Homeಕರ್ನಾಟಕನಾಪತ್ತೆಯಾಗಿದ್ದ ಎಂಎಲ್​ಸಿ ಸಿಪಿ ಯೋಗೇಶ್ವರ್ ಬಾವ ಶವವಾಗಿ ಪತ್ತೆ

ನಾಪತ್ತೆಯಾಗಿದ್ದ ಎಂಎಲ್​ಸಿ ಸಿಪಿ ಯೋಗೇಶ್ವರ್ ಬಾವ ಶವವಾಗಿ ಪತ್ತೆ

- Advertisement -
- Advertisement -

ಡಿಸೆಂಬರ್‌ 1ರಂದು ನಾಪತ್ತೆಯಾಗಿದ್ದ ವಿಧಾನಪರಿಷತ್ ಬಿಜೆಪಿ ಸದಸ್ಯ ಸಿ.ಪಿ ಯೋಗೇಶ್ವರ್ ಅವರ ಭಾವ ಮಹದೇವಯ್ಯ ಅವರು ಚಾಮರಾಜನಗರ ಜಿಲ್ಲೆಯ ರಾಮಾಪುರ ಬಳಿ ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ.

ಚನ್ನಪಟ್ಟಣ ತಾಲೂಕಿನ ಚಕ್ಕೆರೆ ಗ್ರಾಮದ ತೋಟದ ಮನೆಯಲ್ಲಿ ವಾಸವಾಗಿದ್ದ ಮಹದೇವಯ್ಯ ಡಿಸೆಂಬರ್ 1ರಂದು ನಿಗೂಢವಾಗಿ ನಾಪತ್ತೆಯಾಗಿದ್ದರು. ಕುಟುಂಬಸ್ಥರು ತೋಟದ ಮನೆ ಬಳಿ ಹುಡುಕಾಡಿದಾಗ ಮನೆಯ ಬೀರುಗಳ ಬಾಗಿಲು ತೆರದ ಸ್ಥಿತಿಯಲ್ಲಿ ಕಂಡು ಬಂದಿತ್ತು. ಆದರೆ, ಮಹದೇವಯ್ಯ ಅವರು ಎಲ್ಲಿಗೆ ಹೋಗಿದ್ದರು ಎಂಬ ಮಾಹಿತಿ ತಿಳಿದಿರಲಿಲ್ಲ. ಈ ಬಗ್ಗೆ ದೂರು ದಾಖಲಿಸಿಕೊಂಡ ಚಣ್ಣಪಟ್ಟಣ ಪೊಲೀಸರು, ಹುಡುಕಾಟ ಆರಂಭಿಸಿದ್ದರು. ಈ ವೇಳೆ ಮಹದೇಶ್ವರ ಬೆಟ್ಟದಲ್ಲಿ ಅವರ ಮೊಬೈಲ್ ಲೊಕೇಶನ್ ಪತ್ತೆಯಾಗಿತ್ತು.

ಪೊಲೀಸರು ಹುಡುಕಾಟ ತೀವ್ರಗೊಳಿಸಿದಾಗ ಭಾನುವಾರ ಹನೂರು ತಾಲೂಕಿನ ರಾಮಾಪುರದ ನಿರ್ಜನ ಪ್ರದೇಶದಲ್ಲಿ ಮಹಾದೇವಯ್ಯ ಅವರ ಕಾರು ಪತ್ತೆಯಾಗಿತ್ತು. ಸ್ಥಳಕ್ಕೆ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಕಾರಿನ ಗಾಜು ಒಡೆದಿತ್ತು. ರಕ್ತದ ಕಲೆಗಳು ಕಂಡು ಬಂದಿತ್ತು.

ಕಾರು ಪತ್ತೆಯಾಗುತ್ತಿದ್ದಂತೆ ಪೊಲೀಸರು ಅರಣ್ಯ ಇಲಾಖೆ ಸಿಬ್ಬಂದಿ ಜೊತೆ ಜಂಟಿ ಹುಡುಕಾಟ ನಡೆಸಿದ್ದರು. ಇಂದು ಸಂಜೆ (ಡಿ.4) ರಾಮಾಪುರದ ಅರಣ್ಯ ಪ್ರದೇಶದಲ್ಲಿ ಮಹದೇವಯ್ಯ ಅವರ ಶವ ಪತ್ತೆಯಾಗಿದೆ.

ಮಹದೇವಯ್ಯ ಅವರನ್ನು ಬೆಡ್​​ಶೀಟ್ ಹೊದಿಸಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ವರದಿಗಳು ಹೇಳಿವೆ. ಕೊಲೆಯಾದ ಸ್ಥಳದಿಂದ 6 ಕಿಲೋ ಮೀಟರ್ ದೂರದಲ್ಲಿ ಶವ ಪತ್ತೆಯಾಗಿದೆ. ಸಿಸಿ ಕ್ಯಾಮರಾ ದೃಶ್ಯ ಆಧರಿಸಿ ಪೊಲೀಸರು ಮೃತದೇಹವನ್ನು ಪತ್ತೆಹಚ್ಚಿದ್ದಾರೆ ಎಂದು ತಿಳಿದು ಬಂದಿದೆ.

ಜಮೀನು ವಿಚಾರಕ್ಕೆ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವ ಶಂಕೆ : ಮೃತ ಮಹದೇವಯ್ಯ ಅವರು ಬಿಡದಿ, ಬೆಂಗಳೂರು, ಚನ್ನಪಟ್ಟಣದಲ್ಲಿ ರಿಯಲ್ ಎಸ್ಟೇಟ್ ಉದ್ಯಮ ಮಾಡುತ್ತಿದ್ದರು. ಜಮೀನು ವಿಚಾರವಾಗಿ ಅವರು ಕೋರ್ಟ್ ಗೆ ಹೋಗಿದ್ದರು. ಕೋಟ್ಯಾಂತರ ಮೌಲ್ಯದ ಜಮೀನು ಕೈತಪ್ಪುವ ಆತಂಕದಲ್ಲಿ ಕೆಲವು ಕಿಡಿಗೇಡಿಗಳು ಮಹದೇವಯ್ಯ ಮಾಡಿಸಿದ್ದಾರಾ? ಎಂಬ ಅನುಮಾನ ವ್ಯಕ್ತವಾಗಿದೆ. ಸುಪಾರಿ ಕೊಟ್ಟು ಹತ್ಯೆ ಮಾಡಿಸಿರುವ ಶಂಕೆಯೂ ಇದೆ. ಪೊಲೀಸರು 4 ತಂಡಗಳನ್ನು ಮಾಡಿಕೊಂಡು ಪ್ರಕರಣದ ತನಿಖೆ ಚುರುಕುಗೊಳಿಸಿದ್ದಾರೆ.

ಇದನ್ನೂ ಓದಿ : ಕಾರು ಬೈಕ್ ಢಿಕ್ಕಿ: ಭವಾನಿ ರೇವಣ್ಣ ಅವರ ದರ್ಪಕ್ಕೆ ಸಾರ್ವಜನಿಕರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...