಥಿಗಳಲ್ಲಿ ಬಿಜೆಪಿಯ ಎಂಟಿಬಿ ನಾಗರಾಜ್ ಅತಿ ಶ್ರೀಮಂತ ಅಭ್ಯರ್ಥಿ ಎನಿಸಿದ್ದಾರೆ.

ಎಂಟಿಬಿ ನಾಗರಾಜ್ ಈಸಲ 1,224 ಕೋಟಿ ರೂ.ಗಿಂತ ಅಧಿಕ ಆಸ್ತಿ ಘೋಷಿಸಿದ್ದಾರೆ. ಇದರಲ್ಲಿ ಅಪಾರ ಮೌಲ್ಯದ ಡೈಮೆಂಡ್, ಪ್ಲಾಟಿನಂ ಸೇರಿದಂತೆ ಚಿನ್ನಾಭರಣಗಳು ಸೇರಿವೆ. ನಾಗರಾಜ್ ಹೆಸರಲ್ಲಿ 884 ಕೋಟಿ ರೂ.ಗಿಂತ ಹೆಚ್ಚು ಆಸ್ತಿ ಇದ್ದು, ಅವರ ಪತ್ನಿ ಶಾಂತಕುಮಾರಿ ಹೆಸರಲ್ಲಿ 331 ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ ಆಸ್ತಿಯಿದೆ. ಎಂಟಿಬಿ ನಾಗರಾಜ್ ಹೆಸರಿನಲ್ಲಿ 461 ಕೋಟಿ ರೂ. ಮೌಲ್ಯದ ಚರಾಸ್ತಿ, 416 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಇದೆ. ಅವರ ಹೆಂಡತಿ 160 ಕೋಟಿ ರೂ. ಮೌಲ್ಯದ ಚರಾಸ್ತಿ ಮತ್ತು 179 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ.

ಇದೇ ಎಂಟಿಬಿ ನಾಗರಾಜ್‌ರವರು ಆರು ತಿಂಗಳ ಹಿಂದೆಯಷ್ಟೇ ನಡೆದ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದಾಗ ಒಟ್ಟು ಆಸ್ತಿ ಮೌಲ್ಯ 1201.50 ಕೋಟಿ ರೂ ಘೋಷಿಸಿದ್ದರು. ಅಂದರೆ ಈ ಆರು ತಿಂಗಳಲ್ಲಿ ಅವರ ಒಟ್ಟು ಆಸ್ತಿಯಲ್ಲಿ 23 ಕೋಟಿ ರೂ ಹೆಚ್ಚಳ ಕಂಡುಬಂದಿದೆ.

ಇನ್ನು ಹಿಂದಕ್ಕೆ ಹೋಗುವುದಾರೆ ಎರಡು ವ‍ರ್ಷಗಳ ಹಿಂದೆ ಅಂದರೆ 2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅವರು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಹೊಸಕೋಟೆಯಿಂದ ಸ್ಪರ್ಧಿಸಿದ್ದಾಗ ಇದೇ ಎಂಟಿಬಿ ನಾಗರಾಜ್‌ರವರು 1015 ಕೋಟಿ ರೂ ಆಸ್ತಿ ಘೋಷಿಸಿದ್ದರು. ಅಂದರೆ ಎರಡು ವರ್ಷದಲ್ಲಿ ಅವರ ಆಸ್ತಿಯಲ್ಲಿ 209 ಕೋಟಿ ರೂ ಹೆಚ್ಚಳವಾಗಿದೆ.

ಅವರು ಕಾಂಗ್ರೆಸ್‌ ತ್ಯಜಿಸಿ ಬಿಜೆಪಿ ಸೇರಿ ಕಾಂಗ್ರೆಸ್‌ ಜೆಡಿಎಸ್‌ ಸರ್ಕಾರ ಉರುಳಲು ಕಾರಣರಲ್ಲಿ ಒಬ್ಬರಾಗಿದ್ದರು. ಅದಕ್ಕಾಗಿಯೇ ಅವರಿಗೆ 50 ಕೋಟಿಗೂ ಹೆಚ್ಚಿನ ಹಣ ಸಂದಾಯವಾಗಿದೆ. ಕೇವಲ ಒಂದು ವಾರದ ಅವಧಿಯಲ್ಲಿ ಅವರ ಖಾತೆಗೆ 48 ಕೋಟಿಗೂ ಅಧಿಕ ಮೊತ್ತ ವರ್ಗಾವಣೆಯಾಗಿದೆ ಎಂದು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳು ಆರೋಪಿಸಿದ್ದವು. 2018ರಿಂದ 2019 ರ ನಡುವೆ ಕೇವಲ 18 ತಿಂಗಳಿನಲ್ಲಿ 180 ಕೋಟಿ ರೂ ಹೆಚ್ಚಳವಾಗಿತ್ತು.

ಅಲ್ಲದೇ ಸದ್ಯಕ್ಕೆ ಘೋಷಿಸಿರುವ ಅಫಿಡವಿಟ್‌ನಂತೆ ಎಂಟಿಬಿ ನಾಗರಾಜ್ 52.75 ಕೋಟಿ ರೂ. ಸಾಲ ಹೊಂದಿದ್ದಾರೆ. ಅವರ ಪತ್ನಿ ಹೆಸರಲ್ಲಿ 1.97 ಕೋಟಿ ರೂ. ಸಾಲ ಇದೆ. ನಾಗರಾಜ್ ಅವರು 2.23 ಕೋಟಿ ರೂ. ಮೌಲ್ಯದ ಡೈಮೆಂಡ್, ಪ್ಲಾಟಿನಂ ಸೇರಿದಂತೆ ಚಿನ್ನಾಭರಣ ಹೊಂದಿದ್ದಾರೆ. ಪತ್ನಿಯ ಬಳಿ 1.48 ಕೋಟಿ ರೂ. ಮೌಲ್ಯದ ಡೈಮೆಂಡ್, ಪ್ಲಾಟಿನಂ ಸೇರಿದಂತೆ ಚಿನ್ನಾಭರಣ ಇದೆ. ನಾಗರಾಜ್ ಬಳಿ 32.60 ಲಕ್ಷ ರೂ. ನಗದು ಇದ್ದರೆ, ಪತ್ನಿ ಬಳಿ 45.60 ಲಕ್ಷ ರೂ. ನಗದು ಇದೆ. ಇವರು 2.48 ಕೋಟಿ ರೂ. ಮೌಲ್ಯದ ಐದು ಕಾರುಗಳನ್ನು ಹೊಂದಿದ್ದಾರೆ. ಈ ಪೈಕಿ 51.50 ಲಕ್ಷ ರೂ. ಮೌಲ್ಯದ ಲ್ಯಾಂಡ್ ರೋವರ್, 96.12 ಲಕ್ಷ ರೂ. ಮೌಲ್ಯದ ಮರ್ಸಿಡೀಸ್ ಬೆನ್ಜ್ ಕಾರ್, 29 ಲಕ್ಷ ರೂ. ಮೌಲ್ಯದ ಫಾರ್ಚೂನರ್ ದುಬಾರಿ ಮೌಲ್ಯದ ಕಾರುಗಳಿವೆ.


ಇದನ್ನೂ ಓದಿ: ಬಿಜೆಪಿ ಸೇರಿದ ಅನರ್ಹ ಶಾಸಕ ಎಂಟಿಬಿ ನಾಗರಾಜ್‌ ಆಸ್ತಿ 18 ತಿಂಗಳಲ್ಲಿ 185 ಕೋಟಿ ಏರಿಕೆ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...