Homeಮುಖಪುಟಎಂಎಲ್‌ಸಿ ಚುನಾವಣೆಗೆ ಆಸ್ತಿವಿವರ ಘೋಷಣೆ: ಎಂಟಿಬಿ ನಾಗರಾಜ್ ಆಸ್ತಿಯಲ್ಲಾದ ಹೆಚ್ಚಳವೆಷ್ಟು ಗೊತ್ತೆ?

ಎಂಎಲ್‌ಸಿ ಚುನಾವಣೆಗೆ ಆಸ್ತಿವಿವರ ಘೋಷಣೆ: ಎಂಟಿಬಿ ನಾಗರಾಜ್ ಆಸ್ತಿಯಲ್ಲಾದ ಹೆಚ್ಚಳವೆಷ್ಟು ಗೊತ್ತೆ?

- Advertisement -
- Advertisement -

ವಿಧಾನ ಪರಿಷತ್ ಚುನಾವಣೆಗೆ ಮೂರು ಪಕ್ಷದಿಂದ ಅಭ್ಯರ್ಥಿಗಳು ನಾಪಪತ್ರ ಸಲ್ಲಿಸಿದ್ದಾರೆ. ಬಿಜೆಪಿಯಿಂದ ಎಂಟಿಬಿ ನಾಗರಾಜ್, ಪ್ರತಾಪ್ ಸಿಂಹ ನಾಯಕ್, ಸುನೀಲ್ ವಲ್ಯಾಪುರೆ, ಆರ್. ಶಂಕರ್, ಕಾಂಗ್ರೆಸ್‌ನಿಂದ ಬಿ.ಕೆ. ಹರಿಪ್ರಸಾದ್, ನಜೀರ್ ಅಹಮದ್ ಜೆಡಿಎಸ್‌ನಿಂದ ಇಂಚರ ಗೋವಿಂದರಾಜು ಅಭ್ಯರ್ಥಿಗಳಾಗಿ ಚುನಾವಣಾ ಕಣದಲ್ಲಿದ್ದಾರೆ.

ಅಂತೆಯೇ ವಿಧಾನ ಪರಿಷತ್ತಿಗೆ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿಗಳು ತಮ್ಮ ಆಸ್ತಿ ವಿವರವನ್ನು ಘೋಷಿಸಿದ್ದಾರೆ. ಒಟ್ಟು ಏಳು ಜನ ಅಭ್ಯರ್ಥಿಗಳಲ್ಲಿ ಬಿಜೆಪಿಯ ಎಂಟಿಬಿ ನಾಗರಾಜ್ ಅತಿ ಶ್ರೀಮಂತ ಅಭ್ಯರ್ಥಿ ಎನಿಸಿದ್ದಾರೆ.

ಎಂಟಿಬಿ ನಾಗರಾಜ್ ಈಸಲ 1,224 ಕೋಟಿ ರೂ.ಗಿಂತ ಅಧಿಕ ಆಸ್ತಿ ಘೋಷಿಸಿದ್ದಾರೆ. ಇದರಲ್ಲಿ ಅಪಾರ ಮೌಲ್ಯದ ಡೈಮೆಂಡ್, ಪ್ಲಾಟಿನಂ ಸೇರಿದಂತೆ ಚಿನ್ನಾಭರಣಗಳು ಸೇರಿವೆ. ನಾಗರಾಜ್ ಹೆಸರಲ್ಲಿ 884 ಕೋಟಿ ರೂ.ಗಿಂತ ಹೆಚ್ಚು ಆಸ್ತಿ ಇದ್ದು, ಅವರ ಪತ್ನಿ ಶಾಂತಕುಮಾರಿ ಹೆಸರಲ್ಲಿ 331 ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ ಆಸ್ತಿಯಿದೆ. ಎಂಟಿಬಿ ನಾಗರಾಜ್ ಹೆಸರಿನಲ್ಲಿ 461 ಕೋಟಿ ರೂ. ಮೌಲ್ಯದ ಚರಾಸ್ತಿ, 416 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಇದೆ. ಅವರ ಹೆಂಡತಿ 160 ಕೋಟಿ ರೂ. ಮೌಲ್ಯದ ಚರಾಸ್ತಿ ಮತ್ತು 179 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ.

ಇದೇ ಎಂಟಿಬಿ ನಾಗರಾಜ್‌ರವರು ಆರು ತಿಂಗಳ ಹಿಂದೆಯಷ್ಟೇ ನಡೆದ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದಾಗ ಒಟ್ಟು ಆಸ್ತಿ ಮೌಲ್ಯ 1201.50 ಕೋಟಿ ರೂ ಘೋಷಿಸಿದ್ದರು. ಅಂದರೆ ಈ ಆರು ತಿಂಗಳಲ್ಲಿ ಅವರ ಒಟ್ಟು ಆಸ್ತಿಯಲ್ಲಿ 23 ಕೋಟಿ ರೂ ಹೆಚ್ಚಳ ಕಂಡುಬಂದಿದೆ.

ಇನ್ನು ಹಿಂದಕ್ಕೆ ಹೋಗುವುದಾರೆ ಎರಡು ವ‍ರ್ಷಗಳ ಹಿಂದೆ ಅಂದರೆ 2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅವರು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಹೊಸಕೋಟೆಯಿಂದ ಸ್ಪರ್ಧಿಸಿದ್ದಾಗ ಇದೇ ಎಂಟಿಬಿ ನಾಗರಾಜ್‌ರವರು 1015 ಕೋಟಿ ರೂ ಆಸ್ತಿ ಘೋಷಿಸಿದ್ದರು. ಅಂದರೆ ಎರಡು ವರ್ಷದಲ್ಲಿ ಅವರ ಆಸ್ತಿಯಲ್ಲಿ 209 ಕೋಟಿ ರೂ ಹೆಚ್ಚಳವಾಗಿದೆ.

ಅವರು ಕಾಂಗ್ರೆಸ್‌ ತ್ಯಜಿಸಿ ಬಿಜೆಪಿ ಸೇರಿ ಕಾಂಗ್ರೆಸ್‌ ಜೆಡಿಎಸ್‌ ಸರ್ಕಾರ ಉರುಳಲು ಕಾರಣರಲ್ಲಿ ಒಬ್ಬರಾಗಿದ್ದರು. ಅದಕ್ಕಾಗಿಯೇ ಅವರಿಗೆ 50 ಕೋಟಿಗೂ ಹೆಚ್ಚಿನ ಹಣ ಸಂದಾಯವಾಗಿದೆ. ಕೇವಲ ಒಂದು ವಾರದ ಅವಧಿಯಲ್ಲಿ ಅವರ ಖಾತೆಗೆ 48 ಕೋಟಿಗೂ ಅಧಿಕ ಮೊತ್ತ ವರ್ಗಾವಣೆಯಾಗಿದೆ ಎಂದು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳು ಆರೋಪಿಸಿದ್ದವು. 2018ರಿಂದ 2019 ರ ನಡುವೆ ಕೇವಲ 18 ತಿಂಗಳಿನಲ್ಲಿ 180 ಕೋಟಿ ರೂ ಹೆಚ್ಚಳವಾಗಿತ್ತು.

ಅಲ್ಲದೇ ಸದ್ಯಕ್ಕೆ ಘೋಷಿಸಿರುವ ಅಫಿಡವಿಟ್‌ನಂತೆ ಎಂಟಿಬಿ ನಾಗರಾಜ್ 52.75 ಕೋಟಿ ರೂ. ಸಾಲ ಹೊಂದಿದ್ದಾರೆ. ಅವರ ಪತ್ನಿ ಹೆಸರಲ್ಲಿ 1.97 ಕೋಟಿ ರೂ. ಸಾಲ ಇದೆ. ನಾಗರಾಜ್ ಅವರು 2.23 ಕೋಟಿ ರೂ. ಮೌಲ್ಯದ ಡೈಮೆಂಡ್, ಪ್ಲಾಟಿನಂ ಸೇರಿದಂತೆ ಚಿನ್ನಾಭರಣ ಹೊಂದಿದ್ದಾರೆ. ಪತ್ನಿಯ ಬಳಿ 1.48 ಕೋಟಿ ರೂ. ಮೌಲ್ಯದ ಡೈಮೆಂಡ್, ಪ್ಲಾಟಿನಂ ಸೇರಿದಂತೆ ಚಿನ್ನಾಭರಣ ಇದೆ. ನಾಗರಾಜ್ ಬಳಿ 32.60 ಲಕ್ಷ ರೂ. ನಗದು ಇದ್ದರೆ, ಪತ್ನಿ ಬಳಿ 45.60 ಲಕ್ಷ ರೂ. ನಗದು ಇದೆ. ಇವರು 2.48 ಕೋಟಿ ರೂ. ಮೌಲ್ಯದ ಐದು ಕಾರುಗಳನ್ನು ಹೊಂದಿದ್ದಾರೆ. ಈ ಪೈಕಿ 51.50 ಲಕ್ಷ ರೂ. ಮೌಲ್ಯದ ಲ್ಯಾಂಡ್ ರೋವರ್, 96.12 ಲಕ್ಷ ರೂ. ಮೌಲ್ಯದ ಮರ್ಸಿಡೀಸ್ ಬೆನ್ಜ್ ಕಾರ್, 29 ಲಕ್ಷ ರೂ. ಮೌಲ್ಯದ ಫಾರ್ಚೂನರ್ ದುಬಾರಿ ಮೌಲ್ಯದ ಕಾರುಗಳಿವೆ.


ಇದನ್ನೂ ಓದಿ: ಬಿಜೆಪಿ ಸೇರಿದ ಅನರ್ಹ ಶಾಸಕ ಎಂಟಿಬಿ ನಾಗರಾಜ್‌ ಆಸ್ತಿ 18 ತಿಂಗಳಲ್ಲಿ 185 ಕೋಟಿ ಏರಿಕೆ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...