Homeಕರ್ನಾಟಕನಾಪತ್ತೆಯಾಗಿದ್ದ ಎಂಎಲ್​ಸಿ ಸಿಪಿ ಯೋಗೇಶ್ವರ್ ಬಾವ ಶವವಾಗಿ ಪತ್ತೆ

ನಾಪತ್ತೆಯಾಗಿದ್ದ ಎಂಎಲ್​ಸಿ ಸಿಪಿ ಯೋಗೇಶ್ವರ್ ಬಾವ ಶವವಾಗಿ ಪತ್ತೆ

- Advertisement -
- Advertisement -

ಡಿಸೆಂಬರ್‌ 1ರಂದು ನಾಪತ್ತೆಯಾಗಿದ್ದ ವಿಧಾನಪರಿಷತ್ ಬಿಜೆಪಿ ಸದಸ್ಯ ಸಿ.ಪಿ ಯೋಗೇಶ್ವರ್ ಅವರ ಭಾವ ಮಹದೇವಯ್ಯ ಅವರು ಚಾಮರಾಜನಗರ ಜಿಲ್ಲೆಯ ರಾಮಾಪುರ ಬಳಿ ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ.

ಚನ್ನಪಟ್ಟಣ ತಾಲೂಕಿನ ಚಕ್ಕೆರೆ ಗ್ರಾಮದ ತೋಟದ ಮನೆಯಲ್ಲಿ ವಾಸವಾಗಿದ್ದ ಮಹದೇವಯ್ಯ ಡಿಸೆಂಬರ್ 1ರಂದು ನಿಗೂಢವಾಗಿ ನಾಪತ್ತೆಯಾಗಿದ್ದರು. ಕುಟುಂಬಸ್ಥರು ತೋಟದ ಮನೆ ಬಳಿ ಹುಡುಕಾಡಿದಾಗ ಮನೆಯ ಬೀರುಗಳ ಬಾಗಿಲು ತೆರದ ಸ್ಥಿತಿಯಲ್ಲಿ ಕಂಡು ಬಂದಿತ್ತು. ಆದರೆ, ಮಹದೇವಯ್ಯ ಅವರು ಎಲ್ಲಿಗೆ ಹೋಗಿದ್ದರು ಎಂಬ ಮಾಹಿತಿ ತಿಳಿದಿರಲಿಲ್ಲ. ಈ ಬಗ್ಗೆ ದೂರು ದಾಖಲಿಸಿಕೊಂಡ ಚಣ್ಣಪಟ್ಟಣ ಪೊಲೀಸರು, ಹುಡುಕಾಟ ಆರಂಭಿಸಿದ್ದರು. ಈ ವೇಳೆ ಮಹದೇಶ್ವರ ಬೆಟ್ಟದಲ್ಲಿ ಅವರ ಮೊಬೈಲ್ ಲೊಕೇಶನ್ ಪತ್ತೆಯಾಗಿತ್ತು.

ಪೊಲೀಸರು ಹುಡುಕಾಟ ತೀವ್ರಗೊಳಿಸಿದಾಗ ಭಾನುವಾರ ಹನೂರು ತಾಲೂಕಿನ ರಾಮಾಪುರದ ನಿರ್ಜನ ಪ್ರದೇಶದಲ್ಲಿ ಮಹಾದೇವಯ್ಯ ಅವರ ಕಾರು ಪತ್ತೆಯಾಗಿತ್ತು. ಸ್ಥಳಕ್ಕೆ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಕಾರಿನ ಗಾಜು ಒಡೆದಿತ್ತು. ರಕ್ತದ ಕಲೆಗಳು ಕಂಡು ಬಂದಿತ್ತು.

ಕಾರು ಪತ್ತೆಯಾಗುತ್ತಿದ್ದಂತೆ ಪೊಲೀಸರು ಅರಣ್ಯ ಇಲಾಖೆ ಸಿಬ್ಬಂದಿ ಜೊತೆ ಜಂಟಿ ಹುಡುಕಾಟ ನಡೆಸಿದ್ದರು. ಇಂದು ಸಂಜೆ (ಡಿ.4) ರಾಮಾಪುರದ ಅರಣ್ಯ ಪ್ರದೇಶದಲ್ಲಿ ಮಹದೇವಯ್ಯ ಅವರ ಶವ ಪತ್ತೆಯಾಗಿದೆ.

ಮಹದೇವಯ್ಯ ಅವರನ್ನು ಬೆಡ್​​ಶೀಟ್ ಹೊದಿಸಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ವರದಿಗಳು ಹೇಳಿವೆ. ಕೊಲೆಯಾದ ಸ್ಥಳದಿಂದ 6 ಕಿಲೋ ಮೀಟರ್ ದೂರದಲ್ಲಿ ಶವ ಪತ್ತೆಯಾಗಿದೆ. ಸಿಸಿ ಕ್ಯಾಮರಾ ದೃಶ್ಯ ಆಧರಿಸಿ ಪೊಲೀಸರು ಮೃತದೇಹವನ್ನು ಪತ್ತೆಹಚ್ಚಿದ್ದಾರೆ ಎಂದು ತಿಳಿದು ಬಂದಿದೆ.

ಜಮೀನು ವಿಚಾರಕ್ಕೆ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವ ಶಂಕೆ : ಮೃತ ಮಹದೇವಯ್ಯ ಅವರು ಬಿಡದಿ, ಬೆಂಗಳೂರು, ಚನ್ನಪಟ್ಟಣದಲ್ಲಿ ರಿಯಲ್ ಎಸ್ಟೇಟ್ ಉದ್ಯಮ ಮಾಡುತ್ತಿದ್ದರು. ಜಮೀನು ವಿಚಾರವಾಗಿ ಅವರು ಕೋರ್ಟ್ ಗೆ ಹೋಗಿದ್ದರು. ಕೋಟ್ಯಾಂತರ ಮೌಲ್ಯದ ಜಮೀನು ಕೈತಪ್ಪುವ ಆತಂಕದಲ್ಲಿ ಕೆಲವು ಕಿಡಿಗೇಡಿಗಳು ಮಹದೇವಯ್ಯ ಮಾಡಿಸಿದ್ದಾರಾ? ಎಂಬ ಅನುಮಾನ ವ್ಯಕ್ತವಾಗಿದೆ. ಸುಪಾರಿ ಕೊಟ್ಟು ಹತ್ಯೆ ಮಾಡಿಸಿರುವ ಶಂಕೆಯೂ ಇದೆ. ಪೊಲೀಸರು 4 ತಂಡಗಳನ್ನು ಮಾಡಿಕೊಂಡು ಪ್ರಕರಣದ ತನಿಖೆ ಚುರುಕುಗೊಳಿಸಿದ್ದಾರೆ.

ಇದನ್ನೂ ಓದಿ : ಕಾರು ಬೈಕ್ ಢಿಕ್ಕಿ: ಭವಾನಿ ರೇವಣ್ಣ ಅವರ ದರ್ಪಕ್ಕೆ ಸಾರ್ವಜನಿಕರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...