Homeಮುಖಪುಟಎಂಎಲ್‌ಸಿ ಚುನಾವಣೆಗೆ ಆಸ್ತಿವಿವರ ಘೋಷಣೆ: ಎಂಟಿಬಿ ನಾಗರಾಜ್ ಆಸ್ತಿಯಲ್ಲಾದ ಹೆಚ್ಚಳವೆಷ್ಟು ಗೊತ್ತೆ?

ಎಂಎಲ್‌ಸಿ ಚುನಾವಣೆಗೆ ಆಸ್ತಿವಿವರ ಘೋಷಣೆ: ಎಂಟಿಬಿ ನಾಗರಾಜ್ ಆಸ್ತಿಯಲ್ಲಾದ ಹೆಚ್ಚಳವೆಷ್ಟು ಗೊತ್ತೆ?

- Advertisement -
- Advertisement -

ವಿಧಾನ ಪರಿಷತ್ ಚುನಾವಣೆಗೆ ಮೂರು ಪಕ್ಷದಿಂದ ಅಭ್ಯರ್ಥಿಗಳು ನಾಪಪತ್ರ ಸಲ್ಲಿಸಿದ್ದಾರೆ. ಬಿಜೆಪಿಯಿಂದ ಎಂಟಿಬಿ ನಾಗರಾಜ್, ಪ್ರತಾಪ್ ಸಿಂಹ ನಾಯಕ್, ಸುನೀಲ್ ವಲ್ಯಾಪುರೆ, ಆರ್. ಶಂಕರ್, ಕಾಂಗ್ರೆಸ್‌ನಿಂದ ಬಿ.ಕೆ. ಹರಿಪ್ರಸಾದ್, ನಜೀರ್ ಅಹಮದ್ ಜೆಡಿಎಸ್‌ನಿಂದ ಇಂಚರ ಗೋವಿಂದರಾಜು ಅಭ್ಯರ್ಥಿಗಳಾಗಿ ಚುನಾವಣಾ ಕಣದಲ್ಲಿದ್ದಾರೆ.

ಅಂತೆಯೇ ವಿಧಾನ ಪರಿಷತ್ತಿಗೆ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿಗಳು ತಮ್ಮ ಆಸ್ತಿ ವಿವರವನ್ನು ಘೋಷಿಸಿದ್ದಾರೆ. ಒಟ್ಟು ಏಳು ಜನ ಅಭ್ಯರ್ಥಿಗಳಲ್ಲಿ ಬಿಜೆಪಿಯ ಎಂಟಿಬಿ ನಾಗರಾಜ್ ಅತಿ ಶ್ರೀಮಂತ ಅಭ್ಯರ್ಥಿ ಎನಿಸಿದ್ದಾರೆ.

ಎಂಟಿಬಿ ನಾಗರಾಜ್ ಈಸಲ 1,224 ಕೋಟಿ ರೂ.ಗಿಂತ ಅಧಿಕ ಆಸ್ತಿ ಘೋಷಿಸಿದ್ದಾರೆ. ಇದರಲ್ಲಿ ಅಪಾರ ಮೌಲ್ಯದ ಡೈಮೆಂಡ್, ಪ್ಲಾಟಿನಂ ಸೇರಿದಂತೆ ಚಿನ್ನಾಭರಣಗಳು ಸೇರಿವೆ. ನಾಗರಾಜ್ ಹೆಸರಲ್ಲಿ 884 ಕೋಟಿ ರೂ.ಗಿಂತ ಹೆಚ್ಚು ಆಸ್ತಿ ಇದ್ದು, ಅವರ ಪತ್ನಿ ಶಾಂತಕುಮಾರಿ ಹೆಸರಲ್ಲಿ 331 ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ ಆಸ್ತಿಯಿದೆ. ಎಂಟಿಬಿ ನಾಗರಾಜ್ ಹೆಸರಿನಲ್ಲಿ 461 ಕೋಟಿ ರೂ. ಮೌಲ್ಯದ ಚರಾಸ್ತಿ, 416 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಇದೆ. ಅವರ ಹೆಂಡತಿ 160 ಕೋಟಿ ರೂ. ಮೌಲ್ಯದ ಚರಾಸ್ತಿ ಮತ್ತು 179 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ.

ಇದೇ ಎಂಟಿಬಿ ನಾಗರಾಜ್‌ರವರು ಆರು ತಿಂಗಳ ಹಿಂದೆಯಷ್ಟೇ ನಡೆದ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದಾಗ ಒಟ್ಟು ಆಸ್ತಿ ಮೌಲ್ಯ 1201.50 ಕೋಟಿ ರೂ ಘೋಷಿಸಿದ್ದರು. ಅಂದರೆ ಈ ಆರು ತಿಂಗಳಲ್ಲಿ ಅವರ ಒಟ್ಟು ಆಸ್ತಿಯಲ್ಲಿ 23 ಕೋಟಿ ರೂ ಹೆಚ್ಚಳ ಕಂಡುಬಂದಿದೆ.

ಇನ್ನು ಹಿಂದಕ್ಕೆ ಹೋಗುವುದಾರೆ ಎರಡು ವ‍ರ್ಷಗಳ ಹಿಂದೆ ಅಂದರೆ 2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅವರು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಹೊಸಕೋಟೆಯಿಂದ ಸ್ಪರ್ಧಿಸಿದ್ದಾಗ ಇದೇ ಎಂಟಿಬಿ ನಾಗರಾಜ್‌ರವರು 1015 ಕೋಟಿ ರೂ ಆಸ್ತಿ ಘೋಷಿಸಿದ್ದರು. ಅಂದರೆ ಎರಡು ವರ್ಷದಲ್ಲಿ ಅವರ ಆಸ್ತಿಯಲ್ಲಿ 209 ಕೋಟಿ ರೂ ಹೆಚ್ಚಳವಾಗಿದೆ.

ಅವರು ಕಾಂಗ್ರೆಸ್‌ ತ್ಯಜಿಸಿ ಬಿಜೆಪಿ ಸೇರಿ ಕಾಂಗ್ರೆಸ್‌ ಜೆಡಿಎಸ್‌ ಸರ್ಕಾರ ಉರುಳಲು ಕಾರಣರಲ್ಲಿ ಒಬ್ಬರಾಗಿದ್ದರು. ಅದಕ್ಕಾಗಿಯೇ ಅವರಿಗೆ 50 ಕೋಟಿಗೂ ಹೆಚ್ಚಿನ ಹಣ ಸಂದಾಯವಾಗಿದೆ. ಕೇವಲ ಒಂದು ವಾರದ ಅವಧಿಯಲ್ಲಿ ಅವರ ಖಾತೆಗೆ 48 ಕೋಟಿಗೂ ಅಧಿಕ ಮೊತ್ತ ವರ್ಗಾವಣೆಯಾಗಿದೆ ಎಂದು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳು ಆರೋಪಿಸಿದ್ದವು. 2018ರಿಂದ 2019 ರ ನಡುವೆ ಕೇವಲ 18 ತಿಂಗಳಿನಲ್ಲಿ 180 ಕೋಟಿ ರೂ ಹೆಚ್ಚಳವಾಗಿತ್ತು.

ಅಲ್ಲದೇ ಸದ್ಯಕ್ಕೆ ಘೋಷಿಸಿರುವ ಅಫಿಡವಿಟ್‌ನಂತೆ ಎಂಟಿಬಿ ನಾಗರಾಜ್ 52.75 ಕೋಟಿ ರೂ. ಸಾಲ ಹೊಂದಿದ್ದಾರೆ. ಅವರ ಪತ್ನಿ ಹೆಸರಲ್ಲಿ 1.97 ಕೋಟಿ ರೂ. ಸಾಲ ಇದೆ. ನಾಗರಾಜ್ ಅವರು 2.23 ಕೋಟಿ ರೂ. ಮೌಲ್ಯದ ಡೈಮೆಂಡ್, ಪ್ಲಾಟಿನಂ ಸೇರಿದಂತೆ ಚಿನ್ನಾಭರಣ ಹೊಂದಿದ್ದಾರೆ. ಪತ್ನಿಯ ಬಳಿ 1.48 ಕೋಟಿ ರೂ. ಮೌಲ್ಯದ ಡೈಮೆಂಡ್, ಪ್ಲಾಟಿನಂ ಸೇರಿದಂತೆ ಚಿನ್ನಾಭರಣ ಇದೆ. ನಾಗರಾಜ್ ಬಳಿ 32.60 ಲಕ್ಷ ರೂ. ನಗದು ಇದ್ದರೆ, ಪತ್ನಿ ಬಳಿ 45.60 ಲಕ್ಷ ರೂ. ನಗದು ಇದೆ. ಇವರು 2.48 ಕೋಟಿ ರೂ. ಮೌಲ್ಯದ ಐದು ಕಾರುಗಳನ್ನು ಹೊಂದಿದ್ದಾರೆ. ಈ ಪೈಕಿ 51.50 ಲಕ್ಷ ರೂ. ಮೌಲ್ಯದ ಲ್ಯಾಂಡ್ ರೋವರ್, 96.12 ಲಕ್ಷ ರೂ. ಮೌಲ್ಯದ ಮರ್ಸಿಡೀಸ್ ಬೆನ್ಜ್ ಕಾರ್, 29 ಲಕ್ಷ ರೂ. ಮೌಲ್ಯದ ಫಾರ್ಚೂನರ್ ದುಬಾರಿ ಮೌಲ್ಯದ ಕಾರುಗಳಿವೆ.


ಇದನ್ನೂ ಓದಿ: ಬಿಜೆಪಿ ಸೇರಿದ ಅನರ್ಹ ಶಾಸಕ ಎಂಟಿಬಿ ನಾಗರಾಜ್‌ ಆಸ್ತಿ 18 ತಿಂಗಳಲ್ಲಿ 185 ಕೋಟಿ ಏರಿಕೆ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...