Homeಮುಖಪುಟಎಂಎಲ್‌ಸಿ ಚುನಾವಣೆಗೆ ಆಸ್ತಿವಿವರ ಘೋಷಣೆ: ಎಂಟಿಬಿ ನಾಗರಾಜ್ ಆಸ್ತಿಯಲ್ಲಾದ ಹೆಚ್ಚಳವೆಷ್ಟು ಗೊತ್ತೆ?

ಎಂಎಲ್‌ಸಿ ಚುನಾವಣೆಗೆ ಆಸ್ತಿವಿವರ ಘೋಷಣೆ: ಎಂಟಿಬಿ ನಾಗರಾಜ್ ಆಸ್ತಿಯಲ್ಲಾದ ಹೆಚ್ಚಳವೆಷ್ಟು ಗೊತ್ತೆ?

- Advertisement -
- Advertisement -

ವಿಧಾನ ಪರಿಷತ್ ಚುನಾವಣೆಗೆ ಮೂರು ಪಕ್ಷದಿಂದ ಅಭ್ಯರ್ಥಿಗಳು ನಾಪಪತ್ರ ಸಲ್ಲಿಸಿದ್ದಾರೆ. ಬಿಜೆಪಿಯಿಂದ ಎಂಟಿಬಿ ನಾಗರಾಜ್, ಪ್ರತಾಪ್ ಸಿಂಹ ನಾಯಕ್, ಸುನೀಲ್ ವಲ್ಯಾಪುರೆ, ಆರ್. ಶಂಕರ್, ಕಾಂಗ್ರೆಸ್‌ನಿಂದ ಬಿ.ಕೆ. ಹರಿಪ್ರಸಾದ್, ನಜೀರ್ ಅಹಮದ್ ಜೆಡಿಎಸ್‌ನಿಂದ ಇಂಚರ ಗೋವಿಂದರಾಜು ಅಭ್ಯರ್ಥಿಗಳಾಗಿ ಚುನಾವಣಾ ಕಣದಲ್ಲಿದ್ದಾರೆ.

ಅಂತೆಯೇ ವಿಧಾನ ಪರಿಷತ್ತಿಗೆ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿಗಳು ತಮ್ಮ ಆಸ್ತಿ ವಿವರವನ್ನು ಘೋಷಿಸಿದ್ದಾರೆ. ಒಟ್ಟು ಏಳು ಜನ ಅಭ್ಯರ್ಥಿಗಳಲ್ಲಿ ಬಿಜೆಪಿಯ ಎಂಟಿಬಿ ನಾಗರಾಜ್ ಅತಿ ಶ್ರೀಮಂತ ಅಭ್ಯರ್ಥಿ ಎನಿಸಿದ್ದಾರೆ.

ಎಂಟಿಬಿ ನಾಗರಾಜ್ ಈಸಲ 1,224 ಕೋಟಿ ರೂ.ಗಿಂತ ಅಧಿಕ ಆಸ್ತಿ ಘೋಷಿಸಿದ್ದಾರೆ. ಇದರಲ್ಲಿ ಅಪಾರ ಮೌಲ್ಯದ ಡೈಮೆಂಡ್, ಪ್ಲಾಟಿನಂ ಸೇರಿದಂತೆ ಚಿನ್ನಾಭರಣಗಳು ಸೇರಿವೆ. ನಾಗರಾಜ್ ಹೆಸರಲ್ಲಿ 884 ಕೋಟಿ ರೂ.ಗಿಂತ ಹೆಚ್ಚು ಆಸ್ತಿ ಇದ್ದು, ಅವರ ಪತ್ನಿ ಶಾಂತಕುಮಾರಿ ಹೆಸರಲ್ಲಿ 331 ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ ಆಸ್ತಿಯಿದೆ. ಎಂಟಿಬಿ ನಾಗರಾಜ್ ಹೆಸರಿನಲ್ಲಿ 461 ಕೋಟಿ ರೂ. ಮೌಲ್ಯದ ಚರಾಸ್ತಿ, 416 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಇದೆ. ಅವರ ಹೆಂಡತಿ 160 ಕೋಟಿ ರೂ. ಮೌಲ್ಯದ ಚರಾಸ್ತಿ ಮತ್ತು 179 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ.

ಇದೇ ಎಂಟಿಬಿ ನಾಗರಾಜ್‌ರವರು ಆರು ತಿಂಗಳ ಹಿಂದೆಯಷ್ಟೇ ನಡೆದ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದಾಗ ಒಟ್ಟು ಆಸ್ತಿ ಮೌಲ್ಯ 1201.50 ಕೋಟಿ ರೂ ಘೋಷಿಸಿದ್ದರು. ಅಂದರೆ ಈ ಆರು ತಿಂಗಳಲ್ಲಿ ಅವರ ಒಟ್ಟು ಆಸ್ತಿಯಲ್ಲಿ 23 ಕೋಟಿ ರೂ ಹೆಚ್ಚಳ ಕಂಡುಬಂದಿದೆ.

ಇನ್ನು ಹಿಂದಕ್ಕೆ ಹೋಗುವುದಾರೆ ಎರಡು ವ‍ರ್ಷಗಳ ಹಿಂದೆ ಅಂದರೆ 2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅವರು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಹೊಸಕೋಟೆಯಿಂದ ಸ್ಪರ್ಧಿಸಿದ್ದಾಗ ಇದೇ ಎಂಟಿಬಿ ನಾಗರಾಜ್‌ರವರು 1015 ಕೋಟಿ ರೂ ಆಸ್ತಿ ಘೋಷಿಸಿದ್ದರು. ಅಂದರೆ ಎರಡು ವರ್ಷದಲ್ಲಿ ಅವರ ಆಸ್ತಿಯಲ್ಲಿ 209 ಕೋಟಿ ರೂ ಹೆಚ್ಚಳವಾಗಿದೆ.

ಅವರು ಕಾಂಗ್ರೆಸ್‌ ತ್ಯಜಿಸಿ ಬಿಜೆಪಿ ಸೇರಿ ಕಾಂಗ್ರೆಸ್‌ ಜೆಡಿಎಸ್‌ ಸರ್ಕಾರ ಉರುಳಲು ಕಾರಣರಲ್ಲಿ ಒಬ್ಬರಾಗಿದ್ದರು. ಅದಕ್ಕಾಗಿಯೇ ಅವರಿಗೆ 50 ಕೋಟಿಗೂ ಹೆಚ್ಚಿನ ಹಣ ಸಂದಾಯವಾಗಿದೆ. ಕೇವಲ ಒಂದು ವಾರದ ಅವಧಿಯಲ್ಲಿ ಅವರ ಖಾತೆಗೆ 48 ಕೋಟಿಗೂ ಅಧಿಕ ಮೊತ್ತ ವರ್ಗಾವಣೆಯಾಗಿದೆ ಎಂದು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳು ಆರೋಪಿಸಿದ್ದವು. 2018ರಿಂದ 2019 ರ ನಡುವೆ ಕೇವಲ 18 ತಿಂಗಳಿನಲ್ಲಿ 180 ಕೋಟಿ ರೂ ಹೆಚ್ಚಳವಾಗಿತ್ತು.

ಅಲ್ಲದೇ ಸದ್ಯಕ್ಕೆ ಘೋಷಿಸಿರುವ ಅಫಿಡವಿಟ್‌ನಂತೆ ಎಂಟಿಬಿ ನಾಗರಾಜ್ 52.75 ಕೋಟಿ ರೂ. ಸಾಲ ಹೊಂದಿದ್ದಾರೆ. ಅವರ ಪತ್ನಿ ಹೆಸರಲ್ಲಿ 1.97 ಕೋಟಿ ರೂ. ಸಾಲ ಇದೆ. ನಾಗರಾಜ್ ಅವರು 2.23 ಕೋಟಿ ರೂ. ಮೌಲ್ಯದ ಡೈಮೆಂಡ್, ಪ್ಲಾಟಿನಂ ಸೇರಿದಂತೆ ಚಿನ್ನಾಭರಣ ಹೊಂದಿದ್ದಾರೆ. ಪತ್ನಿಯ ಬಳಿ 1.48 ಕೋಟಿ ರೂ. ಮೌಲ್ಯದ ಡೈಮೆಂಡ್, ಪ್ಲಾಟಿನಂ ಸೇರಿದಂತೆ ಚಿನ್ನಾಭರಣ ಇದೆ. ನಾಗರಾಜ್ ಬಳಿ 32.60 ಲಕ್ಷ ರೂ. ನಗದು ಇದ್ದರೆ, ಪತ್ನಿ ಬಳಿ 45.60 ಲಕ್ಷ ರೂ. ನಗದು ಇದೆ. ಇವರು 2.48 ಕೋಟಿ ರೂ. ಮೌಲ್ಯದ ಐದು ಕಾರುಗಳನ್ನು ಹೊಂದಿದ್ದಾರೆ. ಈ ಪೈಕಿ 51.50 ಲಕ್ಷ ರೂ. ಮೌಲ್ಯದ ಲ್ಯಾಂಡ್ ರೋವರ್, 96.12 ಲಕ್ಷ ರೂ. ಮೌಲ್ಯದ ಮರ್ಸಿಡೀಸ್ ಬೆನ್ಜ್ ಕಾರ್, 29 ಲಕ್ಷ ರೂ. ಮೌಲ್ಯದ ಫಾರ್ಚೂನರ್ ದುಬಾರಿ ಮೌಲ್ಯದ ಕಾರುಗಳಿವೆ.


ಇದನ್ನೂ ಓದಿ: ಬಿಜೆಪಿ ಸೇರಿದ ಅನರ್ಹ ಶಾಸಕ ಎಂಟಿಬಿ ನಾಗರಾಜ್‌ ಆಸ್ತಿ 18 ತಿಂಗಳಲ್ಲಿ 185 ಕೋಟಿ ಏರಿಕೆ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...